Homeಕರ್ನಾಟಕಇದು ಸರ್ಕಾರದ ಯೋಜಿತ ಕೊಲೆ, ನ್ಯಾಯಾಂಗ ತನಿಖೆಯಾಗಲಿ: ಇಂದು ಮಂಗಳೂರಿಗೆ ಸಿದ್ದರಾಮಯ್ಯ

ಇದು ಸರ್ಕಾರದ ಯೋಜಿತ ಕೊಲೆ, ನ್ಯಾಯಾಂಗ ತನಿಖೆಯಾಗಲಿ: ಇಂದು ಮಂಗಳೂರಿಗೆ ಸಿದ್ದರಾಮಯ್ಯ

ದೇಶದ ಜನ ಜಾತಿ ಮತ ಲಿಂಗಬೇಧ ತೊರೆದು ಹೋರಾಡುತ್ತಿದ್ದಾರೆ. ರಾಮಚಂದ್ರ ಗುಹಾ ಮುಸಲ್ಮಾನರೆ ಎಂದು ಸಿದ್ದು ಪ್ರಶ್ನಿಸಿದ್ದಾರೆ

- Advertisement -
- Advertisement -

144 ಸೆಕ್ಷನ್‌ ಉಲ್ಲಂಘಿಸಿ ಎಂದು ಯಾವುದೇ ರಾಜಕೀಯ ಪಕ್ಷಗಳು ಕರೆ ಕೊಟ್ಟಿರಲಿಲ್ಲ. ಜನ ಪಕ್ಷಾತೀತವಾಗಿ ಕರಾಳ ಕಾಯ್ದೆಯ ವಿರುದ್ಧ ಹೋರಾಡುತ್ತಿದ್ದರು. ಅವರು ಮೇಲೆ ಗುಂಡು ಹೊಡೆಯುವುದು ಎಂದರೇನು? ಇದು ಹಿಟ್ಲರ್‌ ಮುಸ್ಸಲೋನಿ ರಾಜ್ಯವೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ನಾನು ಈಗ 2 ಗಂಟೆಗೆ ಮಂಗಳೂರಿಗೆ ಹೋಗುತ್ತಿದ್ದೇನೆ. ಜನರಿಗೆ ಸಾಂತ್ವನ ಹೇಳಲು ಜನರ ಪ್ರತಿನಿಧಿಯಾಗಿ ಹೋಗುತ್ತಿದ್ದೇನೆ. ಅಲ್ಲಿ ಅಮಾನುಷವಾಗಿ ಕೊಂದಿದ್ದಾರೆ ಇಬ್ಬರನ್ನು.. ಅವರ ಕುಟುಂಬಕ್ಕೆ ಪರಿಹಾರ ಕೊಡಬೇಕು. ಆ ಜೀವಗಳಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಅಸಮಾಧಾನ ವ್ಯಕ್ತಿಪಡಿಸಿದ್ದಾರೆ.

ಏನ್ರಿ ಗುಂಡು ಹೊಡೆದರೂ ಯಾರೂ ಸತ್ತಿಲ್ಲ ಎಂದು ಒಬ್ಬ ಪೊಲೀಸ್‌ ಹೇಳುವ ವಿಡಿಯೋ ಟಿವಿಯಲ್ಲಿ ನೋಡಿದೆ. ಸರ್ಕಾರದಿಂದ ಸೂಚನೆಯಿಲ್ಲದೇ ಗುಂಡುಹೊಡೆದರೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ದೇಶಾದ್ಯಂತ ಹಿಂಸೆಯ ಹಿಂದೆ ಇರುವವರು ನರೇಂದ್ರ ಮೋದಿ ಮತ್ತು ಅಮಿತ್‌ ಶಾ. ಅವರು ಕರ್ನಾಟಕದಲ್ಲಿ ಯಡಿಯೂರಪ್ಪನವರ ಸರ್ಕಾರದ ಮೂಲಕ ಹಿಂಸೆ ಉಂಟುಮಾಡುತ್ತಿದ್ದಾರೆ. ನಾನು ಪೊಲೀಸರ ಅಮಾನವೀಯ ವರ್ತನೆಯನ್ನು, ಸರ್ಕಾರದ ಧೋರಣೆಯನ್ನು ಖಂಡಿಸುತ್ತೇನೆ. ಮೂಲಭೂತ ಹಕ್ಕುಗಳನ್ನು ದಮನ ಮಾಡುತ್ತಿರುವ ಈ ಸರ್ಕಾರ ವಿರುದ್ಧ ಹೋರಾಡುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ನಮ್ಮ ರಾಜ್ಯದ ಜನತೆ ಶಾಂತಿಪ್ರಿಯರು. ಈ ನೆಲದ ಕಾನೂನಿಗೆ ಗೌರವಕೊಡುವವರು. ನಮ್ಮ ಆಡಳಿತದಲ್ಲಿ ಒಂದು ಸಣ್ಣ ಲಾಠಿಚಾರ್ಜ್‌ ಬಿಟ್ಟರೆ ಉಳಿದಂತೆ ಯಾವುದೇ ಹೋರಾಟಗಳನ್ನು ದಮನ ಮಾಡಿಲ್ಲ. ಐದು ವರ್ಷಗಳಲ್ಲಿ ನಮಗೆ ಬಂದೂಕುಗಳು ನೆನಪಿಗೆ ಬರಲೇ ಇಲ್ಲ. ಬಡವರಿಗೆ ಅಕ್ಕಿ, ಮಕ್ಕಳಿಗೆ ಹಾಲು, ಮೊಟ್ಟೆ ಕೊಡಬೇಕು, ರೈತರ ಸಾಲ ಮನ್ನಾ ಮಾಡೋದು, ಇದೇ ನಮ್ಮ ಉದ್ದೇಶವಾಗಿತ್ತು. ಕಬ್ಬು ಬೆಳೆಗಾರರು ದೊಡ್ಡ ಹೋರಾಟ ನಡೆಸಿದ್ದರು. ನಾವು ಅದಕ್ಕೆ ಅವಕಾಶ ನೀಡಿದ್ದಲ್ಲದೇ ಶಾಂತಿಯುತ ಮಾತುಕತೆ ಮೂಲಕ ಅದನ್ನು ಬಗೆಹರಿಸಿದ್ದೆವು. ಆದರೆ ಈ ಸರ್ಕಾರ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ.

ರಾಮಚಂದ್ರಗುಹಾ ಒಬ್ಬ ದೊಡ್ಡ ಇತಿಹಾಸಕಾರ. ಅವರು ನಿನ್ನೆ ಟೌನ್‌ಹಾಲ್‌ ಮುಂದೆ ಗಲಾಟೆ ಮಾಡುತ್ತಿರಲಿಲ್ಲ. ಶಾಂತ ರೀತಿಯಲ್ಲಿ ಪ್ರತಿಭಟಿಸುತ್ತಿದ್ದರು. ಅವರು ಅಭಿಪ್ರಾಯ ಹೇಳಲು ಬಿಡದ ಪೊಲೀಸರನ್ನು ಪಾಪ ಅವರನ್ನು ಎಳೆದಾಡಿ ಬಂಧಿಸಿದ್ದಾರೆ. ಇದು ರಾಜ್ಯಕ್ಕೆ ನಾಚಿಕೆಯಲ್ಲವೇ ಎಂದಿದ್ದಾರೆ.

ಈ ಕಾಯ್ದೆಯಲ್ಲಿ ಮೂರು ದೇಶಗಳಿಂದ ಬಂದಿರುವ ಮುಸ್ಲಿಮೇತರರಿಗೆ ಪೌರತ್ವ ಕೊಡುತ್ತೀವಿ ಎಂದು ಏಕೆ ಬರೆದಿದ್ದೀರಿ? ಇದು ತಾರತಮ್ಯ ಅಲ್ಲವೇ? ಇದಕ್ಕೆ ಒಂದು ಧರ್ಮವನ್ನು ಟಾರ್ಗೆಟ್‌ ಮಾಡುತ್ತಿಲ್ಲವೇ? ಅದಕ್ಕೆ ಜನ ಪ್ರತಿಭಟನೆ ನಡೆಸುತ್ತಿದ್ದಾರೆ. ದೇಶದ ಜನ ಜಾತಿ ಮತ ಲಿಂಗಬೇಧ ತೊರೆದು ಹೋರಾಡುತ್ತಿದ್ದಾರೆ. ರಾಮಚಂದ್ರ ಗುಹಾ ಮುಸಲ್ಮಾನರೆ ಎಂದು ಸಿದ್ದು ಪ್ರಶ್ನಿಸಿದ್ದಾರೆ.

ದೇಶದ ಆರ್ಥಿಕ ಪರಿಸ್ಥಿತಿ ಕುಸಿದುಹೋಗಿದೆ. ಜಿಡಿಪಿ ನಾಲ್ಕು ಕ್ಕಿಂತ ಕಡಿಮೆ. ನಿರುದ್ಯೋಗ ೪೫ ವರ್ಷ ಬೆಲೆಏರಿಕೆ ಗಗನ, ಫ್ಯಾಕ್ಟರಿ ಮುಚ್ಚಿಹೋಗುತ್ತಿದೆ. ಜನ ಬೀದಿಗೆ ಬೀಳುತ್ತಿದ್ದಾರೆ. ಇದನ್ನು ಮರೆಮಾಚಲು ಸರ್ಕಾರ ಈ ಕಾಯ್ದೆ ಜಾರಿಗೆ ತರುತ್ತಿದೆ.

ಜನರ ನೈಜ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು ಅಲ್ವಾ.. ಅಮಿತ್‌ ಶಾ ಈ ಕಾಯದೆ ಕಾಂಟ್ರವರ್ಸಿ ಅಲ್ಲಾ ಎಂದು ಹೇಳಿದ್ದಾರೆ. ಹಾಗಾದರೆ ನಾವು ಈ ದೇಶದ ಜನ ಎಂದು ಖಚಿತಪಡಿಸಲು ಜನ ಏಕೆ ರಿಸ್ಕ್‌ ತೆಗೆದುಕೊಳ್ಳಬೇಕು ಇದು ಬ್ರಿಟಿಷ್‌ ಕಾಲ, ಜಲಿಯನ್‌ ವಾಲಾಬಾಗ್, ಹಿಟ್ಲರ್ ಮುಸಲೋನಿಯವರ ಆಡಳಿತವನ್ನು ನೆನಪಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಿಜೆಪಿ ಸರ್ಕಾರಕ್ಕೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲ. ಸಂವಿಧಾನದ ಗೌರವ ಇಲ್ಲ. ಅದಕ್ಕಾಗಿ ಇಂಟರ್‌ನೆಟ್‌, ಸಾಮಾಜಿಕ ಮಾಧ್ಯಮಗಳನ್ನು ಬಂದ್‌ ಮಾಡಿದ್ದಾರೆ. ಸುಪ್ರೀಂ ಕೋರ್ಟ್‌‌ನಲ್ಲಿ ಪ್ರಕರಣವಿದೆ. ದೇಶಾದ್ಯಂತ ಹೋರಾಟ ನಡೆಯುತ್ತಿದೆ. ಈಗಿದ್ದಾಗ ಈ ಕಾಯ್ದೆಯನ್ನು ಹೇಗೆ ಜಾರಿಗೊಳಿಸಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಿದ್ದರಾಮಯ್ಯನವರ ಹೇಳಿಕೆ ಸ್ವಾಗತಾರ್ಹ.
    ನ್ಯಾಯ ಕೇಳುವವರನ್ನು ಕೊಲ್ಲುವ ಹಕ್ಕು ಸರ್ಕಾರಕ್ಕೆ ಇಲ್ಲ.

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...