Homeಮುಖಪುಟಪಾಕ್ ಜಿಂದಾಬಾದ್ ಎಂದವರ ನಾಲಿಗೆ ಕತ್ತರಿಸಿ : ಮತ್ತೆ ಪ್ರಚೋದಾನಕಾರಿ ಹೇಳಿಕೆ ನೀಡಿದ ಅಂದೋಲಾ ಶ್ರೀ

ಪಾಕ್ ಜಿಂದಾಬಾದ್ ಎಂದವರ ನಾಲಿಗೆ ಕತ್ತರಿಸಿ : ಮತ್ತೆ ಪ್ರಚೋದಾನಕಾರಿ ಹೇಳಿಕೆ ನೀಡಿದ ಅಂದೋಲಾ ಶ್ರೀ

ನಿನ್ನೆ ರಾಯಚೂರಿನಲ್ಲಿಯೂ ಸಹ  ಮೋದಿ, ಅಮಿತ್ ಷಾ ವಿರುದ್ದ ಮಾತನಾಡುವವರಿಗೆ ಗೌರಿ ಲಂಕೇಶರಿಗೆ ಆದ ಗತಿಯಾಗುತ್ತದೆ ಎಂದು ಬೆದರಿಕೆ ಹಾಕಿದ್ದರು.

- Advertisement -
- Advertisement -

ಹುಬ್ಬಳ್ಳಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದಿರುವ ಮೂವರು ವಿದ್ಯಾರ್ಥಿಗಳ ನಾಲಿಗೆ ಕತ್ತರಿಸಿ ತಂದು ಕೊಟ್ಟವರಿಗೆ ಶ್ರೀರಾಮ ಸೇನೆಯು ಮೂರು ಲಕ್ಷ ರೂ. ಬಹುಮಾನ ನೀಡಲಿದೆ ಎಂದು ಜೇವರ್ಗಿ ಆಂದೋಲ ಮಠದ ಸಿದ್ಧಲಿಂಗಸ್ವಾಮಿ ಹೇಳಿದ್ದಾರೆ.

ಗದಗದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಶ್ರೀರಾಮಸೇನೆಯಯಿಂದ ಹಮ್ಮಿಕೊಂಡಿದ್ದ ಛತ್ರಪತಿ ಶಿವಾಜಿ ಮಹಾರಾಜರ 393ನೇ ಜಯಂತ್ಯುತ್ಸವದ ಮುಖ್ಯ ಭಾಷಣಕಾರರಾಗಿ ಮಾತನಾಡಿದ ಅವರು ಪಾಕ್ತಿಸಾನ ಜಿಂದಾಬಾದ್ ಎಂದು ಹೇಳಲಿಕ್ಕೆ ಇದು ಇಮ್ರಾನ್‌ಖಾನ್ ದೇಶವಲ್ಲ, ಇದು ಇಮ್ರಾನ್‌ಖಾನ್ ಅಪ್ಪ ಮೋದಿ, ಶಿವಾಜಿಯ ದೇಶ ದೇಶ ಎಂದು ಹೇಳಿದ್ದಾರೆ.

ಪಾಕಿಸ್ತಾನ್ ಜಿಂದಾಬಾದ್ ಎಂದ ದೇಶದ್ರೋಹಿಗಳನ್ನು ಎರಡು ಗಂಟೆಗಳಲ್ಲಿ ಬಿಡುಗಡೆ ಮಾಡಿದ್ದರ ಹಿಂದೆ ಇರುವ ಮಂತ್ರಿ ಯಾರು, ರಾಜಕಾರಣಿ ಯಾರು ಎಂಬುದನ್ನು ಬಹಿರಂಗಪಡಿಸಿ ಎಂದು ಅವರು ಆಗ್ರಹಿಸಿದ್ದಾರೆ.

ಶ್ರೀರಾಮ ಸೇನೆಯ ಕಾರ್ಯಕರ್ತರ ದೇಹದಲ್ಲಿ ಶಿವಾಜಿ ಮಹಾರಾಜರ ರಕ್ತ ತುಂಬಿದೆ. ಬಿಜೆಪಿಯವರ ಮೈಯಲ್ಲಿ ಯಾವ ರಕ್ತ ಹರಿಯುತ್ತಿದೆಯೋ ಗೊತ್ತಿಲ್ಲ ಎಂದಿದ್ದಾರೆ.

ಯಾರಾದರೂ ಒಂದು ಕಪಾಳಕ್ಕೆ ಹೊಡೆದರೆ, ಮತ್ತೊಂದು ಕಪಾಳ ತೋರಿಸುವ ಗಾಂಧಿ ತತ್ವ ನಮಗೆ ಬೇಕಾಗಿಲ್ಲ. ದುರದೃಷ್ಟವೆಂದರೆ, ಭಾರತವನ್ನು ತುಂಡರಿಸಿ, ಪಾಕಿಸ್ತಾನ ನಿರ್ಮಿಸಿದವರು ರಾಷ್ಟ್ರಪಿತ, ಮಹಾತ್ಮರಾದರು ಎಂದರು.

ಛತ್ರಪತಿ ಶಿವಾಜಿ ಮಹಾರಾಜರು, ಸುಭಾಷಚಂದ್ರ ಬೋಸ್, ಚಂದ್ರಶೇಖರ ಆಜಾದ್, ಕಿತ್ತೂರು ರಾಣಿ ಚೆನ್ನಮ್ಮರನ್ನು ಆದರ್ಶವಾಗಿ ಇಟ್ಟುಕೊಂಡಾಗ ಮಾತ್ರ ಭಾರತ ಹಿಂದೂರಾಷ್ಟ್ರ ಆಗಲು ಸಾಧ್ಯ ಎಂದ ಅವರು,
ಪೊಲೀಸರು ದೇವದಾಸಿಯರಿದ್ದಂತೆ ಎಂದು ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ. ಅವರ ಮೇಲೆ ದೇಶದ್ರೋಹ ಕೇಸು ದಾಖಲಿಸಿ ಬಂಧಿಸಬೇಕು ಎಂದು ಸ್ವಾಮೀಜಿ ಆಗ್ರಹಿಸಿದರು.

ವಿವಾದಾತ್ಮಕ ಹೇಳಿಕೆಗಗೆ ಕುಖ್ಯಾತರಾಗಿರುವ ಇವರು, ನಿನ್ನೆ ರಾಯಚೂರಿನಲ್ಲಿಯೂ ಸಹ  ಮೋದಿ, ಅಮಿತ್ ಷಾ ವಿರುದ್ದ ಮಾತನಾಡುವವರಿಗೆ ಗೌರಿ ಲಂಕೇಶರಿಗೆ ಆದ ಗತಿಯಾಗುತ್ತದೆ ಎಂದು ಬೆದರಿಕೆ ಹಾಕಿದ್ದರು.

ಅಂದೋಲಾ ಶ್ರೀ

ಮೋದಿ, ಅಮಿತ್ ಷಾ ವಿರುದ್ದ ಮಾತನಾಡುವವರಿಗೆ ಗೌರಿ ಲಂಕೇಶರಿಗೆ ಆದ ಗತಿಯಾಗುತ್ತದೆ – ಪ್ರಚೋದನಕಾರಿ ಭಾಷಣ ಮಾಡಿದ ಅಂದೋಲಾ ಶ್ರೀ.

Posted by Naanu Gauri on Friday, February 21, 2020

ರಾಯಚೂರಿನ ಶಕ್ತಿನಗರದಲ್ಲಿ ನಡೆದ ಧರ್ಮಸಮ್ಮೇಳನದಲ್ಲಿ ಮಾತಾಡಿದ ಅವರು,  ಇನ್ನೂ 14-15 ವಯಸ್ಸಿನವರು ಮೋದಿ ಅಮಿತ್ ಷಾ ಬಗ್ಗೆ ಮಾತ‌ನಾಡುತ್ತಾರೆ. ಭವಿಷ್ಯದಲ್ಲಿ ಅವರಿಗೂ ಗೌರಿ ಲಂಕೇಶರಿಗೆ ಆದ ಗತಿಯಾಗುತ್ತೆ ಎಂದು ಧಮಕಿ ಹಾಕಿದ್ದರು.

ಈ ಸಮ್ಮೇಳನದಲ್ಲಿ ಶ್ರೀರಾಮಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಸಹ ವೇದಿಕೆಯಲ್ಲಿದ್ದರು. ಈ ಪ್ರಚೋದನಾಕಾರಿ ಭಾಷಣದ ವಿರುದ್ದ ಶಕ್ತಿನಗರ ಪೊಲೀಸ್ ಠಾಣೆಯಲ್ಲಿ ದೂರು ಸಹ ನೀಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...