Homeಮುಖಪುಟಪಾಕ್ ಜಿಂದಾಬಾದ್ ಎಂದವರ ನಾಲಿಗೆ ಕತ್ತರಿಸಿ : ಮತ್ತೆ ಪ್ರಚೋದಾನಕಾರಿ ಹೇಳಿಕೆ ನೀಡಿದ ಅಂದೋಲಾ ಶ್ರೀ

ಪಾಕ್ ಜಿಂದಾಬಾದ್ ಎಂದವರ ನಾಲಿಗೆ ಕತ್ತರಿಸಿ : ಮತ್ತೆ ಪ್ರಚೋದಾನಕಾರಿ ಹೇಳಿಕೆ ನೀಡಿದ ಅಂದೋಲಾ ಶ್ರೀ

ನಿನ್ನೆ ರಾಯಚೂರಿನಲ್ಲಿಯೂ ಸಹ  ಮೋದಿ, ಅಮಿತ್ ಷಾ ವಿರುದ್ದ ಮಾತನಾಡುವವರಿಗೆ ಗೌರಿ ಲಂಕೇಶರಿಗೆ ಆದ ಗತಿಯಾಗುತ್ತದೆ ಎಂದು ಬೆದರಿಕೆ ಹಾಕಿದ್ದರು.

- Advertisement -
- Advertisement -

ಹುಬ್ಬಳ್ಳಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದಿರುವ ಮೂವರು ವಿದ್ಯಾರ್ಥಿಗಳ ನಾಲಿಗೆ ಕತ್ತರಿಸಿ ತಂದು ಕೊಟ್ಟವರಿಗೆ ಶ್ರೀರಾಮ ಸೇನೆಯು ಮೂರು ಲಕ್ಷ ರೂ. ಬಹುಮಾನ ನೀಡಲಿದೆ ಎಂದು ಜೇವರ್ಗಿ ಆಂದೋಲ ಮಠದ ಸಿದ್ಧಲಿಂಗಸ್ವಾಮಿ ಹೇಳಿದ್ದಾರೆ.

ಗದಗದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಶ್ರೀರಾಮಸೇನೆಯಯಿಂದ ಹಮ್ಮಿಕೊಂಡಿದ್ದ ಛತ್ರಪತಿ ಶಿವಾಜಿ ಮಹಾರಾಜರ 393ನೇ ಜಯಂತ್ಯುತ್ಸವದ ಮುಖ್ಯ ಭಾಷಣಕಾರರಾಗಿ ಮಾತನಾಡಿದ ಅವರು ಪಾಕ್ತಿಸಾನ ಜಿಂದಾಬಾದ್ ಎಂದು ಹೇಳಲಿಕ್ಕೆ ಇದು ಇಮ್ರಾನ್‌ಖಾನ್ ದೇಶವಲ್ಲ, ಇದು ಇಮ್ರಾನ್‌ಖಾನ್ ಅಪ್ಪ ಮೋದಿ, ಶಿವಾಜಿಯ ದೇಶ ದೇಶ ಎಂದು ಹೇಳಿದ್ದಾರೆ.

ಪಾಕಿಸ್ತಾನ್ ಜಿಂದಾಬಾದ್ ಎಂದ ದೇಶದ್ರೋಹಿಗಳನ್ನು ಎರಡು ಗಂಟೆಗಳಲ್ಲಿ ಬಿಡುಗಡೆ ಮಾಡಿದ್ದರ ಹಿಂದೆ ಇರುವ ಮಂತ್ರಿ ಯಾರು, ರಾಜಕಾರಣಿ ಯಾರು ಎಂಬುದನ್ನು ಬಹಿರಂಗಪಡಿಸಿ ಎಂದು ಅವರು ಆಗ್ರಹಿಸಿದ್ದಾರೆ.

ಶ್ರೀರಾಮ ಸೇನೆಯ ಕಾರ್ಯಕರ್ತರ ದೇಹದಲ್ಲಿ ಶಿವಾಜಿ ಮಹಾರಾಜರ ರಕ್ತ ತುಂಬಿದೆ. ಬಿಜೆಪಿಯವರ ಮೈಯಲ್ಲಿ ಯಾವ ರಕ್ತ ಹರಿಯುತ್ತಿದೆಯೋ ಗೊತ್ತಿಲ್ಲ ಎಂದಿದ್ದಾರೆ.

ಯಾರಾದರೂ ಒಂದು ಕಪಾಳಕ್ಕೆ ಹೊಡೆದರೆ, ಮತ್ತೊಂದು ಕಪಾಳ ತೋರಿಸುವ ಗಾಂಧಿ ತತ್ವ ನಮಗೆ ಬೇಕಾಗಿಲ್ಲ. ದುರದೃಷ್ಟವೆಂದರೆ, ಭಾರತವನ್ನು ತುಂಡರಿಸಿ, ಪಾಕಿಸ್ತಾನ ನಿರ್ಮಿಸಿದವರು ರಾಷ್ಟ್ರಪಿತ, ಮಹಾತ್ಮರಾದರು ಎಂದರು.

ಛತ್ರಪತಿ ಶಿವಾಜಿ ಮಹಾರಾಜರು, ಸುಭಾಷಚಂದ್ರ ಬೋಸ್, ಚಂದ್ರಶೇಖರ ಆಜಾದ್, ಕಿತ್ತೂರು ರಾಣಿ ಚೆನ್ನಮ್ಮರನ್ನು ಆದರ್ಶವಾಗಿ ಇಟ್ಟುಕೊಂಡಾಗ ಮಾತ್ರ ಭಾರತ ಹಿಂದೂರಾಷ್ಟ್ರ ಆಗಲು ಸಾಧ್ಯ ಎಂದ ಅವರು,
ಪೊಲೀಸರು ದೇವದಾಸಿಯರಿದ್ದಂತೆ ಎಂದು ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ. ಅವರ ಮೇಲೆ ದೇಶದ್ರೋಹ ಕೇಸು ದಾಖಲಿಸಿ ಬಂಧಿಸಬೇಕು ಎಂದು ಸ್ವಾಮೀಜಿ ಆಗ್ರಹಿಸಿದರು.

ವಿವಾದಾತ್ಮಕ ಹೇಳಿಕೆಗಗೆ ಕುಖ್ಯಾತರಾಗಿರುವ ಇವರು, ನಿನ್ನೆ ರಾಯಚೂರಿನಲ್ಲಿಯೂ ಸಹ  ಮೋದಿ, ಅಮಿತ್ ಷಾ ವಿರುದ್ದ ಮಾತನಾಡುವವರಿಗೆ ಗೌರಿ ಲಂಕೇಶರಿಗೆ ಆದ ಗತಿಯಾಗುತ್ತದೆ ಎಂದು ಬೆದರಿಕೆ ಹಾಕಿದ್ದರು.

ಅಂದೋಲಾ ಶ್ರೀ

ಮೋದಿ, ಅಮಿತ್ ಷಾ ವಿರುದ್ದ ಮಾತನಾಡುವವರಿಗೆ ಗೌರಿ ಲಂಕೇಶರಿಗೆ ಆದ ಗತಿಯಾಗುತ್ತದೆ – ಪ್ರಚೋದನಕಾರಿ ಭಾಷಣ ಮಾಡಿದ ಅಂದೋಲಾ ಶ್ರೀ.

Posted by Naanu Gauri on Friday, February 21, 2020

ರಾಯಚೂರಿನ ಶಕ್ತಿನಗರದಲ್ಲಿ ನಡೆದ ಧರ್ಮಸಮ್ಮೇಳನದಲ್ಲಿ ಮಾತಾಡಿದ ಅವರು,  ಇನ್ನೂ 14-15 ವಯಸ್ಸಿನವರು ಮೋದಿ ಅಮಿತ್ ಷಾ ಬಗ್ಗೆ ಮಾತ‌ನಾಡುತ್ತಾರೆ. ಭವಿಷ್ಯದಲ್ಲಿ ಅವರಿಗೂ ಗೌರಿ ಲಂಕೇಶರಿಗೆ ಆದ ಗತಿಯಾಗುತ್ತೆ ಎಂದು ಧಮಕಿ ಹಾಕಿದ್ದರು.

ಈ ಸಮ್ಮೇಳನದಲ್ಲಿ ಶ್ರೀರಾಮಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಸಹ ವೇದಿಕೆಯಲ್ಲಿದ್ದರು. ಈ ಪ್ರಚೋದನಾಕಾರಿ ಭಾಷಣದ ವಿರುದ್ದ ಶಕ್ತಿನಗರ ಪೊಲೀಸ್ ಠಾಣೆಯಲ್ಲಿ ದೂರು ಸಹ ನೀಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...