Homeಕರ್ನಾಟಕಸಿದ್ದು ರಾಜೀನಾಮೆ ಕೈಕಮಾಂಡ್ ಮುಂದಿನ ನಡೆ ಏನು?

ಸಿದ್ದು ರಾಜೀನಾಮೆ ಕೈಕಮಾಂಡ್ ಮುಂದಿನ ನಡೆ ಏನು?

- Advertisement -
- Advertisement -

ರಾಜ್ಯ ರಾಜಕಾರಣದಲ್ಲಿ ದಿನದಿಂದ ದಿನಕ್ಕೆ ಕಾಂಗ್ರೆಸ್ ನೆಲ ಕಚ್ಚುತ್ತಿದೆ. 2013ರಲ್ಲಿ ರಾಜ್ಯದಲ್ಲಿ ಬಹುಮತದ ಸರ್ಕಾರ ರಚಿಸಿದ್ದ ಕಾಂಗ್ರೆಸ್‍ಗೂ, ದಿವಂಗತ ದೇವರಾಜು ಅರಸು ನಂತರ 5 ವರ್ಷ ಸುಭದ್ರ ಸರ್ಕಾರ ನೀಡಿದ ಖ್ಯಾತಿಗೆ ಒಳಗಾಗಿದ್ದ ಸಿದ್ದರಾಮಯ್ಯನವರಿಗೂ 2018ರ ವಿಧಾನಸಭೆ ದೊಡ್ಡ ಹೊಡೆತ ಕೊಟ್ಟಿತ್ತು. ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲೇ ಚುನಾವಣೆ ಎದುರಿಸಿದ್ದ ಕಾಂಗ್ರೆಸ್ 122 ಸ್ಥಾನದಿಂದ ಕೇವಲ 88 ಸ್ಥಾನಕ್ಕೆ ಕುಸಿದಿತ್ತು. ಆದರೂ ಪಕ್ಷದಲ್ಲಿ ರಾಜೀನಾಮೆ ಪರ್ವ ಆರಂಭವಾಗಿರಲಿಲ್ಲ.

ಇನ್ನು 2019ರ ಲೋಕಸಭಾ ಚುನಾವಣೆಯಂತೂ ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಹೇಳಹೆಸರಿಲ್ಲದಂತೆ ಮಾಡಿತ್ತು. 2014ರಲ್ಲಿ ದೇಶಾದ್ಯಂತ ವ್ಯಾಪಿಸಿದ್ದ ನರೇಂದ್ರ ಮೋದಿ ಅಲೆಯ ನಡುವೆಯೂ ರಾಜ್ಯದಲ್ಲಿ 9 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದ ಕಾಂಗ್ರೆಸ್, ಜೆಡಿಎಸ್ ಜೊತೆಗೆ ಮೈತ್ರಿ ಸಾಧಿಸಿಕೊಂಡು ಚುನಾವಣೆ ಎದುರಿಸಿದ್ದಾಗ್ಯೂ ಕೇವಲ 1 ಸ್ಥಾನಕ್ಕೆ ಮಾತ್ರ ತೃಪ್ತಿಪಡಬೇಕಾಗಿ ಬಂದದ್ದು ವಿಪರ್ಯಾಸ. ಆಗಲೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಗಲಿ, ಸಿಎಲ್‍ಪಿ ನಾಯಕ ಸಿದ್ದರಾಮಯ್ಯನವರಾಗಲಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿರಲಿಲ್ಲ. ಆದರೆ, ಈ ಒಂದು ಉಪಚುನಾವಣೆ ಕೈ ಪಕ್ಷದಲ್ಲಿ ದೊಡ್ಡ ತಲ್ಲಣಕ್ಕೆ ಕಾರಣವಾಗಿದೆ.

ಈಗಾಗಲೇ ಎರಡು ಪ್ರಮುಖ ವಿಕೆಟ್‍ಗಳನ್ನು ಬೀಳಿಸಿರುವ ಉಪಚುನಾವಣೆ, ಕನಿಷ್ಟ ಇನ್ನೂ ಎರಡು ವಿಕೆಟ್‍ಗಳನ್ನು ಬೀಳಿಸುವ ಸಾಧ್ಯತೆಯನ್ನೂ ತೆರೆದಿಟ್ಟಿದೆ.

ಉಪಚುನಾವಣೆಯ ಹೊಣೆಹೊತ್ತು ಸಾಲುಸಾಲು ನಾಯಕರು ರಾಜೀನಾಮೆ ನೀಡುತ್ತಿದ್ದಾರೆ. ಸೋಮವಾರ ಫಲಿತಾಂಶ ಹೊರಬೀಳುತ್ತಿದ್ದಂತೆ ಸಂಜೆ ವೇಳೆಗೆ ಪತ್ರಿಕಾಗೋಷ್ಠಿ ಕರೆದಿದ್ದ ಸಿದ್ದರಾಮಯ್ಯ ತಾವು ವಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೂ ಕಳುಹಿಸಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಈ ವೇಳೆ ಆಪ್ತರೊಂದಿಗೆ ರಾಜೀನಾಮೆಯ ಕಾರಣ ಬಿಚ್ಚಿಟ್ಟಿರುವ ಸಿದ್ದರಾಮಯ್ಯ, “ನಾನು ಬಿಜೆಪಿಯ ಎದುರು ಸೆಣಸಬಲ್ಲೆ. ಆದರೆ, ಕತ್ತಲಿನಲ್ಲಿ ನಿಂತು ಬಾಣ ಬಿಡುವ ಸ್ವಪಕ್ಷದ ಹಿತಶತ್ರುಗಳ ವಿರುದ್ಧ ಹೋರಾಡಲಾರೆ” ಎಂದು ಹೇಳಿರುವುದು ಕೈ ಪಕ್ಷದೊಳಗಿರುವ ಭಿನ್ನಮತಕ್ಕೆ ಸಾಕ್ಷಿಯಾಗಿದೆ.

ಇನ್ನೂ ಸಿದ್ದರಾಮಯ್ಯ ಬೆನ್ನಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಹ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರನಡೆದಿದ್ದಾರೆ. ಇವರಲ್ಲದೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮತ್ತು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಸಹ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸೂಚನೆ ನೀಡಿದ್ದಾರೆ. ದಿಢೀರ್ ಬೆಳವಣಿಗೆಯಲ್ಲಿ ಈ ಇಬ್ಬರೂ ನಾಯಕರೂ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದರೆ ಅಚ್ಚರಿಯಿಲ್ಲ.

ಅಲ್ಲಿಗೆ ವಿಧಾನಸಭೆ-ಲೋಕಸಭೆ ಚುನಾವಣಾ ಸೋಲಿಗೆ ಕುಗ್ಗದ ಕಾಂಗ್ರೆಸ್ ಘಟಾನುಘಟಿ ನಾಯಕರನ್ನು 15 ಕ್ಷೇತ್ರದ ಉಪಚುನಾವಣೆ ಹುರಿದು ಮುಕ್ಕಿದಂತಾಗಿದೆ. ಈಗಾಗಲೇ ಎರಡು ಪ್ರಮುಖ ವಿಕೆಟ್‍ಗಳನ್ನು ಬೀಳಿಸಿರುವ ಉಪ ಚುನಾವಣೆ, ಕನಿಷ್ಟ ಇನ್ನೂ ಎರಡು ವಿಕೆಟ್‍ಗಳನ್ನು ಬೀಳಿಸುವ ಸಾಧ್ಯತೆಯನ್ನೂ ತೆರೆದಿಟ್ಟಿದೆ. ಸಿದ್ದರಾಮಯ್ಯ ಅವರ ಈ ನಿರ್ಧಾರ ಸಾಮಾನ್ಯವಾಗಿ ರಾಜ್ಯ ಕಾಂಗ್ರೆಸ್‍ನಲ್ಲಿ ನಾಯಕತ್ವ ನಿರ್ವಾತ ಸ್ಥಿತಿಗೆ ಕಾರಣವಾಗಿದ್ದು, ಹೈಕಮಾಂಡ್ ಅನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸಿರುವುದು ಸುಳ್ಳಲ್ಲ.

ಕಾಂಗ್ರೆಸ್ ಹೈಕಮಾಂಡ್ ಮುಂದಿನ ನಡೆ ಏನು?

ಸತತ ಎಲ್ಲಾ ಚುನಾವಣೆಯಲ್ಲೂ ಸೋಲನುಭವಿಸಿದರೂ ಸಹ ಕಾಂಗ್ರೆಸ್ ಪಾಲಿಗೆ ಸಿದ್ದರಾಮಯ್ಯ ಈಗಲೂ ವರ್ಚಸ್ವಿ ನಾಯಕ ಎಂಬುದರಲ್ಲಿ ಎರಡು ಮಾತಿಲ್ಲ. ಸತತ 5 ವರ್ಷ ಸಿಎಂ ಹುದ್ದೆಯನ್ನು ಸಮರ್ಥವಾಗಿ ನಿಭಾಯಿಸಿದ್ದ ಸಿದ್ದರಾಮಯ್ಯ, ವಿಪಕ್ಷ ನಾಯಕನ ಸ್ಥಾನವನ್ನೂ ಅಷ್ಟೇ ಸಮರ್ಥವಾಗಿ ನಿಭಾಯಿಸಿದ್ದಾರೆ. ಅಲ್ಲದೆ, ಆಡಳಿತಾರೂಢ ಪಕ್ಷವನ್ನು ಕಟು ಟೀಕೆಗೆ ಗುರಿಪಡಿಸುವ ಮೂಲಕ ಇಕ್ಕಟ್ಟಿಗೆ ಸಿಲುಕಿಸಬಲ್ಲ ಸಾಮಥ್ರ್ಯವಿರುವ ನಾಯಕ ಎಂಬ ಹೆಗ್ಗಳಿಕೆಯೂ ಸಿದ್ದರಾಮಯ್ಯ ಬೆನ್ನಿಗಿದೆ.

ಮುಂದಿನ ಮೂರೂ ವರ್ಷವೂ ಸಿದ್ದರಾಮಯ್ಯ ವಿಪಕ್ಷ ನಾಯಕನ ಸ್ಥಾನದಲ್ಲೇ ಮುಂದುವರೆದರೆ ಆಡಳಿತ ಪಕ್ಷದ ಎಲ್ಲಾ ವೈಫಲ್ಯವನ್ನು ಜನರ ಮುಂದೆ ಬಿಚ್ಚಿಡುತ್ತಾರೆ ಎಂಬ ಭಯ ಸ್ವತಃ ಬಿಜೆಪಿ ಪಾಳಯದಲ್ಲೂ ಇರುವುದು ಸುಳ್ಳಲ್ಲ. ಅಕಸ್ಮಾತ್ ಸಿದ್ದರಾಮಯ್ಯ ಅವರ ರಾಜೀನಾಮೆಯನ್ನು ಕಾಂಗ್ರೆಸ್ ಹೈಕಮಾಂಡ್ ಅಂಗೀಕಾರ ಮಾಡಿದರೆ ರಾಜ್ಯ ರಾಜಕಾರಣದಲ್ಲಿ ಸಿದ್ದರಾಮಯ್ಯ ಸೈಲೆಂಟ್ ಆಗಿಬಿಡುತ್ತಾರೆ. ಈ ಬೆಳವಣಿಗೆ ಬಿಜೆಪಿ ಪಕ್ಷಕ್ಕೆ ಲಾಭವಾಗಿ ಪರಿಣಮಿಸುವ ಸಾಧ್ಯತೆ ಇದೆ. ಹೀಗಾಗಿ ಸಿದ್ದರಾಮಯ್ಯ ವಿಪಕ್ಷ ನಾಯಕನ ಸ್ಥಾನದಲ್ಲೇ ಮುಂದುವರೆದರೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕಾಗಬಹುದಾದ ಲಾಭದ ಕುರಿತ ಮಾಹಿತಿ ಕಾಂಗ್ರೆಸ್ ರಾಷ್ಟ್ರ ನಾಯಕರಿಗೂ ತಿಳಿದಿದೆ. ಅಲ್ಲದೆ, ಪ್ರಸ್ತುತ ಸಿದ್ದರಾಮಯ್ಯ ಅವರ ಸ್ಥಾನವನ್ನು ತುಂಬಬಲ್ಲ ಮತ್ತೋರ್ವ ನಾಯಕನ ಹುಡುಕಾಟ ಮಾಡುತ್ತಾ ಕೂತರೆ ಮತ್ತಷ್ಟು ಭಿನ್ನಮತ ಹೆಚ್ಚಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ..

ಹೀಗಾಗಿ ಕಾಂಗ್ರೆಸ್ ಹೈಕಮಾಂಡ್‍ಗೆ ಸಿದ್ದರಾಮಯ್ಯ ಅವರನ್ನು ರಾಜ್ಯ ರಾಜಕೀಯದಲ್ಲಿ ಉಳಿಸಿಕೊಳ್ಳದೆ ಬೇರೆ ವಿಧಿಯಿಲ್ಲ. ಇದೇ ಕಾರಣಕ್ಕೆ ಉಪಚುನಾವಣಾ ಫಲಿತಾಂಶದ ಕಾವು ತಣ್ಣಗಾದ ನಂತರ ಸಿದ್ದರಾಮಯ್ಯ ಅವರನ್ನು ಹೈಕಮಾಂಡ್ ಮುಂದುವರೆಸುತ್ತದೆ ಅನ್ನುತ್ತವೆ ರಾಜಕೀಯ ವಠಾರಗಳು. ಇಲ್ಲದೆ ಹೋದರೆ ಎಂ ಬಿ ಪಾಟೀಲ್, ಎಚ್ ಕೆ ಪಾಟೀಲ್ ಇಲ್ಲವೇ ಕೃಷ್ಣ ಭೈರೆಗೌಡರಿಗೆ ಲಾಟರಿ ಹೊಡೆಯಬಹುದು….

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ನೇಮಕ ಸಾಧ್ಯತೆ?

ಕರ್ನಾಟಕ ಪ್ರದೇಶ ಕಾಂಗ್ರೆಸ್‍ಗೆ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ನೇಮಕವಾದ ದಿನದಿಂದ ಒಂದಲ್ಲಾ ಒಂದು ಅಪಸ್ವರ, ಭಿನ್ನಮತ ಕೇಳಿಬರುತ್ತಲೇ ಇವೆ. ಮತ್ತೊಂದೆಡೆ ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿ ಸರಿಸುಮಾರು ಒಂದು ತಿಂಗಳು ದೆಹಲಿಯ ತಿಹಾರ್ ಜೈಲಿನಲ್ಲಿ ಕಳೆದುಬಂದ ಕಾಂಗ್ರೆಸ್ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಗ್ರಾಫ್ ಕಾಂಗ್ರೆಸ್‍ನಲ್ಲಿ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಈ ನಡುವೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡುವುದಕ್ಕೂ, ಆ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ಹೆಸರು ಕೇಳಿಬರುತ್ತಿರುವುದಕ್ಕೂ ಸರಿಯಾಗಿದೆ.

ಕಾಂಗ್ರೆಸ್ ಪಕ್ಷದ ವರ್ಚಸ್ವಿ ನಾಯಕರ ಪೈಕಿ ಡಿ.ಕೆ. ಶಿವಕುಮಾರ್ ಮುಂಚೂಣಿ ನಾಯಕ. ಯಾವುದೇ ಸಂದರ್ಭದಲ್ಲಿ ಪಕ್ಷಕ್ಕೆ ಎದುರಾಗಬಲ್ಲ ಸಮಸ್ಯೆಯನ್ನು ನೀಗಿಸಬಲ್ಲ ಸಾಮಥ್ರ್ಯವಿರುವ ನಾಯಕ. ಇದೇ ಕಾರಣಕ್ಕೆ ಅವರನ್ನು ಕಾಂಗ್ರೆಸ್ ಟ್ರಬಲ್ ಶೂಟರ್ ಎಂದು ಕರೆಯಲಾಗುತ್ತದೆ. ಆದರೆ, ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯದಲ್ಲಿ ಕೆಲವಾರು ಪ್ರಕರಣಗಳು ಇದ್ದ ಕಾರಣಕ್ಕೆ ಅವರಿಗೆ ಪಕ್ಷದಲ್ಲಿ ಈವರೆಗೆ ಉನ್ನತ ಸ್ಥಾನಮಾನಗಳನ್ನು ನೀಡಲಾಗಿರಲಿಲ್ಲ.

ಆದರೆ, ಪ್ರಸ್ತುತ ರಾಜ್ಯ ರಾಜಕೀಯದಲ್ಲಿ ಕಾಂಗ್ರೆಸ್ ಪಾತಾಳಕ್ಕೆ ಕುಸಿದಿದ್ದು ಪಕ್ಷವನ್ನು ಮತ್ತೆ ಮೇಲೆತ್ತಲು ಡಿ.ಕೆ. ಶಿವಕುಮಾರ್ ಅವರಂತಹ ನಾಯಕತ್ವದ ಅಗತ್ಯವಿದೆ. ಹೀಗಾಗಿ ಶೀಘ್ರದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಹೈಕಮಾಂಡ್ ಡಿ.ಕೆ. ಶಿವಕುಮಾರ್ ಅವರನ್ನು ನೇಮಕ ಮಾಡಿದರೂ ಅಚ್ಚರಿ ಇಲ್ಲ. ಇಲ್ಲದೇ ಹೋದರೆ ಚುನಾವಣೆ ಹತ್ತಿರ ಬರುವವರೆಗು ಶಾಂತಿ ಸಮಯದ ನಾಯಕ ಸ್ಥಾನ ಮುನಿಯಪ್ಪ, ಪಾಟೀಲ್ ಇಲ್ಲವೇ ಸತೀಶ್ ಜಾರಕಿಹೊಳಿ ಪಾಲಾದರು ಅಚ್ಚರಿ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...