Homeದಲಿತ್ ಫೈಲ್ಸ್ಸಿದ್ದಾಪುರ: ಸಂವಿಧಾನಕ್ಕಿಂತ ವೇದಗಳೇ ಶ್ರೇಷ್ಠ ಎಂದ ಸ್ವಾಮೀಜಿಯನ್ನು ಟೀಕಿಸಿದ್ದಕ್ಕೆ ಎಫ್‌ಐಆರ್‌!

ಸಿದ್ದಾಪುರ: ಸಂವಿಧಾನಕ್ಕಿಂತ ವೇದಗಳೇ ಶ್ರೇಷ್ಠ ಎಂದ ಸ್ವಾಮೀಜಿಯನ್ನು ಟೀಕಿಸಿದ್ದಕ್ಕೆ ಎಫ್‌ಐಆರ್‌!

- Advertisement -
- Advertisement -

“ಸಂವಿಧಾನಕ್ಕಿಂತ ವೇದಗಳೇ ಹೆಚ್ಚು ಶ್ರೇಷ್ಠ. ಸಂವಿಧಾನವನ್ನು ತಿದ್ದುಪಡಿ ಮಾಡಬಹುದು. ಆದರೆ ವೇದಗಳನ್ನು ತಿದ್ದಲು ಅಥವಾ ಬದಲಾಯಿಸಲು ಸಾಧ್ಯವಿಲ್ಲ” ಎಂದು ಹೇಳಿಕೆ ನೀಡಿರುವ ಉಜಿರೆಯ ಶ್ರೀರಾಮಕ್ಷೇತ್ರದ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರು ನೀಡಿದ ಹೇಳಿಕೆಯನ್ನು ವಿರೋಧಿಸಿದ ವ್ಯಕ್ತಿಯ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

‘ಭಾರತ ಭಾಗ್ಯವಿಧಾತ ಅಂಬೇಡ್ಕರ್‌’ ಫೇಸ್‌‌ಬುಕ್‌ ಪೇಜ್‌ನ ಅಡ್ಮಿನ್‌ ಬಾಗಲಕೋಟೆ ಮೂಲದ ಶಿವರಾಜ್‌ ಎಂಬವರ ವಿರುದ್ಧ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಶಿವರಾಜ್‌ ಅವರಿಗೆ ಜಾಮೀನು ದೊರೆತಿದೆ.

ಸ್ವಾಮೀಜಿಯವರನ್ನು ಶಿವರಾಜ್‌ ಅವ್ಯಾಚ್ಯ ಪದಗಳಿಂದ ನಿಂದಿಸಿದ್ದಾರೆಂದು ಆರೋಪಿಸಲಾಗಿದೆ. ಸಿದ್ದಾಪುರ ತಾಲ್ಲೂಕಿನ ಹರಕನಹಳ್ಳಿಯಲ್ಲಿ ನಡೆದ ಧರ್ಮಸಭೆಯಲ್ಲಿ ಮಾತನಾಡಿದ್ದ ಸ್ವಾಮೀಜಿ, “ಸಂವಿಧಾನಕ್ಕಿಂತ ವೇದಗಳೇ ಶ್ರೇಷ್ಠ” ಎಂದು ಹೇಳಿರುವುದು ಪತ್ರಿಕೆಯೊಂದರಲ್ಲಿ ಮುದ್ರಣವಾಗಿದೆ. ಪತ್ರಿಕೆಯಲ್ಲಿ ಪ್ರಕಟವಾಗಿರುವ ಹೇಳಿಕೆಗೆ ಪ್ರತಿಯಾಗಿ ಮತ್ತೊಂದು ಕೌಂಟರ್‌ ಹೇಳಿಕೆಯನ್ನು ಎಡಿಟ್ ಮಾಡಿದ ಫೋಟೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಭಾರತ ಭಾಗ್ಯವಿಧಾತ ಫೇಸ್‌ಬುಕ್‌ ಪೇಜ್‌ನಲ್ಲಿ ಎಡಿಟ್‌‌ ಮಾಡಲಾದ ಫೋಟೋ ಬಳಸಲಾಗಿದ್ದು, “ಸ್ವಾಮೀಜಿ ಹೆಸರನ್ನು ಕೆಟ್ಟದ್ದಾಗಿ ಬರೆಯಲಾಗಿದೆ” ಎಂದು ಆರೋಪಿಸಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಕೃಷ್ಣಪ್ಪ ನಾಯ್ಕರ್‌ ಎಂಬವರು ದೂರು ನೀಡಿದ್ದರು. ಅದನ್ನು ಆಧರಿಸಿ ಪ್ರಕರಣ ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಭಾರತ ಭಾಗ್ಯವಿಧಾತ ಫೇಸ್‌ಬುಕ್‌ ಪೇಜ್‌ನ ಅಡ್ಮಿನ್‌ ಶಿವರಾಜ್‌, ‘ಖಡ್ಗ’ ಎಂಬ ಫೇಸ್‌‌ಬುಕ್‌ ಖಾತೆಯಲ್ಲಿ ಈ ಫೋಟೋ ಸಿಕ್ಕಿತು. ಅದನ್ನು ಡೌನ್‌ಲೋಡ್‌ ಮಾಡಿಕೊಂಡು ಪೇಜ್‌ನಲ್ಲಿ ಅಪ್‌ಲೋಡ್ ಮಾಡಿ, ನನ್ನದೇ ಆದ ಅಭಿಪ್ರಾಯವನ್ನು ಬರೆದಿದ್ದೆ. ಸಂವಿಧಾನಕ್ಕಿಂತ ವೇದವೇ ಶ್ರೇಷ್ಠ ಎಂದು ಹೇಳಿಕೆ ನೀಡಿರುವ ಸ್ವಾಮೀಜಿ ಕುರಿತ ವರದಿಯನ್ನು ಉಲ್ಲೇಖಿಸಲು ಈ ಫೋಟೋವನ್ನು ಬಳಸಿದ್ದೇನೆಯೇ ಹೊರತು, ‘ಅನ್ನಕ್ಕಿಂತ ಸಗಣಿಯೇ ಶ್ರೇಷ್ಠ’ ಎಂಬ ಶೀರ್ಷಿಕೆಯಲ್ಲಿರುವ ಹೇಳಿಕೆ ನನ್ನದ್ದಲ್ಲ” ಎಂದು ಸ್ಪಷ್ಟಪಡಿಸಿದರು.

“ಸ್ವಾಮಿ ನಿಮ್ಮ ವೇದ ಉಪನಿಷತ್‌‌ಗಳಿಂದ ಎಲ್ಲರನ್ನು ಒಂದೇ ರೀತಿ ನೋಡೋಕೆ ಹೇಳಿ. ಜಾತಿ ಜಾತಿ ಅಂತ ಸಾಯೋವರೆಗೆ ಎಲ್ಲರನ್ನು ಸಮನಾಗಿ ನೋಡೋಕೆ ಹೇಳಿ. ಮೊದಲು ನೀವು ಯಾವಾಗಲಾದ್ರೂ ಎಲ್ಲರನ್ನು ಸಮಾನರಾಗಿ ನೋಡಿದ್ದೀರಾ? ಅದು ನಿಮ್ಮಿಂದ ಸಾಧ್ಯ ಇಲ್ಲ. ಎಲ್ಲಾ ಗ್ರಂಥಗಳಿಗೆ ಶ್ರೇಷ್ಠ ವಾದದ್ದು ನಮ್ಮ ಸಂವಿಧಾನ, ಸಂವಿಧಾನದ ಬಗ್ಗೆ ಮಾತೋಡೋಕೆ ಒಂದು ಯೋಗ್ಯತೆ ಬೇಕು ಅದು ತಿಳಿದವರಿಗೆ ಮಾತ್ರ ಗೊತ್ತು” ಎಂಬ ಅಭಿಪ್ರಾಯವನ್ನು ಶಿವರಾಜ್‌ ‘#ಭಾರತ_ಭಾಗ್ಯವಿದಾತ_ಅಂಬೇಡ್ಕರ್’ ಹ್ಯಾಷ್‌ಟ್ಯಾಗ್‌ನಲ್ಲಿ ಬರೆದಿದ್ದಾರೆ.

“ಪೊಲೀಸ್‌ನವರು ನನ್ನ ಹೇಳಿಕೆಯನ್ನು ದಾಖಲಿಸಿದ್ದಾರೆ. ‘ಖಡ್ಗ’ ಎಂಬ ನಕಲಿ ಖಾತೆಯನ್ನು ಪರಿಶೀಲಿಸುವುದಾಗಿ ತಿಳಿಸಿದ್ದಾರೆ. ಎಂ.ಜೆ. ಎಂಬ ಲೋಗೋ ಅಡಿಯಲ್ಲಿ ಹಲವಾರು ಪೋಸ್ಟರ್‌ಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ನಾನು ಬಳಸಿರುವ ಫೋಟೋದಲ್ಲಿಯೂ ಕೂಡ ಎಂ.ಜೆ. ಲೋಗೋ ಇರುವುದನ್ನು ಗಮನಿಸಬಹುದು” ಎನ್ನುತ್ತಾರೆ ಶಿವರಾಜ್‌‌

ಪೋಸ್ಟ್‌ ಗಮನಿಸಿದ ಕೆಲವು ಮುಖಂಡರು ಕೃಷ್ಣಪ್ಪ ನಾಯ್ಕರ್‌ ಎಂಬವರಿಂದ ಸಿದ್ದಾಪುರದಲ್ಲಿ ಪ್ರಕರಣ ದಾಖಲಿಸಿದ್ದಾರೆ. ಐಟಿ ಆಕ್ಟ್‌ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ವಿಚಾರಣೆಗೆ ಹಾಜರಾಗಿ ಸ್ಪಷ್ಟನೆಯನ್ನು ನೀಡಿರುವ ಶಿವರಾಜ್‌ ಅವರಿಗೆ ಈಗ ಜಾಮೀನು ಕೂಡ ದೊರೆತಿದೆ. ಏಪ್ರಿಲ್‌ 29ರಂದು ಮಾಡಲಾಗಿದ್ದ ಪೋಸ್ಟ್‌ಗೆ ಏಪ್ರಿಲ್‌ 30ರಂದು ಪ್ರಕರಣ ದಾಖಲಿಸಲಾಗಿತ್ತು. ದಲಿತ ಸಂಘಟನೆಗಳು ಹಾಜರಿದ್ದು ಶಿವರಾಜ್‌ ಅವರಿಗೆ ಧೈರ್ಯ ತುಂಬಿವೆ.

ಸಂವಿಧಾನದ ಕುರಿತು ಆಗಾಗ್ಗೆ ವಿವಾದಾತ್ಮಕವಾಗಿ ಹೇಳಿಕೆ ನೀಡುತ್ತಿರುವ ಪ್ರಕರಣಗಳು ಆಗಾಗ್ಗೆ ಘಟಿಸುತ್ತಿವೆ. ಸಂವಿಧಾನ ಬದಲಿಸಲೆಂದೇ ನಾವು ಅಧಿಕಾರಕ್ಕೆ ಬಂದಿದ್ದೇವೆ ಎಂದು ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತಕುಮಾರ್‌ ಹೆಗಡೆ ಹೇಳಿಕೆ ನೀಡಿದ್ದರು. ಸಂವಿಧಾನದ ಅವಧಿ ಮುಗಿದಿದೆಯೇ ಎಂಬ ಚರ್ಚಾ ಸ್ಪರ್ಧೆಯನ್ನು ಬೆಂಗಳೂರಿನ ಶಾಲೆಯಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು. ಈಗ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿಕೆ ನೀಡಿರುವುದು ವರದಿಯಾಗಿದೆ. (ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿರುವ ವರದಿಯ ಪ್ರತಿ ಯಾವ ಪತ್ರಿಕೆಯಲ್ಲಿ ಪ್ರಕಟವಾಗಿದೆ ಎಂದು ‘ನಾನುಗೌರಿ.ಕಾಂ’ ಸ್ವತಂತ್ರವಾಗಿ ಪರಿಶೀಲಿಸಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...