Homeಕರ್ನಾಟಕಸಿದ್ದು ರಾಜೀನಾಮೆ ಕೈಕಮಾಂಡ್ ಮುಂದಿನ ನಡೆ ಏನು?

ಸಿದ್ದು ರಾಜೀನಾಮೆ ಕೈಕಮಾಂಡ್ ಮುಂದಿನ ನಡೆ ಏನು?

- Advertisement -
- Advertisement -

ರಾಜ್ಯ ರಾಜಕಾರಣದಲ್ಲಿ ದಿನದಿಂದ ದಿನಕ್ಕೆ ಕಾಂಗ್ರೆಸ್ ನೆಲ ಕಚ್ಚುತ್ತಿದೆ. 2013ರಲ್ಲಿ ರಾಜ್ಯದಲ್ಲಿ ಬಹುಮತದ ಸರ್ಕಾರ ರಚಿಸಿದ್ದ ಕಾಂಗ್ರೆಸ್‍ಗೂ, ದಿವಂಗತ ದೇವರಾಜು ಅರಸು ನಂತರ 5 ವರ್ಷ ಸುಭದ್ರ ಸರ್ಕಾರ ನೀಡಿದ ಖ್ಯಾತಿಗೆ ಒಳಗಾಗಿದ್ದ ಸಿದ್ದರಾಮಯ್ಯನವರಿಗೂ 2018ರ ವಿಧಾನಸಭೆ ದೊಡ್ಡ ಹೊಡೆತ ಕೊಟ್ಟಿತ್ತು. ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲೇ ಚುನಾವಣೆ ಎದುರಿಸಿದ್ದ ಕಾಂಗ್ರೆಸ್ 122 ಸ್ಥಾನದಿಂದ ಕೇವಲ 88 ಸ್ಥಾನಕ್ಕೆ ಕುಸಿದಿತ್ತು. ಆದರೂ ಪಕ್ಷದಲ್ಲಿ ರಾಜೀನಾಮೆ ಪರ್ವ ಆರಂಭವಾಗಿರಲಿಲ್ಲ.

ಇನ್ನು 2019ರ ಲೋಕಸಭಾ ಚುನಾವಣೆಯಂತೂ ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಹೇಳಹೆಸರಿಲ್ಲದಂತೆ ಮಾಡಿತ್ತು. 2014ರಲ್ಲಿ ದೇಶಾದ್ಯಂತ ವ್ಯಾಪಿಸಿದ್ದ ನರೇಂದ್ರ ಮೋದಿ ಅಲೆಯ ನಡುವೆಯೂ ರಾಜ್ಯದಲ್ಲಿ 9 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದ ಕಾಂಗ್ರೆಸ್, ಜೆಡಿಎಸ್ ಜೊತೆಗೆ ಮೈತ್ರಿ ಸಾಧಿಸಿಕೊಂಡು ಚುನಾವಣೆ ಎದುರಿಸಿದ್ದಾಗ್ಯೂ ಕೇವಲ 1 ಸ್ಥಾನಕ್ಕೆ ಮಾತ್ರ ತೃಪ್ತಿಪಡಬೇಕಾಗಿ ಬಂದದ್ದು ವಿಪರ್ಯಾಸ. ಆಗಲೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಗಲಿ, ಸಿಎಲ್‍ಪಿ ನಾಯಕ ಸಿದ್ದರಾಮಯ್ಯನವರಾಗಲಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿರಲಿಲ್ಲ. ಆದರೆ, ಈ ಒಂದು ಉಪಚುನಾವಣೆ ಕೈ ಪಕ್ಷದಲ್ಲಿ ದೊಡ್ಡ ತಲ್ಲಣಕ್ಕೆ ಕಾರಣವಾಗಿದೆ.

ಈಗಾಗಲೇ ಎರಡು ಪ್ರಮುಖ ವಿಕೆಟ್‍ಗಳನ್ನು ಬೀಳಿಸಿರುವ ಉಪಚುನಾವಣೆ, ಕನಿಷ್ಟ ಇನ್ನೂ ಎರಡು ವಿಕೆಟ್‍ಗಳನ್ನು ಬೀಳಿಸುವ ಸಾಧ್ಯತೆಯನ್ನೂ ತೆರೆದಿಟ್ಟಿದೆ.

ಉಪಚುನಾವಣೆಯ ಹೊಣೆಹೊತ್ತು ಸಾಲುಸಾಲು ನಾಯಕರು ರಾಜೀನಾಮೆ ನೀಡುತ್ತಿದ್ದಾರೆ. ಸೋಮವಾರ ಫಲಿತಾಂಶ ಹೊರಬೀಳುತ್ತಿದ್ದಂತೆ ಸಂಜೆ ವೇಳೆಗೆ ಪತ್ರಿಕಾಗೋಷ್ಠಿ ಕರೆದಿದ್ದ ಸಿದ್ದರಾಮಯ್ಯ ತಾವು ವಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೂ ಕಳುಹಿಸಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಈ ವೇಳೆ ಆಪ್ತರೊಂದಿಗೆ ರಾಜೀನಾಮೆಯ ಕಾರಣ ಬಿಚ್ಚಿಟ್ಟಿರುವ ಸಿದ್ದರಾಮಯ್ಯ, “ನಾನು ಬಿಜೆಪಿಯ ಎದುರು ಸೆಣಸಬಲ್ಲೆ. ಆದರೆ, ಕತ್ತಲಿನಲ್ಲಿ ನಿಂತು ಬಾಣ ಬಿಡುವ ಸ್ವಪಕ್ಷದ ಹಿತಶತ್ರುಗಳ ವಿರುದ್ಧ ಹೋರಾಡಲಾರೆ” ಎಂದು ಹೇಳಿರುವುದು ಕೈ ಪಕ್ಷದೊಳಗಿರುವ ಭಿನ್ನಮತಕ್ಕೆ ಸಾಕ್ಷಿಯಾಗಿದೆ.

ಇನ್ನೂ ಸಿದ್ದರಾಮಯ್ಯ ಬೆನ್ನಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಹ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರನಡೆದಿದ್ದಾರೆ. ಇವರಲ್ಲದೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮತ್ತು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಸಹ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸೂಚನೆ ನೀಡಿದ್ದಾರೆ. ದಿಢೀರ್ ಬೆಳವಣಿಗೆಯಲ್ಲಿ ಈ ಇಬ್ಬರೂ ನಾಯಕರೂ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದರೆ ಅಚ್ಚರಿಯಿಲ್ಲ.

ಅಲ್ಲಿಗೆ ವಿಧಾನಸಭೆ-ಲೋಕಸಭೆ ಚುನಾವಣಾ ಸೋಲಿಗೆ ಕುಗ್ಗದ ಕಾಂಗ್ರೆಸ್ ಘಟಾನುಘಟಿ ನಾಯಕರನ್ನು 15 ಕ್ಷೇತ್ರದ ಉಪಚುನಾವಣೆ ಹುರಿದು ಮುಕ್ಕಿದಂತಾಗಿದೆ. ಈಗಾಗಲೇ ಎರಡು ಪ್ರಮುಖ ವಿಕೆಟ್‍ಗಳನ್ನು ಬೀಳಿಸಿರುವ ಉಪ ಚುನಾವಣೆ, ಕನಿಷ್ಟ ಇನ್ನೂ ಎರಡು ವಿಕೆಟ್‍ಗಳನ್ನು ಬೀಳಿಸುವ ಸಾಧ್ಯತೆಯನ್ನೂ ತೆರೆದಿಟ್ಟಿದೆ. ಸಿದ್ದರಾಮಯ್ಯ ಅವರ ಈ ನಿರ್ಧಾರ ಸಾಮಾನ್ಯವಾಗಿ ರಾಜ್ಯ ಕಾಂಗ್ರೆಸ್‍ನಲ್ಲಿ ನಾಯಕತ್ವ ನಿರ್ವಾತ ಸ್ಥಿತಿಗೆ ಕಾರಣವಾಗಿದ್ದು, ಹೈಕಮಾಂಡ್ ಅನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸಿರುವುದು ಸುಳ್ಳಲ್ಲ.

ಕಾಂಗ್ರೆಸ್ ಹೈಕಮಾಂಡ್ ಮುಂದಿನ ನಡೆ ಏನು?

ಸತತ ಎಲ್ಲಾ ಚುನಾವಣೆಯಲ್ಲೂ ಸೋಲನುಭವಿಸಿದರೂ ಸಹ ಕಾಂಗ್ರೆಸ್ ಪಾಲಿಗೆ ಸಿದ್ದರಾಮಯ್ಯ ಈಗಲೂ ವರ್ಚಸ್ವಿ ನಾಯಕ ಎಂಬುದರಲ್ಲಿ ಎರಡು ಮಾತಿಲ್ಲ. ಸತತ 5 ವರ್ಷ ಸಿಎಂ ಹುದ್ದೆಯನ್ನು ಸಮರ್ಥವಾಗಿ ನಿಭಾಯಿಸಿದ್ದ ಸಿದ್ದರಾಮಯ್ಯ, ವಿಪಕ್ಷ ನಾಯಕನ ಸ್ಥಾನವನ್ನೂ ಅಷ್ಟೇ ಸಮರ್ಥವಾಗಿ ನಿಭಾಯಿಸಿದ್ದಾರೆ. ಅಲ್ಲದೆ, ಆಡಳಿತಾರೂಢ ಪಕ್ಷವನ್ನು ಕಟು ಟೀಕೆಗೆ ಗುರಿಪಡಿಸುವ ಮೂಲಕ ಇಕ್ಕಟ್ಟಿಗೆ ಸಿಲುಕಿಸಬಲ್ಲ ಸಾಮಥ್ರ್ಯವಿರುವ ನಾಯಕ ಎಂಬ ಹೆಗ್ಗಳಿಕೆಯೂ ಸಿದ್ದರಾಮಯ್ಯ ಬೆನ್ನಿಗಿದೆ.

ಮುಂದಿನ ಮೂರೂ ವರ್ಷವೂ ಸಿದ್ದರಾಮಯ್ಯ ವಿಪಕ್ಷ ನಾಯಕನ ಸ್ಥಾನದಲ್ಲೇ ಮುಂದುವರೆದರೆ ಆಡಳಿತ ಪಕ್ಷದ ಎಲ್ಲಾ ವೈಫಲ್ಯವನ್ನು ಜನರ ಮುಂದೆ ಬಿಚ್ಚಿಡುತ್ತಾರೆ ಎಂಬ ಭಯ ಸ್ವತಃ ಬಿಜೆಪಿ ಪಾಳಯದಲ್ಲೂ ಇರುವುದು ಸುಳ್ಳಲ್ಲ. ಅಕಸ್ಮಾತ್ ಸಿದ್ದರಾಮಯ್ಯ ಅವರ ರಾಜೀನಾಮೆಯನ್ನು ಕಾಂಗ್ರೆಸ್ ಹೈಕಮಾಂಡ್ ಅಂಗೀಕಾರ ಮಾಡಿದರೆ ರಾಜ್ಯ ರಾಜಕಾರಣದಲ್ಲಿ ಸಿದ್ದರಾಮಯ್ಯ ಸೈಲೆಂಟ್ ಆಗಿಬಿಡುತ್ತಾರೆ. ಈ ಬೆಳವಣಿಗೆ ಬಿಜೆಪಿ ಪಕ್ಷಕ್ಕೆ ಲಾಭವಾಗಿ ಪರಿಣಮಿಸುವ ಸಾಧ್ಯತೆ ಇದೆ. ಹೀಗಾಗಿ ಸಿದ್ದರಾಮಯ್ಯ ವಿಪಕ್ಷ ನಾಯಕನ ಸ್ಥಾನದಲ್ಲೇ ಮುಂದುವರೆದರೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕಾಗಬಹುದಾದ ಲಾಭದ ಕುರಿತ ಮಾಹಿತಿ ಕಾಂಗ್ರೆಸ್ ರಾಷ್ಟ್ರ ನಾಯಕರಿಗೂ ತಿಳಿದಿದೆ. ಅಲ್ಲದೆ, ಪ್ರಸ್ತುತ ಸಿದ್ದರಾಮಯ್ಯ ಅವರ ಸ್ಥಾನವನ್ನು ತುಂಬಬಲ್ಲ ಮತ್ತೋರ್ವ ನಾಯಕನ ಹುಡುಕಾಟ ಮಾಡುತ್ತಾ ಕೂತರೆ ಮತ್ತಷ್ಟು ಭಿನ್ನಮತ ಹೆಚ್ಚಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ..

ಹೀಗಾಗಿ ಕಾಂಗ್ರೆಸ್ ಹೈಕಮಾಂಡ್‍ಗೆ ಸಿದ್ದರಾಮಯ್ಯ ಅವರನ್ನು ರಾಜ್ಯ ರಾಜಕೀಯದಲ್ಲಿ ಉಳಿಸಿಕೊಳ್ಳದೆ ಬೇರೆ ವಿಧಿಯಿಲ್ಲ. ಇದೇ ಕಾರಣಕ್ಕೆ ಉಪಚುನಾವಣಾ ಫಲಿತಾಂಶದ ಕಾವು ತಣ್ಣಗಾದ ನಂತರ ಸಿದ್ದರಾಮಯ್ಯ ಅವರನ್ನು ಹೈಕಮಾಂಡ್ ಮುಂದುವರೆಸುತ್ತದೆ ಅನ್ನುತ್ತವೆ ರಾಜಕೀಯ ವಠಾರಗಳು. ಇಲ್ಲದೆ ಹೋದರೆ ಎಂ ಬಿ ಪಾಟೀಲ್, ಎಚ್ ಕೆ ಪಾಟೀಲ್ ಇಲ್ಲವೇ ಕೃಷ್ಣ ಭೈರೆಗೌಡರಿಗೆ ಲಾಟರಿ ಹೊಡೆಯಬಹುದು….

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ನೇಮಕ ಸಾಧ್ಯತೆ?

ಕರ್ನಾಟಕ ಪ್ರದೇಶ ಕಾಂಗ್ರೆಸ್‍ಗೆ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ನೇಮಕವಾದ ದಿನದಿಂದ ಒಂದಲ್ಲಾ ಒಂದು ಅಪಸ್ವರ, ಭಿನ್ನಮತ ಕೇಳಿಬರುತ್ತಲೇ ಇವೆ. ಮತ್ತೊಂದೆಡೆ ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿ ಸರಿಸುಮಾರು ಒಂದು ತಿಂಗಳು ದೆಹಲಿಯ ತಿಹಾರ್ ಜೈಲಿನಲ್ಲಿ ಕಳೆದುಬಂದ ಕಾಂಗ್ರೆಸ್ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಗ್ರಾಫ್ ಕಾಂಗ್ರೆಸ್‍ನಲ್ಲಿ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಈ ನಡುವೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡುವುದಕ್ಕೂ, ಆ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ಹೆಸರು ಕೇಳಿಬರುತ್ತಿರುವುದಕ್ಕೂ ಸರಿಯಾಗಿದೆ.

ಕಾಂಗ್ರೆಸ್ ಪಕ್ಷದ ವರ್ಚಸ್ವಿ ನಾಯಕರ ಪೈಕಿ ಡಿ.ಕೆ. ಶಿವಕುಮಾರ್ ಮುಂಚೂಣಿ ನಾಯಕ. ಯಾವುದೇ ಸಂದರ್ಭದಲ್ಲಿ ಪಕ್ಷಕ್ಕೆ ಎದುರಾಗಬಲ್ಲ ಸಮಸ್ಯೆಯನ್ನು ನೀಗಿಸಬಲ್ಲ ಸಾಮಥ್ರ್ಯವಿರುವ ನಾಯಕ. ಇದೇ ಕಾರಣಕ್ಕೆ ಅವರನ್ನು ಕಾಂಗ್ರೆಸ್ ಟ್ರಬಲ್ ಶೂಟರ್ ಎಂದು ಕರೆಯಲಾಗುತ್ತದೆ. ಆದರೆ, ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯದಲ್ಲಿ ಕೆಲವಾರು ಪ್ರಕರಣಗಳು ಇದ್ದ ಕಾರಣಕ್ಕೆ ಅವರಿಗೆ ಪಕ್ಷದಲ್ಲಿ ಈವರೆಗೆ ಉನ್ನತ ಸ್ಥಾನಮಾನಗಳನ್ನು ನೀಡಲಾಗಿರಲಿಲ್ಲ.

ಆದರೆ, ಪ್ರಸ್ತುತ ರಾಜ್ಯ ರಾಜಕೀಯದಲ್ಲಿ ಕಾಂಗ್ರೆಸ್ ಪಾತಾಳಕ್ಕೆ ಕುಸಿದಿದ್ದು ಪಕ್ಷವನ್ನು ಮತ್ತೆ ಮೇಲೆತ್ತಲು ಡಿ.ಕೆ. ಶಿವಕುಮಾರ್ ಅವರಂತಹ ನಾಯಕತ್ವದ ಅಗತ್ಯವಿದೆ. ಹೀಗಾಗಿ ಶೀಘ್ರದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಹೈಕಮಾಂಡ್ ಡಿ.ಕೆ. ಶಿವಕುಮಾರ್ ಅವರನ್ನು ನೇಮಕ ಮಾಡಿದರೂ ಅಚ್ಚರಿ ಇಲ್ಲ. ಇಲ್ಲದೇ ಹೋದರೆ ಚುನಾವಣೆ ಹತ್ತಿರ ಬರುವವರೆಗು ಶಾಂತಿ ಸಮಯದ ನಾಯಕ ಸ್ಥಾನ ಮುನಿಯಪ್ಪ, ಪಾಟೀಲ್ ಇಲ್ಲವೇ ಸತೀಶ್ ಜಾರಕಿಹೊಳಿ ಪಾಲಾದರು ಅಚ್ಚರಿ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...