Homeಕರ್ನಾಟಕಇದು ಸರ್ಕಾರದ ಯೋಜಿತ ಕೊಲೆ, ನ್ಯಾಯಾಂಗ ತನಿಖೆಯಾಗಲಿ: ಇಂದು ಮಂಗಳೂರಿಗೆ ಸಿದ್ದರಾಮಯ್ಯ

ಇದು ಸರ್ಕಾರದ ಯೋಜಿತ ಕೊಲೆ, ನ್ಯಾಯಾಂಗ ತನಿಖೆಯಾಗಲಿ: ಇಂದು ಮಂಗಳೂರಿಗೆ ಸಿದ್ದರಾಮಯ್ಯ

ದೇಶದ ಜನ ಜಾತಿ ಮತ ಲಿಂಗಬೇಧ ತೊರೆದು ಹೋರಾಡುತ್ತಿದ್ದಾರೆ. ರಾಮಚಂದ್ರ ಗುಹಾ ಮುಸಲ್ಮಾನರೆ ಎಂದು ಸಿದ್ದು ಪ್ರಶ್ನಿಸಿದ್ದಾರೆ

- Advertisement -
- Advertisement -

144 ಸೆಕ್ಷನ್‌ ಉಲ್ಲಂಘಿಸಿ ಎಂದು ಯಾವುದೇ ರಾಜಕೀಯ ಪಕ್ಷಗಳು ಕರೆ ಕೊಟ್ಟಿರಲಿಲ್ಲ. ಜನ ಪಕ್ಷಾತೀತವಾಗಿ ಕರಾಳ ಕಾಯ್ದೆಯ ವಿರುದ್ಧ ಹೋರಾಡುತ್ತಿದ್ದರು. ಅವರು ಮೇಲೆ ಗುಂಡು ಹೊಡೆಯುವುದು ಎಂದರೇನು? ಇದು ಹಿಟ್ಲರ್‌ ಮುಸ್ಸಲೋನಿ ರಾಜ್ಯವೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ನಾನು ಈಗ 2 ಗಂಟೆಗೆ ಮಂಗಳೂರಿಗೆ ಹೋಗುತ್ತಿದ್ದೇನೆ. ಜನರಿಗೆ ಸಾಂತ್ವನ ಹೇಳಲು ಜನರ ಪ್ರತಿನಿಧಿಯಾಗಿ ಹೋಗುತ್ತಿದ್ದೇನೆ. ಅಲ್ಲಿ ಅಮಾನುಷವಾಗಿ ಕೊಂದಿದ್ದಾರೆ ಇಬ್ಬರನ್ನು.. ಅವರ ಕುಟುಂಬಕ್ಕೆ ಪರಿಹಾರ ಕೊಡಬೇಕು. ಆ ಜೀವಗಳಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಅಸಮಾಧಾನ ವ್ಯಕ್ತಿಪಡಿಸಿದ್ದಾರೆ.

ಏನ್ರಿ ಗುಂಡು ಹೊಡೆದರೂ ಯಾರೂ ಸತ್ತಿಲ್ಲ ಎಂದು ಒಬ್ಬ ಪೊಲೀಸ್‌ ಹೇಳುವ ವಿಡಿಯೋ ಟಿವಿಯಲ್ಲಿ ನೋಡಿದೆ. ಸರ್ಕಾರದಿಂದ ಸೂಚನೆಯಿಲ್ಲದೇ ಗುಂಡುಹೊಡೆದರೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ದೇಶಾದ್ಯಂತ ಹಿಂಸೆಯ ಹಿಂದೆ ಇರುವವರು ನರೇಂದ್ರ ಮೋದಿ ಮತ್ತು ಅಮಿತ್‌ ಶಾ. ಅವರು ಕರ್ನಾಟಕದಲ್ಲಿ ಯಡಿಯೂರಪ್ಪನವರ ಸರ್ಕಾರದ ಮೂಲಕ ಹಿಂಸೆ ಉಂಟುಮಾಡುತ್ತಿದ್ದಾರೆ. ನಾನು ಪೊಲೀಸರ ಅಮಾನವೀಯ ವರ್ತನೆಯನ್ನು, ಸರ್ಕಾರದ ಧೋರಣೆಯನ್ನು ಖಂಡಿಸುತ್ತೇನೆ. ಮೂಲಭೂತ ಹಕ್ಕುಗಳನ್ನು ದಮನ ಮಾಡುತ್ತಿರುವ ಈ ಸರ್ಕಾರ ವಿರುದ್ಧ ಹೋರಾಡುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ನಮ್ಮ ರಾಜ್ಯದ ಜನತೆ ಶಾಂತಿಪ್ರಿಯರು. ಈ ನೆಲದ ಕಾನೂನಿಗೆ ಗೌರವಕೊಡುವವರು. ನಮ್ಮ ಆಡಳಿತದಲ್ಲಿ ಒಂದು ಸಣ್ಣ ಲಾಠಿಚಾರ್ಜ್‌ ಬಿಟ್ಟರೆ ಉಳಿದಂತೆ ಯಾವುದೇ ಹೋರಾಟಗಳನ್ನು ದಮನ ಮಾಡಿಲ್ಲ. ಐದು ವರ್ಷಗಳಲ್ಲಿ ನಮಗೆ ಬಂದೂಕುಗಳು ನೆನಪಿಗೆ ಬರಲೇ ಇಲ್ಲ. ಬಡವರಿಗೆ ಅಕ್ಕಿ, ಮಕ್ಕಳಿಗೆ ಹಾಲು, ಮೊಟ್ಟೆ ಕೊಡಬೇಕು, ರೈತರ ಸಾಲ ಮನ್ನಾ ಮಾಡೋದು, ಇದೇ ನಮ್ಮ ಉದ್ದೇಶವಾಗಿತ್ತು. ಕಬ್ಬು ಬೆಳೆಗಾರರು ದೊಡ್ಡ ಹೋರಾಟ ನಡೆಸಿದ್ದರು. ನಾವು ಅದಕ್ಕೆ ಅವಕಾಶ ನೀಡಿದ್ದಲ್ಲದೇ ಶಾಂತಿಯುತ ಮಾತುಕತೆ ಮೂಲಕ ಅದನ್ನು ಬಗೆಹರಿಸಿದ್ದೆವು. ಆದರೆ ಈ ಸರ್ಕಾರ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ.

ರಾಮಚಂದ್ರಗುಹಾ ಒಬ್ಬ ದೊಡ್ಡ ಇತಿಹಾಸಕಾರ. ಅವರು ನಿನ್ನೆ ಟೌನ್‌ಹಾಲ್‌ ಮುಂದೆ ಗಲಾಟೆ ಮಾಡುತ್ತಿರಲಿಲ್ಲ. ಶಾಂತ ರೀತಿಯಲ್ಲಿ ಪ್ರತಿಭಟಿಸುತ್ತಿದ್ದರು. ಅವರು ಅಭಿಪ್ರಾಯ ಹೇಳಲು ಬಿಡದ ಪೊಲೀಸರನ್ನು ಪಾಪ ಅವರನ್ನು ಎಳೆದಾಡಿ ಬಂಧಿಸಿದ್ದಾರೆ. ಇದು ರಾಜ್ಯಕ್ಕೆ ನಾಚಿಕೆಯಲ್ಲವೇ ಎಂದಿದ್ದಾರೆ.

ಈ ಕಾಯ್ದೆಯಲ್ಲಿ ಮೂರು ದೇಶಗಳಿಂದ ಬಂದಿರುವ ಮುಸ್ಲಿಮೇತರರಿಗೆ ಪೌರತ್ವ ಕೊಡುತ್ತೀವಿ ಎಂದು ಏಕೆ ಬರೆದಿದ್ದೀರಿ? ಇದು ತಾರತಮ್ಯ ಅಲ್ಲವೇ? ಇದಕ್ಕೆ ಒಂದು ಧರ್ಮವನ್ನು ಟಾರ್ಗೆಟ್‌ ಮಾಡುತ್ತಿಲ್ಲವೇ? ಅದಕ್ಕೆ ಜನ ಪ್ರತಿಭಟನೆ ನಡೆಸುತ್ತಿದ್ದಾರೆ. ದೇಶದ ಜನ ಜಾತಿ ಮತ ಲಿಂಗಬೇಧ ತೊರೆದು ಹೋರಾಡುತ್ತಿದ್ದಾರೆ. ರಾಮಚಂದ್ರ ಗುಹಾ ಮುಸಲ್ಮಾನರೆ ಎಂದು ಸಿದ್ದು ಪ್ರಶ್ನಿಸಿದ್ದಾರೆ.

ದೇಶದ ಆರ್ಥಿಕ ಪರಿಸ್ಥಿತಿ ಕುಸಿದುಹೋಗಿದೆ. ಜಿಡಿಪಿ ನಾಲ್ಕು ಕ್ಕಿಂತ ಕಡಿಮೆ. ನಿರುದ್ಯೋಗ ೪೫ ವರ್ಷ ಬೆಲೆಏರಿಕೆ ಗಗನ, ಫ್ಯಾಕ್ಟರಿ ಮುಚ್ಚಿಹೋಗುತ್ತಿದೆ. ಜನ ಬೀದಿಗೆ ಬೀಳುತ್ತಿದ್ದಾರೆ. ಇದನ್ನು ಮರೆಮಾಚಲು ಸರ್ಕಾರ ಈ ಕಾಯ್ದೆ ಜಾರಿಗೆ ತರುತ್ತಿದೆ.

ಜನರ ನೈಜ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು ಅಲ್ವಾ.. ಅಮಿತ್‌ ಶಾ ಈ ಕಾಯದೆ ಕಾಂಟ್ರವರ್ಸಿ ಅಲ್ಲಾ ಎಂದು ಹೇಳಿದ್ದಾರೆ. ಹಾಗಾದರೆ ನಾವು ಈ ದೇಶದ ಜನ ಎಂದು ಖಚಿತಪಡಿಸಲು ಜನ ಏಕೆ ರಿಸ್ಕ್‌ ತೆಗೆದುಕೊಳ್ಳಬೇಕು ಇದು ಬ್ರಿಟಿಷ್‌ ಕಾಲ, ಜಲಿಯನ್‌ ವಾಲಾಬಾಗ್, ಹಿಟ್ಲರ್ ಮುಸಲೋನಿಯವರ ಆಡಳಿತವನ್ನು ನೆನಪಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಿಜೆಪಿ ಸರ್ಕಾರಕ್ಕೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲ. ಸಂವಿಧಾನದ ಗೌರವ ಇಲ್ಲ. ಅದಕ್ಕಾಗಿ ಇಂಟರ್‌ನೆಟ್‌, ಸಾಮಾಜಿಕ ಮಾಧ್ಯಮಗಳನ್ನು ಬಂದ್‌ ಮಾಡಿದ್ದಾರೆ. ಸುಪ್ರೀಂ ಕೋರ್ಟ್‌‌ನಲ್ಲಿ ಪ್ರಕರಣವಿದೆ. ದೇಶಾದ್ಯಂತ ಹೋರಾಟ ನಡೆಯುತ್ತಿದೆ. ಈಗಿದ್ದಾಗ ಈ ಕಾಯ್ದೆಯನ್ನು ಹೇಗೆ ಜಾರಿಗೊಳಿಸಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಿದ್ದರಾಮಯ್ಯನವರ ಹೇಳಿಕೆ ಸ್ವಾಗತಾರ್ಹ.
    ನ್ಯಾಯ ಕೇಳುವವರನ್ನು ಕೊಲ್ಲುವ ಹಕ್ಕು ಸರ್ಕಾರಕ್ಕೆ ಇಲ್ಲ.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...