Homeದಲಿತ್ ಫೈಲ್ಸ್ಸಿದ್ದಾಪುರ: ಸಂವಿಧಾನಕ್ಕಿಂತ ವೇದಗಳೇ ಶ್ರೇಷ್ಠ ಎಂದ ಸ್ವಾಮೀಜಿಯನ್ನು ಟೀಕಿಸಿದ್ದಕ್ಕೆ ಎಫ್‌ಐಆರ್‌!

ಸಿದ್ದಾಪುರ: ಸಂವಿಧಾನಕ್ಕಿಂತ ವೇದಗಳೇ ಶ್ರೇಷ್ಠ ಎಂದ ಸ್ವಾಮೀಜಿಯನ್ನು ಟೀಕಿಸಿದ್ದಕ್ಕೆ ಎಫ್‌ಐಆರ್‌!

- Advertisement -
- Advertisement -

“ಸಂವಿಧಾನಕ್ಕಿಂತ ವೇದಗಳೇ ಹೆಚ್ಚು ಶ್ರೇಷ್ಠ. ಸಂವಿಧಾನವನ್ನು ತಿದ್ದುಪಡಿ ಮಾಡಬಹುದು. ಆದರೆ ವೇದಗಳನ್ನು ತಿದ್ದಲು ಅಥವಾ ಬದಲಾಯಿಸಲು ಸಾಧ್ಯವಿಲ್ಲ” ಎಂದು ಹೇಳಿಕೆ ನೀಡಿರುವ ಉಜಿರೆಯ ಶ್ರೀರಾಮಕ್ಷೇತ್ರದ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರು ನೀಡಿದ ಹೇಳಿಕೆಯನ್ನು ವಿರೋಧಿಸಿದ ವ್ಯಕ್ತಿಯ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

‘ಭಾರತ ಭಾಗ್ಯವಿಧಾತ ಅಂಬೇಡ್ಕರ್‌’ ಫೇಸ್‌‌ಬುಕ್‌ ಪೇಜ್‌ನ ಅಡ್ಮಿನ್‌ ಬಾಗಲಕೋಟೆ ಮೂಲದ ಶಿವರಾಜ್‌ ಎಂಬವರ ವಿರುದ್ಧ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಶಿವರಾಜ್‌ ಅವರಿಗೆ ಜಾಮೀನು ದೊರೆತಿದೆ.

ಸ್ವಾಮೀಜಿಯವರನ್ನು ಶಿವರಾಜ್‌ ಅವ್ಯಾಚ್ಯ ಪದಗಳಿಂದ ನಿಂದಿಸಿದ್ದಾರೆಂದು ಆರೋಪಿಸಲಾಗಿದೆ. ಸಿದ್ದಾಪುರ ತಾಲ್ಲೂಕಿನ ಹರಕನಹಳ್ಳಿಯಲ್ಲಿ ನಡೆದ ಧರ್ಮಸಭೆಯಲ್ಲಿ ಮಾತನಾಡಿದ್ದ ಸ್ವಾಮೀಜಿ, “ಸಂವಿಧಾನಕ್ಕಿಂತ ವೇದಗಳೇ ಶ್ರೇಷ್ಠ” ಎಂದು ಹೇಳಿರುವುದು ಪತ್ರಿಕೆಯೊಂದರಲ್ಲಿ ಮುದ್ರಣವಾಗಿದೆ. ಪತ್ರಿಕೆಯಲ್ಲಿ ಪ್ರಕಟವಾಗಿರುವ ಹೇಳಿಕೆಗೆ ಪ್ರತಿಯಾಗಿ ಮತ್ತೊಂದು ಕೌಂಟರ್‌ ಹೇಳಿಕೆಯನ್ನು ಎಡಿಟ್ ಮಾಡಿದ ಫೋಟೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಭಾರತ ಭಾಗ್ಯವಿಧಾತ ಫೇಸ್‌ಬುಕ್‌ ಪೇಜ್‌ನಲ್ಲಿ ಎಡಿಟ್‌‌ ಮಾಡಲಾದ ಫೋಟೋ ಬಳಸಲಾಗಿದ್ದು, “ಸ್ವಾಮೀಜಿ ಹೆಸರನ್ನು ಕೆಟ್ಟದ್ದಾಗಿ ಬರೆಯಲಾಗಿದೆ” ಎಂದು ಆರೋಪಿಸಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಕೃಷ್ಣಪ್ಪ ನಾಯ್ಕರ್‌ ಎಂಬವರು ದೂರು ನೀಡಿದ್ದರು. ಅದನ್ನು ಆಧರಿಸಿ ಪ್ರಕರಣ ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಭಾರತ ಭಾಗ್ಯವಿಧಾತ ಫೇಸ್‌ಬುಕ್‌ ಪೇಜ್‌ನ ಅಡ್ಮಿನ್‌ ಶಿವರಾಜ್‌, ‘ಖಡ್ಗ’ ಎಂಬ ಫೇಸ್‌‌ಬುಕ್‌ ಖಾತೆಯಲ್ಲಿ ಈ ಫೋಟೋ ಸಿಕ್ಕಿತು. ಅದನ್ನು ಡೌನ್‌ಲೋಡ್‌ ಮಾಡಿಕೊಂಡು ಪೇಜ್‌ನಲ್ಲಿ ಅಪ್‌ಲೋಡ್ ಮಾಡಿ, ನನ್ನದೇ ಆದ ಅಭಿಪ್ರಾಯವನ್ನು ಬರೆದಿದ್ದೆ. ಸಂವಿಧಾನಕ್ಕಿಂತ ವೇದವೇ ಶ್ರೇಷ್ಠ ಎಂದು ಹೇಳಿಕೆ ನೀಡಿರುವ ಸ್ವಾಮೀಜಿ ಕುರಿತ ವರದಿಯನ್ನು ಉಲ್ಲೇಖಿಸಲು ಈ ಫೋಟೋವನ್ನು ಬಳಸಿದ್ದೇನೆಯೇ ಹೊರತು, ‘ಅನ್ನಕ್ಕಿಂತ ಸಗಣಿಯೇ ಶ್ರೇಷ್ಠ’ ಎಂಬ ಶೀರ್ಷಿಕೆಯಲ್ಲಿರುವ ಹೇಳಿಕೆ ನನ್ನದ್ದಲ್ಲ” ಎಂದು ಸ್ಪಷ್ಟಪಡಿಸಿದರು.

“ಸ್ವಾಮಿ ನಿಮ್ಮ ವೇದ ಉಪನಿಷತ್‌‌ಗಳಿಂದ ಎಲ್ಲರನ್ನು ಒಂದೇ ರೀತಿ ನೋಡೋಕೆ ಹೇಳಿ. ಜಾತಿ ಜಾತಿ ಅಂತ ಸಾಯೋವರೆಗೆ ಎಲ್ಲರನ್ನು ಸಮನಾಗಿ ನೋಡೋಕೆ ಹೇಳಿ. ಮೊದಲು ನೀವು ಯಾವಾಗಲಾದ್ರೂ ಎಲ್ಲರನ್ನು ಸಮಾನರಾಗಿ ನೋಡಿದ್ದೀರಾ? ಅದು ನಿಮ್ಮಿಂದ ಸಾಧ್ಯ ಇಲ್ಲ. ಎಲ್ಲಾ ಗ್ರಂಥಗಳಿಗೆ ಶ್ರೇಷ್ಠ ವಾದದ್ದು ನಮ್ಮ ಸಂವಿಧಾನ, ಸಂವಿಧಾನದ ಬಗ್ಗೆ ಮಾತೋಡೋಕೆ ಒಂದು ಯೋಗ್ಯತೆ ಬೇಕು ಅದು ತಿಳಿದವರಿಗೆ ಮಾತ್ರ ಗೊತ್ತು” ಎಂಬ ಅಭಿಪ್ರಾಯವನ್ನು ಶಿವರಾಜ್‌ ‘#ಭಾರತ_ಭಾಗ್ಯವಿದಾತ_ಅಂಬೇಡ್ಕರ್’ ಹ್ಯಾಷ್‌ಟ್ಯಾಗ್‌ನಲ್ಲಿ ಬರೆದಿದ್ದಾರೆ.

“ಪೊಲೀಸ್‌ನವರು ನನ್ನ ಹೇಳಿಕೆಯನ್ನು ದಾಖಲಿಸಿದ್ದಾರೆ. ‘ಖಡ್ಗ’ ಎಂಬ ನಕಲಿ ಖಾತೆಯನ್ನು ಪರಿಶೀಲಿಸುವುದಾಗಿ ತಿಳಿಸಿದ್ದಾರೆ. ಎಂ.ಜೆ. ಎಂಬ ಲೋಗೋ ಅಡಿಯಲ್ಲಿ ಹಲವಾರು ಪೋಸ್ಟರ್‌ಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ನಾನು ಬಳಸಿರುವ ಫೋಟೋದಲ್ಲಿಯೂ ಕೂಡ ಎಂ.ಜೆ. ಲೋಗೋ ಇರುವುದನ್ನು ಗಮನಿಸಬಹುದು” ಎನ್ನುತ್ತಾರೆ ಶಿವರಾಜ್‌‌

ಪೋಸ್ಟ್‌ ಗಮನಿಸಿದ ಕೆಲವು ಮುಖಂಡರು ಕೃಷ್ಣಪ್ಪ ನಾಯ್ಕರ್‌ ಎಂಬವರಿಂದ ಸಿದ್ದಾಪುರದಲ್ಲಿ ಪ್ರಕರಣ ದಾಖಲಿಸಿದ್ದಾರೆ. ಐಟಿ ಆಕ್ಟ್‌ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ವಿಚಾರಣೆಗೆ ಹಾಜರಾಗಿ ಸ್ಪಷ್ಟನೆಯನ್ನು ನೀಡಿರುವ ಶಿವರಾಜ್‌ ಅವರಿಗೆ ಈಗ ಜಾಮೀನು ಕೂಡ ದೊರೆತಿದೆ. ಏಪ್ರಿಲ್‌ 29ರಂದು ಮಾಡಲಾಗಿದ್ದ ಪೋಸ್ಟ್‌ಗೆ ಏಪ್ರಿಲ್‌ 30ರಂದು ಪ್ರಕರಣ ದಾಖಲಿಸಲಾಗಿತ್ತು. ದಲಿತ ಸಂಘಟನೆಗಳು ಹಾಜರಿದ್ದು ಶಿವರಾಜ್‌ ಅವರಿಗೆ ಧೈರ್ಯ ತುಂಬಿವೆ.

ಸಂವಿಧಾನದ ಕುರಿತು ಆಗಾಗ್ಗೆ ವಿವಾದಾತ್ಮಕವಾಗಿ ಹೇಳಿಕೆ ನೀಡುತ್ತಿರುವ ಪ್ರಕರಣಗಳು ಆಗಾಗ್ಗೆ ಘಟಿಸುತ್ತಿವೆ. ಸಂವಿಧಾನ ಬದಲಿಸಲೆಂದೇ ನಾವು ಅಧಿಕಾರಕ್ಕೆ ಬಂದಿದ್ದೇವೆ ಎಂದು ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತಕುಮಾರ್‌ ಹೆಗಡೆ ಹೇಳಿಕೆ ನೀಡಿದ್ದರು. ಸಂವಿಧಾನದ ಅವಧಿ ಮುಗಿದಿದೆಯೇ ಎಂಬ ಚರ್ಚಾ ಸ್ಪರ್ಧೆಯನ್ನು ಬೆಂಗಳೂರಿನ ಶಾಲೆಯಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು. ಈಗ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿಕೆ ನೀಡಿರುವುದು ವರದಿಯಾಗಿದೆ. (ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿರುವ ವರದಿಯ ಪ್ರತಿ ಯಾವ ಪತ್ರಿಕೆಯಲ್ಲಿ ಪ್ರಕಟವಾಗಿದೆ ಎಂದು ‘ನಾನುಗೌರಿ.ಕಾಂ’ ಸ್ವತಂತ್ರವಾಗಿ ಪರಿಶೀಲಿಸಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...