Homeಮುಖಪುಟಶಿವಮೊಗ್ಗದಲ್ಲಿನ ನಡೆದಿದ್ದು ರಾಜ್ಯ ಸರ್ಕಾರ ಪ್ರಾಯೋಜಿತ ಶವಯಾತ್ರೆ: ಸಿದ್ದರಾಮಯ್ಯ ಆರೋಪ

ಶಿವಮೊಗ್ಗದಲ್ಲಿನ ನಡೆದಿದ್ದು ರಾಜ್ಯ ಸರ್ಕಾರ ಪ್ರಾಯೋಜಿತ ಶವಯಾತ್ರೆ: ಸಿದ್ದರಾಮಯ್ಯ ಆರೋಪ

- Advertisement -
- Advertisement -

ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ನಂತರ ನಡೆದ ಹಿಂಸಾಚಾರಕ್ಕೆ ಬಿಜೆಪಿ ಸರ್ಕಾರವೇ ನೇರ ಕಾರಣ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈಶ್ವರಪ್ಪ ಬೇಕಂತಲೇ ಕುಮ್ಮಕ್ಕು ನೀಡಿದ್ದು, ಈ ಕುರಿತು ನ್ಯಾಯಾಂಗ ತನಿಖೆಯಾಗಬೇಕೆಂದು ಅವರು ಒತ್ತಾಯಿಸಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಹರ್ಷ ಕೊಲೆಯಾದ ದಿನವೇ 144 ಸೆಕ್ಷನ್ ಜಾರಿಯಾಗಿದ್ದರೂ ಮೃತನ ಶವಯಾತ್ರೆ ನಡೆಸಲು ಪೊಲೀಸ್ ಇಲಾಖೆ ಅವಕಾಶ ನೀಡಿದ್ದು ಹೇಗೆ? ಈ ಶವಯಾತ್ರೆಯಲ್ಲಿ ಸಚಿವ ಈಶ್ವರಪ್ಪ, ಸ್ಥಳೀಯ ಸಂಸದ ರಾಘವೇಂದ್ರ ಕೂಡ ಭಾಗವಹಿಸಿದ್ದರು, ಹೀಗಾಗಿ ಈ ಶವಯಾತ್ರೆಯನ್ನು ರಾಜ್ಯ ಸರ್ಕಾರದ ಪ್ರಾಯೋಜಿತ ಶವಯಾತ್ರೆ ಎನ್ನಬೇಕಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗದ ಬಿಜೆಪಿ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ, ಆ ನಂತರದ ಶವಯಾತ್ರೆ ಸಂದರ್ಭದಲ್ಲಿ ನಡೆದ ಗಲಭೆ, ಈಶ್ವರಪ್ಪ ಶವಯಾತ್ರೆಯ ಮುಂದಾಳತ್ವ ವಹಿಸುವ ಮೂಲಕ 144 ಸೆಕ್ಷನ್ ನ ಉಲ್ಲಂಘನೆ ಮಾಡಿದ್ದಾರೆ. ಅವರು ಮೊದಲು ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿ ದೇಶದ್ರೋಹ ಎಸಗಿದ್ದರು, ಈಗ ತಮ್ಮ ಸರ್ಕಾರವೇ ವಿಧಿಸಿದ್ದ 144 ಸೆಕ್ಷನ್ ಮೀರಿ ಕಾನೂನಿಗೆ ಅಗೌರವ ತೋರಿದ್ದಾರೆ. ದೇಶದ ಸಂವಿಧಾನ, ರಾಷ್ಟ್ರ ಧ್ವಜ, ಸಂಸದೀಯ ವ್ಯವಸ್ಥೆಯ ಬಗ್ಗೆ ಗೌರವವೇ ಇಲ್ಲದಿರುವ ಈಶ್ವರಪ್ಪ ಅವರು ಸಚಿವ ಸ್ಥಾನದಲ್ಲಿ ಮುಂದುವರೆಯಲು ಅನರ್ಹರು. ಅವರು ದೇಶ ಮತ್ತು ಸರ್ಕಾರಕ್ಕಿಂತ ದೊಡ್ಡವರಲ್ಲ. ಅವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು ಜೊತೆಗೆ ಕೂಡಲೇ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಬಿಜೆಪಿ ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾರವರು ರಾಷ್ಟ್ರೀಯ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ರಾಷ್ಟ್ರ ಧ್ವಜಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಅವರ ಹೇಳಿಕೆ ಅತ್ಯಂತ ಬೇಜವಾಬ್ದಾರಿಯುತವಾದುದ್ದು ಎಂದಿದ್ದಾರೆ. ಜೊತೆಗೆ ಅವರಿಗೆ ತಾವು ಛೀಮಾರಿ ಹಾಕಿರುವುದಾಗಿ ತಿಳಿಸಿದ್ದಾರೆ. ಇವತ್ತು ಶಿವಮೊಗ್ಗದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿ, ಆಸ್ತಿ ಪಾಸ್ತಿ ನಷ್ಟವಾಗಿದ್ದರೆ ಅದಕ್ಕೆ ಈಶ್ವರಪ್ಪ ಅವರೇ ನೇರ ಹೊಣೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಕೊಲೆ ಪ್ರಕರಣದ ತನಿಖೆಯ ಜೊತೆಗೆ ನಿನ್ನೆಯ ಶವ ಯಾತ್ರೆಯಲ್ಲಿ ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟವಾಗಿದೆ, ಇಬ್ಬರು ವ್ಯಕ್ತಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ, ಸಾಕಷ್ಟು ಜನರ ಮೇಲೆ ಹಲ್ಲೆ ನಡೆದಿದೆ. ಈ ಬಗ್ಗೆ ತನಿಖೆಯಾಗಬೇಕು. ಹರ್ಷ ಕೊಲೆ ಪ್ರಕರಣವನ್ನು ಎನ್.ಐ.ಎ ಇಂದಲೋ ಅಥವಾ ಇತರೆ ಯಾವ ತನಿಖಾ ಸಂಸ್ಥೆಯ ಮೂಲಕವಾದರೂ ತನಿಖೆ ಮಾಡಲಿ, ಅದಕ್ಕೆ ನಮ್ಮ ತಕರಾರಿಲ್ಲ. ಕೊಲೆ ಮಾಡಿದವರಿಗೆ ಗಲ್ಲು ಶಿಕ್ಷೆ ಆಗುವಂತೆ ಕಟ್ಟುನಿಟ್ಟಾಗಿ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಈಶ್ವರಪ್ಪ ಅವರದೇ ಪಕ್ಷದ ಸರ್ಕಾರ ಇದೆ. ಪಿ.ಎಫ್.ಐ ಮತ್ತು ಎಸ್.ಡಿ.ಪಿ.ಐ ಗಳು ಕೊಲೆ ಪ್ರಕರಣದಲ್ಲಿ ಭಾಗಿಯಾದ ಬಗ್ಗೆ ಸಾಕ್ಷ್ಯಗಳು ಇದ್ದರೆ ಈ ಕೂಡಲೇ ಅವುಗಳನ್ನು ನಿಷೇಧ ಮಾಡಲಿ. ನಿಷೇಧ ಮಾಡಬೇಡಿ ಎಂದು ಅವರಿಗೆ ಅಡ್ಡ ಬರುತ್ತಿರುವವರಾದರೂ ಯಾರು? ಹಾಗಾಗಿ ಇಂದು ಸಂಜೆ ವಿಧಾನಸಭೆ ಮತ್ತು ವಿಧಾನ ಪರಿಷತ್ ನ ಎಲ್ಲಾ ಕಾಂಗ್ರೆಸ್ ಸದಸ್ಯರು ವಿಧಾನಸೌಧದಿಂದ ರಾಜಭವನದ ವರೆಗೆ ಕಾಲ್ನಡಿಗೆ ಮೂಲಕ ತೆರಳಿ, ರಾಜ್ಯಪಾಲರನ್ನು ಭೇಟಿಯಾಗಿ ದೇಶದ್ರೋಹಿ ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಮನವಿ ಮಾಡುತ್ತೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.


ಇದನ್ನೂ ಓದಿ: ಶಾಂತವಾದ ಶಿವಮೊಗ್ಗ: ಬುಧವಾರ ಬೆಳಿಗ್ಗೆಯವರೆಗೂ 144 ಸೆಕ್ಷನ್ ಮುಂದುವರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...