Homeಮುಖಪುಟನನ್ನ ತೆಂಗು, ಅಡಿಕೆ ಮರಗಳನ್ನು ವಾಪಸ್‌ ಕೊಡಿ : ಧರಣಿ ಕೂತ ಮಹಿಳೆ, ಗ್ರಾಮಸ್ಥರ ಬೆಂಬಲ

ನನ್ನ ತೆಂಗು, ಅಡಿಕೆ ಮರಗಳನ್ನು ವಾಪಸ್‌ ಕೊಡಿ : ಧರಣಿ ಕೂತ ಮಹಿಳೆ, ಗ್ರಾಮಸ್ಥರ ಬೆಂಬಲ

- Advertisement -
- Advertisement -

ತುಮಕೂರು ಜಿಲ್ಲೆ ಗುಬ್ಬಿ ತಾಲೂಕು ತಿಪ್ಪೂರು ಗ್ರಾಮದಲ್ಲಿ ಗ್ರಾಮ ಲೆಕ್ಕಿಗ, ಕಂದಾಯಾಧಿಕಾರಿ ಮಾಡಿದ ತಪ್ಪಿಗೆ ಅಮಾಯಕ ಮಹಿಳೆಯ ನೂರಾರು ಮರಗಳನ್ನು ಕಡಿದು ತೋಟ ನಾಶ ಮಾಡಿದ ತಹಶೀಲ್ದಾರ್‌ ಕ್ರಮದ ವಿರುದ್ಧ ಸಿದ್ದಮ್ಮನವರು ಧರಣಿ ಆರಂಭಿಸಿದ್ದಾರೆ. ನನ್ನ ತೆಂಗು, ಅಡಿಕೆ ಮರಗಳನ್ನು ವಾಪಸ್‌ ಕೊಡಿ ಎಂದು ಗೋಳಿಡುತ್ತಿದ್ದ ಆಕೆಯ ಪ್ರತಿಭಟನೆಗೆ ಗ್ರಾಮಸ್ಥರು ಸಾಥ್‌ ನೀಡಿದ್ದಾರೆ.

ಮಾರ್ಚ್‌ 06ರಂದು ತಾನೇ ನೀರು ಹೊಯ್ದು ಬೆಳೆಸಿದ್ದ ಸಿದ್ದಮ್ಮ ಅವರಿಗೆ ಸೇರಿದ್ದ ತೆಂಗು ಮತ್ತು ಅಡಿಕೆ ಮರಗಳು ಕಣ್ಣೆದುರೇ ನೆಲಕ್ಕುರುಳಿವೆ. ಜಿಲ್ಲಾಧಿಕಾರಿ ಆದೇಶವನ್ನೇ ಧಿಕ್ಕರಿಸಿದ ತಹಶೀಲ್ದಾರ್ ಮುಂದೆ ನಿಂತು ಸಿದ್ದಮ್ಮನವರಿಗೆ ಸೇರಿದ ಅಡಿಕೆ ಮತ್ತು ತೆಂಗಿನ ಮರಗಳನ್ನು ಕಡಿಸಿಹಾಕಿದ್ದಾರೆ. ತಾನು ಸಲಹಿದ  ಫಲ ನೀಡುತ್ತಿದ್ದ ಮರಗಳು ಕಡಿದ್ದನ್ನು ನೋಡಿ ಸಿದ್ದಮ್ಮ ಮಕ್ಕಳು ಕಳೆದುಕೊಂಡಂತೆ ಅಳುತ್ತಿರುವ ದೃಶ್ಯಗಳು ಸಾಮಾಜಿಕ ಜಾಲ ತಾಣದಲ್ಲಿ ವೈರಲ್‌ ಆಗಿದ್ದವು.

ಗುಬ್ಬಿ ಮೇಲೆ ಬ್ರಹ್ಮಾಸ್ತ್ರ

ಗ್ರಾಮ ಲೆಕ್ಕಿಗ, ಕಂದಾಯಾಧಿಕಾರಿ ಮಾಡಿದ ತಪ್ಪಿಗೆ ಅಮಾಯಕ ಮಹಿಳೆಯ ತೋಟ ನಾಶ ಮಾಡಿದ ತಹಶಿಲ್ದಾರ್‌: ಗುಬ್ಬಿಯಲ್ಲೊಂದು ಮನಕಲಕುವ ಕರಾಳ ಘಟನೆ.. ವಿಡಿಯೋ ನೋಡಿ.

Posted by Naanu Gauri on Sunday, March 8, 2020

ತುಮಕೂರು ಜಿಲ್ಲೆ ಗುಬ್ಬಿ ತಾಲೂಕು ತಿಪ್ಪೂರು ಗ್ರಾಮದಲ್ಲಿ ಕೋಡಿಕೆಂಪಮ್ಮ ದೇವಾಲಯದ ಜಾತ್ರೆ ಇತ್ತು. ಆ ಜಾತ್ರೆ ನಡೆಯುವ ಜಾಗದ ಭೂಮಿ ವಿವಾದದಲ್ಲಿತ್ತು  ಆ ಜಮೀನನ್ನು ತೆರವುಗೊಳಿಸಲು ಜಿಲ್ಲಾಧಿಕಾರಿಗಳು ಸೂಚಿಸಿದ್ದರು. ಆದರೆ ಗ್ರಾಮ ಲೆಕ್ಕಿಗ ಮತ್ತು ಕಂದಾಯಾಧಿಕಾರಿಯ ಲೋಪದಿಂದಾಗಿ ಸಿದ್ದಮ್ಮ ಅವರ ತೋಟವನ್ನು ಸಂಪೂರ್ಣವಾಗಿ ನೆಲಸಮ ಮಾಡಲಾಗಿದೆ. ಸಿದ್ದಮ್ಮನವರ ತೋಟದ ಪ್ರಕರಣ ನ್ಯಾಯಾಲಯದಲ್ಲಿದ್ದು ಯಥಾಸ್ಥಿತಿ ಕಾಪಾಡುವಂತೆ ನ್ಯಾಯಾಲಯ ಸೂಚಿಸಿದ್ದರೂ ತಹಶೀಲ್ದಾರ್ ಕೂಡ ಅದನ್ನು ಪರಿಶೀಲಿಸುವ ಗೋಜಿಗೆ ಹೋಗದೆ ಮಹಿಳಾ ರೈತರೊಬ್ಬರ ತೋಟವನ್ನು ಧ್ವಂಸ ಮಾಡಲಾಗಿದೆ.

ಮಾರ್ಚ್‌ 06ರ ಬೆಳಿಗ್ಗೆ ಸಿದ್ದಮ್ಮ ಅವರು ತೋಟಕ್ಕೆ ಹೋದ ಗುಬ್ಬಿ ತಹಶೀಲ್ದಾರ್ 170 ಅಡಿಕೆ ಗಿಡಗಳು ಮತ್ತು 25 ತೆಂಗಿನ ಮರಗಳನ್ನು ಕಡಿಸಿ ಹಾಕಿದ್ದಾರೆ. ಈ ಮೂಲಕ ಜಿಲ್ಲಾಧಿಕಾರಿಗಳು ನೀಡಿದ್ದ ಆದೇಶವನ್ನು ಉಲ್ಲಂಘಿಸಿದ್ದಾರೆ. ತಹಶೀಲ್ದಾರ್ ಧೋರಣೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಅಧಿಕಾರಿ ಕ್ರೂರವಾಗಿ ನಡೆದುಕೊಂಡಿದ್ದಾರೆ ಎಂದು ಟೀಕೆ ವ್ಯಕ್ತವಾಗಿದೆ.

ಅಡಿಕೆ ಮತ್ತು ತೆಂಗಿನ ಮರಗಳು ನೆಲಕ್ಕೆ ಬಿದ್ದಿರುವುದನ್ನು ನೋಡಿದ ಸಿದ್ದಮ್ಮ ತಲೆ ಚಚ್ಚಿಕೊಳ್ಳುತ್ತಿದ್ದಾರೆ. ಗೊಳೋ ಎಂದು ಕಣ್ಣೀರು ಕರೆಯುತ್ತಿದ್ದಾರೆ. ಗುಬ್ಬಿ ತಾಲೂಕು ತಹಶೀಲ್ದಾರ್ ಏಕಾಏಕಿ ತೋಟಕ್ಕೆ ಬಂದು ನಿರ್ದಯವಾಗಿ ಮರಗಳನ್ನು ಕಡಿಸಿರುವುದು ಆಕೆಯನ್ನು ಕೆರಳುವಂತೆ ಮಾಡಿದೆ. ಇನ್ನೊಂದೆಡೆ ತಪ್ಪು ಮಾಡಿ ತಹಶೀಲ್ದಾರ್‌ ಇಕ್ಕಟ್ಟಿಗೆ ಸಿಲುಕಿದ್ದಾರೆ.

ತಾಲೂಕು ದಂಡಾಧಿಕಾರಿ ಮತ್ತು ಕಂದಾಯ ಅಧಿಕಾರಿ ಮತ್ತು ಗ್ರಾಮ ಲೆಕ್ಕಿಗ ರೈತರಿಗೆ ಅನ್ಯಾಯ ಮಾಡಿದ್ದಾರೆ. ಯಡಿಯೂರಪ್ಪ ಸರ್ಕಾರದಲ್ಲಿ ರೈತರಿಗೆ ರಕ್ಷಣೆ ಇಲ್ಲ. ರೈತರ ಬೆಳೆದ ಬೆಳೆಯನ್ನು ಅಧಿಕಾರಿಯೇ ಮುಂದೆ ನಿಂತು ಕತ್ತರಿಸಿಹಾಕಲು ಅನುವು ಮಾಡಿಕೊಟ್ಟಿದ್ದಾರೆ. ಆ ತಹಶೀಲ್ದಾರ್ ಗೆ ಮರಗಳನ್ನು ಕಡಿಸುವ ಮನಸ್ಸು ಹೇಗೆ ಬಂತು ಎಂದು ರೈತರು  ಕಿಡಿಕಾರಿದ್ದಾರೆ.

ಈ ಕುರಿತು ಶಾಸಕ ಎಸ್‌.ಆರ್‌ ಶ್ರೀನಿವಾಸ್‌ ಪ್ರತಿಕ್ರಿಯೆ ನೀಡಿ ಹತ್ತು ಮರಗಳನ್ನು ಕಡಿದುಬಿಟ್ಟಿದ್ದಾರೆ ಅಷ್ಟೇ. ಏನೂ ತೊಂದರೆಯಾಗಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಇನ್ನು ತಹಶೀಲ್ದಾರ್‌ ಎಂ ಮಮತಾ ನಾವು ಜಿಲ್ಲಾಧಿಕಾರಿ ಆದೇಶ ಪಾಲಿಸದ್ದೇವೆ ಅಷ್ಟೇ. ಮರಗಳ ತೆರವಿಗೂ ಮುನ್ನ ನಾಲ್ಕು ಅರ್ಚಕರ ಸಹಿ ಪಡೆದಿದ್ದೇವೆ ಎಂದು ಸಬೂಬು ಹೇಳುತ್ತಿದ್ದಾರೆ.

ಇದೆಲ್ಲದರಿಂದ ಕೆರಳಿರುವ ಸಿದ್ದಮ್ಮ ಮನೆ ಮುಂದೆ ಅಂಬೇಡ್ಕರ್‌ ಫೋಟೊ ಇಟ್ಟುಕೊಂಡು ಧರಣಿ ಆರಂಭಿಸಿದ್ದಾರೆ. ಜಿಲ್ಲಾಡಳಿತ ಮಧ್ಯಪ್ರವೇಶಿಸಿ ನ್ಯಾಯ ದೊರಕಿಸಿಕೊಡದಿದ್ದಲ್ಲಿ ತುಮಕೂರಿಗೆ ಬಂದು ಹೋರಾಟ ನಡೆಸುತ್ತೇನೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...