Homeಕರ್ನಾಟಕ’ಹಿಂದೂ ನಾವೆಲ್ಲ ಒಂದು’ ಎಂದವರು ಜಾತಿ ಸಮಾವೇಶ ಮಾಡುತ್ತಿರುವುದೇಕೆ: ಸಿದ್ದರಾಮಯ್ಯ

’ಹಿಂದೂ ನಾವೆಲ್ಲ ಒಂದು’ ಎಂದವರು ಜಾತಿ ಸಮಾವೇಶ ಮಾಡುತ್ತಿರುವುದೇಕೆ: ಸಿದ್ದರಾಮಯ್ಯ

ರಾಜ್ಯದಲ್ಲಿ ಮೀಸಲಾತಿಗಾಗಿ ಬಿಜೆಪಿ ಬೀದಿಗಿಳಿದು ಹೋರಾಟ ನಡೆಸುತ್ತಿರುವುದು ಯಾರ ವಿರುದ್ಧ? ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರವೆ ಇದೆ ಎಂದು ನೆನಪಿಸುತ್ತೇನೆ ಎಂದು ಹೇಳಿದ್ದಾರೆ

- Advertisement -
- Advertisement -

ಮೀಸಲಾತಿಯನ್ನು ವಿರೋಧಿಸುತ್ತಲೇ ಬಂದಿರುವ ಬಿಜೆಪಿ ನಾಯಕರು ಸಾಲುಸಾಲಾಗಿ ನಿಂತು ಮೀಸಲಾತಿಗಾಗಿ ಕೂಗೆಬ್ಬಿಸಿರುವುದು ಪ್ರಾಮಾಣಿಕ ಜ್ಞಾನೋದಯವೇ? ಸಾಮಾಜಿಕ ನ್ಯಾಯದ ಹೋರಾಟದ ದಿಕ್ಕುತಪ್ಪಿಸುವ ಇನ್ನೊಂದು ರಾಜಕೀಯ ಷಡ್ಯಂತ್ರವೇ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮೀಸಲಾತಿ ಹೋರಾಟಗಳ ಹಿಂದೆ ಬಿದ್ದಿರುವ ಬಿಜೆಪಿಗೆ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಸರಣೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಮಂಡಲ್ ವರದಿಯನ್ನು ವಿರೋಧಿಸಿ ಮೈಗೆ ಬೆಂಕಿಹಚ್ಚಿಕೊಂಡವರು ಯಾರು? ಉನ್ನತ ಶಿಕ್ಷಣದಲ್ಲಿ ಮೀಸಲಾತಿಯನ್ನು ವಿರೋಧಿಸಿ ಬೀದಿಗಿಳಿದವರು ಯಾರು? ಸ್ಥಳೀಯ ಸಂಸ್ಥೆಗಳ ಇಲ್ಲಿನ ಮೀಸಲಾತಿಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದ ರಾಮಾ ಜೋಯಿಸ್ ಯಾವ ಪಕ್ಷದವರು? ಉತ್ತರಿಸುವಿರಾ?” ಎಂದು ಕೇಳಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯನವರು ಸ್ವತಂತ್ರ ಪಕ್ಷ ಕಟ್ಟಿ ಕೇವಲ 5 ಸ್ಥಾನ ಗೆದ್ದು ತೋರಿಸಲಿ: HDK ಸವಾಲ್

“ಜಾತಿಯಿಂದಲೇ ನರಕ, ಧರ್ಮದಿಂದಲೇ ಸ್ವರ್ಗ, ನಾವೆಲ್ಲ ಹಿಂದೂ ,ನಾವೆಲ್ಲ ಒಂದು ಎಂದು ಹಿಂದೂ ಸಮಾಜೋತ್ಸವ ನಡೆಸುತ್ತಿದ್ದ ಸಂಘ ಪರಿವಾರ ಈಗ ಯಾಕೆ ಜಾತಿ ಸಮಾವೇಶಗಳಿಗೆ ಪ್ರಾಯೋಜಕತ್ವ ನೀಡುತ್ತಿದೆ? ಯಾರಾದರೂ ಉತ್ತರಿಸುವಿರಾ?” ಎಂದು ಅವರು ಪ್ರಶ್ನಿಸಿದ್ದಾರೆ.

“ಮೀಸಲಾತಿಯನ್ನು ನೇರವಾಗಿ ವಿರೋಧಿಸಲಿಕ್ಕಾಗದ ಸಂಘ ಪರಿವಾರದ ನಾಯಕರು ವಿವಾದ ಸೃಷ್ಟಿಸಿ, ಸಮುದಾಯಗಳನ್ನು ಪರಸ್ಪರ ಕಾದಾಟಕ್ಕಿಳಿಸಿ ಸಾಮಾಜಿಕ ನ್ಯಾಯದ ಹೋರಾಟದ ಹಾದಿ ತಪ್ಪಿಸುವ ಕುಟಿಲ ಕಾರಸ್ಥಾನಕ್ಕೆ ಅಮಾಯಕ ಜನತೆ ಬಲಿಯಾಗಬಾರದು” ಎಂದು ಜನತೆಯಲ್ಲಿ ಅವರು ಮನವಿ ಮಾಡಿದ್ದಾರೆ.

“ರಾಜ್ಯದಲ್ಲಿ ಆಡಳಿತ ಪಕ್ಷದವರೇ ಮೀಸಲಾತಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿರುವುದು ಯಾರ ವಿರುದ್ಧ? ಮರೆತುಬಿಟ್ಟಿದ್ದರೆ ನೆನಪಿಸಬಯಸುತ್ತೇನೆ: ಕೇಂದ್ರ ಮತ್ತು ರಾಜ್ಯದಲ್ಲಿರುವುದು ಭಾರತೀಯ ಜನತಾ ಪಕ್ಷದ ಸರ್ಕಾರ. ಅಲ್ಲಿನ ಪ್ರಧಾನಿ ನರೇಂದ್ರ ಮೋದಿ, ಇಲ್ಲಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕುರುಬ ಸಮುದಾಯ ಒಡೆಯುವುದೇ RSS, BJPಯವರ ಉದ್ದೇಶ: ಸಿದ್ದರಾಮಯ್ಯ

“ಈಗಿನ ಮೀಸಲಾತಿ ಬದಲಾವಣೆ-ಹೆಚ್ಚಳದ ಬೇಡಿಕೆಗೆ ತಮಿಳುನಾಡಿನ ಮಾದರಿಯಲ್ಲಿ ಕರ್ನಾಟಕದ ಮೀಸಲಾತಿಯನ್ನು ಶೇಕಡಾ 73ಕ್ಕೆ ಹೆಚ್ಚಿಸಬೇಕೆಂದು ಕಾಂಗ್ರೆಸ್ ಸರ್ಕಾರವೇ ಮಾಡಿರುವ ಕಾನೂನು ಮಾತ್ರ ಪರಿಹಾರ. ಅದರ ಅನುಷ್ಠಾನ ಕೇಂದ್ರದ ಬಿಜೆಪಿ ಕೈಯಲ್ಲಿದೆ” ಎಂದು ಅವರು ಹೇಳಿದ್ದಾರೆ.

“ಮೀಸಲಾತಿ ಹೆಚ್ಚಳಕ್ಕಾಗಿ ಆಧಾರ ಕೋರುತ್ತಿರುವ ನ್ಯಾಯಾಲಯಕ್ಕೆ ಕರ್ನಾಟಕದಲ್ಲಿ ನಡೆದಿರುವ ಸಾಮಾಜಿಕ-ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯೇ ಉತ್ತರ. ರಾಜ್ಯಸರ್ಕಾರ ಮೀಸಲಾತಿ ಹೆಚ್ಚಳದ ಪರವಾಗಿದ್ದರೆ ಮೊದಲು ನಡೆಸಿದ್ದ ಈ ಸಮೀಕ್ಷೆಯನ್ನು ಸ್ವೀಕರಿಸಿ, ಶಿಫಾರಸುಗಳನ್ನು ಅನುಷ್ಠಾನಗೊಳಿಸಬೇಕು” ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಸಿನಿಮಾ ನಟ-ನಟಿಯರು ಬೀದಿಗಿಳಿದು ರೈತರನ್ನು ಬೆಂಬಲಿಸಬೇಕು – ಸಿದ್ದರಾಮಯ್ಯ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...