Homeದಲಿತ್ ಫೈಲ್ಸ್ಸಿದ್ದಾಪುರ: ಸಂವಿಧಾನಕ್ಕಿಂತ ವೇದಗಳೇ ಶ್ರೇಷ್ಠ ಎಂದ ಸ್ವಾಮೀಜಿಯನ್ನು ಟೀಕಿಸಿದ್ದಕ್ಕೆ ಎಫ್‌ಐಆರ್‌!

ಸಿದ್ದಾಪುರ: ಸಂವಿಧಾನಕ್ಕಿಂತ ವೇದಗಳೇ ಶ್ರೇಷ್ಠ ಎಂದ ಸ್ವಾಮೀಜಿಯನ್ನು ಟೀಕಿಸಿದ್ದಕ್ಕೆ ಎಫ್‌ಐಆರ್‌!

- Advertisement -
- Advertisement -

“ಸಂವಿಧಾನಕ್ಕಿಂತ ವೇದಗಳೇ ಹೆಚ್ಚು ಶ್ರೇಷ್ಠ. ಸಂವಿಧಾನವನ್ನು ತಿದ್ದುಪಡಿ ಮಾಡಬಹುದು. ಆದರೆ ವೇದಗಳನ್ನು ತಿದ್ದಲು ಅಥವಾ ಬದಲಾಯಿಸಲು ಸಾಧ್ಯವಿಲ್ಲ” ಎಂದು ಹೇಳಿಕೆ ನೀಡಿರುವ ಉಜಿರೆಯ ಶ್ರೀರಾಮಕ್ಷೇತ್ರದ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರು ನೀಡಿದ ಹೇಳಿಕೆಯನ್ನು ವಿರೋಧಿಸಿದ ವ್ಯಕ್ತಿಯ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

‘ಭಾರತ ಭಾಗ್ಯವಿಧಾತ ಅಂಬೇಡ್ಕರ್‌’ ಫೇಸ್‌‌ಬುಕ್‌ ಪೇಜ್‌ನ ಅಡ್ಮಿನ್‌ ಬಾಗಲಕೋಟೆ ಮೂಲದ ಶಿವರಾಜ್‌ ಎಂಬವರ ವಿರುದ್ಧ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಶಿವರಾಜ್‌ ಅವರಿಗೆ ಜಾಮೀನು ದೊರೆತಿದೆ.

ಸ್ವಾಮೀಜಿಯವರನ್ನು ಶಿವರಾಜ್‌ ಅವ್ಯಾಚ್ಯ ಪದಗಳಿಂದ ನಿಂದಿಸಿದ್ದಾರೆಂದು ಆರೋಪಿಸಲಾಗಿದೆ. ಸಿದ್ದಾಪುರ ತಾಲ್ಲೂಕಿನ ಹರಕನಹಳ್ಳಿಯಲ್ಲಿ ನಡೆದ ಧರ್ಮಸಭೆಯಲ್ಲಿ ಮಾತನಾಡಿದ್ದ ಸ್ವಾಮೀಜಿ, “ಸಂವಿಧಾನಕ್ಕಿಂತ ವೇದಗಳೇ ಶ್ರೇಷ್ಠ” ಎಂದು ಹೇಳಿರುವುದು ಪತ್ರಿಕೆಯೊಂದರಲ್ಲಿ ಮುದ್ರಣವಾಗಿದೆ. ಪತ್ರಿಕೆಯಲ್ಲಿ ಪ್ರಕಟವಾಗಿರುವ ಹೇಳಿಕೆಗೆ ಪ್ರತಿಯಾಗಿ ಮತ್ತೊಂದು ಕೌಂಟರ್‌ ಹೇಳಿಕೆಯನ್ನು ಎಡಿಟ್ ಮಾಡಿದ ಫೋಟೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಭಾರತ ಭಾಗ್ಯವಿಧಾತ ಫೇಸ್‌ಬುಕ್‌ ಪೇಜ್‌ನಲ್ಲಿ ಎಡಿಟ್‌‌ ಮಾಡಲಾದ ಫೋಟೋ ಬಳಸಲಾಗಿದ್ದು, “ಸ್ವಾಮೀಜಿ ಹೆಸರನ್ನು ಕೆಟ್ಟದ್ದಾಗಿ ಬರೆಯಲಾಗಿದೆ” ಎಂದು ಆರೋಪಿಸಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಕೃಷ್ಣಪ್ಪ ನಾಯ್ಕರ್‌ ಎಂಬವರು ದೂರು ನೀಡಿದ್ದರು. ಅದನ್ನು ಆಧರಿಸಿ ಪ್ರಕರಣ ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಭಾರತ ಭಾಗ್ಯವಿಧಾತ ಫೇಸ್‌ಬುಕ್‌ ಪೇಜ್‌ನ ಅಡ್ಮಿನ್‌ ಶಿವರಾಜ್‌, ‘ಖಡ್ಗ’ ಎಂಬ ಫೇಸ್‌‌ಬುಕ್‌ ಖಾತೆಯಲ್ಲಿ ಈ ಫೋಟೋ ಸಿಕ್ಕಿತು. ಅದನ್ನು ಡೌನ್‌ಲೋಡ್‌ ಮಾಡಿಕೊಂಡು ಪೇಜ್‌ನಲ್ಲಿ ಅಪ್‌ಲೋಡ್ ಮಾಡಿ, ನನ್ನದೇ ಆದ ಅಭಿಪ್ರಾಯವನ್ನು ಬರೆದಿದ್ದೆ. ಸಂವಿಧಾನಕ್ಕಿಂತ ವೇದವೇ ಶ್ರೇಷ್ಠ ಎಂದು ಹೇಳಿಕೆ ನೀಡಿರುವ ಸ್ವಾಮೀಜಿ ಕುರಿತ ವರದಿಯನ್ನು ಉಲ್ಲೇಖಿಸಲು ಈ ಫೋಟೋವನ್ನು ಬಳಸಿದ್ದೇನೆಯೇ ಹೊರತು, ‘ಅನ್ನಕ್ಕಿಂತ ಸಗಣಿಯೇ ಶ್ರೇಷ್ಠ’ ಎಂಬ ಶೀರ್ಷಿಕೆಯಲ್ಲಿರುವ ಹೇಳಿಕೆ ನನ್ನದ್ದಲ್ಲ” ಎಂದು ಸ್ಪಷ್ಟಪಡಿಸಿದರು.

“ಸ್ವಾಮಿ ನಿಮ್ಮ ವೇದ ಉಪನಿಷತ್‌‌ಗಳಿಂದ ಎಲ್ಲರನ್ನು ಒಂದೇ ರೀತಿ ನೋಡೋಕೆ ಹೇಳಿ. ಜಾತಿ ಜಾತಿ ಅಂತ ಸಾಯೋವರೆಗೆ ಎಲ್ಲರನ್ನು ಸಮನಾಗಿ ನೋಡೋಕೆ ಹೇಳಿ. ಮೊದಲು ನೀವು ಯಾವಾಗಲಾದ್ರೂ ಎಲ್ಲರನ್ನು ಸಮಾನರಾಗಿ ನೋಡಿದ್ದೀರಾ? ಅದು ನಿಮ್ಮಿಂದ ಸಾಧ್ಯ ಇಲ್ಲ. ಎಲ್ಲಾ ಗ್ರಂಥಗಳಿಗೆ ಶ್ರೇಷ್ಠ ವಾದದ್ದು ನಮ್ಮ ಸಂವಿಧಾನ, ಸಂವಿಧಾನದ ಬಗ್ಗೆ ಮಾತೋಡೋಕೆ ಒಂದು ಯೋಗ್ಯತೆ ಬೇಕು ಅದು ತಿಳಿದವರಿಗೆ ಮಾತ್ರ ಗೊತ್ತು” ಎಂಬ ಅಭಿಪ್ರಾಯವನ್ನು ಶಿವರಾಜ್‌ ‘#ಭಾರತ_ಭಾಗ್ಯವಿದಾತ_ಅಂಬೇಡ್ಕರ್’ ಹ್ಯಾಷ್‌ಟ್ಯಾಗ್‌ನಲ್ಲಿ ಬರೆದಿದ್ದಾರೆ.

“ಪೊಲೀಸ್‌ನವರು ನನ್ನ ಹೇಳಿಕೆಯನ್ನು ದಾಖಲಿಸಿದ್ದಾರೆ. ‘ಖಡ್ಗ’ ಎಂಬ ನಕಲಿ ಖಾತೆಯನ್ನು ಪರಿಶೀಲಿಸುವುದಾಗಿ ತಿಳಿಸಿದ್ದಾರೆ. ಎಂ.ಜೆ. ಎಂಬ ಲೋಗೋ ಅಡಿಯಲ್ಲಿ ಹಲವಾರು ಪೋಸ್ಟರ್‌ಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ನಾನು ಬಳಸಿರುವ ಫೋಟೋದಲ್ಲಿಯೂ ಕೂಡ ಎಂ.ಜೆ. ಲೋಗೋ ಇರುವುದನ್ನು ಗಮನಿಸಬಹುದು” ಎನ್ನುತ್ತಾರೆ ಶಿವರಾಜ್‌‌

ಪೋಸ್ಟ್‌ ಗಮನಿಸಿದ ಕೆಲವು ಮುಖಂಡರು ಕೃಷ್ಣಪ್ಪ ನಾಯ್ಕರ್‌ ಎಂಬವರಿಂದ ಸಿದ್ದಾಪುರದಲ್ಲಿ ಪ್ರಕರಣ ದಾಖಲಿಸಿದ್ದಾರೆ. ಐಟಿ ಆಕ್ಟ್‌ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ವಿಚಾರಣೆಗೆ ಹಾಜರಾಗಿ ಸ್ಪಷ್ಟನೆಯನ್ನು ನೀಡಿರುವ ಶಿವರಾಜ್‌ ಅವರಿಗೆ ಈಗ ಜಾಮೀನು ಕೂಡ ದೊರೆತಿದೆ. ಏಪ್ರಿಲ್‌ 29ರಂದು ಮಾಡಲಾಗಿದ್ದ ಪೋಸ್ಟ್‌ಗೆ ಏಪ್ರಿಲ್‌ 30ರಂದು ಪ್ರಕರಣ ದಾಖಲಿಸಲಾಗಿತ್ತು. ದಲಿತ ಸಂಘಟನೆಗಳು ಹಾಜರಿದ್ದು ಶಿವರಾಜ್‌ ಅವರಿಗೆ ಧೈರ್ಯ ತುಂಬಿವೆ.

ಸಂವಿಧಾನದ ಕುರಿತು ಆಗಾಗ್ಗೆ ವಿವಾದಾತ್ಮಕವಾಗಿ ಹೇಳಿಕೆ ನೀಡುತ್ತಿರುವ ಪ್ರಕರಣಗಳು ಆಗಾಗ್ಗೆ ಘಟಿಸುತ್ತಿವೆ. ಸಂವಿಧಾನ ಬದಲಿಸಲೆಂದೇ ನಾವು ಅಧಿಕಾರಕ್ಕೆ ಬಂದಿದ್ದೇವೆ ಎಂದು ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತಕುಮಾರ್‌ ಹೆಗಡೆ ಹೇಳಿಕೆ ನೀಡಿದ್ದರು. ಸಂವಿಧಾನದ ಅವಧಿ ಮುಗಿದಿದೆಯೇ ಎಂಬ ಚರ್ಚಾ ಸ್ಪರ್ಧೆಯನ್ನು ಬೆಂಗಳೂರಿನ ಶಾಲೆಯಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು. ಈಗ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿಕೆ ನೀಡಿರುವುದು ವರದಿಯಾಗಿದೆ. (ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿರುವ ವರದಿಯ ಪ್ರತಿ ಯಾವ ಪತ್ರಿಕೆಯಲ್ಲಿ ಪ್ರಕಟವಾಗಿದೆ ಎಂದು ‘ನಾನುಗೌರಿ.ಕಾಂ’ ಸ್ವತಂತ್ರವಾಗಿ ಪರಿಶೀಲಿಸಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...