Homeಮುಖಪುಟನನ್ನ ತೆಂಗು, ಅಡಿಕೆ ಮರಗಳನ್ನು ವಾಪಸ್‌ ಕೊಡಿ : ಧರಣಿ ಕೂತ ಮಹಿಳೆ, ಗ್ರಾಮಸ್ಥರ ಬೆಂಬಲ

ನನ್ನ ತೆಂಗು, ಅಡಿಕೆ ಮರಗಳನ್ನು ವಾಪಸ್‌ ಕೊಡಿ : ಧರಣಿ ಕೂತ ಮಹಿಳೆ, ಗ್ರಾಮಸ್ಥರ ಬೆಂಬಲ

- Advertisement -
- Advertisement -

ತುಮಕೂರು ಜಿಲ್ಲೆ ಗುಬ್ಬಿ ತಾಲೂಕು ತಿಪ್ಪೂರು ಗ್ರಾಮದಲ್ಲಿ ಗ್ರಾಮ ಲೆಕ್ಕಿಗ, ಕಂದಾಯಾಧಿಕಾರಿ ಮಾಡಿದ ತಪ್ಪಿಗೆ ಅಮಾಯಕ ಮಹಿಳೆಯ ನೂರಾರು ಮರಗಳನ್ನು ಕಡಿದು ತೋಟ ನಾಶ ಮಾಡಿದ ತಹಶೀಲ್ದಾರ್‌ ಕ್ರಮದ ವಿರುದ್ಧ ಸಿದ್ದಮ್ಮನವರು ಧರಣಿ ಆರಂಭಿಸಿದ್ದಾರೆ. ನನ್ನ ತೆಂಗು, ಅಡಿಕೆ ಮರಗಳನ್ನು ವಾಪಸ್‌ ಕೊಡಿ ಎಂದು ಗೋಳಿಡುತ್ತಿದ್ದ ಆಕೆಯ ಪ್ರತಿಭಟನೆಗೆ ಗ್ರಾಮಸ್ಥರು ಸಾಥ್‌ ನೀಡಿದ್ದಾರೆ.

ಮಾರ್ಚ್‌ 06ರಂದು ತಾನೇ ನೀರು ಹೊಯ್ದು ಬೆಳೆಸಿದ್ದ ಸಿದ್ದಮ್ಮ ಅವರಿಗೆ ಸೇರಿದ್ದ ತೆಂಗು ಮತ್ತು ಅಡಿಕೆ ಮರಗಳು ಕಣ್ಣೆದುರೇ ನೆಲಕ್ಕುರುಳಿವೆ. ಜಿಲ್ಲಾಧಿಕಾರಿ ಆದೇಶವನ್ನೇ ಧಿಕ್ಕರಿಸಿದ ತಹಶೀಲ್ದಾರ್ ಮುಂದೆ ನಿಂತು ಸಿದ್ದಮ್ಮನವರಿಗೆ ಸೇರಿದ ಅಡಿಕೆ ಮತ್ತು ತೆಂಗಿನ ಮರಗಳನ್ನು ಕಡಿಸಿಹಾಕಿದ್ದಾರೆ. ತಾನು ಸಲಹಿದ  ಫಲ ನೀಡುತ್ತಿದ್ದ ಮರಗಳು ಕಡಿದ್ದನ್ನು ನೋಡಿ ಸಿದ್ದಮ್ಮ ಮಕ್ಕಳು ಕಳೆದುಕೊಂಡಂತೆ ಅಳುತ್ತಿರುವ ದೃಶ್ಯಗಳು ಸಾಮಾಜಿಕ ಜಾಲ ತಾಣದಲ್ಲಿ ವೈರಲ್‌ ಆಗಿದ್ದವು.

ಗುಬ್ಬಿ ಮೇಲೆ ಬ್ರಹ್ಮಾಸ್ತ್ರ

ಗ್ರಾಮ ಲೆಕ್ಕಿಗ, ಕಂದಾಯಾಧಿಕಾರಿ ಮಾಡಿದ ತಪ್ಪಿಗೆ ಅಮಾಯಕ ಮಹಿಳೆಯ ತೋಟ ನಾಶ ಮಾಡಿದ ತಹಶಿಲ್ದಾರ್‌: ಗುಬ್ಬಿಯಲ್ಲೊಂದು ಮನಕಲಕುವ ಕರಾಳ ಘಟನೆ.. ವಿಡಿಯೋ ನೋಡಿ.

Posted by Naanu Gauri on Sunday, March 8, 2020

ತುಮಕೂರು ಜಿಲ್ಲೆ ಗುಬ್ಬಿ ತಾಲೂಕು ತಿಪ್ಪೂರು ಗ್ರಾಮದಲ್ಲಿ ಕೋಡಿಕೆಂಪಮ್ಮ ದೇವಾಲಯದ ಜಾತ್ರೆ ಇತ್ತು. ಆ ಜಾತ್ರೆ ನಡೆಯುವ ಜಾಗದ ಭೂಮಿ ವಿವಾದದಲ್ಲಿತ್ತು  ಆ ಜಮೀನನ್ನು ತೆರವುಗೊಳಿಸಲು ಜಿಲ್ಲಾಧಿಕಾರಿಗಳು ಸೂಚಿಸಿದ್ದರು. ಆದರೆ ಗ್ರಾಮ ಲೆಕ್ಕಿಗ ಮತ್ತು ಕಂದಾಯಾಧಿಕಾರಿಯ ಲೋಪದಿಂದಾಗಿ ಸಿದ್ದಮ್ಮ ಅವರ ತೋಟವನ್ನು ಸಂಪೂರ್ಣವಾಗಿ ನೆಲಸಮ ಮಾಡಲಾಗಿದೆ. ಸಿದ್ದಮ್ಮನವರ ತೋಟದ ಪ್ರಕರಣ ನ್ಯಾಯಾಲಯದಲ್ಲಿದ್ದು ಯಥಾಸ್ಥಿತಿ ಕಾಪಾಡುವಂತೆ ನ್ಯಾಯಾಲಯ ಸೂಚಿಸಿದ್ದರೂ ತಹಶೀಲ್ದಾರ್ ಕೂಡ ಅದನ್ನು ಪರಿಶೀಲಿಸುವ ಗೋಜಿಗೆ ಹೋಗದೆ ಮಹಿಳಾ ರೈತರೊಬ್ಬರ ತೋಟವನ್ನು ಧ್ವಂಸ ಮಾಡಲಾಗಿದೆ.

ಮಾರ್ಚ್‌ 06ರ ಬೆಳಿಗ್ಗೆ ಸಿದ್ದಮ್ಮ ಅವರು ತೋಟಕ್ಕೆ ಹೋದ ಗುಬ್ಬಿ ತಹಶೀಲ್ದಾರ್ 170 ಅಡಿಕೆ ಗಿಡಗಳು ಮತ್ತು 25 ತೆಂಗಿನ ಮರಗಳನ್ನು ಕಡಿಸಿ ಹಾಕಿದ್ದಾರೆ. ಈ ಮೂಲಕ ಜಿಲ್ಲಾಧಿಕಾರಿಗಳು ನೀಡಿದ್ದ ಆದೇಶವನ್ನು ಉಲ್ಲಂಘಿಸಿದ್ದಾರೆ. ತಹಶೀಲ್ದಾರ್ ಧೋರಣೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಅಧಿಕಾರಿ ಕ್ರೂರವಾಗಿ ನಡೆದುಕೊಂಡಿದ್ದಾರೆ ಎಂದು ಟೀಕೆ ವ್ಯಕ್ತವಾಗಿದೆ.

ಅಡಿಕೆ ಮತ್ತು ತೆಂಗಿನ ಮರಗಳು ನೆಲಕ್ಕೆ ಬಿದ್ದಿರುವುದನ್ನು ನೋಡಿದ ಸಿದ್ದಮ್ಮ ತಲೆ ಚಚ್ಚಿಕೊಳ್ಳುತ್ತಿದ್ದಾರೆ. ಗೊಳೋ ಎಂದು ಕಣ್ಣೀರು ಕರೆಯುತ್ತಿದ್ದಾರೆ. ಗುಬ್ಬಿ ತಾಲೂಕು ತಹಶೀಲ್ದಾರ್ ಏಕಾಏಕಿ ತೋಟಕ್ಕೆ ಬಂದು ನಿರ್ದಯವಾಗಿ ಮರಗಳನ್ನು ಕಡಿಸಿರುವುದು ಆಕೆಯನ್ನು ಕೆರಳುವಂತೆ ಮಾಡಿದೆ. ಇನ್ನೊಂದೆಡೆ ತಪ್ಪು ಮಾಡಿ ತಹಶೀಲ್ದಾರ್‌ ಇಕ್ಕಟ್ಟಿಗೆ ಸಿಲುಕಿದ್ದಾರೆ.

ತಾಲೂಕು ದಂಡಾಧಿಕಾರಿ ಮತ್ತು ಕಂದಾಯ ಅಧಿಕಾರಿ ಮತ್ತು ಗ್ರಾಮ ಲೆಕ್ಕಿಗ ರೈತರಿಗೆ ಅನ್ಯಾಯ ಮಾಡಿದ್ದಾರೆ. ಯಡಿಯೂರಪ್ಪ ಸರ್ಕಾರದಲ್ಲಿ ರೈತರಿಗೆ ರಕ್ಷಣೆ ಇಲ್ಲ. ರೈತರ ಬೆಳೆದ ಬೆಳೆಯನ್ನು ಅಧಿಕಾರಿಯೇ ಮುಂದೆ ನಿಂತು ಕತ್ತರಿಸಿಹಾಕಲು ಅನುವು ಮಾಡಿಕೊಟ್ಟಿದ್ದಾರೆ. ಆ ತಹಶೀಲ್ದಾರ್ ಗೆ ಮರಗಳನ್ನು ಕಡಿಸುವ ಮನಸ್ಸು ಹೇಗೆ ಬಂತು ಎಂದು ರೈತರು  ಕಿಡಿಕಾರಿದ್ದಾರೆ.

ಈ ಕುರಿತು ಶಾಸಕ ಎಸ್‌.ಆರ್‌ ಶ್ರೀನಿವಾಸ್‌ ಪ್ರತಿಕ್ರಿಯೆ ನೀಡಿ ಹತ್ತು ಮರಗಳನ್ನು ಕಡಿದುಬಿಟ್ಟಿದ್ದಾರೆ ಅಷ್ಟೇ. ಏನೂ ತೊಂದರೆಯಾಗಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಇನ್ನು ತಹಶೀಲ್ದಾರ್‌ ಎಂ ಮಮತಾ ನಾವು ಜಿಲ್ಲಾಧಿಕಾರಿ ಆದೇಶ ಪಾಲಿಸದ್ದೇವೆ ಅಷ್ಟೇ. ಮರಗಳ ತೆರವಿಗೂ ಮುನ್ನ ನಾಲ್ಕು ಅರ್ಚಕರ ಸಹಿ ಪಡೆದಿದ್ದೇವೆ ಎಂದು ಸಬೂಬು ಹೇಳುತ್ತಿದ್ದಾರೆ.

ಇದೆಲ್ಲದರಿಂದ ಕೆರಳಿರುವ ಸಿದ್ದಮ್ಮ ಮನೆ ಮುಂದೆ ಅಂಬೇಡ್ಕರ್‌ ಫೋಟೊ ಇಟ್ಟುಕೊಂಡು ಧರಣಿ ಆರಂಭಿಸಿದ್ದಾರೆ. ಜಿಲ್ಲಾಡಳಿತ ಮಧ್ಯಪ್ರವೇಶಿಸಿ ನ್ಯಾಯ ದೊರಕಿಸಿಕೊಡದಿದ್ದಲ್ಲಿ ತುಮಕೂರಿಗೆ ಬಂದು ಹೋರಾಟ ನಡೆಸುತ್ತೇನೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....