Homeಕರ್ನಾಟಕಸಿದ್ದು ರಾಜೀನಾಮೆ ಕೈಕಮಾಂಡ್ ಮುಂದಿನ ನಡೆ ಏನು?

ಸಿದ್ದು ರಾಜೀನಾಮೆ ಕೈಕಮಾಂಡ್ ಮುಂದಿನ ನಡೆ ಏನು?

- Advertisement -
- Advertisement -

ರಾಜ್ಯ ರಾಜಕಾರಣದಲ್ಲಿ ದಿನದಿಂದ ದಿನಕ್ಕೆ ಕಾಂಗ್ರೆಸ್ ನೆಲ ಕಚ್ಚುತ್ತಿದೆ. 2013ರಲ್ಲಿ ರಾಜ್ಯದಲ್ಲಿ ಬಹುಮತದ ಸರ್ಕಾರ ರಚಿಸಿದ್ದ ಕಾಂಗ್ರೆಸ್‍ಗೂ, ದಿವಂಗತ ದೇವರಾಜು ಅರಸು ನಂತರ 5 ವರ್ಷ ಸುಭದ್ರ ಸರ್ಕಾರ ನೀಡಿದ ಖ್ಯಾತಿಗೆ ಒಳಗಾಗಿದ್ದ ಸಿದ್ದರಾಮಯ್ಯನವರಿಗೂ 2018ರ ವಿಧಾನಸಭೆ ದೊಡ್ಡ ಹೊಡೆತ ಕೊಟ್ಟಿತ್ತು. ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲೇ ಚುನಾವಣೆ ಎದುರಿಸಿದ್ದ ಕಾಂಗ್ರೆಸ್ 122 ಸ್ಥಾನದಿಂದ ಕೇವಲ 88 ಸ್ಥಾನಕ್ಕೆ ಕುಸಿದಿತ್ತು. ಆದರೂ ಪಕ್ಷದಲ್ಲಿ ರಾಜೀನಾಮೆ ಪರ್ವ ಆರಂಭವಾಗಿರಲಿಲ್ಲ.

ಇನ್ನು 2019ರ ಲೋಕಸಭಾ ಚುನಾವಣೆಯಂತೂ ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಹೇಳಹೆಸರಿಲ್ಲದಂತೆ ಮಾಡಿತ್ತು. 2014ರಲ್ಲಿ ದೇಶಾದ್ಯಂತ ವ್ಯಾಪಿಸಿದ್ದ ನರೇಂದ್ರ ಮೋದಿ ಅಲೆಯ ನಡುವೆಯೂ ರಾಜ್ಯದಲ್ಲಿ 9 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದ ಕಾಂಗ್ರೆಸ್, ಜೆಡಿಎಸ್ ಜೊತೆಗೆ ಮೈತ್ರಿ ಸಾಧಿಸಿಕೊಂಡು ಚುನಾವಣೆ ಎದುರಿಸಿದ್ದಾಗ್ಯೂ ಕೇವಲ 1 ಸ್ಥಾನಕ್ಕೆ ಮಾತ್ರ ತೃಪ್ತಿಪಡಬೇಕಾಗಿ ಬಂದದ್ದು ವಿಪರ್ಯಾಸ. ಆಗಲೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಗಲಿ, ಸಿಎಲ್‍ಪಿ ನಾಯಕ ಸಿದ್ದರಾಮಯ್ಯನವರಾಗಲಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿರಲಿಲ್ಲ. ಆದರೆ, ಈ ಒಂದು ಉಪಚುನಾವಣೆ ಕೈ ಪಕ್ಷದಲ್ಲಿ ದೊಡ್ಡ ತಲ್ಲಣಕ್ಕೆ ಕಾರಣವಾಗಿದೆ.

ಈಗಾಗಲೇ ಎರಡು ಪ್ರಮುಖ ವಿಕೆಟ್‍ಗಳನ್ನು ಬೀಳಿಸಿರುವ ಉಪಚುನಾವಣೆ, ಕನಿಷ್ಟ ಇನ್ನೂ ಎರಡು ವಿಕೆಟ್‍ಗಳನ್ನು ಬೀಳಿಸುವ ಸಾಧ್ಯತೆಯನ್ನೂ ತೆರೆದಿಟ್ಟಿದೆ.

ಉಪಚುನಾವಣೆಯ ಹೊಣೆಹೊತ್ತು ಸಾಲುಸಾಲು ನಾಯಕರು ರಾಜೀನಾಮೆ ನೀಡುತ್ತಿದ್ದಾರೆ. ಸೋಮವಾರ ಫಲಿತಾಂಶ ಹೊರಬೀಳುತ್ತಿದ್ದಂತೆ ಸಂಜೆ ವೇಳೆಗೆ ಪತ್ರಿಕಾಗೋಷ್ಠಿ ಕರೆದಿದ್ದ ಸಿದ್ದರಾಮಯ್ಯ ತಾವು ವಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೂ ಕಳುಹಿಸಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಈ ವೇಳೆ ಆಪ್ತರೊಂದಿಗೆ ರಾಜೀನಾಮೆಯ ಕಾರಣ ಬಿಚ್ಚಿಟ್ಟಿರುವ ಸಿದ್ದರಾಮಯ್ಯ, “ನಾನು ಬಿಜೆಪಿಯ ಎದುರು ಸೆಣಸಬಲ್ಲೆ. ಆದರೆ, ಕತ್ತಲಿನಲ್ಲಿ ನಿಂತು ಬಾಣ ಬಿಡುವ ಸ್ವಪಕ್ಷದ ಹಿತಶತ್ರುಗಳ ವಿರುದ್ಧ ಹೋರಾಡಲಾರೆ” ಎಂದು ಹೇಳಿರುವುದು ಕೈ ಪಕ್ಷದೊಳಗಿರುವ ಭಿನ್ನಮತಕ್ಕೆ ಸಾಕ್ಷಿಯಾಗಿದೆ.

ಇನ್ನೂ ಸಿದ್ದರಾಮಯ್ಯ ಬೆನ್ನಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಹ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರನಡೆದಿದ್ದಾರೆ. ಇವರಲ್ಲದೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮತ್ತು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಸಹ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸೂಚನೆ ನೀಡಿದ್ದಾರೆ. ದಿಢೀರ್ ಬೆಳವಣಿಗೆಯಲ್ಲಿ ಈ ಇಬ್ಬರೂ ನಾಯಕರೂ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದರೆ ಅಚ್ಚರಿಯಿಲ್ಲ.

ಅಲ್ಲಿಗೆ ವಿಧಾನಸಭೆ-ಲೋಕಸಭೆ ಚುನಾವಣಾ ಸೋಲಿಗೆ ಕುಗ್ಗದ ಕಾಂಗ್ರೆಸ್ ಘಟಾನುಘಟಿ ನಾಯಕರನ್ನು 15 ಕ್ಷೇತ್ರದ ಉಪಚುನಾವಣೆ ಹುರಿದು ಮುಕ್ಕಿದಂತಾಗಿದೆ. ಈಗಾಗಲೇ ಎರಡು ಪ್ರಮುಖ ವಿಕೆಟ್‍ಗಳನ್ನು ಬೀಳಿಸಿರುವ ಉಪ ಚುನಾವಣೆ, ಕನಿಷ್ಟ ಇನ್ನೂ ಎರಡು ವಿಕೆಟ್‍ಗಳನ್ನು ಬೀಳಿಸುವ ಸಾಧ್ಯತೆಯನ್ನೂ ತೆರೆದಿಟ್ಟಿದೆ. ಸಿದ್ದರಾಮಯ್ಯ ಅವರ ಈ ನಿರ್ಧಾರ ಸಾಮಾನ್ಯವಾಗಿ ರಾಜ್ಯ ಕಾಂಗ್ರೆಸ್‍ನಲ್ಲಿ ನಾಯಕತ್ವ ನಿರ್ವಾತ ಸ್ಥಿತಿಗೆ ಕಾರಣವಾಗಿದ್ದು, ಹೈಕಮಾಂಡ್ ಅನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸಿರುವುದು ಸುಳ್ಳಲ್ಲ.

ಕಾಂಗ್ರೆಸ್ ಹೈಕಮಾಂಡ್ ಮುಂದಿನ ನಡೆ ಏನು?

ಸತತ ಎಲ್ಲಾ ಚುನಾವಣೆಯಲ್ಲೂ ಸೋಲನುಭವಿಸಿದರೂ ಸಹ ಕಾಂಗ್ರೆಸ್ ಪಾಲಿಗೆ ಸಿದ್ದರಾಮಯ್ಯ ಈಗಲೂ ವರ್ಚಸ್ವಿ ನಾಯಕ ಎಂಬುದರಲ್ಲಿ ಎರಡು ಮಾತಿಲ್ಲ. ಸತತ 5 ವರ್ಷ ಸಿಎಂ ಹುದ್ದೆಯನ್ನು ಸಮರ್ಥವಾಗಿ ನಿಭಾಯಿಸಿದ್ದ ಸಿದ್ದರಾಮಯ್ಯ, ವಿಪಕ್ಷ ನಾಯಕನ ಸ್ಥಾನವನ್ನೂ ಅಷ್ಟೇ ಸಮರ್ಥವಾಗಿ ನಿಭಾಯಿಸಿದ್ದಾರೆ. ಅಲ್ಲದೆ, ಆಡಳಿತಾರೂಢ ಪಕ್ಷವನ್ನು ಕಟು ಟೀಕೆಗೆ ಗುರಿಪಡಿಸುವ ಮೂಲಕ ಇಕ್ಕಟ್ಟಿಗೆ ಸಿಲುಕಿಸಬಲ್ಲ ಸಾಮಥ್ರ್ಯವಿರುವ ನಾಯಕ ಎಂಬ ಹೆಗ್ಗಳಿಕೆಯೂ ಸಿದ್ದರಾಮಯ್ಯ ಬೆನ್ನಿಗಿದೆ.

ಮುಂದಿನ ಮೂರೂ ವರ್ಷವೂ ಸಿದ್ದರಾಮಯ್ಯ ವಿಪಕ್ಷ ನಾಯಕನ ಸ್ಥಾನದಲ್ಲೇ ಮುಂದುವರೆದರೆ ಆಡಳಿತ ಪಕ್ಷದ ಎಲ್ಲಾ ವೈಫಲ್ಯವನ್ನು ಜನರ ಮುಂದೆ ಬಿಚ್ಚಿಡುತ್ತಾರೆ ಎಂಬ ಭಯ ಸ್ವತಃ ಬಿಜೆಪಿ ಪಾಳಯದಲ್ಲೂ ಇರುವುದು ಸುಳ್ಳಲ್ಲ. ಅಕಸ್ಮಾತ್ ಸಿದ್ದರಾಮಯ್ಯ ಅವರ ರಾಜೀನಾಮೆಯನ್ನು ಕಾಂಗ್ರೆಸ್ ಹೈಕಮಾಂಡ್ ಅಂಗೀಕಾರ ಮಾಡಿದರೆ ರಾಜ್ಯ ರಾಜಕಾರಣದಲ್ಲಿ ಸಿದ್ದರಾಮಯ್ಯ ಸೈಲೆಂಟ್ ಆಗಿಬಿಡುತ್ತಾರೆ. ಈ ಬೆಳವಣಿಗೆ ಬಿಜೆಪಿ ಪಕ್ಷಕ್ಕೆ ಲಾಭವಾಗಿ ಪರಿಣಮಿಸುವ ಸಾಧ್ಯತೆ ಇದೆ. ಹೀಗಾಗಿ ಸಿದ್ದರಾಮಯ್ಯ ವಿಪಕ್ಷ ನಾಯಕನ ಸ್ಥಾನದಲ್ಲೇ ಮುಂದುವರೆದರೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕಾಗಬಹುದಾದ ಲಾಭದ ಕುರಿತ ಮಾಹಿತಿ ಕಾಂಗ್ರೆಸ್ ರಾಷ್ಟ್ರ ನಾಯಕರಿಗೂ ತಿಳಿದಿದೆ. ಅಲ್ಲದೆ, ಪ್ರಸ್ತುತ ಸಿದ್ದರಾಮಯ್ಯ ಅವರ ಸ್ಥಾನವನ್ನು ತುಂಬಬಲ್ಲ ಮತ್ತೋರ್ವ ನಾಯಕನ ಹುಡುಕಾಟ ಮಾಡುತ್ತಾ ಕೂತರೆ ಮತ್ತಷ್ಟು ಭಿನ್ನಮತ ಹೆಚ್ಚಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ..

ಹೀಗಾಗಿ ಕಾಂಗ್ರೆಸ್ ಹೈಕಮಾಂಡ್‍ಗೆ ಸಿದ್ದರಾಮಯ್ಯ ಅವರನ್ನು ರಾಜ್ಯ ರಾಜಕೀಯದಲ್ಲಿ ಉಳಿಸಿಕೊಳ್ಳದೆ ಬೇರೆ ವಿಧಿಯಿಲ್ಲ. ಇದೇ ಕಾರಣಕ್ಕೆ ಉಪಚುನಾವಣಾ ಫಲಿತಾಂಶದ ಕಾವು ತಣ್ಣಗಾದ ನಂತರ ಸಿದ್ದರಾಮಯ್ಯ ಅವರನ್ನು ಹೈಕಮಾಂಡ್ ಮುಂದುವರೆಸುತ್ತದೆ ಅನ್ನುತ್ತವೆ ರಾಜಕೀಯ ವಠಾರಗಳು. ಇಲ್ಲದೆ ಹೋದರೆ ಎಂ ಬಿ ಪಾಟೀಲ್, ಎಚ್ ಕೆ ಪಾಟೀಲ್ ಇಲ್ಲವೇ ಕೃಷ್ಣ ಭೈರೆಗೌಡರಿಗೆ ಲಾಟರಿ ಹೊಡೆಯಬಹುದು….

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ನೇಮಕ ಸಾಧ್ಯತೆ?

ಕರ್ನಾಟಕ ಪ್ರದೇಶ ಕಾಂಗ್ರೆಸ್‍ಗೆ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ನೇಮಕವಾದ ದಿನದಿಂದ ಒಂದಲ್ಲಾ ಒಂದು ಅಪಸ್ವರ, ಭಿನ್ನಮತ ಕೇಳಿಬರುತ್ತಲೇ ಇವೆ. ಮತ್ತೊಂದೆಡೆ ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿ ಸರಿಸುಮಾರು ಒಂದು ತಿಂಗಳು ದೆಹಲಿಯ ತಿಹಾರ್ ಜೈಲಿನಲ್ಲಿ ಕಳೆದುಬಂದ ಕಾಂಗ್ರೆಸ್ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಗ್ರಾಫ್ ಕಾಂಗ್ರೆಸ್‍ನಲ್ಲಿ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಈ ನಡುವೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡುವುದಕ್ಕೂ, ಆ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ಹೆಸರು ಕೇಳಿಬರುತ್ತಿರುವುದಕ್ಕೂ ಸರಿಯಾಗಿದೆ.

ಕಾಂಗ್ರೆಸ್ ಪಕ್ಷದ ವರ್ಚಸ್ವಿ ನಾಯಕರ ಪೈಕಿ ಡಿ.ಕೆ. ಶಿವಕುಮಾರ್ ಮುಂಚೂಣಿ ನಾಯಕ. ಯಾವುದೇ ಸಂದರ್ಭದಲ್ಲಿ ಪಕ್ಷಕ್ಕೆ ಎದುರಾಗಬಲ್ಲ ಸಮಸ್ಯೆಯನ್ನು ನೀಗಿಸಬಲ್ಲ ಸಾಮಥ್ರ್ಯವಿರುವ ನಾಯಕ. ಇದೇ ಕಾರಣಕ್ಕೆ ಅವರನ್ನು ಕಾಂಗ್ರೆಸ್ ಟ್ರಬಲ್ ಶೂಟರ್ ಎಂದು ಕರೆಯಲಾಗುತ್ತದೆ. ಆದರೆ, ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯದಲ್ಲಿ ಕೆಲವಾರು ಪ್ರಕರಣಗಳು ಇದ್ದ ಕಾರಣಕ್ಕೆ ಅವರಿಗೆ ಪಕ್ಷದಲ್ಲಿ ಈವರೆಗೆ ಉನ್ನತ ಸ್ಥಾನಮಾನಗಳನ್ನು ನೀಡಲಾಗಿರಲಿಲ್ಲ.

ಆದರೆ, ಪ್ರಸ್ತುತ ರಾಜ್ಯ ರಾಜಕೀಯದಲ್ಲಿ ಕಾಂಗ್ರೆಸ್ ಪಾತಾಳಕ್ಕೆ ಕುಸಿದಿದ್ದು ಪಕ್ಷವನ್ನು ಮತ್ತೆ ಮೇಲೆತ್ತಲು ಡಿ.ಕೆ. ಶಿವಕುಮಾರ್ ಅವರಂತಹ ನಾಯಕತ್ವದ ಅಗತ್ಯವಿದೆ. ಹೀಗಾಗಿ ಶೀಘ್ರದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಹೈಕಮಾಂಡ್ ಡಿ.ಕೆ. ಶಿವಕುಮಾರ್ ಅವರನ್ನು ನೇಮಕ ಮಾಡಿದರೂ ಅಚ್ಚರಿ ಇಲ್ಲ. ಇಲ್ಲದೇ ಹೋದರೆ ಚುನಾವಣೆ ಹತ್ತಿರ ಬರುವವರೆಗು ಶಾಂತಿ ಸಮಯದ ನಾಯಕ ಸ್ಥಾನ ಮುನಿಯಪ್ಪ, ಪಾಟೀಲ್ ಇಲ್ಲವೇ ಸತೀಶ್ ಜಾರಕಿಹೊಳಿ ಪಾಲಾದರು ಅಚ್ಚರಿ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...