Homeಮುಖಪುಟಪಾಕ್ ಜಿಂದಾಬಾದ್ ಎಂದವರ ನಾಲಿಗೆ ಕತ್ತರಿಸಿ : ಮತ್ತೆ ಪ್ರಚೋದಾನಕಾರಿ ಹೇಳಿಕೆ ನೀಡಿದ ಅಂದೋಲಾ ಶ್ರೀ

ಪಾಕ್ ಜಿಂದಾಬಾದ್ ಎಂದವರ ನಾಲಿಗೆ ಕತ್ತರಿಸಿ : ಮತ್ತೆ ಪ್ರಚೋದಾನಕಾರಿ ಹೇಳಿಕೆ ನೀಡಿದ ಅಂದೋಲಾ ಶ್ರೀ

ನಿನ್ನೆ ರಾಯಚೂರಿನಲ್ಲಿಯೂ ಸಹ  ಮೋದಿ, ಅಮಿತ್ ಷಾ ವಿರುದ್ದ ಮಾತನಾಡುವವರಿಗೆ ಗೌರಿ ಲಂಕೇಶರಿಗೆ ಆದ ಗತಿಯಾಗುತ್ತದೆ ಎಂದು ಬೆದರಿಕೆ ಹಾಕಿದ್ದರು.

- Advertisement -
- Advertisement -

ಹುಬ್ಬಳ್ಳಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದಿರುವ ಮೂವರು ವಿದ್ಯಾರ್ಥಿಗಳ ನಾಲಿಗೆ ಕತ್ತರಿಸಿ ತಂದು ಕೊಟ್ಟವರಿಗೆ ಶ್ರೀರಾಮ ಸೇನೆಯು ಮೂರು ಲಕ್ಷ ರೂ. ಬಹುಮಾನ ನೀಡಲಿದೆ ಎಂದು ಜೇವರ್ಗಿ ಆಂದೋಲ ಮಠದ ಸಿದ್ಧಲಿಂಗಸ್ವಾಮಿ ಹೇಳಿದ್ದಾರೆ.

ಗದಗದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಶ್ರೀರಾಮಸೇನೆಯಯಿಂದ ಹಮ್ಮಿಕೊಂಡಿದ್ದ ಛತ್ರಪತಿ ಶಿವಾಜಿ ಮಹಾರಾಜರ 393ನೇ ಜಯಂತ್ಯುತ್ಸವದ ಮುಖ್ಯ ಭಾಷಣಕಾರರಾಗಿ ಮಾತನಾಡಿದ ಅವರು ಪಾಕ್ತಿಸಾನ ಜಿಂದಾಬಾದ್ ಎಂದು ಹೇಳಲಿಕ್ಕೆ ಇದು ಇಮ್ರಾನ್‌ಖಾನ್ ದೇಶವಲ್ಲ, ಇದು ಇಮ್ರಾನ್‌ಖಾನ್ ಅಪ್ಪ ಮೋದಿ, ಶಿವಾಜಿಯ ದೇಶ ದೇಶ ಎಂದು ಹೇಳಿದ್ದಾರೆ.

ಪಾಕಿಸ್ತಾನ್ ಜಿಂದಾಬಾದ್ ಎಂದ ದೇಶದ್ರೋಹಿಗಳನ್ನು ಎರಡು ಗಂಟೆಗಳಲ್ಲಿ ಬಿಡುಗಡೆ ಮಾಡಿದ್ದರ ಹಿಂದೆ ಇರುವ ಮಂತ್ರಿ ಯಾರು, ರಾಜಕಾರಣಿ ಯಾರು ಎಂಬುದನ್ನು ಬಹಿರಂಗಪಡಿಸಿ ಎಂದು ಅವರು ಆಗ್ರಹಿಸಿದ್ದಾರೆ.

ಶ್ರೀರಾಮ ಸೇನೆಯ ಕಾರ್ಯಕರ್ತರ ದೇಹದಲ್ಲಿ ಶಿವಾಜಿ ಮಹಾರಾಜರ ರಕ್ತ ತುಂಬಿದೆ. ಬಿಜೆಪಿಯವರ ಮೈಯಲ್ಲಿ ಯಾವ ರಕ್ತ ಹರಿಯುತ್ತಿದೆಯೋ ಗೊತ್ತಿಲ್ಲ ಎಂದಿದ್ದಾರೆ.

ಯಾರಾದರೂ ಒಂದು ಕಪಾಳಕ್ಕೆ ಹೊಡೆದರೆ, ಮತ್ತೊಂದು ಕಪಾಳ ತೋರಿಸುವ ಗಾಂಧಿ ತತ್ವ ನಮಗೆ ಬೇಕಾಗಿಲ್ಲ. ದುರದೃಷ್ಟವೆಂದರೆ, ಭಾರತವನ್ನು ತುಂಡರಿಸಿ, ಪಾಕಿಸ್ತಾನ ನಿರ್ಮಿಸಿದವರು ರಾಷ್ಟ್ರಪಿತ, ಮಹಾತ್ಮರಾದರು ಎಂದರು.

ಛತ್ರಪತಿ ಶಿವಾಜಿ ಮಹಾರಾಜರು, ಸುಭಾಷಚಂದ್ರ ಬೋಸ್, ಚಂದ್ರಶೇಖರ ಆಜಾದ್, ಕಿತ್ತೂರು ರಾಣಿ ಚೆನ್ನಮ್ಮರನ್ನು ಆದರ್ಶವಾಗಿ ಇಟ್ಟುಕೊಂಡಾಗ ಮಾತ್ರ ಭಾರತ ಹಿಂದೂರಾಷ್ಟ್ರ ಆಗಲು ಸಾಧ್ಯ ಎಂದ ಅವರು,
ಪೊಲೀಸರು ದೇವದಾಸಿಯರಿದ್ದಂತೆ ಎಂದು ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ. ಅವರ ಮೇಲೆ ದೇಶದ್ರೋಹ ಕೇಸು ದಾಖಲಿಸಿ ಬಂಧಿಸಬೇಕು ಎಂದು ಸ್ವಾಮೀಜಿ ಆಗ್ರಹಿಸಿದರು.

ವಿವಾದಾತ್ಮಕ ಹೇಳಿಕೆಗಗೆ ಕುಖ್ಯಾತರಾಗಿರುವ ಇವರು, ನಿನ್ನೆ ರಾಯಚೂರಿನಲ್ಲಿಯೂ ಸಹ  ಮೋದಿ, ಅಮಿತ್ ಷಾ ವಿರುದ್ದ ಮಾತನಾಡುವವರಿಗೆ ಗೌರಿ ಲಂಕೇಶರಿಗೆ ಆದ ಗತಿಯಾಗುತ್ತದೆ ಎಂದು ಬೆದರಿಕೆ ಹಾಕಿದ್ದರು.

ಅಂದೋಲಾ ಶ್ರೀ

ಮೋದಿ, ಅಮಿತ್ ಷಾ ವಿರುದ್ದ ಮಾತನಾಡುವವರಿಗೆ ಗೌರಿ ಲಂಕೇಶರಿಗೆ ಆದ ಗತಿಯಾಗುತ್ತದೆ – ಪ್ರಚೋದನಕಾರಿ ಭಾಷಣ ಮಾಡಿದ ಅಂದೋಲಾ ಶ್ರೀ.

Posted by Naanu Gauri on Friday, February 21, 2020

ರಾಯಚೂರಿನ ಶಕ್ತಿನಗರದಲ್ಲಿ ನಡೆದ ಧರ್ಮಸಮ್ಮೇಳನದಲ್ಲಿ ಮಾತಾಡಿದ ಅವರು,  ಇನ್ನೂ 14-15 ವಯಸ್ಸಿನವರು ಮೋದಿ ಅಮಿತ್ ಷಾ ಬಗ್ಗೆ ಮಾತ‌ನಾಡುತ್ತಾರೆ. ಭವಿಷ್ಯದಲ್ಲಿ ಅವರಿಗೂ ಗೌರಿ ಲಂಕೇಶರಿಗೆ ಆದ ಗತಿಯಾಗುತ್ತೆ ಎಂದು ಧಮಕಿ ಹಾಕಿದ್ದರು.

ಈ ಸಮ್ಮೇಳನದಲ್ಲಿ ಶ್ರೀರಾಮಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಸಹ ವೇದಿಕೆಯಲ್ಲಿದ್ದರು. ಈ ಪ್ರಚೋದನಾಕಾರಿ ಭಾಷಣದ ವಿರುದ್ದ ಶಕ್ತಿನಗರ ಪೊಲೀಸ್ ಠಾಣೆಯಲ್ಲಿ ದೂರು ಸಹ ನೀಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...