Homeದಲಿತ್ ಫೈಲ್ಸ್ಸಿದ್ದಾಪುರ: ಸಂವಿಧಾನಕ್ಕಿಂತ ವೇದಗಳೇ ಶ್ರೇಷ್ಠ ಎಂದ ಸ್ವಾಮೀಜಿಯನ್ನು ಟೀಕಿಸಿದ್ದಕ್ಕೆ ಎಫ್‌ಐಆರ್‌!

ಸಿದ್ದಾಪುರ: ಸಂವಿಧಾನಕ್ಕಿಂತ ವೇದಗಳೇ ಶ್ರೇಷ್ಠ ಎಂದ ಸ್ವಾಮೀಜಿಯನ್ನು ಟೀಕಿಸಿದ್ದಕ್ಕೆ ಎಫ್‌ಐಆರ್‌!

- Advertisement -
- Advertisement -

“ಸಂವಿಧಾನಕ್ಕಿಂತ ವೇದಗಳೇ ಹೆಚ್ಚು ಶ್ರೇಷ್ಠ. ಸಂವಿಧಾನವನ್ನು ತಿದ್ದುಪಡಿ ಮಾಡಬಹುದು. ಆದರೆ ವೇದಗಳನ್ನು ತಿದ್ದಲು ಅಥವಾ ಬದಲಾಯಿಸಲು ಸಾಧ್ಯವಿಲ್ಲ” ಎಂದು ಹೇಳಿಕೆ ನೀಡಿರುವ ಉಜಿರೆಯ ಶ್ರೀರಾಮಕ್ಷೇತ್ರದ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರು ನೀಡಿದ ಹೇಳಿಕೆಯನ್ನು ವಿರೋಧಿಸಿದ ವ್ಯಕ್ತಿಯ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

‘ಭಾರತ ಭಾಗ್ಯವಿಧಾತ ಅಂಬೇಡ್ಕರ್‌’ ಫೇಸ್‌‌ಬುಕ್‌ ಪೇಜ್‌ನ ಅಡ್ಮಿನ್‌ ಬಾಗಲಕೋಟೆ ಮೂಲದ ಶಿವರಾಜ್‌ ಎಂಬವರ ವಿರುದ್ಧ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಶಿವರಾಜ್‌ ಅವರಿಗೆ ಜಾಮೀನು ದೊರೆತಿದೆ.

ಸ್ವಾಮೀಜಿಯವರನ್ನು ಶಿವರಾಜ್‌ ಅವ್ಯಾಚ್ಯ ಪದಗಳಿಂದ ನಿಂದಿಸಿದ್ದಾರೆಂದು ಆರೋಪಿಸಲಾಗಿದೆ. ಸಿದ್ದಾಪುರ ತಾಲ್ಲೂಕಿನ ಹರಕನಹಳ್ಳಿಯಲ್ಲಿ ನಡೆದ ಧರ್ಮಸಭೆಯಲ್ಲಿ ಮಾತನಾಡಿದ್ದ ಸ್ವಾಮೀಜಿ, “ಸಂವಿಧಾನಕ್ಕಿಂತ ವೇದಗಳೇ ಶ್ರೇಷ್ಠ” ಎಂದು ಹೇಳಿರುವುದು ಪತ್ರಿಕೆಯೊಂದರಲ್ಲಿ ಮುದ್ರಣವಾಗಿದೆ. ಪತ್ರಿಕೆಯಲ್ಲಿ ಪ್ರಕಟವಾಗಿರುವ ಹೇಳಿಕೆಗೆ ಪ್ರತಿಯಾಗಿ ಮತ್ತೊಂದು ಕೌಂಟರ್‌ ಹೇಳಿಕೆಯನ್ನು ಎಡಿಟ್ ಮಾಡಿದ ಫೋಟೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಭಾರತ ಭಾಗ್ಯವಿಧಾತ ಫೇಸ್‌ಬುಕ್‌ ಪೇಜ್‌ನಲ್ಲಿ ಎಡಿಟ್‌‌ ಮಾಡಲಾದ ಫೋಟೋ ಬಳಸಲಾಗಿದ್ದು, “ಸ್ವಾಮೀಜಿ ಹೆಸರನ್ನು ಕೆಟ್ಟದ್ದಾಗಿ ಬರೆಯಲಾಗಿದೆ” ಎಂದು ಆರೋಪಿಸಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಕೃಷ್ಣಪ್ಪ ನಾಯ್ಕರ್‌ ಎಂಬವರು ದೂರು ನೀಡಿದ್ದರು. ಅದನ್ನು ಆಧರಿಸಿ ಪ್ರಕರಣ ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಭಾರತ ಭಾಗ್ಯವಿಧಾತ ಫೇಸ್‌ಬುಕ್‌ ಪೇಜ್‌ನ ಅಡ್ಮಿನ್‌ ಶಿವರಾಜ್‌, ‘ಖಡ್ಗ’ ಎಂಬ ಫೇಸ್‌‌ಬುಕ್‌ ಖಾತೆಯಲ್ಲಿ ಈ ಫೋಟೋ ಸಿಕ್ಕಿತು. ಅದನ್ನು ಡೌನ್‌ಲೋಡ್‌ ಮಾಡಿಕೊಂಡು ಪೇಜ್‌ನಲ್ಲಿ ಅಪ್‌ಲೋಡ್ ಮಾಡಿ, ನನ್ನದೇ ಆದ ಅಭಿಪ್ರಾಯವನ್ನು ಬರೆದಿದ್ದೆ. ಸಂವಿಧಾನಕ್ಕಿಂತ ವೇದವೇ ಶ್ರೇಷ್ಠ ಎಂದು ಹೇಳಿಕೆ ನೀಡಿರುವ ಸ್ವಾಮೀಜಿ ಕುರಿತ ವರದಿಯನ್ನು ಉಲ್ಲೇಖಿಸಲು ಈ ಫೋಟೋವನ್ನು ಬಳಸಿದ್ದೇನೆಯೇ ಹೊರತು, ‘ಅನ್ನಕ್ಕಿಂತ ಸಗಣಿಯೇ ಶ್ರೇಷ್ಠ’ ಎಂಬ ಶೀರ್ಷಿಕೆಯಲ್ಲಿರುವ ಹೇಳಿಕೆ ನನ್ನದ್ದಲ್ಲ” ಎಂದು ಸ್ಪಷ್ಟಪಡಿಸಿದರು.

“ಸ್ವಾಮಿ ನಿಮ್ಮ ವೇದ ಉಪನಿಷತ್‌‌ಗಳಿಂದ ಎಲ್ಲರನ್ನು ಒಂದೇ ರೀತಿ ನೋಡೋಕೆ ಹೇಳಿ. ಜಾತಿ ಜಾತಿ ಅಂತ ಸಾಯೋವರೆಗೆ ಎಲ್ಲರನ್ನು ಸಮನಾಗಿ ನೋಡೋಕೆ ಹೇಳಿ. ಮೊದಲು ನೀವು ಯಾವಾಗಲಾದ್ರೂ ಎಲ್ಲರನ್ನು ಸಮಾನರಾಗಿ ನೋಡಿದ್ದೀರಾ? ಅದು ನಿಮ್ಮಿಂದ ಸಾಧ್ಯ ಇಲ್ಲ. ಎಲ್ಲಾ ಗ್ರಂಥಗಳಿಗೆ ಶ್ರೇಷ್ಠ ವಾದದ್ದು ನಮ್ಮ ಸಂವಿಧಾನ, ಸಂವಿಧಾನದ ಬಗ್ಗೆ ಮಾತೋಡೋಕೆ ಒಂದು ಯೋಗ್ಯತೆ ಬೇಕು ಅದು ತಿಳಿದವರಿಗೆ ಮಾತ್ರ ಗೊತ್ತು” ಎಂಬ ಅಭಿಪ್ರಾಯವನ್ನು ಶಿವರಾಜ್‌ ‘#ಭಾರತ_ಭಾಗ್ಯವಿದಾತ_ಅಂಬೇಡ್ಕರ್’ ಹ್ಯಾಷ್‌ಟ್ಯಾಗ್‌ನಲ್ಲಿ ಬರೆದಿದ್ದಾರೆ.

“ಪೊಲೀಸ್‌ನವರು ನನ್ನ ಹೇಳಿಕೆಯನ್ನು ದಾಖಲಿಸಿದ್ದಾರೆ. ‘ಖಡ್ಗ’ ಎಂಬ ನಕಲಿ ಖಾತೆಯನ್ನು ಪರಿಶೀಲಿಸುವುದಾಗಿ ತಿಳಿಸಿದ್ದಾರೆ. ಎಂ.ಜೆ. ಎಂಬ ಲೋಗೋ ಅಡಿಯಲ್ಲಿ ಹಲವಾರು ಪೋಸ್ಟರ್‌ಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ನಾನು ಬಳಸಿರುವ ಫೋಟೋದಲ್ಲಿಯೂ ಕೂಡ ಎಂ.ಜೆ. ಲೋಗೋ ಇರುವುದನ್ನು ಗಮನಿಸಬಹುದು” ಎನ್ನುತ್ತಾರೆ ಶಿವರಾಜ್‌‌

ಪೋಸ್ಟ್‌ ಗಮನಿಸಿದ ಕೆಲವು ಮುಖಂಡರು ಕೃಷ್ಣಪ್ಪ ನಾಯ್ಕರ್‌ ಎಂಬವರಿಂದ ಸಿದ್ದಾಪುರದಲ್ಲಿ ಪ್ರಕರಣ ದಾಖಲಿಸಿದ್ದಾರೆ. ಐಟಿ ಆಕ್ಟ್‌ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ವಿಚಾರಣೆಗೆ ಹಾಜರಾಗಿ ಸ್ಪಷ್ಟನೆಯನ್ನು ನೀಡಿರುವ ಶಿವರಾಜ್‌ ಅವರಿಗೆ ಈಗ ಜಾಮೀನು ಕೂಡ ದೊರೆತಿದೆ. ಏಪ್ರಿಲ್‌ 29ರಂದು ಮಾಡಲಾಗಿದ್ದ ಪೋಸ್ಟ್‌ಗೆ ಏಪ್ರಿಲ್‌ 30ರಂದು ಪ್ರಕರಣ ದಾಖಲಿಸಲಾಗಿತ್ತು. ದಲಿತ ಸಂಘಟನೆಗಳು ಹಾಜರಿದ್ದು ಶಿವರಾಜ್‌ ಅವರಿಗೆ ಧೈರ್ಯ ತುಂಬಿವೆ.

ಸಂವಿಧಾನದ ಕುರಿತು ಆಗಾಗ್ಗೆ ವಿವಾದಾತ್ಮಕವಾಗಿ ಹೇಳಿಕೆ ನೀಡುತ್ತಿರುವ ಪ್ರಕರಣಗಳು ಆಗಾಗ್ಗೆ ಘಟಿಸುತ್ತಿವೆ. ಸಂವಿಧಾನ ಬದಲಿಸಲೆಂದೇ ನಾವು ಅಧಿಕಾರಕ್ಕೆ ಬಂದಿದ್ದೇವೆ ಎಂದು ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತಕುಮಾರ್‌ ಹೆಗಡೆ ಹೇಳಿಕೆ ನೀಡಿದ್ದರು. ಸಂವಿಧಾನದ ಅವಧಿ ಮುಗಿದಿದೆಯೇ ಎಂಬ ಚರ್ಚಾ ಸ್ಪರ್ಧೆಯನ್ನು ಬೆಂಗಳೂರಿನ ಶಾಲೆಯಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು. ಈಗ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿಕೆ ನೀಡಿರುವುದು ವರದಿಯಾಗಿದೆ. (ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿರುವ ವರದಿಯ ಪ್ರತಿ ಯಾವ ಪತ್ರಿಕೆಯಲ್ಲಿ ಪ್ರಕಟವಾಗಿದೆ ಎಂದು ‘ನಾನುಗೌರಿ.ಕಾಂ’ ಸ್ವತಂತ್ರವಾಗಿ ಪರಿಶೀಲಿಸಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...