Homeಕರ್ನಾಟಕ2 ಸಾವಿರ ಕೋಟಿ ರೂ ಖರ್ಚಾದರೂ ’ಸ್ಮಾರ್ಟ್‌’ ಆಗದ ತುಮಕೂರು.. ಏಕೆ?

2 ಸಾವಿರ ಕೋಟಿ ರೂ ಖರ್ಚಾದರೂ ’ಸ್ಮಾರ್ಟ್‌’ ಆಗದ ತುಮಕೂರು.. ಏಕೆ?

- Advertisement -
- Advertisement -

ತುಮಕೂರು ಸ್ಮಾರ್ಟ್ ಸಿಟಿ ಎಂಬೋ ‘ಸಮರ್ಥ ನಗರ’ ಅಕ್ಷರಶಃ ಗಬ್ಬೆದ್ದು ಹೋಗಿದೆ. ನಗರದ ಯಾವುದೇ ಭಾಗಕ್ಕೆ ಹೋದರೂ ಅಲ್ಲಿನ ರಸ್ತೆಗಳ ಮೇಲೆ ಕಣ್ಣಾಡಿಸಿದರೆ ಸಾಕು ಇದು ಹದಗೆಟ್ಟ ಪರಿಸ್ಥಿತಿಯನ್ನು ಹೇಳುತ್ತವೆ. ಇಂಥಾ ಕೆಟ್ಟ ಪರಿಸ್ಥಿತಿ ಹಿಂದೆಲ್ಲೂ ಕಂಡಿರಲಿಲ್ಲವೆಂದು  ನಾಗರಿಕರು ಪಕ್ಷಾತೀತವಾಗಿ ಛೀಮಾರಿ ಹಾಕುತ್ತಿದ್ದಾರೆ.

ನಗರದ ಮೂಲೆ ಮೂಲೆಗಳಲ್ಲೂ ಅಗೆದ ಗುಂಡಿಗಳು, ಮೇಲೆದ್ದ ಮಣ್ಣಿನ ಗುಡ್ಡೆ, ಮಳೆ ಬಂದು ಕೊರಕಲಾದ ರಸ್ತೆಯ ಎರಡೂ ಬದಿಗಳು ಇವೆಲ್ಲವನ್ನೂ ನೋಡಿ ನರಕಯಾತನೆ ಅನುಭವಿಸುತ್ತಿದ್ದಾರೆ ಜನ. ಜನರಲ್ಲಿ ವ್ಯಕ್ತವಾಗುತ್ತಿರುವ ರೋಷಕ್ಕೆ ಮಿತಿಯೇ ಇಲ್ಲ. ಕಂಡಕಂಡಲ್ಲಿ ಜನ ಪಾಲಿಕೆ ಅಧಿಕಾರಿಗಳನ್ನು ಉಗಿಯುತ್ತಿದ್ದಾರೆ. ಸಮರ್ಥ ನಗರ ಎಂದರೆ ಇದೇನಾ ಎಂದು ಪ್ರಶ್ನಿಸುತ್ತಿದ್ದಾರೆ.

ನಗರದ ಯಾವ ಕಡೆ ಯಾವಾಗ ಗುಂಡಿ ತೋಡುತ್ತಾರೆ. ಯಾವ ಕಾರಣಕ್ಕಾಗಿ ಅಗೆಯುತ್ತಾರೆ. ಯಾವ ಉದ್ದೇಶಕ್ಕಾಗಿ ಈ ಕೆಲಸಕ್ಕೆ ಕೈ ಹಾಕಿದ್ದಾರೆ. ತುಮಕೂರು ಮಹಾನಗರ ಪಾಲಿಕೆಯಿಂದ ಇದಕ್ಕೆ ಪರವಾನಿಗೆ ಪಡೆಯಲಾಗಿದೆಯೇ ಎಂದರೆ ಅದೂ ಕೂಡ ಇಲ್ಲವೆನ್ನುತ್ತಾರೆ ಕೆಲ ಪಾಲಿಕೆ ಸದಸ್ಯರು. ಸ್ಮಾರ್ಟ್ ಸಿಟಿ ನೆಪದಲ್ಲಿ ರಸ್ತೆಗಳನ್ನು ಅಗೆದುಬಗೆದು ಗುಂಡಿಮಾಡುತ್ತಿದ್ದಾರೆ. ಇವರನ್ನು ಕೇಳುವವರೇ ಇಲ್ಲವಾಗಿದೆ.

ಒಂದು ಕಡೆ 24*7 ಕುಡಿಯುವ ನೀರು ಒದಗಿಸಲು ಪೈಪ್ ಲೈನ್ ಅಳವಡಿಸುವ ಕಾಮಗಾರಿ, ಇದು ಮುಗಿಯಿತು ಅಂದರೆ ಜಿಯೋ ನೆಟ್‌ವರ್ಕ್‌ಗೆ ಕೇಬಲ್ ಹಾಕುವ ಕಾಮಗಾರಿ, ಇದು ಮುಗಿಯುತಪ್ಪ ಅನ್ನುವುದರೊಳಗೆ 24*7 ಗ್ಯಾಸ್ ಪೈಪ್ ಗಾಮಗಾರಿ, ಅಯ್ಯೋ ಎಲ್ಲವೂ ಪೂರ್ಣವಾಗಿದೆ ಇನ್ನೇನು ನೆಮ್ಮದಿಯಾಗಿರಬಹುದು ಅಂತೀರಾ. ಇಲ್ಲ ಮತ್ತೆ ಅಗೆತ. ಆ ಕಡೆ ಮತ್ತು ಈ ಕಡೆ ಮನೆಗಳಿಗೆ ಸಂಪರ್ಕ ಕಲ್ಪಿಸಲು ಅಗೆತ. ಹೀಗೆ ಮಾಡಿ ತುಮಕೂರೆಂಬೋ ತುಮಕೂರಿನ ರಸ್ತೆಗಳನ್ನೇ ಹಾಳುಗೆಡವಿದ್ದಾರೆ.

ಮಳೆ ಬಂದರೆ ಕೆಸರು, ಹೆಜ್ಜೆ ಇಡಲು ಆಗದಷ್ಟು ಕೆಸರು. ವಾಹನಗಳು ಸಂಚರಿಸಿದರೆ ಸಾಕು ರಸ್ತೆಯಲ್ಲಿ ನಡೆದುಹೋಗುವವರು ಜೀವ ಹಿಡಿದುಕೊಂಡೇ ಓಡಾಡಬೇಕು. ಕೆಸರು ಮೇಲೆ ರಪ್ ಅಂತ ಎಲ್ಲಿ ಸಿಡಿಯುತ್ತೋ ಅನ್ನುವ ಭಯ. ಭೂಮಿ ನೆನೆದು ಸಿಕ್ಕಿಕೊಳ್ಳುವ ಕಾರುಗಳು, ಲಾರಿಗಳು, ಇದಾದ ಮೇಲೆ ಭೂಮಿ ಒಣಗಿತು ಅನ್ನಿ. ದೂಳು, ವಾಹಗಳು ಬಂದರೆ ಸಾಕು ದೂಳು ಮೈಮೇಲೆ ಸುರಿಯುತ್ತದೆ. ಉಸಿರು ಕಟ್ಟಿದಂತಾಗುತ್ತದೆ. ಪರ್ಟಿಕ್ಯೂಲೇಟ್ ಮ್ಯಾಟರ್ ಅತಿ ಹೆಚ್ಚು ಇದ್ದು ಮಾಲಿನ್ಯ ನಗರವಾಗಿರುವ ತುಮಕೂರು ಅದ್ಹೇಗೆ ಸ್ಮಾರ್ಟ್ ಸಿಟಿ ಅನಿಸಿಕೊಳ್ಳುತ್ತೋ ಆ ಸ್ಮಾರ್ಟ್ ಸಿಟಿ ನಿರ್ಮಾತೃಗಳಿಗೇ ಗೊತ್ತು. ಆದರೆ ಜನರಂತು ಬಾಯಿಗೆ ಬಂದಂತೆ ಕ್ಯಾಕರಿಸುತ್ತಿದ್ದಾರೆ.

ರಸ್ತೆಯ ಎರಡು ಬದಿಯನ್ನು ಅಗೆದವರು ಅದರ ಮೇಲೆ ಟಾರ್ ಮುಖವನ್ನೂ ತೋರಿಸಿ ತೇಪೆ ಹಚ್ಚುವ ಕೆಲಸವನ್ನೂ ಮಾಡಿಲ್ಲ. ಹೀಗಾಗಿ ತುಮಕೂರು ಸ್ಮಾರ್ಟ್ ಸಿಟಿ ಜನರಿಂದ ಗೇಲಿಗೆ ಒಳಗಾಗಿದೆ. ಆದರೆ ನಿತ್ಯವೂ ಪೊಲೀಸರು, ಟ್ರಾಫಿಕ್ ಪೊಲೀಸರು ವಾಹನಗಳನ್ನು ಹಿಡಿದು, ಹೆಲ್ಮೆಟ್ ಧರಿಸಿಲ್ಲ. ಡಿ.ಎಲ್. ಹೊಂದಿಲ್ಲ, ಹೊಗೆ ಪರೀಕ್ಷೆ ನಡೆಸಿಲ್ಲ ಹೀಗೆ ಹಲವು ರೀತಿಯಲ್ಲಿ ಜನರಿಂದ ವಸೂಲಿ ಮಾಡುತ್ತಲೇ ಇದ್ದಾರೆ. ಏನ್ ರಸ್ತೆಗಳು ಹೀಗಿವೆಯಲ್ಲಾ ಎಂದರೆ ಅದರ ಬಗ್ಗೆ ನಮ್ಮನ್ನು ಕೇಳಬೇಡಿ ಅನ್ನುತ್ತಾರೆ. ರಸ್ತೆಗಳ ಉತ್ತಮವಾಗಿರಬೇಕು. ಆಗ ದಂಡ ವಿಧಿಸಿದರೂ ಕಟ್ಟಬಹುದು. ಆದರೆ ನಮ್ಮ ನಗರದ ಯಾವುದೇ ರಸ್ತೆಗಳು ಚನ್ನಾಗಿವೆ ಎಂದು ಹೇಳವುದಕ್ಕೇ ಆಗುವುದಿಲ್ಲ ಎನ್ನುತ್ತಾರೆ ಬೈಕ್ ಸವಾರರು.

ಸಮರ್ಥ ನಗರದ ಅಭಿವೃದ್ದಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಹತ್ತಿರತ್ತಿರ 2 ಸಾವಿರ ಕೋಟಿ ರೂಪಾಯಿ ನಗರ ಪಾಲಿಕೆಗೆ ಬಂದಿದೆ. ರಸ್ತೆ, ಚರಂಡಿ, ಬೀದಿ ದೀಪ, ಕುಡಿಯುವ ನೀರು, ಪಾರ್ಕ್ ಗಳ ಅಭಿವೃದ್ದಿ, ಬಸ್ ನಿಲ್ದಾಣಗಳ ನಿರ್ಮಾಣ ಹೀಗೆ ಹಲವು ಕಾಮಗಾರಿಗಳನ್ನು ಮಾಡುವ ಮೂಲಕ ಕೋಟಿ ಕೋಟಿ ಲೂಟಿ ಮಾಡುವಲ್ಲಿ ರಾಜಕಾರಣಿಗಳು ಮತ್ತು ಅಧಿಕಾರಿಗಳು ನಿರತರಾಗಿದ್ದಾರೆ. ಸ್ಮಾರ್ಟ್ ಸಿಟಿ ಅಂದರೆ ಜನ ಬೆಚ್ಚಿ ಬೀಳುತ್ತಿದ್ದಾರೆ. ಅಯ್ಯೋ ಈ ಕಾಮಗಾರಿಗಳು ಎಷ್ಟು ಬೇಗ ಮುಗಿಯುತ್ತೋ ಅಂತ ಕಾಯುತ್ತಿದ್ದಾರೆ. ಆದರೆ ಮಬ್ಬು ಭಕ್ತರು, ಸ್ಮಾರ್ಟಿ ಸಮರ್ಥಕರು ಅಭಿವೃದ್ಧಿ ಕೆಲಸ ನಡೆಯುತ್ತಿದೆ ಅಂದರೆ ಸಹಿಕೊಳ್ಳಬೇಕು ಎಂದು ಮಂಡುವಾದ ಮಾಡುತ್ತಿದ್ದಾರೆ. ಆದರೆ ಜನ ಮಾತ್ರ ಕಾಮಗಾರಿಗಳು ಮುಗಿಯುತ್ತೋ ಇಲ್ಲವೋ? ಎಂಬ ಗೊಂದಲದಲ್ಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...