Homeದಲಿತ್ ಫೈಲ್ಸ್ಸಿದ್ದಾಪುರ: ಸಂವಿಧಾನಕ್ಕಿಂತ ವೇದಗಳೇ ಶ್ರೇಷ್ಠ ಎಂದ ಸ್ವಾಮೀಜಿಯನ್ನು ಟೀಕಿಸಿದ್ದಕ್ಕೆ ಎಫ್‌ಐಆರ್‌!

ಸಿದ್ದಾಪುರ: ಸಂವಿಧಾನಕ್ಕಿಂತ ವೇದಗಳೇ ಶ್ರೇಷ್ಠ ಎಂದ ಸ್ವಾಮೀಜಿಯನ್ನು ಟೀಕಿಸಿದ್ದಕ್ಕೆ ಎಫ್‌ಐಆರ್‌!

- Advertisement -
- Advertisement -

“ಸಂವಿಧಾನಕ್ಕಿಂತ ವೇದಗಳೇ ಹೆಚ್ಚು ಶ್ರೇಷ್ಠ. ಸಂವಿಧಾನವನ್ನು ತಿದ್ದುಪಡಿ ಮಾಡಬಹುದು. ಆದರೆ ವೇದಗಳನ್ನು ತಿದ್ದಲು ಅಥವಾ ಬದಲಾಯಿಸಲು ಸಾಧ್ಯವಿಲ್ಲ” ಎಂದು ಹೇಳಿಕೆ ನೀಡಿರುವ ಉಜಿರೆಯ ಶ್ರೀರಾಮಕ್ಷೇತ್ರದ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರು ನೀಡಿದ ಹೇಳಿಕೆಯನ್ನು ವಿರೋಧಿಸಿದ ವ್ಯಕ್ತಿಯ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

‘ಭಾರತ ಭಾಗ್ಯವಿಧಾತ ಅಂಬೇಡ್ಕರ್‌’ ಫೇಸ್‌‌ಬುಕ್‌ ಪೇಜ್‌ನ ಅಡ್ಮಿನ್‌ ಬಾಗಲಕೋಟೆ ಮೂಲದ ಶಿವರಾಜ್‌ ಎಂಬವರ ವಿರುದ್ಧ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಶಿವರಾಜ್‌ ಅವರಿಗೆ ಜಾಮೀನು ದೊರೆತಿದೆ.

ಸ್ವಾಮೀಜಿಯವರನ್ನು ಶಿವರಾಜ್‌ ಅವ್ಯಾಚ್ಯ ಪದಗಳಿಂದ ನಿಂದಿಸಿದ್ದಾರೆಂದು ಆರೋಪಿಸಲಾಗಿದೆ. ಸಿದ್ದಾಪುರ ತಾಲ್ಲೂಕಿನ ಹರಕನಹಳ್ಳಿಯಲ್ಲಿ ನಡೆದ ಧರ್ಮಸಭೆಯಲ್ಲಿ ಮಾತನಾಡಿದ್ದ ಸ್ವಾಮೀಜಿ, “ಸಂವಿಧಾನಕ್ಕಿಂತ ವೇದಗಳೇ ಶ್ರೇಷ್ಠ” ಎಂದು ಹೇಳಿರುವುದು ಪತ್ರಿಕೆಯೊಂದರಲ್ಲಿ ಮುದ್ರಣವಾಗಿದೆ. ಪತ್ರಿಕೆಯಲ್ಲಿ ಪ್ರಕಟವಾಗಿರುವ ಹೇಳಿಕೆಗೆ ಪ್ರತಿಯಾಗಿ ಮತ್ತೊಂದು ಕೌಂಟರ್‌ ಹೇಳಿಕೆಯನ್ನು ಎಡಿಟ್ ಮಾಡಿದ ಫೋಟೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಭಾರತ ಭಾಗ್ಯವಿಧಾತ ಫೇಸ್‌ಬುಕ್‌ ಪೇಜ್‌ನಲ್ಲಿ ಎಡಿಟ್‌‌ ಮಾಡಲಾದ ಫೋಟೋ ಬಳಸಲಾಗಿದ್ದು, “ಸ್ವಾಮೀಜಿ ಹೆಸರನ್ನು ಕೆಟ್ಟದ್ದಾಗಿ ಬರೆಯಲಾಗಿದೆ” ಎಂದು ಆರೋಪಿಸಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಕೃಷ್ಣಪ್ಪ ನಾಯ್ಕರ್‌ ಎಂಬವರು ದೂರು ನೀಡಿದ್ದರು. ಅದನ್ನು ಆಧರಿಸಿ ಪ್ರಕರಣ ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಭಾರತ ಭಾಗ್ಯವಿಧಾತ ಫೇಸ್‌ಬುಕ್‌ ಪೇಜ್‌ನ ಅಡ್ಮಿನ್‌ ಶಿವರಾಜ್‌, ‘ಖಡ್ಗ’ ಎಂಬ ಫೇಸ್‌‌ಬುಕ್‌ ಖಾತೆಯಲ್ಲಿ ಈ ಫೋಟೋ ಸಿಕ್ಕಿತು. ಅದನ್ನು ಡೌನ್‌ಲೋಡ್‌ ಮಾಡಿಕೊಂಡು ಪೇಜ್‌ನಲ್ಲಿ ಅಪ್‌ಲೋಡ್ ಮಾಡಿ, ನನ್ನದೇ ಆದ ಅಭಿಪ್ರಾಯವನ್ನು ಬರೆದಿದ್ದೆ. ಸಂವಿಧಾನಕ್ಕಿಂತ ವೇದವೇ ಶ್ರೇಷ್ಠ ಎಂದು ಹೇಳಿಕೆ ನೀಡಿರುವ ಸ್ವಾಮೀಜಿ ಕುರಿತ ವರದಿಯನ್ನು ಉಲ್ಲೇಖಿಸಲು ಈ ಫೋಟೋವನ್ನು ಬಳಸಿದ್ದೇನೆಯೇ ಹೊರತು, ‘ಅನ್ನಕ್ಕಿಂತ ಸಗಣಿಯೇ ಶ್ರೇಷ್ಠ’ ಎಂಬ ಶೀರ್ಷಿಕೆಯಲ್ಲಿರುವ ಹೇಳಿಕೆ ನನ್ನದ್ದಲ್ಲ” ಎಂದು ಸ್ಪಷ್ಟಪಡಿಸಿದರು.

“ಸ್ವಾಮಿ ನಿಮ್ಮ ವೇದ ಉಪನಿಷತ್‌‌ಗಳಿಂದ ಎಲ್ಲರನ್ನು ಒಂದೇ ರೀತಿ ನೋಡೋಕೆ ಹೇಳಿ. ಜಾತಿ ಜಾತಿ ಅಂತ ಸಾಯೋವರೆಗೆ ಎಲ್ಲರನ್ನು ಸಮನಾಗಿ ನೋಡೋಕೆ ಹೇಳಿ. ಮೊದಲು ನೀವು ಯಾವಾಗಲಾದ್ರೂ ಎಲ್ಲರನ್ನು ಸಮಾನರಾಗಿ ನೋಡಿದ್ದೀರಾ? ಅದು ನಿಮ್ಮಿಂದ ಸಾಧ್ಯ ಇಲ್ಲ. ಎಲ್ಲಾ ಗ್ರಂಥಗಳಿಗೆ ಶ್ರೇಷ್ಠ ವಾದದ್ದು ನಮ್ಮ ಸಂವಿಧಾನ, ಸಂವಿಧಾನದ ಬಗ್ಗೆ ಮಾತೋಡೋಕೆ ಒಂದು ಯೋಗ್ಯತೆ ಬೇಕು ಅದು ತಿಳಿದವರಿಗೆ ಮಾತ್ರ ಗೊತ್ತು” ಎಂಬ ಅಭಿಪ್ರಾಯವನ್ನು ಶಿವರಾಜ್‌ ‘#ಭಾರತ_ಭಾಗ್ಯವಿದಾತ_ಅಂಬೇಡ್ಕರ್’ ಹ್ಯಾಷ್‌ಟ್ಯಾಗ್‌ನಲ್ಲಿ ಬರೆದಿದ್ದಾರೆ.

“ಪೊಲೀಸ್‌ನವರು ನನ್ನ ಹೇಳಿಕೆಯನ್ನು ದಾಖಲಿಸಿದ್ದಾರೆ. ‘ಖಡ್ಗ’ ಎಂಬ ನಕಲಿ ಖಾತೆಯನ್ನು ಪರಿಶೀಲಿಸುವುದಾಗಿ ತಿಳಿಸಿದ್ದಾರೆ. ಎಂ.ಜೆ. ಎಂಬ ಲೋಗೋ ಅಡಿಯಲ್ಲಿ ಹಲವಾರು ಪೋಸ್ಟರ್‌ಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ನಾನು ಬಳಸಿರುವ ಫೋಟೋದಲ್ಲಿಯೂ ಕೂಡ ಎಂ.ಜೆ. ಲೋಗೋ ಇರುವುದನ್ನು ಗಮನಿಸಬಹುದು” ಎನ್ನುತ್ತಾರೆ ಶಿವರಾಜ್‌‌

ಪೋಸ್ಟ್‌ ಗಮನಿಸಿದ ಕೆಲವು ಮುಖಂಡರು ಕೃಷ್ಣಪ್ಪ ನಾಯ್ಕರ್‌ ಎಂಬವರಿಂದ ಸಿದ್ದಾಪುರದಲ್ಲಿ ಪ್ರಕರಣ ದಾಖಲಿಸಿದ್ದಾರೆ. ಐಟಿ ಆಕ್ಟ್‌ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ವಿಚಾರಣೆಗೆ ಹಾಜರಾಗಿ ಸ್ಪಷ್ಟನೆಯನ್ನು ನೀಡಿರುವ ಶಿವರಾಜ್‌ ಅವರಿಗೆ ಈಗ ಜಾಮೀನು ಕೂಡ ದೊರೆತಿದೆ. ಏಪ್ರಿಲ್‌ 29ರಂದು ಮಾಡಲಾಗಿದ್ದ ಪೋಸ್ಟ್‌ಗೆ ಏಪ್ರಿಲ್‌ 30ರಂದು ಪ್ರಕರಣ ದಾಖಲಿಸಲಾಗಿತ್ತು. ದಲಿತ ಸಂಘಟನೆಗಳು ಹಾಜರಿದ್ದು ಶಿವರಾಜ್‌ ಅವರಿಗೆ ಧೈರ್ಯ ತುಂಬಿವೆ.

ಸಂವಿಧಾನದ ಕುರಿತು ಆಗಾಗ್ಗೆ ವಿವಾದಾತ್ಮಕವಾಗಿ ಹೇಳಿಕೆ ನೀಡುತ್ತಿರುವ ಪ್ರಕರಣಗಳು ಆಗಾಗ್ಗೆ ಘಟಿಸುತ್ತಿವೆ. ಸಂವಿಧಾನ ಬದಲಿಸಲೆಂದೇ ನಾವು ಅಧಿಕಾರಕ್ಕೆ ಬಂದಿದ್ದೇವೆ ಎಂದು ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತಕುಮಾರ್‌ ಹೆಗಡೆ ಹೇಳಿಕೆ ನೀಡಿದ್ದರು. ಸಂವಿಧಾನದ ಅವಧಿ ಮುಗಿದಿದೆಯೇ ಎಂಬ ಚರ್ಚಾ ಸ್ಪರ್ಧೆಯನ್ನು ಬೆಂಗಳೂರಿನ ಶಾಲೆಯಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು. ಈಗ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿಕೆ ನೀಡಿರುವುದು ವರದಿಯಾಗಿದೆ. (ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿರುವ ವರದಿಯ ಪ್ರತಿ ಯಾವ ಪತ್ರಿಕೆಯಲ್ಲಿ ಪ್ರಕಟವಾಗಿದೆ ಎಂದು ‘ನಾನುಗೌರಿ.ಕಾಂ’ ಸ್ವತಂತ್ರವಾಗಿ ಪರಿಶೀಲಿಸಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...