Homeಮುಖಪುಟಪಾಕ್ ಜಿಂದಾಬಾದ್ ಎಂದವರ ನಾಲಿಗೆ ಕತ್ತರಿಸಿ : ಮತ್ತೆ ಪ್ರಚೋದಾನಕಾರಿ ಹೇಳಿಕೆ ನೀಡಿದ ಅಂದೋಲಾ ಶ್ರೀ

ಪಾಕ್ ಜಿಂದಾಬಾದ್ ಎಂದವರ ನಾಲಿಗೆ ಕತ್ತರಿಸಿ : ಮತ್ತೆ ಪ್ರಚೋದಾನಕಾರಿ ಹೇಳಿಕೆ ನೀಡಿದ ಅಂದೋಲಾ ಶ್ರೀ

ನಿನ್ನೆ ರಾಯಚೂರಿನಲ್ಲಿಯೂ ಸಹ  ಮೋದಿ, ಅಮಿತ್ ಷಾ ವಿರುದ್ದ ಮಾತನಾಡುವವರಿಗೆ ಗೌರಿ ಲಂಕೇಶರಿಗೆ ಆದ ಗತಿಯಾಗುತ್ತದೆ ಎಂದು ಬೆದರಿಕೆ ಹಾಕಿದ್ದರು.

- Advertisement -
- Advertisement -

ಹುಬ್ಬಳ್ಳಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದಿರುವ ಮೂವರು ವಿದ್ಯಾರ್ಥಿಗಳ ನಾಲಿಗೆ ಕತ್ತರಿಸಿ ತಂದು ಕೊಟ್ಟವರಿಗೆ ಶ್ರೀರಾಮ ಸೇನೆಯು ಮೂರು ಲಕ್ಷ ರೂ. ಬಹುಮಾನ ನೀಡಲಿದೆ ಎಂದು ಜೇವರ್ಗಿ ಆಂದೋಲ ಮಠದ ಸಿದ್ಧಲಿಂಗಸ್ವಾಮಿ ಹೇಳಿದ್ದಾರೆ.

ಗದಗದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಶ್ರೀರಾಮಸೇನೆಯಯಿಂದ ಹಮ್ಮಿಕೊಂಡಿದ್ದ ಛತ್ರಪತಿ ಶಿವಾಜಿ ಮಹಾರಾಜರ 393ನೇ ಜಯಂತ್ಯುತ್ಸವದ ಮುಖ್ಯ ಭಾಷಣಕಾರರಾಗಿ ಮಾತನಾಡಿದ ಅವರು ಪಾಕ್ತಿಸಾನ ಜಿಂದಾಬಾದ್ ಎಂದು ಹೇಳಲಿಕ್ಕೆ ಇದು ಇಮ್ರಾನ್‌ಖಾನ್ ದೇಶವಲ್ಲ, ಇದು ಇಮ್ರಾನ್‌ಖಾನ್ ಅಪ್ಪ ಮೋದಿ, ಶಿವಾಜಿಯ ದೇಶ ದೇಶ ಎಂದು ಹೇಳಿದ್ದಾರೆ.

ಪಾಕಿಸ್ತಾನ್ ಜಿಂದಾಬಾದ್ ಎಂದ ದೇಶದ್ರೋಹಿಗಳನ್ನು ಎರಡು ಗಂಟೆಗಳಲ್ಲಿ ಬಿಡುಗಡೆ ಮಾಡಿದ್ದರ ಹಿಂದೆ ಇರುವ ಮಂತ್ರಿ ಯಾರು, ರಾಜಕಾರಣಿ ಯಾರು ಎಂಬುದನ್ನು ಬಹಿರಂಗಪಡಿಸಿ ಎಂದು ಅವರು ಆಗ್ರಹಿಸಿದ್ದಾರೆ.

ಶ್ರೀರಾಮ ಸೇನೆಯ ಕಾರ್ಯಕರ್ತರ ದೇಹದಲ್ಲಿ ಶಿವಾಜಿ ಮಹಾರಾಜರ ರಕ್ತ ತುಂಬಿದೆ. ಬಿಜೆಪಿಯವರ ಮೈಯಲ್ಲಿ ಯಾವ ರಕ್ತ ಹರಿಯುತ್ತಿದೆಯೋ ಗೊತ್ತಿಲ್ಲ ಎಂದಿದ್ದಾರೆ.

ಯಾರಾದರೂ ಒಂದು ಕಪಾಳಕ್ಕೆ ಹೊಡೆದರೆ, ಮತ್ತೊಂದು ಕಪಾಳ ತೋರಿಸುವ ಗಾಂಧಿ ತತ್ವ ನಮಗೆ ಬೇಕಾಗಿಲ್ಲ. ದುರದೃಷ್ಟವೆಂದರೆ, ಭಾರತವನ್ನು ತುಂಡರಿಸಿ, ಪಾಕಿಸ್ತಾನ ನಿರ್ಮಿಸಿದವರು ರಾಷ್ಟ್ರಪಿತ, ಮಹಾತ್ಮರಾದರು ಎಂದರು.

ಛತ್ರಪತಿ ಶಿವಾಜಿ ಮಹಾರಾಜರು, ಸುಭಾಷಚಂದ್ರ ಬೋಸ್, ಚಂದ್ರಶೇಖರ ಆಜಾದ್, ಕಿತ್ತೂರು ರಾಣಿ ಚೆನ್ನಮ್ಮರನ್ನು ಆದರ್ಶವಾಗಿ ಇಟ್ಟುಕೊಂಡಾಗ ಮಾತ್ರ ಭಾರತ ಹಿಂದೂರಾಷ್ಟ್ರ ಆಗಲು ಸಾಧ್ಯ ಎಂದ ಅವರು,
ಪೊಲೀಸರು ದೇವದಾಸಿಯರಿದ್ದಂತೆ ಎಂದು ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ. ಅವರ ಮೇಲೆ ದೇಶದ್ರೋಹ ಕೇಸು ದಾಖಲಿಸಿ ಬಂಧಿಸಬೇಕು ಎಂದು ಸ್ವಾಮೀಜಿ ಆಗ್ರಹಿಸಿದರು.

ವಿವಾದಾತ್ಮಕ ಹೇಳಿಕೆಗಗೆ ಕುಖ್ಯಾತರಾಗಿರುವ ಇವರು, ನಿನ್ನೆ ರಾಯಚೂರಿನಲ್ಲಿಯೂ ಸಹ  ಮೋದಿ, ಅಮಿತ್ ಷಾ ವಿರುದ್ದ ಮಾತನಾಡುವವರಿಗೆ ಗೌರಿ ಲಂಕೇಶರಿಗೆ ಆದ ಗತಿಯಾಗುತ್ತದೆ ಎಂದು ಬೆದರಿಕೆ ಹಾಕಿದ್ದರು.

ಅಂದೋಲಾ ಶ್ರೀ

ಮೋದಿ, ಅಮಿತ್ ಷಾ ವಿರುದ್ದ ಮಾತನಾಡುವವರಿಗೆ ಗೌರಿ ಲಂಕೇಶರಿಗೆ ಆದ ಗತಿಯಾಗುತ್ತದೆ – ಪ್ರಚೋದನಕಾರಿ ಭಾಷಣ ಮಾಡಿದ ಅಂದೋಲಾ ಶ್ರೀ.

Posted by Naanu Gauri on Friday, February 21, 2020

ರಾಯಚೂರಿನ ಶಕ್ತಿನಗರದಲ್ಲಿ ನಡೆದ ಧರ್ಮಸಮ್ಮೇಳನದಲ್ಲಿ ಮಾತಾಡಿದ ಅವರು,  ಇನ್ನೂ 14-15 ವಯಸ್ಸಿನವರು ಮೋದಿ ಅಮಿತ್ ಷಾ ಬಗ್ಗೆ ಮಾತ‌ನಾಡುತ್ತಾರೆ. ಭವಿಷ್ಯದಲ್ಲಿ ಅವರಿಗೂ ಗೌರಿ ಲಂಕೇಶರಿಗೆ ಆದ ಗತಿಯಾಗುತ್ತೆ ಎಂದು ಧಮಕಿ ಹಾಕಿದ್ದರು.

ಈ ಸಮ್ಮೇಳನದಲ್ಲಿ ಶ್ರೀರಾಮಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಸಹ ವೇದಿಕೆಯಲ್ಲಿದ್ದರು. ಈ ಪ್ರಚೋದನಾಕಾರಿ ಭಾಷಣದ ವಿರುದ್ದ ಶಕ್ತಿನಗರ ಪೊಲೀಸ್ ಠಾಣೆಯಲ್ಲಿ ದೂರು ಸಹ ನೀಡಲಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...