Homeಕರ್ನಾಟಕ2 ಸಾವಿರ ಕೋಟಿ ರೂ ಖರ್ಚಾದರೂ ’ಸ್ಮಾರ್ಟ್‌’ ಆಗದ ತುಮಕೂರು.. ಏಕೆ?

2 ಸಾವಿರ ಕೋಟಿ ರೂ ಖರ್ಚಾದರೂ ’ಸ್ಮಾರ್ಟ್‌’ ಆಗದ ತುಮಕೂರು.. ಏಕೆ?

- Advertisement -
- Advertisement -

ತುಮಕೂರು ಸ್ಮಾರ್ಟ್ ಸಿಟಿ ಎಂಬೋ ‘ಸಮರ್ಥ ನಗರ’ ಅಕ್ಷರಶಃ ಗಬ್ಬೆದ್ದು ಹೋಗಿದೆ. ನಗರದ ಯಾವುದೇ ಭಾಗಕ್ಕೆ ಹೋದರೂ ಅಲ್ಲಿನ ರಸ್ತೆಗಳ ಮೇಲೆ ಕಣ್ಣಾಡಿಸಿದರೆ ಸಾಕು ಇದು ಹದಗೆಟ್ಟ ಪರಿಸ್ಥಿತಿಯನ್ನು ಹೇಳುತ್ತವೆ. ಇಂಥಾ ಕೆಟ್ಟ ಪರಿಸ್ಥಿತಿ ಹಿಂದೆಲ್ಲೂ ಕಂಡಿರಲಿಲ್ಲವೆಂದು  ನಾಗರಿಕರು ಪಕ್ಷಾತೀತವಾಗಿ ಛೀಮಾರಿ ಹಾಕುತ್ತಿದ್ದಾರೆ.

ನಗರದ ಮೂಲೆ ಮೂಲೆಗಳಲ್ಲೂ ಅಗೆದ ಗುಂಡಿಗಳು, ಮೇಲೆದ್ದ ಮಣ್ಣಿನ ಗುಡ್ಡೆ, ಮಳೆ ಬಂದು ಕೊರಕಲಾದ ರಸ್ತೆಯ ಎರಡೂ ಬದಿಗಳು ಇವೆಲ್ಲವನ್ನೂ ನೋಡಿ ನರಕಯಾತನೆ ಅನುಭವಿಸುತ್ತಿದ್ದಾರೆ ಜನ. ಜನರಲ್ಲಿ ವ್ಯಕ್ತವಾಗುತ್ತಿರುವ ರೋಷಕ್ಕೆ ಮಿತಿಯೇ ಇಲ್ಲ. ಕಂಡಕಂಡಲ್ಲಿ ಜನ ಪಾಲಿಕೆ ಅಧಿಕಾರಿಗಳನ್ನು ಉಗಿಯುತ್ತಿದ್ದಾರೆ. ಸಮರ್ಥ ನಗರ ಎಂದರೆ ಇದೇನಾ ಎಂದು ಪ್ರಶ್ನಿಸುತ್ತಿದ್ದಾರೆ.

ನಗರದ ಯಾವ ಕಡೆ ಯಾವಾಗ ಗುಂಡಿ ತೋಡುತ್ತಾರೆ. ಯಾವ ಕಾರಣಕ್ಕಾಗಿ ಅಗೆಯುತ್ತಾರೆ. ಯಾವ ಉದ್ದೇಶಕ್ಕಾಗಿ ಈ ಕೆಲಸಕ್ಕೆ ಕೈ ಹಾಕಿದ್ದಾರೆ. ತುಮಕೂರು ಮಹಾನಗರ ಪಾಲಿಕೆಯಿಂದ ಇದಕ್ಕೆ ಪರವಾನಿಗೆ ಪಡೆಯಲಾಗಿದೆಯೇ ಎಂದರೆ ಅದೂ ಕೂಡ ಇಲ್ಲವೆನ್ನುತ್ತಾರೆ ಕೆಲ ಪಾಲಿಕೆ ಸದಸ್ಯರು. ಸ್ಮಾರ್ಟ್ ಸಿಟಿ ನೆಪದಲ್ಲಿ ರಸ್ತೆಗಳನ್ನು ಅಗೆದುಬಗೆದು ಗುಂಡಿಮಾಡುತ್ತಿದ್ದಾರೆ. ಇವರನ್ನು ಕೇಳುವವರೇ ಇಲ್ಲವಾಗಿದೆ.

ಒಂದು ಕಡೆ 24*7 ಕುಡಿಯುವ ನೀರು ಒದಗಿಸಲು ಪೈಪ್ ಲೈನ್ ಅಳವಡಿಸುವ ಕಾಮಗಾರಿ, ಇದು ಮುಗಿಯಿತು ಅಂದರೆ ಜಿಯೋ ನೆಟ್‌ವರ್ಕ್‌ಗೆ ಕೇಬಲ್ ಹಾಕುವ ಕಾಮಗಾರಿ, ಇದು ಮುಗಿಯುತಪ್ಪ ಅನ್ನುವುದರೊಳಗೆ 24*7 ಗ್ಯಾಸ್ ಪೈಪ್ ಗಾಮಗಾರಿ, ಅಯ್ಯೋ ಎಲ್ಲವೂ ಪೂರ್ಣವಾಗಿದೆ ಇನ್ನೇನು ನೆಮ್ಮದಿಯಾಗಿರಬಹುದು ಅಂತೀರಾ. ಇಲ್ಲ ಮತ್ತೆ ಅಗೆತ. ಆ ಕಡೆ ಮತ್ತು ಈ ಕಡೆ ಮನೆಗಳಿಗೆ ಸಂಪರ್ಕ ಕಲ್ಪಿಸಲು ಅಗೆತ. ಹೀಗೆ ಮಾಡಿ ತುಮಕೂರೆಂಬೋ ತುಮಕೂರಿನ ರಸ್ತೆಗಳನ್ನೇ ಹಾಳುಗೆಡವಿದ್ದಾರೆ.

ಮಳೆ ಬಂದರೆ ಕೆಸರು, ಹೆಜ್ಜೆ ಇಡಲು ಆಗದಷ್ಟು ಕೆಸರು. ವಾಹನಗಳು ಸಂಚರಿಸಿದರೆ ಸಾಕು ರಸ್ತೆಯಲ್ಲಿ ನಡೆದುಹೋಗುವವರು ಜೀವ ಹಿಡಿದುಕೊಂಡೇ ಓಡಾಡಬೇಕು. ಕೆಸರು ಮೇಲೆ ರಪ್ ಅಂತ ಎಲ್ಲಿ ಸಿಡಿಯುತ್ತೋ ಅನ್ನುವ ಭಯ. ಭೂಮಿ ನೆನೆದು ಸಿಕ್ಕಿಕೊಳ್ಳುವ ಕಾರುಗಳು, ಲಾರಿಗಳು, ಇದಾದ ಮೇಲೆ ಭೂಮಿ ಒಣಗಿತು ಅನ್ನಿ. ದೂಳು, ವಾಹಗಳು ಬಂದರೆ ಸಾಕು ದೂಳು ಮೈಮೇಲೆ ಸುರಿಯುತ್ತದೆ. ಉಸಿರು ಕಟ್ಟಿದಂತಾಗುತ್ತದೆ. ಪರ್ಟಿಕ್ಯೂಲೇಟ್ ಮ್ಯಾಟರ್ ಅತಿ ಹೆಚ್ಚು ಇದ್ದು ಮಾಲಿನ್ಯ ನಗರವಾಗಿರುವ ತುಮಕೂರು ಅದ್ಹೇಗೆ ಸ್ಮಾರ್ಟ್ ಸಿಟಿ ಅನಿಸಿಕೊಳ್ಳುತ್ತೋ ಆ ಸ್ಮಾರ್ಟ್ ಸಿಟಿ ನಿರ್ಮಾತೃಗಳಿಗೇ ಗೊತ್ತು. ಆದರೆ ಜನರಂತು ಬಾಯಿಗೆ ಬಂದಂತೆ ಕ್ಯಾಕರಿಸುತ್ತಿದ್ದಾರೆ.

ರಸ್ತೆಯ ಎರಡು ಬದಿಯನ್ನು ಅಗೆದವರು ಅದರ ಮೇಲೆ ಟಾರ್ ಮುಖವನ್ನೂ ತೋರಿಸಿ ತೇಪೆ ಹಚ್ಚುವ ಕೆಲಸವನ್ನೂ ಮಾಡಿಲ್ಲ. ಹೀಗಾಗಿ ತುಮಕೂರು ಸ್ಮಾರ್ಟ್ ಸಿಟಿ ಜನರಿಂದ ಗೇಲಿಗೆ ಒಳಗಾಗಿದೆ. ಆದರೆ ನಿತ್ಯವೂ ಪೊಲೀಸರು, ಟ್ರಾಫಿಕ್ ಪೊಲೀಸರು ವಾಹನಗಳನ್ನು ಹಿಡಿದು, ಹೆಲ್ಮೆಟ್ ಧರಿಸಿಲ್ಲ. ಡಿ.ಎಲ್. ಹೊಂದಿಲ್ಲ, ಹೊಗೆ ಪರೀಕ್ಷೆ ನಡೆಸಿಲ್ಲ ಹೀಗೆ ಹಲವು ರೀತಿಯಲ್ಲಿ ಜನರಿಂದ ವಸೂಲಿ ಮಾಡುತ್ತಲೇ ಇದ್ದಾರೆ. ಏನ್ ರಸ್ತೆಗಳು ಹೀಗಿವೆಯಲ್ಲಾ ಎಂದರೆ ಅದರ ಬಗ್ಗೆ ನಮ್ಮನ್ನು ಕೇಳಬೇಡಿ ಅನ್ನುತ್ತಾರೆ. ರಸ್ತೆಗಳ ಉತ್ತಮವಾಗಿರಬೇಕು. ಆಗ ದಂಡ ವಿಧಿಸಿದರೂ ಕಟ್ಟಬಹುದು. ಆದರೆ ನಮ್ಮ ನಗರದ ಯಾವುದೇ ರಸ್ತೆಗಳು ಚನ್ನಾಗಿವೆ ಎಂದು ಹೇಳವುದಕ್ಕೇ ಆಗುವುದಿಲ್ಲ ಎನ್ನುತ್ತಾರೆ ಬೈಕ್ ಸವಾರರು.

ಸಮರ್ಥ ನಗರದ ಅಭಿವೃದ್ದಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಹತ್ತಿರತ್ತಿರ 2 ಸಾವಿರ ಕೋಟಿ ರೂಪಾಯಿ ನಗರ ಪಾಲಿಕೆಗೆ ಬಂದಿದೆ. ರಸ್ತೆ, ಚರಂಡಿ, ಬೀದಿ ದೀಪ, ಕುಡಿಯುವ ನೀರು, ಪಾರ್ಕ್ ಗಳ ಅಭಿವೃದ್ದಿ, ಬಸ್ ನಿಲ್ದಾಣಗಳ ನಿರ್ಮಾಣ ಹೀಗೆ ಹಲವು ಕಾಮಗಾರಿಗಳನ್ನು ಮಾಡುವ ಮೂಲಕ ಕೋಟಿ ಕೋಟಿ ಲೂಟಿ ಮಾಡುವಲ್ಲಿ ರಾಜಕಾರಣಿಗಳು ಮತ್ತು ಅಧಿಕಾರಿಗಳು ನಿರತರಾಗಿದ್ದಾರೆ. ಸ್ಮಾರ್ಟ್ ಸಿಟಿ ಅಂದರೆ ಜನ ಬೆಚ್ಚಿ ಬೀಳುತ್ತಿದ್ದಾರೆ. ಅಯ್ಯೋ ಈ ಕಾಮಗಾರಿಗಳು ಎಷ್ಟು ಬೇಗ ಮುಗಿಯುತ್ತೋ ಅಂತ ಕಾಯುತ್ತಿದ್ದಾರೆ. ಆದರೆ ಮಬ್ಬು ಭಕ್ತರು, ಸ್ಮಾರ್ಟಿ ಸಮರ್ಥಕರು ಅಭಿವೃದ್ಧಿ ಕೆಲಸ ನಡೆಯುತ್ತಿದೆ ಅಂದರೆ ಸಹಿಕೊಳ್ಳಬೇಕು ಎಂದು ಮಂಡುವಾದ ಮಾಡುತ್ತಿದ್ದಾರೆ. ಆದರೆ ಜನ ಮಾತ್ರ ಕಾಮಗಾರಿಗಳು ಮುಗಿಯುತ್ತೋ ಇಲ್ಲವೋ? ಎಂಬ ಗೊಂದಲದಲ್ಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...