Homeಮುಖಪುಟಶಿವಮೊಗ್ಗದಲ್ಲಿನ ನಡೆದಿದ್ದು ರಾಜ್ಯ ಸರ್ಕಾರ ಪ್ರಾಯೋಜಿತ ಶವಯಾತ್ರೆ: ಸಿದ್ದರಾಮಯ್ಯ ಆರೋಪ

ಶಿವಮೊಗ್ಗದಲ್ಲಿನ ನಡೆದಿದ್ದು ರಾಜ್ಯ ಸರ್ಕಾರ ಪ್ರಾಯೋಜಿತ ಶವಯಾತ್ರೆ: ಸಿದ್ದರಾಮಯ್ಯ ಆರೋಪ

- Advertisement -
- Advertisement -

ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ನಂತರ ನಡೆದ ಹಿಂಸಾಚಾರಕ್ಕೆ ಬಿಜೆಪಿ ಸರ್ಕಾರವೇ ನೇರ ಕಾರಣ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈಶ್ವರಪ್ಪ ಬೇಕಂತಲೇ ಕುಮ್ಮಕ್ಕು ನೀಡಿದ್ದು, ಈ ಕುರಿತು ನ್ಯಾಯಾಂಗ ತನಿಖೆಯಾಗಬೇಕೆಂದು ಅವರು ಒತ್ತಾಯಿಸಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಹರ್ಷ ಕೊಲೆಯಾದ ದಿನವೇ 144 ಸೆಕ್ಷನ್ ಜಾರಿಯಾಗಿದ್ದರೂ ಮೃತನ ಶವಯಾತ್ರೆ ನಡೆಸಲು ಪೊಲೀಸ್ ಇಲಾಖೆ ಅವಕಾಶ ನೀಡಿದ್ದು ಹೇಗೆ? ಈ ಶವಯಾತ್ರೆಯಲ್ಲಿ ಸಚಿವ ಈಶ್ವರಪ್ಪ, ಸ್ಥಳೀಯ ಸಂಸದ ರಾಘವೇಂದ್ರ ಕೂಡ ಭಾಗವಹಿಸಿದ್ದರು, ಹೀಗಾಗಿ ಈ ಶವಯಾತ್ರೆಯನ್ನು ರಾಜ್ಯ ಸರ್ಕಾರದ ಪ್ರಾಯೋಜಿತ ಶವಯಾತ್ರೆ ಎನ್ನಬೇಕಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗದ ಬಿಜೆಪಿ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ, ಆ ನಂತರದ ಶವಯಾತ್ರೆ ಸಂದರ್ಭದಲ್ಲಿ ನಡೆದ ಗಲಭೆ, ಈಶ್ವರಪ್ಪ ಶವಯಾತ್ರೆಯ ಮುಂದಾಳತ್ವ ವಹಿಸುವ ಮೂಲಕ 144 ಸೆಕ್ಷನ್ ನ ಉಲ್ಲಂಘನೆ ಮಾಡಿದ್ದಾರೆ. ಅವರು ಮೊದಲು ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿ ದೇಶದ್ರೋಹ ಎಸಗಿದ್ದರು, ಈಗ ತಮ್ಮ ಸರ್ಕಾರವೇ ವಿಧಿಸಿದ್ದ 144 ಸೆಕ್ಷನ್ ಮೀರಿ ಕಾನೂನಿಗೆ ಅಗೌರವ ತೋರಿದ್ದಾರೆ. ದೇಶದ ಸಂವಿಧಾನ, ರಾಷ್ಟ್ರ ಧ್ವಜ, ಸಂಸದೀಯ ವ್ಯವಸ್ಥೆಯ ಬಗ್ಗೆ ಗೌರವವೇ ಇಲ್ಲದಿರುವ ಈಶ್ವರಪ್ಪ ಅವರು ಸಚಿವ ಸ್ಥಾನದಲ್ಲಿ ಮುಂದುವರೆಯಲು ಅನರ್ಹರು. ಅವರು ದೇಶ ಮತ್ತು ಸರ್ಕಾರಕ್ಕಿಂತ ದೊಡ್ಡವರಲ್ಲ. ಅವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು ಜೊತೆಗೆ ಕೂಡಲೇ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಬಿಜೆಪಿ ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾರವರು ರಾಷ್ಟ್ರೀಯ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ರಾಷ್ಟ್ರ ಧ್ವಜಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಅವರ ಹೇಳಿಕೆ ಅತ್ಯಂತ ಬೇಜವಾಬ್ದಾರಿಯುತವಾದುದ್ದು ಎಂದಿದ್ದಾರೆ. ಜೊತೆಗೆ ಅವರಿಗೆ ತಾವು ಛೀಮಾರಿ ಹಾಕಿರುವುದಾಗಿ ತಿಳಿಸಿದ್ದಾರೆ. ಇವತ್ತು ಶಿವಮೊಗ್ಗದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿ, ಆಸ್ತಿ ಪಾಸ್ತಿ ನಷ್ಟವಾಗಿದ್ದರೆ ಅದಕ್ಕೆ ಈಶ್ವರಪ್ಪ ಅವರೇ ನೇರ ಹೊಣೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಕೊಲೆ ಪ್ರಕರಣದ ತನಿಖೆಯ ಜೊತೆಗೆ ನಿನ್ನೆಯ ಶವ ಯಾತ್ರೆಯಲ್ಲಿ ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟವಾಗಿದೆ, ಇಬ್ಬರು ವ್ಯಕ್ತಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ, ಸಾಕಷ್ಟು ಜನರ ಮೇಲೆ ಹಲ್ಲೆ ನಡೆದಿದೆ. ಈ ಬಗ್ಗೆ ತನಿಖೆಯಾಗಬೇಕು. ಹರ್ಷ ಕೊಲೆ ಪ್ರಕರಣವನ್ನು ಎನ್.ಐ.ಎ ಇಂದಲೋ ಅಥವಾ ಇತರೆ ಯಾವ ತನಿಖಾ ಸಂಸ್ಥೆಯ ಮೂಲಕವಾದರೂ ತನಿಖೆ ಮಾಡಲಿ, ಅದಕ್ಕೆ ನಮ್ಮ ತಕರಾರಿಲ್ಲ. ಕೊಲೆ ಮಾಡಿದವರಿಗೆ ಗಲ್ಲು ಶಿಕ್ಷೆ ಆಗುವಂತೆ ಕಟ್ಟುನಿಟ್ಟಾಗಿ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಈಶ್ವರಪ್ಪ ಅವರದೇ ಪಕ್ಷದ ಸರ್ಕಾರ ಇದೆ. ಪಿ.ಎಫ್.ಐ ಮತ್ತು ಎಸ್.ಡಿ.ಪಿ.ಐ ಗಳು ಕೊಲೆ ಪ್ರಕರಣದಲ್ಲಿ ಭಾಗಿಯಾದ ಬಗ್ಗೆ ಸಾಕ್ಷ್ಯಗಳು ಇದ್ದರೆ ಈ ಕೂಡಲೇ ಅವುಗಳನ್ನು ನಿಷೇಧ ಮಾಡಲಿ. ನಿಷೇಧ ಮಾಡಬೇಡಿ ಎಂದು ಅವರಿಗೆ ಅಡ್ಡ ಬರುತ್ತಿರುವವರಾದರೂ ಯಾರು? ಹಾಗಾಗಿ ಇಂದು ಸಂಜೆ ವಿಧಾನಸಭೆ ಮತ್ತು ವಿಧಾನ ಪರಿಷತ್ ನ ಎಲ್ಲಾ ಕಾಂಗ್ರೆಸ್ ಸದಸ್ಯರು ವಿಧಾನಸೌಧದಿಂದ ರಾಜಭವನದ ವರೆಗೆ ಕಾಲ್ನಡಿಗೆ ಮೂಲಕ ತೆರಳಿ, ರಾಜ್ಯಪಾಲರನ್ನು ಭೇಟಿಯಾಗಿ ದೇಶದ್ರೋಹಿ ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಮನವಿ ಮಾಡುತ್ತೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.


ಇದನ್ನೂ ಓದಿ: ಶಾಂತವಾದ ಶಿವಮೊಗ್ಗ: ಬುಧವಾರ ಬೆಳಿಗ್ಗೆಯವರೆಗೂ 144 ಸೆಕ್ಷನ್ ಮುಂದುವರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...