Homeದಲಿತ್ ಫೈಲ್ಸ್ಸಿದ್ದಾಪುರ: ಸಂವಿಧಾನಕ್ಕಿಂತ ವೇದಗಳೇ ಶ್ರೇಷ್ಠ ಎಂದ ಸ್ವಾಮೀಜಿಯನ್ನು ಟೀಕಿಸಿದ್ದಕ್ಕೆ ಎಫ್‌ಐಆರ್‌!

ಸಿದ್ದಾಪುರ: ಸಂವಿಧಾನಕ್ಕಿಂತ ವೇದಗಳೇ ಶ್ರೇಷ್ಠ ಎಂದ ಸ್ವಾಮೀಜಿಯನ್ನು ಟೀಕಿಸಿದ್ದಕ್ಕೆ ಎಫ್‌ಐಆರ್‌!

- Advertisement -
- Advertisement -

“ಸಂವಿಧಾನಕ್ಕಿಂತ ವೇದಗಳೇ ಹೆಚ್ಚು ಶ್ರೇಷ್ಠ. ಸಂವಿಧಾನವನ್ನು ತಿದ್ದುಪಡಿ ಮಾಡಬಹುದು. ಆದರೆ ವೇದಗಳನ್ನು ತಿದ್ದಲು ಅಥವಾ ಬದಲಾಯಿಸಲು ಸಾಧ್ಯವಿಲ್ಲ” ಎಂದು ಹೇಳಿಕೆ ನೀಡಿರುವ ಉಜಿರೆಯ ಶ್ರೀರಾಮಕ್ಷೇತ್ರದ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರು ನೀಡಿದ ಹೇಳಿಕೆಯನ್ನು ವಿರೋಧಿಸಿದ ವ್ಯಕ್ತಿಯ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

‘ಭಾರತ ಭಾಗ್ಯವಿಧಾತ ಅಂಬೇಡ್ಕರ್‌’ ಫೇಸ್‌‌ಬುಕ್‌ ಪೇಜ್‌ನ ಅಡ್ಮಿನ್‌ ಬಾಗಲಕೋಟೆ ಮೂಲದ ಶಿವರಾಜ್‌ ಎಂಬವರ ವಿರುದ್ಧ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಶಿವರಾಜ್‌ ಅವರಿಗೆ ಜಾಮೀನು ದೊರೆತಿದೆ.

ಸ್ವಾಮೀಜಿಯವರನ್ನು ಶಿವರಾಜ್‌ ಅವ್ಯಾಚ್ಯ ಪದಗಳಿಂದ ನಿಂದಿಸಿದ್ದಾರೆಂದು ಆರೋಪಿಸಲಾಗಿದೆ. ಸಿದ್ದಾಪುರ ತಾಲ್ಲೂಕಿನ ಹರಕನಹಳ್ಳಿಯಲ್ಲಿ ನಡೆದ ಧರ್ಮಸಭೆಯಲ್ಲಿ ಮಾತನಾಡಿದ್ದ ಸ್ವಾಮೀಜಿ, “ಸಂವಿಧಾನಕ್ಕಿಂತ ವೇದಗಳೇ ಶ್ರೇಷ್ಠ” ಎಂದು ಹೇಳಿರುವುದು ಪತ್ರಿಕೆಯೊಂದರಲ್ಲಿ ಮುದ್ರಣವಾಗಿದೆ. ಪತ್ರಿಕೆಯಲ್ಲಿ ಪ್ರಕಟವಾಗಿರುವ ಹೇಳಿಕೆಗೆ ಪ್ರತಿಯಾಗಿ ಮತ್ತೊಂದು ಕೌಂಟರ್‌ ಹೇಳಿಕೆಯನ್ನು ಎಡಿಟ್ ಮಾಡಿದ ಫೋಟೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಭಾರತ ಭಾಗ್ಯವಿಧಾತ ಫೇಸ್‌ಬುಕ್‌ ಪೇಜ್‌ನಲ್ಲಿ ಎಡಿಟ್‌‌ ಮಾಡಲಾದ ಫೋಟೋ ಬಳಸಲಾಗಿದ್ದು, “ಸ್ವಾಮೀಜಿ ಹೆಸರನ್ನು ಕೆಟ್ಟದ್ದಾಗಿ ಬರೆಯಲಾಗಿದೆ” ಎಂದು ಆರೋಪಿಸಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಕೃಷ್ಣಪ್ಪ ನಾಯ್ಕರ್‌ ಎಂಬವರು ದೂರು ನೀಡಿದ್ದರು. ಅದನ್ನು ಆಧರಿಸಿ ಪ್ರಕರಣ ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಭಾರತ ಭಾಗ್ಯವಿಧಾತ ಫೇಸ್‌ಬುಕ್‌ ಪೇಜ್‌ನ ಅಡ್ಮಿನ್‌ ಶಿವರಾಜ್‌, ‘ಖಡ್ಗ’ ಎಂಬ ಫೇಸ್‌‌ಬುಕ್‌ ಖಾತೆಯಲ್ಲಿ ಈ ಫೋಟೋ ಸಿಕ್ಕಿತು. ಅದನ್ನು ಡೌನ್‌ಲೋಡ್‌ ಮಾಡಿಕೊಂಡು ಪೇಜ್‌ನಲ್ಲಿ ಅಪ್‌ಲೋಡ್ ಮಾಡಿ, ನನ್ನದೇ ಆದ ಅಭಿಪ್ರಾಯವನ್ನು ಬರೆದಿದ್ದೆ. ಸಂವಿಧಾನಕ್ಕಿಂತ ವೇದವೇ ಶ್ರೇಷ್ಠ ಎಂದು ಹೇಳಿಕೆ ನೀಡಿರುವ ಸ್ವಾಮೀಜಿ ಕುರಿತ ವರದಿಯನ್ನು ಉಲ್ಲೇಖಿಸಲು ಈ ಫೋಟೋವನ್ನು ಬಳಸಿದ್ದೇನೆಯೇ ಹೊರತು, ‘ಅನ್ನಕ್ಕಿಂತ ಸಗಣಿಯೇ ಶ್ರೇಷ್ಠ’ ಎಂಬ ಶೀರ್ಷಿಕೆಯಲ್ಲಿರುವ ಹೇಳಿಕೆ ನನ್ನದ್ದಲ್ಲ” ಎಂದು ಸ್ಪಷ್ಟಪಡಿಸಿದರು.

“ಸ್ವಾಮಿ ನಿಮ್ಮ ವೇದ ಉಪನಿಷತ್‌‌ಗಳಿಂದ ಎಲ್ಲರನ್ನು ಒಂದೇ ರೀತಿ ನೋಡೋಕೆ ಹೇಳಿ. ಜಾತಿ ಜಾತಿ ಅಂತ ಸಾಯೋವರೆಗೆ ಎಲ್ಲರನ್ನು ಸಮನಾಗಿ ನೋಡೋಕೆ ಹೇಳಿ. ಮೊದಲು ನೀವು ಯಾವಾಗಲಾದ್ರೂ ಎಲ್ಲರನ್ನು ಸಮಾನರಾಗಿ ನೋಡಿದ್ದೀರಾ? ಅದು ನಿಮ್ಮಿಂದ ಸಾಧ್ಯ ಇಲ್ಲ. ಎಲ್ಲಾ ಗ್ರಂಥಗಳಿಗೆ ಶ್ರೇಷ್ಠ ವಾದದ್ದು ನಮ್ಮ ಸಂವಿಧಾನ, ಸಂವಿಧಾನದ ಬಗ್ಗೆ ಮಾತೋಡೋಕೆ ಒಂದು ಯೋಗ್ಯತೆ ಬೇಕು ಅದು ತಿಳಿದವರಿಗೆ ಮಾತ್ರ ಗೊತ್ತು” ಎಂಬ ಅಭಿಪ್ರಾಯವನ್ನು ಶಿವರಾಜ್‌ ‘#ಭಾರತ_ಭಾಗ್ಯವಿದಾತ_ಅಂಬೇಡ್ಕರ್’ ಹ್ಯಾಷ್‌ಟ್ಯಾಗ್‌ನಲ್ಲಿ ಬರೆದಿದ್ದಾರೆ.

“ಪೊಲೀಸ್‌ನವರು ನನ್ನ ಹೇಳಿಕೆಯನ್ನು ದಾಖಲಿಸಿದ್ದಾರೆ. ‘ಖಡ್ಗ’ ಎಂಬ ನಕಲಿ ಖಾತೆಯನ್ನು ಪರಿಶೀಲಿಸುವುದಾಗಿ ತಿಳಿಸಿದ್ದಾರೆ. ಎಂ.ಜೆ. ಎಂಬ ಲೋಗೋ ಅಡಿಯಲ್ಲಿ ಹಲವಾರು ಪೋಸ್ಟರ್‌ಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ನಾನು ಬಳಸಿರುವ ಫೋಟೋದಲ್ಲಿಯೂ ಕೂಡ ಎಂ.ಜೆ. ಲೋಗೋ ಇರುವುದನ್ನು ಗಮನಿಸಬಹುದು” ಎನ್ನುತ್ತಾರೆ ಶಿವರಾಜ್‌‌

ಪೋಸ್ಟ್‌ ಗಮನಿಸಿದ ಕೆಲವು ಮುಖಂಡರು ಕೃಷ್ಣಪ್ಪ ನಾಯ್ಕರ್‌ ಎಂಬವರಿಂದ ಸಿದ್ದಾಪುರದಲ್ಲಿ ಪ್ರಕರಣ ದಾಖಲಿಸಿದ್ದಾರೆ. ಐಟಿ ಆಕ್ಟ್‌ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ವಿಚಾರಣೆಗೆ ಹಾಜರಾಗಿ ಸ್ಪಷ್ಟನೆಯನ್ನು ನೀಡಿರುವ ಶಿವರಾಜ್‌ ಅವರಿಗೆ ಈಗ ಜಾಮೀನು ಕೂಡ ದೊರೆತಿದೆ. ಏಪ್ರಿಲ್‌ 29ರಂದು ಮಾಡಲಾಗಿದ್ದ ಪೋಸ್ಟ್‌ಗೆ ಏಪ್ರಿಲ್‌ 30ರಂದು ಪ್ರಕರಣ ದಾಖಲಿಸಲಾಗಿತ್ತು. ದಲಿತ ಸಂಘಟನೆಗಳು ಹಾಜರಿದ್ದು ಶಿವರಾಜ್‌ ಅವರಿಗೆ ಧೈರ್ಯ ತುಂಬಿವೆ.

ಸಂವಿಧಾನದ ಕುರಿತು ಆಗಾಗ್ಗೆ ವಿವಾದಾತ್ಮಕವಾಗಿ ಹೇಳಿಕೆ ನೀಡುತ್ತಿರುವ ಪ್ರಕರಣಗಳು ಆಗಾಗ್ಗೆ ಘಟಿಸುತ್ತಿವೆ. ಸಂವಿಧಾನ ಬದಲಿಸಲೆಂದೇ ನಾವು ಅಧಿಕಾರಕ್ಕೆ ಬಂದಿದ್ದೇವೆ ಎಂದು ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತಕುಮಾರ್‌ ಹೆಗಡೆ ಹೇಳಿಕೆ ನೀಡಿದ್ದರು. ಸಂವಿಧಾನದ ಅವಧಿ ಮುಗಿದಿದೆಯೇ ಎಂಬ ಚರ್ಚಾ ಸ್ಪರ್ಧೆಯನ್ನು ಬೆಂಗಳೂರಿನ ಶಾಲೆಯಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು. ಈಗ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿಕೆ ನೀಡಿರುವುದು ವರದಿಯಾಗಿದೆ. (ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿರುವ ವರದಿಯ ಪ್ರತಿ ಯಾವ ಪತ್ರಿಕೆಯಲ್ಲಿ ಪ್ರಕಟವಾಗಿದೆ ಎಂದು ‘ನಾನುಗೌರಿ.ಕಾಂ’ ಸ್ವತಂತ್ರವಾಗಿ ಪರಿಶೀಲಿಸಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...