Homeಮುಖಪುಟಪಾಕ್ ಜಿಂದಾಬಾದ್ ಎಂದವರ ನಾಲಿಗೆ ಕತ್ತರಿಸಿ : ಮತ್ತೆ ಪ್ರಚೋದಾನಕಾರಿ ಹೇಳಿಕೆ ನೀಡಿದ ಅಂದೋಲಾ ಶ್ರೀ

ಪಾಕ್ ಜಿಂದಾಬಾದ್ ಎಂದವರ ನಾಲಿಗೆ ಕತ್ತರಿಸಿ : ಮತ್ತೆ ಪ್ರಚೋದಾನಕಾರಿ ಹೇಳಿಕೆ ನೀಡಿದ ಅಂದೋಲಾ ಶ್ರೀ

ನಿನ್ನೆ ರಾಯಚೂರಿನಲ್ಲಿಯೂ ಸಹ  ಮೋದಿ, ಅಮಿತ್ ಷಾ ವಿರುದ್ದ ಮಾತನಾಡುವವರಿಗೆ ಗೌರಿ ಲಂಕೇಶರಿಗೆ ಆದ ಗತಿಯಾಗುತ್ತದೆ ಎಂದು ಬೆದರಿಕೆ ಹಾಕಿದ್ದರು.

- Advertisement -
- Advertisement -

ಹುಬ್ಬಳ್ಳಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದಿರುವ ಮೂವರು ವಿದ್ಯಾರ್ಥಿಗಳ ನಾಲಿಗೆ ಕತ್ತರಿಸಿ ತಂದು ಕೊಟ್ಟವರಿಗೆ ಶ್ರೀರಾಮ ಸೇನೆಯು ಮೂರು ಲಕ್ಷ ರೂ. ಬಹುಮಾನ ನೀಡಲಿದೆ ಎಂದು ಜೇವರ್ಗಿ ಆಂದೋಲ ಮಠದ ಸಿದ್ಧಲಿಂಗಸ್ವಾಮಿ ಹೇಳಿದ್ದಾರೆ.

ಗದಗದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಶ್ರೀರಾಮಸೇನೆಯಯಿಂದ ಹಮ್ಮಿಕೊಂಡಿದ್ದ ಛತ್ರಪತಿ ಶಿವಾಜಿ ಮಹಾರಾಜರ 393ನೇ ಜಯಂತ್ಯುತ್ಸವದ ಮುಖ್ಯ ಭಾಷಣಕಾರರಾಗಿ ಮಾತನಾಡಿದ ಅವರು ಪಾಕ್ತಿಸಾನ ಜಿಂದಾಬಾದ್ ಎಂದು ಹೇಳಲಿಕ್ಕೆ ಇದು ಇಮ್ರಾನ್‌ಖಾನ್ ದೇಶವಲ್ಲ, ಇದು ಇಮ್ರಾನ್‌ಖಾನ್ ಅಪ್ಪ ಮೋದಿ, ಶಿವಾಜಿಯ ದೇಶ ದೇಶ ಎಂದು ಹೇಳಿದ್ದಾರೆ.

ಪಾಕಿಸ್ತಾನ್ ಜಿಂದಾಬಾದ್ ಎಂದ ದೇಶದ್ರೋಹಿಗಳನ್ನು ಎರಡು ಗಂಟೆಗಳಲ್ಲಿ ಬಿಡುಗಡೆ ಮಾಡಿದ್ದರ ಹಿಂದೆ ಇರುವ ಮಂತ್ರಿ ಯಾರು, ರಾಜಕಾರಣಿ ಯಾರು ಎಂಬುದನ್ನು ಬಹಿರಂಗಪಡಿಸಿ ಎಂದು ಅವರು ಆಗ್ರಹಿಸಿದ್ದಾರೆ.

ಶ್ರೀರಾಮ ಸೇನೆಯ ಕಾರ್ಯಕರ್ತರ ದೇಹದಲ್ಲಿ ಶಿವಾಜಿ ಮಹಾರಾಜರ ರಕ್ತ ತುಂಬಿದೆ. ಬಿಜೆಪಿಯವರ ಮೈಯಲ್ಲಿ ಯಾವ ರಕ್ತ ಹರಿಯುತ್ತಿದೆಯೋ ಗೊತ್ತಿಲ್ಲ ಎಂದಿದ್ದಾರೆ.

ಯಾರಾದರೂ ಒಂದು ಕಪಾಳಕ್ಕೆ ಹೊಡೆದರೆ, ಮತ್ತೊಂದು ಕಪಾಳ ತೋರಿಸುವ ಗಾಂಧಿ ತತ್ವ ನಮಗೆ ಬೇಕಾಗಿಲ್ಲ. ದುರದೃಷ್ಟವೆಂದರೆ, ಭಾರತವನ್ನು ತುಂಡರಿಸಿ, ಪಾಕಿಸ್ತಾನ ನಿರ್ಮಿಸಿದವರು ರಾಷ್ಟ್ರಪಿತ, ಮಹಾತ್ಮರಾದರು ಎಂದರು.

ಛತ್ರಪತಿ ಶಿವಾಜಿ ಮಹಾರಾಜರು, ಸುಭಾಷಚಂದ್ರ ಬೋಸ್, ಚಂದ್ರಶೇಖರ ಆಜಾದ್, ಕಿತ್ತೂರು ರಾಣಿ ಚೆನ್ನಮ್ಮರನ್ನು ಆದರ್ಶವಾಗಿ ಇಟ್ಟುಕೊಂಡಾಗ ಮಾತ್ರ ಭಾರತ ಹಿಂದೂರಾಷ್ಟ್ರ ಆಗಲು ಸಾಧ್ಯ ಎಂದ ಅವರು,
ಪೊಲೀಸರು ದೇವದಾಸಿಯರಿದ್ದಂತೆ ಎಂದು ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ. ಅವರ ಮೇಲೆ ದೇಶದ್ರೋಹ ಕೇಸು ದಾಖಲಿಸಿ ಬಂಧಿಸಬೇಕು ಎಂದು ಸ್ವಾಮೀಜಿ ಆಗ್ರಹಿಸಿದರು.

ವಿವಾದಾತ್ಮಕ ಹೇಳಿಕೆಗಗೆ ಕುಖ್ಯಾತರಾಗಿರುವ ಇವರು, ನಿನ್ನೆ ರಾಯಚೂರಿನಲ್ಲಿಯೂ ಸಹ  ಮೋದಿ, ಅಮಿತ್ ಷಾ ವಿರುದ್ದ ಮಾತನಾಡುವವರಿಗೆ ಗೌರಿ ಲಂಕೇಶರಿಗೆ ಆದ ಗತಿಯಾಗುತ್ತದೆ ಎಂದು ಬೆದರಿಕೆ ಹಾಕಿದ್ದರು.

ಅಂದೋಲಾ ಶ್ರೀ

ಮೋದಿ, ಅಮಿತ್ ಷಾ ವಿರುದ್ದ ಮಾತನಾಡುವವರಿಗೆ ಗೌರಿ ಲಂಕೇಶರಿಗೆ ಆದ ಗತಿಯಾಗುತ್ತದೆ – ಪ್ರಚೋದನಕಾರಿ ಭಾಷಣ ಮಾಡಿದ ಅಂದೋಲಾ ಶ್ರೀ.

Posted by Naanu Gauri on Friday, February 21, 2020

ರಾಯಚೂರಿನ ಶಕ್ತಿನಗರದಲ್ಲಿ ನಡೆದ ಧರ್ಮಸಮ್ಮೇಳನದಲ್ಲಿ ಮಾತಾಡಿದ ಅವರು,  ಇನ್ನೂ 14-15 ವಯಸ್ಸಿನವರು ಮೋದಿ ಅಮಿತ್ ಷಾ ಬಗ್ಗೆ ಮಾತ‌ನಾಡುತ್ತಾರೆ. ಭವಿಷ್ಯದಲ್ಲಿ ಅವರಿಗೂ ಗೌರಿ ಲಂಕೇಶರಿಗೆ ಆದ ಗತಿಯಾಗುತ್ತೆ ಎಂದು ಧಮಕಿ ಹಾಕಿದ್ದರು.

ಈ ಸಮ್ಮೇಳನದಲ್ಲಿ ಶ್ರೀರಾಮಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಸಹ ವೇದಿಕೆಯಲ್ಲಿದ್ದರು. ಈ ಪ್ರಚೋದನಾಕಾರಿ ಭಾಷಣದ ವಿರುದ್ದ ಶಕ್ತಿನಗರ ಪೊಲೀಸ್ ಠಾಣೆಯಲ್ಲಿ ದೂರು ಸಹ ನೀಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...