Homeಕರ್ನಾಟಕವಚನ ಚಳುವಳಿಯನ್ನು ನಮ್ಮ ಮೂಗಿನ ನೇರಕ್ಕೆ ಅರ್ಥೈಸಿಕೊಳ್ಳುವುದು ತರವಲ್ಲ/ಆಹಾರ ಸಂಸ್ಕೃತಿ ಮತ್ತು ವಚನ ಚಳವಳಿ

ವಚನ ಚಳುವಳಿಯನ್ನು ನಮ್ಮ ಮೂಗಿನ ನೇರಕ್ಕೆ ಅರ್ಥೈಸಿಕೊಳ್ಳುವುದು ತರವಲ್ಲ/ಆಹಾರ ಸಂಸ್ಕೃತಿ ಮತ್ತು ವಚನ ಚಳವಳಿ

- Advertisement -
- Advertisement -

ಬಸವಾದಿಗಳು ಆಹಾರದಲ್ಲಿ ಭೇದಭಾವ ಮಾಡಿಲ್ಲ. ಆಹಾರ ಹಸಿವಿಗೆ ಸಂಬಂಧಿಸಿದ್ದು, ಧರ್ಮಕ್ಕಲ್ಲ. ಆಹಾರದಲ್ಲಿ ಶ್ರೇಷ್ಠ ಆಹಾರ – ನಿಕೃಷ್ಟ ಆಹಾರ ಎನ್ನುವುದು ಇರುವುದಿಲ್ಲ. ಹಸಿವನ್ನು ನೀಗಿಸುವ ಎಲ್ಲಾ ಬಗೆಯ ಆಹಾರಗಳು ಶ್ರೇಷ್ಠ ಆಹಾರಗಳೆ. ತಾವು ಇಚ್ಛಿಸಿದ ಆಹಾರ ತಿನ್ನುವುದು ಜನರ ಹಕ್ಕು.ಅಂದು ಜನರ ಆಹಾರ ಹಕ್ಕನ್ನು ಅನುಭವ ಮಂಟಪ ತಲೆಬಾಗಿ ಗೌರವಿಸುತ್ತಿತ್ತು.

ಆಹಾರ ಸಂಸ್ಕೃತಿ ಬಗ್ಗೆ ಅನುಭವ ಮಂಟಪದಲ್ಲಿ ಗಂಭೀರ ಚರ್ಚೆ ನಡದಿದೆ. ಚರ್ಚಾ ಸಂದರ್ಭದಲ್ಲಿ ಮೇಲ್ವರ್ಗದಿಂದ ಬಂದಿರುವ ಕೆಲವು ವಚನಕಾರರು ಸಸ್ಯಾಹಾರದ ಪರ ನಿಲುವು ತಾಳುತ್ತಾರೆ. ಇದಕ್ಕೆ ಅನುಭವ ಮಂಟಪದಲ್ಲಿದ್ದ 95% ತಳವರ್ಗದ ಹಿನ್ನೆಲೆಯಿಂದ ಬಂದ ವಚನಕಾರರು ಇದನ್ನು ಖಂಡಿಸುತ್ತಾರೆ.ಈ ಚರ್ಚಾ ಸಂದರ್ಭದಲ್ಲಿ ಸಸ್ಯಾಹಾರದ ಪರವಾಗಿ ಬಂದಿರುವ ವಚನಗಳನ್ನು ಮಾತ್ರ ಕೆಲವು ಮೇಲ್ಜಾತಿ ಮನಸ್ಥಿತಿಯ ಜನರು ಮುನ್ನಲೆಗೆ ತಂದು. ತಮ್ಮ ಮೇಲ್ಜಾತಿ ಮನಸ್ಥಿತಿಯ ಅನಾವರಣ ಮಾಡುತ್ತಿದ್ದಾರೆ ಅಷ್ಟೇ. ಏಕೆಂದರೆ ಜಾತಿಗೂ ಮತ್ತು ಆಹಾರ ಸಂಸ್ಕೃತಿಗೂ ನೇರ ನಂಟಿದೆ.

ಆ ಕಾಲದ ವ್ಯವಸ್ಥೆಯ ವಿರುದ್ಧ ತಳವರ್ಗದ ಜನರು ಬಸವಣ್ಣನ ನೇತೃತ್ವದಲ್ಲಿ ಕಟ್ಟಿದ ಚಳವಳಿ ಇದು. ಶರಣರ ಹತ್ಯಾಕಾಂಡ ಆಗುವ ಮೂಲಕ ಚಳವಳಿ ಸ್ಥಗಿತಗೊಂಡು ಧರ್ಮದ ಸ್ವರೂಪ ಪಡೆಯುತ್ತದೆ.

ನಾವಿಂದು ವಚನ ಚಳವಳಿಯನ್ನು ಮತ್ತು ವಚನಗಳನ್ನು ನಮ್ಮ ಮೂಗಿನ ನೇರಕ್ಕೆ ಅರ್ಥೈಸಿಕೊಂಡು ಬಸವಾದಿಗಳು ಆಹಾರದಲ್ಲಿ ಭೇದಭಾವ ಮಾಡಿದರು ಎನ್ನುವುದು ವಚನ ಚಳವಳಿಗೆ ಮತ್ತು ಬಸವಾದಿಗಳಿಗೆ ಬಗೆದ ದ್ರೋಹವಾಗುತ್ತದೆ. ಇದು ಜಾಗತಿಕ ಮಟ್ಟದಲ್ಲಿ ಬೆಳೆಯಬೇಕಾದ ಧರ್ಮ. ಲಿಂಗಾಯತ ಧರ್ಮದಲ್ಲಿ ಆಹಾರಭೇದ ಇಲ್ಲ. ಮಾಂಸಾಹಾರಿಗಳು ಸಹ ಈ ಧರ್ಮ ಸ್ವೀಕರಿಸಬಹುದು, ಸ್ವೀಕರಿಸಿದ ನಂತರ ಧಾರಾಳವಾಗಿ ತಮ್ಮ ಆಹಾರ ಪದ್ಧತಿ ಮುಂದುವರೆಸಿಕೊಂಡು ಹೋಗಬಹುದು. ಲಿಂಗಾಯತ ತತ್ವ ಕೆಲವು ಮೇಲ್ಜಾತಿ ಮನಸ್ಥಿತಿ ಮೂಲಭೂತವಾದಿಗಳ ಸ್ವತ್ತಲ್ಲ, ಇದು ಇಡೀ ಮಾನವಕುಲದ ಸ್ವತ್ತು.ಆಹಾರದಲ್ಲಿ ಭೇದಭಾವ ಮಾಡಲು ಇದೇನು ವೈದಿಕ ಧರ್ಮವೆ?
ಜಾಗತೀಕರಣದ ಸಂದರ್ಭದಲ್ಲಿ ಆಹಾರ ಸಂಸ್ಕೃತಿ ಬಗ್ಗೆ ಚರ್ಚೆ ನಡೆಸುವುದು ಅಪ್ರಸ್ತುತ.

ಸಿದ್ದಪ್ಪ ಮೂಲಗೆ, ಜನಪರ ಹೋರಾಟಗಾರರು

ಲಿಂಗಾಯಿತ ಧರ್ಮವು ಮಾಂಸಾಹಾರಿಗಳನ್ನೂ ಒಪ್ಪುವ ಮೂಲಕ ಆಹಾರ ಸಂಸ್ಕøತಿಯ ವಿಚಾರದಲ್ಲಿ ಪ್ರಜಾತಾಂತ್ರಿಕವಾಗಿರುತ್ತದೆಯೇ ಎಂಬ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಕರ್ನಾಟಕದ ಆಹಾರ ಸಂಸ್ಕøತಿ ಮತ್ತು ಯಾವುದು ಮೇಲು ಯಾವುದು ಕೀಳು ಎಂಬುದರಲ್ಲೇ ಶ್ರೇಣೀಕರಣವನ್ನು ಪ್ರತಿಪಾದಿಸುವ ಈ ದೇಶದಲ್ಲಿ ಇಂತಹ ಚರ್ಚೆಗಳು ಬರುವುದು, ಬರಬೇಕಾದದ್ದು ಸಹಜ. ಆದರೆ, ಈ ಸದ್ಯ ಅದು ಎದ್ದಿರುವ ಸಂದರ್ಭ ಹಾಗೂ ಅದರ ಟಾರ್ಗೆಟ್ ಸರಿಯಿಲ್ಲ ಎಂಬ ಅನಿಸಿಕೆಗಳೂ ಇವೆ. ಈ ಹಿನ್ನೆಲೆಯಲ್ಲಿ ವಿವಿಧ ಚಿಂತಕರನ್ನು ಪತ್ರಿಕೆಯು ಮಾತಾಡಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...