Homeಕರ್ನಾಟಕವಚನ ಚಳುವಳಿಯನ್ನು ನಮ್ಮ ಮೂಗಿನ ನೇರಕ್ಕೆ ಅರ್ಥೈಸಿಕೊಳ್ಳುವುದು ತರವಲ್ಲ/ಆಹಾರ ಸಂಸ್ಕೃತಿ ಮತ್ತು ವಚನ ಚಳವಳಿ

ವಚನ ಚಳುವಳಿಯನ್ನು ನಮ್ಮ ಮೂಗಿನ ನೇರಕ್ಕೆ ಅರ್ಥೈಸಿಕೊಳ್ಳುವುದು ತರವಲ್ಲ/ಆಹಾರ ಸಂಸ್ಕೃತಿ ಮತ್ತು ವಚನ ಚಳವಳಿ

- Advertisement -
- Advertisement -

ಬಸವಾದಿಗಳು ಆಹಾರದಲ್ಲಿ ಭೇದಭಾವ ಮಾಡಿಲ್ಲ. ಆಹಾರ ಹಸಿವಿಗೆ ಸಂಬಂಧಿಸಿದ್ದು, ಧರ್ಮಕ್ಕಲ್ಲ. ಆಹಾರದಲ್ಲಿ ಶ್ರೇಷ್ಠ ಆಹಾರ – ನಿಕೃಷ್ಟ ಆಹಾರ ಎನ್ನುವುದು ಇರುವುದಿಲ್ಲ. ಹಸಿವನ್ನು ನೀಗಿಸುವ ಎಲ್ಲಾ ಬಗೆಯ ಆಹಾರಗಳು ಶ್ರೇಷ್ಠ ಆಹಾರಗಳೆ. ತಾವು ಇಚ್ಛಿಸಿದ ಆಹಾರ ತಿನ್ನುವುದು ಜನರ ಹಕ್ಕು.ಅಂದು ಜನರ ಆಹಾರ ಹಕ್ಕನ್ನು ಅನುಭವ ಮಂಟಪ ತಲೆಬಾಗಿ ಗೌರವಿಸುತ್ತಿತ್ತು.

ಆಹಾರ ಸಂಸ್ಕೃತಿ ಬಗ್ಗೆ ಅನುಭವ ಮಂಟಪದಲ್ಲಿ ಗಂಭೀರ ಚರ್ಚೆ ನಡದಿದೆ. ಚರ್ಚಾ ಸಂದರ್ಭದಲ್ಲಿ ಮೇಲ್ವರ್ಗದಿಂದ ಬಂದಿರುವ ಕೆಲವು ವಚನಕಾರರು ಸಸ್ಯಾಹಾರದ ಪರ ನಿಲುವು ತಾಳುತ್ತಾರೆ. ಇದಕ್ಕೆ ಅನುಭವ ಮಂಟಪದಲ್ಲಿದ್ದ 95% ತಳವರ್ಗದ ಹಿನ್ನೆಲೆಯಿಂದ ಬಂದ ವಚನಕಾರರು ಇದನ್ನು ಖಂಡಿಸುತ್ತಾರೆ.ಈ ಚರ್ಚಾ ಸಂದರ್ಭದಲ್ಲಿ ಸಸ್ಯಾಹಾರದ ಪರವಾಗಿ ಬಂದಿರುವ ವಚನಗಳನ್ನು ಮಾತ್ರ ಕೆಲವು ಮೇಲ್ಜಾತಿ ಮನಸ್ಥಿತಿಯ ಜನರು ಮುನ್ನಲೆಗೆ ತಂದು. ತಮ್ಮ ಮೇಲ್ಜಾತಿ ಮನಸ್ಥಿತಿಯ ಅನಾವರಣ ಮಾಡುತ್ತಿದ್ದಾರೆ ಅಷ್ಟೇ. ಏಕೆಂದರೆ ಜಾತಿಗೂ ಮತ್ತು ಆಹಾರ ಸಂಸ್ಕೃತಿಗೂ ನೇರ ನಂಟಿದೆ.

ಆ ಕಾಲದ ವ್ಯವಸ್ಥೆಯ ವಿರುದ್ಧ ತಳವರ್ಗದ ಜನರು ಬಸವಣ್ಣನ ನೇತೃತ್ವದಲ್ಲಿ ಕಟ್ಟಿದ ಚಳವಳಿ ಇದು. ಶರಣರ ಹತ್ಯಾಕಾಂಡ ಆಗುವ ಮೂಲಕ ಚಳವಳಿ ಸ್ಥಗಿತಗೊಂಡು ಧರ್ಮದ ಸ್ವರೂಪ ಪಡೆಯುತ್ತದೆ.

ನಾವಿಂದು ವಚನ ಚಳವಳಿಯನ್ನು ಮತ್ತು ವಚನಗಳನ್ನು ನಮ್ಮ ಮೂಗಿನ ನೇರಕ್ಕೆ ಅರ್ಥೈಸಿಕೊಂಡು ಬಸವಾದಿಗಳು ಆಹಾರದಲ್ಲಿ ಭೇದಭಾವ ಮಾಡಿದರು ಎನ್ನುವುದು ವಚನ ಚಳವಳಿಗೆ ಮತ್ತು ಬಸವಾದಿಗಳಿಗೆ ಬಗೆದ ದ್ರೋಹವಾಗುತ್ತದೆ. ಇದು ಜಾಗತಿಕ ಮಟ್ಟದಲ್ಲಿ ಬೆಳೆಯಬೇಕಾದ ಧರ್ಮ. ಲಿಂಗಾಯತ ಧರ್ಮದಲ್ಲಿ ಆಹಾರಭೇದ ಇಲ್ಲ. ಮಾಂಸಾಹಾರಿಗಳು ಸಹ ಈ ಧರ್ಮ ಸ್ವೀಕರಿಸಬಹುದು, ಸ್ವೀಕರಿಸಿದ ನಂತರ ಧಾರಾಳವಾಗಿ ತಮ್ಮ ಆಹಾರ ಪದ್ಧತಿ ಮುಂದುವರೆಸಿಕೊಂಡು ಹೋಗಬಹುದು. ಲಿಂಗಾಯತ ತತ್ವ ಕೆಲವು ಮೇಲ್ಜಾತಿ ಮನಸ್ಥಿತಿ ಮೂಲಭೂತವಾದಿಗಳ ಸ್ವತ್ತಲ್ಲ, ಇದು ಇಡೀ ಮಾನವಕುಲದ ಸ್ವತ್ತು.ಆಹಾರದಲ್ಲಿ ಭೇದಭಾವ ಮಾಡಲು ಇದೇನು ವೈದಿಕ ಧರ್ಮವೆ?
ಜಾಗತೀಕರಣದ ಸಂದರ್ಭದಲ್ಲಿ ಆಹಾರ ಸಂಸ್ಕೃತಿ ಬಗ್ಗೆ ಚರ್ಚೆ ನಡೆಸುವುದು ಅಪ್ರಸ್ತುತ.

ಸಿದ್ದಪ್ಪ ಮೂಲಗೆ, ಜನಪರ ಹೋರಾಟಗಾರರು

ಲಿಂಗಾಯಿತ ಧರ್ಮವು ಮಾಂಸಾಹಾರಿಗಳನ್ನೂ ಒಪ್ಪುವ ಮೂಲಕ ಆಹಾರ ಸಂಸ್ಕøತಿಯ ವಿಚಾರದಲ್ಲಿ ಪ್ರಜಾತಾಂತ್ರಿಕವಾಗಿರುತ್ತದೆಯೇ ಎಂಬ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಕರ್ನಾಟಕದ ಆಹಾರ ಸಂಸ್ಕøತಿ ಮತ್ತು ಯಾವುದು ಮೇಲು ಯಾವುದು ಕೀಳು ಎಂಬುದರಲ್ಲೇ ಶ್ರೇಣೀಕರಣವನ್ನು ಪ್ರತಿಪಾದಿಸುವ ಈ ದೇಶದಲ್ಲಿ ಇಂತಹ ಚರ್ಚೆಗಳು ಬರುವುದು, ಬರಬೇಕಾದದ್ದು ಸಹಜ. ಆದರೆ, ಈ ಸದ್ಯ ಅದು ಎದ್ದಿರುವ ಸಂದರ್ಭ ಹಾಗೂ ಅದರ ಟಾರ್ಗೆಟ್ ಸರಿಯಿಲ್ಲ ಎಂಬ ಅನಿಸಿಕೆಗಳೂ ಇವೆ. ಈ ಹಿನ್ನೆಲೆಯಲ್ಲಿ ವಿವಿಧ ಚಿಂತಕರನ್ನು ಪತ್ರಿಕೆಯು ಮಾತಾಡಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...