Homeಮುಖಪುಟನನ್ನ ತೆಂಗು, ಅಡಿಕೆ ಮರಗಳನ್ನು ವಾಪಸ್‌ ಕೊಡಿ : ಧರಣಿ ಕೂತ ಮಹಿಳೆ, ಗ್ರಾಮಸ್ಥರ ಬೆಂಬಲ

ನನ್ನ ತೆಂಗು, ಅಡಿಕೆ ಮರಗಳನ್ನು ವಾಪಸ್‌ ಕೊಡಿ : ಧರಣಿ ಕೂತ ಮಹಿಳೆ, ಗ್ರಾಮಸ್ಥರ ಬೆಂಬಲ

- Advertisement -
- Advertisement -

ತುಮಕೂರು ಜಿಲ್ಲೆ ಗುಬ್ಬಿ ತಾಲೂಕು ತಿಪ್ಪೂರು ಗ್ರಾಮದಲ್ಲಿ ಗ್ರಾಮ ಲೆಕ್ಕಿಗ, ಕಂದಾಯಾಧಿಕಾರಿ ಮಾಡಿದ ತಪ್ಪಿಗೆ ಅಮಾಯಕ ಮಹಿಳೆಯ ನೂರಾರು ಮರಗಳನ್ನು ಕಡಿದು ತೋಟ ನಾಶ ಮಾಡಿದ ತಹಶೀಲ್ದಾರ್‌ ಕ್ರಮದ ವಿರುದ್ಧ ಸಿದ್ದಮ್ಮನವರು ಧರಣಿ ಆರಂಭಿಸಿದ್ದಾರೆ. ನನ್ನ ತೆಂಗು, ಅಡಿಕೆ ಮರಗಳನ್ನು ವಾಪಸ್‌ ಕೊಡಿ ಎಂದು ಗೋಳಿಡುತ್ತಿದ್ದ ಆಕೆಯ ಪ್ರತಿಭಟನೆಗೆ ಗ್ರಾಮಸ್ಥರು ಸಾಥ್‌ ನೀಡಿದ್ದಾರೆ.

ಮಾರ್ಚ್‌ 06ರಂದು ತಾನೇ ನೀರು ಹೊಯ್ದು ಬೆಳೆಸಿದ್ದ ಸಿದ್ದಮ್ಮ ಅವರಿಗೆ ಸೇರಿದ್ದ ತೆಂಗು ಮತ್ತು ಅಡಿಕೆ ಮರಗಳು ಕಣ್ಣೆದುರೇ ನೆಲಕ್ಕುರುಳಿವೆ. ಜಿಲ್ಲಾಧಿಕಾರಿ ಆದೇಶವನ್ನೇ ಧಿಕ್ಕರಿಸಿದ ತಹಶೀಲ್ದಾರ್ ಮುಂದೆ ನಿಂತು ಸಿದ್ದಮ್ಮನವರಿಗೆ ಸೇರಿದ ಅಡಿಕೆ ಮತ್ತು ತೆಂಗಿನ ಮರಗಳನ್ನು ಕಡಿಸಿಹಾಕಿದ್ದಾರೆ. ತಾನು ಸಲಹಿದ  ಫಲ ನೀಡುತ್ತಿದ್ದ ಮರಗಳು ಕಡಿದ್ದನ್ನು ನೋಡಿ ಸಿದ್ದಮ್ಮ ಮಕ್ಕಳು ಕಳೆದುಕೊಂಡಂತೆ ಅಳುತ್ತಿರುವ ದೃಶ್ಯಗಳು ಸಾಮಾಜಿಕ ಜಾಲ ತಾಣದಲ್ಲಿ ವೈರಲ್‌ ಆಗಿದ್ದವು.

ಗುಬ್ಬಿ ಮೇಲೆ ಬ್ರಹ್ಮಾಸ್ತ್ರ

ಗ್ರಾಮ ಲೆಕ್ಕಿಗ, ಕಂದಾಯಾಧಿಕಾರಿ ಮಾಡಿದ ತಪ್ಪಿಗೆ ಅಮಾಯಕ ಮಹಿಳೆಯ ತೋಟ ನಾಶ ಮಾಡಿದ ತಹಶಿಲ್ದಾರ್‌: ಗುಬ್ಬಿಯಲ್ಲೊಂದು ಮನಕಲಕುವ ಕರಾಳ ಘಟನೆ.. ವಿಡಿಯೋ ನೋಡಿ.

Posted by Naanu Gauri on Sunday, March 8, 2020

ತುಮಕೂರು ಜಿಲ್ಲೆ ಗುಬ್ಬಿ ತಾಲೂಕು ತಿಪ್ಪೂರು ಗ್ರಾಮದಲ್ಲಿ ಕೋಡಿಕೆಂಪಮ್ಮ ದೇವಾಲಯದ ಜಾತ್ರೆ ಇತ್ತು. ಆ ಜಾತ್ರೆ ನಡೆಯುವ ಜಾಗದ ಭೂಮಿ ವಿವಾದದಲ್ಲಿತ್ತು  ಆ ಜಮೀನನ್ನು ತೆರವುಗೊಳಿಸಲು ಜಿಲ್ಲಾಧಿಕಾರಿಗಳು ಸೂಚಿಸಿದ್ದರು. ಆದರೆ ಗ್ರಾಮ ಲೆಕ್ಕಿಗ ಮತ್ತು ಕಂದಾಯಾಧಿಕಾರಿಯ ಲೋಪದಿಂದಾಗಿ ಸಿದ್ದಮ್ಮ ಅವರ ತೋಟವನ್ನು ಸಂಪೂರ್ಣವಾಗಿ ನೆಲಸಮ ಮಾಡಲಾಗಿದೆ. ಸಿದ್ದಮ್ಮನವರ ತೋಟದ ಪ್ರಕರಣ ನ್ಯಾಯಾಲಯದಲ್ಲಿದ್ದು ಯಥಾಸ್ಥಿತಿ ಕಾಪಾಡುವಂತೆ ನ್ಯಾಯಾಲಯ ಸೂಚಿಸಿದ್ದರೂ ತಹಶೀಲ್ದಾರ್ ಕೂಡ ಅದನ್ನು ಪರಿಶೀಲಿಸುವ ಗೋಜಿಗೆ ಹೋಗದೆ ಮಹಿಳಾ ರೈತರೊಬ್ಬರ ತೋಟವನ್ನು ಧ್ವಂಸ ಮಾಡಲಾಗಿದೆ.

ಮಾರ್ಚ್‌ 06ರ ಬೆಳಿಗ್ಗೆ ಸಿದ್ದಮ್ಮ ಅವರು ತೋಟಕ್ಕೆ ಹೋದ ಗುಬ್ಬಿ ತಹಶೀಲ್ದಾರ್ 170 ಅಡಿಕೆ ಗಿಡಗಳು ಮತ್ತು 25 ತೆಂಗಿನ ಮರಗಳನ್ನು ಕಡಿಸಿ ಹಾಕಿದ್ದಾರೆ. ಈ ಮೂಲಕ ಜಿಲ್ಲಾಧಿಕಾರಿಗಳು ನೀಡಿದ್ದ ಆದೇಶವನ್ನು ಉಲ್ಲಂಘಿಸಿದ್ದಾರೆ. ತಹಶೀಲ್ದಾರ್ ಧೋರಣೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಅಧಿಕಾರಿ ಕ್ರೂರವಾಗಿ ನಡೆದುಕೊಂಡಿದ್ದಾರೆ ಎಂದು ಟೀಕೆ ವ್ಯಕ್ತವಾಗಿದೆ.

ಅಡಿಕೆ ಮತ್ತು ತೆಂಗಿನ ಮರಗಳು ನೆಲಕ್ಕೆ ಬಿದ್ದಿರುವುದನ್ನು ನೋಡಿದ ಸಿದ್ದಮ್ಮ ತಲೆ ಚಚ್ಚಿಕೊಳ್ಳುತ್ತಿದ್ದಾರೆ. ಗೊಳೋ ಎಂದು ಕಣ್ಣೀರು ಕರೆಯುತ್ತಿದ್ದಾರೆ. ಗುಬ್ಬಿ ತಾಲೂಕು ತಹಶೀಲ್ದಾರ್ ಏಕಾಏಕಿ ತೋಟಕ್ಕೆ ಬಂದು ನಿರ್ದಯವಾಗಿ ಮರಗಳನ್ನು ಕಡಿಸಿರುವುದು ಆಕೆಯನ್ನು ಕೆರಳುವಂತೆ ಮಾಡಿದೆ. ಇನ್ನೊಂದೆಡೆ ತಪ್ಪು ಮಾಡಿ ತಹಶೀಲ್ದಾರ್‌ ಇಕ್ಕಟ್ಟಿಗೆ ಸಿಲುಕಿದ್ದಾರೆ.

ತಾಲೂಕು ದಂಡಾಧಿಕಾರಿ ಮತ್ತು ಕಂದಾಯ ಅಧಿಕಾರಿ ಮತ್ತು ಗ್ರಾಮ ಲೆಕ್ಕಿಗ ರೈತರಿಗೆ ಅನ್ಯಾಯ ಮಾಡಿದ್ದಾರೆ. ಯಡಿಯೂರಪ್ಪ ಸರ್ಕಾರದಲ್ಲಿ ರೈತರಿಗೆ ರಕ್ಷಣೆ ಇಲ್ಲ. ರೈತರ ಬೆಳೆದ ಬೆಳೆಯನ್ನು ಅಧಿಕಾರಿಯೇ ಮುಂದೆ ನಿಂತು ಕತ್ತರಿಸಿಹಾಕಲು ಅನುವು ಮಾಡಿಕೊಟ್ಟಿದ್ದಾರೆ. ಆ ತಹಶೀಲ್ದಾರ್ ಗೆ ಮರಗಳನ್ನು ಕಡಿಸುವ ಮನಸ್ಸು ಹೇಗೆ ಬಂತು ಎಂದು ರೈತರು  ಕಿಡಿಕಾರಿದ್ದಾರೆ.

ಈ ಕುರಿತು ಶಾಸಕ ಎಸ್‌.ಆರ್‌ ಶ್ರೀನಿವಾಸ್‌ ಪ್ರತಿಕ್ರಿಯೆ ನೀಡಿ ಹತ್ತು ಮರಗಳನ್ನು ಕಡಿದುಬಿಟ್ಟಿದ್ದಾರೆ ಅಷ್ಟೇ. ಏನೂ ತೊಂದರೆಯಾಗಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಇನ್ನು ತಹಶೀಲ್ದಾರ್‌ ಎಂ ಮಮತಾ ನಾವು ಜಿಲ್ಲಾಧಿಕಾರಿ ಆದೇಶ ಪಾಲಿಸದ್ದೇವೆ ಅಷ್ಟೇ. ಮರಗಳ ತೆರವಿಗೂ ಮುನ್ನ ನಾಲ್ಕು ಅರ್ಚಕರ ಸಹಿ ಪಡೆದಿದ್ದೇವೆ ಎಂದು ಸಬೂಬು ಹೇಳುತ್ತಿದ್ದಾರೆ.

ಇದೆಲ್ಲದರಿಂದ ಕೆರಳಿರುವ ಸಿದ್ದಮ್ಮ ಮನೆ ಮುಂದೆ ಅಂಬೇಡ್ಕರ್‌ ಫೋಟೊ ಇಟ್ಟುಕೊಂಡು ಧರಣಿ ಆರಂಭಿಸಿದ್ದಾರೆ. ಜಿಲ್ಲಾಡಳಿತ ಮಧ್ಯಪ್ರವೇಶಿಸಿ ನ್ಯಾಯ ದೊರಕಿಸಿಕೊಡದಿದ್ದಲ್ಲಿ ತುಮಕೂರಿಗೆ ಬಂದು ಹೋರಾಟ ನಡೆಸುತ್ತೇನೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...