Homeಮುಖಪುಟಪಾಕ್ ಜಿಂದಾಬಾದ್ ಎಂದವರ ನಾಲಿಗೆ ಕತ್ತರಿಸಿ : ಮತ್ತೆ ಪ್ರಚೋದಾನಕಾರಿ ಹೇಳಿಕೆ ನೀಡಿದ ಅಂದೋಲಾ ಶ್ರೀ

ಪಾಕ್ ಜಿಂದಾಬಾದ್ ಎಂದವರ ನಾಲಿಗೆ ಕತ್ತರಿಸಿ : ಮತ್ತೆ ಪ್ರಚೋದಾನಕಾರಿ ಹೇಳಿಕೆ ನೀಡಿದ ಅಂದೋಲಾ ಶ್ರೀ

ನಿನ್ನೆ ರಾಯಚೂರಿನಲ್ಲಿಯೂ ಸಹ  ಮೋದಿ, ಅಮಿತ್ ಷಾ ವಿರುದ್ದ ಮಾತನಾಡುವವರಿಗೆ ಗೌರಿ ಲಂಕೇಶರಿಗೆ ಆದ ಗತಿಯಾಗುತ್ತದೆ ಎಂದು ಬೆದರಿಕೆ ಹಾಕಿದ್ದರು.

- Advertisement -
- Advertisement -

ಹುಬ್ಬಳ್ಳಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದಿರುವ ಮೂವರು ವಿದ್ಯಾರ್ಥಿಗಳ ನಾಲಿಗೆ ಕತ್ತರಿಸಿ ತಂದು ಕೊಟ್ಟವರಿಗೆ ಶ್ರೀರಾಮ ಸೇನೆಯು ಮೂರು ಲಕ್ಷ ರೂ. ಬಹುಮಾನ ನೀಡಲಿದೆ ಎಂದು ಜೇವರ್ಗಿ ಆಂದೋಲ ಮಠದ ಸಿದ್ಧಲಿಂಗಸ್ವಾಮಿ ಹೇಳಿದ್ದಾರೆ.

ಗದಗದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಶ್ರೀರಾಮಸೇನೆಯಯಿಂದ ಹಮ್ಮಿಕೊಂಡಿದ್ದ ಛತ್ರಪತಿ ಶಿವಾಜಿ ಮಹಾರಾಜರ 393ನೇ ಜಯಂತ್ಯುತ್ಸವದ ಮುಖ್ಯ ಭಾಷಣಕಾರರಾಗಿ ಮಾತನಾಡಿದ ಅವರು ಪಾಕ್ತಿಸಾನ ಜಿಂದಾಬಾದ್ ಎಂದು ಹೇಳಲಿಕ್ಕೆ ಇದು ಇಮ್ರಾನ್‌ಖಾನ್ ದೇಶವಲ್ಲ, ಇದು ಇಮ್ರಾನ್‌ಖಾನ್ ಅಪ್ಪ ಮೋದಿ, ಶಿವಾಜಿಯ ದೇಶ ದೇಶ ಎಂದು ಹೇಳಿದ್ದಾರೆ.

ಪಾಕಿಸ್ತಾನ್ ಜಿಂದಾಬಾದ್ ಎಂದ ದೇಶದ್ರೋಹಿಗಳನ್ನು ಎರಡು ಗಂಟೆಗಳಲ್ಲಿ ಬಿಡುಗಡೆ ಮಾಡಿದ್ದರ ಹಿಂದೆ ಇರುವ ಮಂತ್ರಿ ಯಾರು, ರಾಜಕಾರಣಿ ಯಾರು ಎಂಬುದನ್ನು ಬಹಿರಂಗಪಡಿಸಿ ಎಂದು ಅವರು ಆಗ್ರಹಿಸಿದ್ದಾರೆ.

ಶ್ರೀರಾಮ ಸೇನೆಯ ಕಾರ್ಯಕರ್ತರ ದೇಹದಲ್ಲಿ ಶಿವಾಜಿ ಮಹಾರಾಜರ ರಕ್ತ ತುಂಬಿದೆ. ಬಿಜೆಪಿಯವರ ಮೈಯಲ್ಲಿ ಯಾವ ರಕ್ತ ಹರಿಯುತ್ತಿದೆಯೋ ಗೊತ್ತಿಲ್ಲ ಎಂದಿದ್ದಾರೆ.

ಯಾರಾದರೂ ಒಂದು ಕಪಾಳಕ್ಕೆ ಹೊಡೆದರೆ, ಮತ್ತೊಂದು ಕಪಾಳ ತೋರಿಸುವ ಗಾಂಧಿ ತತ್ವ ನಮಗೆ ಬೇಕಾಗಿಲ್ಲ. ದುರದೃಷ್ಟವೆಂದರೆ, ಭಾರತವನ್ನು ತುಂಡರಿಸಿ, ಪಾಕಿಸ್ತಾನ ನಿರ್ಮಿಸಿದವರು ರಾಷ್ಟ್ರಪಿತ, ಮಹಾತ್ಮರಾದರು ಎಂದರು.

ಛತ್ರಪತಿ ಶಿವಾಜಿ ಮಹಾರಾಜರು, ಸುಭಾಷಚಂದ್ರ ಬೋಸ್, ಚಂದ್ರಶೇಖರ ಆಜಾದ್, ಕಿತ್ತೂರು ರಾಣಿ ಚೆನ್ನಮ್ಮರನ್ನು ಆದರ್ಶವಾಗಿ ಇಟ್ಟುಕೊಂಡಾಗ ಮಾತ್ರ ಭಾರತ ಹಿಂದೂರಾಷ್ಟ್ರ ಆಗಲು ಸಾಧ್ಯ ಎಂದ ಅವರು,
ಪೊಲೀಸರು ದೇವದಾಸಿಯರಿದ್ದಂತೆ ಎಂದು ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ. ಅವರ ಮೇಲೆ ದೇಶದ್ರೋಹ ಕೇಸು ದಾಖಲಿಸಿ ಬಂಧಿಸಬೇಕು ಎಂದು ಸ್ವಾಮೀಜಿ ಆಗ್ರಹಿಸಿದರು.

ವಿವಾದಾತ್ಮಕ ಹೇಳಿಕೆಗಗೆ ಕುಖ್ಯಾತರಾಗಿರುವ ಇವರು, ನಿನ್ನೆ ರಾಯಚೂರಿನಲ್ಲಿಯೂ ಸಹ  ಮೋದಿ, ಅಮಿತ್ ಷಾ ವಿರುದ್ದ ಮಾತನಾಡುವವರಿಗೆ ಗೌರಿ ಲಂಕೇಶರಿಗೆ ಆದ ಗತಿಯಾಗುತ್ತದೆ ಎಂದು ಬೆದರಿಕೆ ಹಾಕಿದ್ದರು.

ಅಂದೋಲಾ ಶ್ರೀ

ಮೋದಿ, ಅಮಿತ್ ಷಾ ವಿರುದ್ದ ಮಾತನಾಡುವವರಿಗೆ ಗೌರಿ ಲಂಕೇಶರಿಗೆ ಆದ ಗತಿಯಾಗುತ್ತದೆ – ಪ್ರಚೋದನಕಾರಿ ಭಾಷಣ ಮಾಡಿದ ಅಂದೋಲಾ ಶ್ರೀ.

Posted by Naanu Gauri on Friday, February 21, 2020

ರಾಯಚೂರಿನ ಶಕ್ತಿನಗರದಲ್ಲಿ ನಡೆದ ಧರ್ಮಸಮ್ಮೇಳನದಲ್ಲಿ ಮಾತಾಡಿದ ಅವರು,  ಇನ್ನೂ 14-15 ವಯಸ್ಸಿನವರು ಮೋದಿ ಅಮಿತ್ ಷಾ ಬಗ್ಗೆ ಮಾತ‌ನಾಡುತ್ತಾರೆ. ಭವಿಷ್ಯದಲ್ಲಿ ಅವರಿಗೂ ಗೌರಿ ಲಂಕೇಶರಿಗೆ ಆದ ಗತಿಯಾಗುತ್ತೆ ಎಂದು ಧಮಕಿ ಹಾಕಿದ್ದರು.

ಈ ಸಮ್ಮೇಳನದಲ್ಲಿ ಶ್ರೀರಾಮಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಸಹ ವೇದಿಕೆಯಲ್ಲಿದ್ದರು. ಈ ಪ್ರಚೋದನಾಕಾರಿ ಭಾಷಣದ ವಿರುದ್ದ ಶಕ್ತಿನಗರ ಪೊಲೀಸ್ ಠಾಣೆಯಲ್ಲಿ ದೂರು ಸಹ ನೀಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...