Homeಕರ್ನಾಟಕಇದು ಸರ್ಕಾರದ ಯೋಜಿತ ಕೊಲೆ, ನ್ಯಾಯಾಂಗ ತನಿಖೆಯಾಗಲಿ: ಇಂದು ಮಂಗಳೂರಿಗೆ ಸಿದ್ದರಾಮಯ್ಯ

ಇದು ಸರ್ಕಾರದ ಯೋಜಿತ ಕೊಲೆ, ನ್ಯಾಯಾಂಗ ತನಿಖೆಯಾಗಲಿ: ಇಂದು ಮಂಗಳೂರಿಗೆ ಸಿದ್ದರಾಮಯ್ಯ

ದೇಶದ ಜನ ಜಾತಿ ಮತ ಲಿಂಗಬೇಧ ತೊರೆದು ಹೋರಾಡುತ್ತಿದ್ದಾರೆ. ರಾಮಚಂದ್ರ ಗುಹಾ ಮುಸಲ್ಮಾನರೆ ಎಂದು ಸಿದ್ದು ಪ್ರಶ್ನಿಸಿದ್ದಾರೆ

- Advertisement -
- Advertisement -

144 ಸೆಕ್ಷನ್‌ ಉಲ್ಲಂಘಿಸಿ ಎಂದು ಯಾವುದೇ ರಾಜಕೀಯ ಪಕ್ಷಗಳು ಕರೆ ಕೊಟ್ಟಿರಲಿಲ್ಲ. ಜನ ಪಕ್ಷಾತೀತವಾಗಿ ಕರಾಳ ಕಾಯ್ದೆಯ ವಿರುದ್ಧ ಹೋರಾಡುತ್ತಿದ್ದರು. ಅವರು ಮೇಲೆ ಗುಂಡು ಹೊಡೆಯುವುದು ಎಂದರೇನು? ಇದು ಹಿಟ್ಲರ್‌ ಮುಸ್ಸಲೋನಿ ರಾಜ್ಯವೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ನಾನು ಈಗ 2 ಗಂಟೆಗೆ ಮಂಗಳೂರಿಗೆ ಹೋಗುತ್ತಿದ್ದೇನೆ. ಜನರಿಗೆ ಸಾಂತ್ವನ ಹೇಳಲು ಜನರ ಪ್ರತಿನಿಧಿಯಾಗಿ ಹೋಗುತ್ತಿದ್ದೇನೆ. ಅಲ್ಲಿ ಅಮಾನುಷವಾಗಿ ಕೊಂದಿದ್ದಾರೆ ಇಬ್ಬರನ್ನು.. ಅವರ ಕುಟುಂಬಕ್ಕೆ ಪರಿಹಾರ ಕೊಡಬೇಕು. ಆ ಜೀವಗಳಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಅಸಮಾಧಾನ ವ್ಯಕ್ತಿಪಡಿಸಿದ್ದಾರೆ.

ಏನ್ರಿ ಗುಂಡು ಹೊಡೆದರೂ ಯಾರೂ ಸತ್ತಿಲ್ಲ ಎಂದು ಒಬ್ಬ ಪೊಲೀಸ್‌ ಹೇಳುವ ವಿಡಿಯೋ ಟಿವಿಯಲ್ಲಿ ನೋಡಿದೆ. ಸರ್ಕಾರದಿಂದ ಸೂಚನೆಯಿಲ್ಲದೇ ಗುಂಡುಹೊಡೆದರೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ದೇಶಾದ್ಯಂತ ಹಿಂಸೆಯ ಹಿಂದೆ ಇರುವವರು ನರೇಂದ್ರ ಮೋದಿ ಮತ್ತು ಅಮಿತ್‌ ಶಾ. ಅವರು ಕರ್ನಾಟಕದಲ್ಲಿ ಯಡಿಯೂರಪ್ಪನವರ ಸರ್ಕಾರದ ಮೂಲಕ ಹಿಂಸೆ ಉಂಟುಮಾಡುತ್ತಿದ್ದಾರೆ. ನಾನು ಪೊಲೀಸರ ಅಮಾನವೀಯ ವರ್ತನೆಯನ್ನು, ಸರ್ಕಾರದ ಧೋರಣೆಯನ್ನು ಖಂಡಿಸುತ್ತೇನೆ. ಮೂಲಭೂತ ಹಕ್ಕುಗಳನ್ನು ದಮನ ಮಾಡುತ್ತಿರುವ ಈ ಸರ್ಕಾರ ವಿರುದ್ಧ ಹೋರಾಡುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ನಮ್ಮ ರಾಜ್ಯದ ಜನತೆ ಶಾಂತಿಪ್ರಿಯರು. ಈ ನೆಲದ ಕಾನೂನಿಗೆ ಗೌರವಕೊಡುವವರು. ನಮ್ಮ ಆಡಳಿತದಲ್ಲಿ ಒಂದು ಸಣ್ಣ ಲಾಠಿಚಾರ್ಜ್‌ ಬಿಟ್ಟರೆ ಉಳಿದಂತೆ ಯಾವುದೇ ಹೋರಾಟಗಳನ್ನು ದಮನ ಮಾಡಿಲ್ಲ. ಐದು ವರ್ಷಗಳಲ್ಲಿ ನಮಗೆ ಬಂದೂಕುಗಳು ನೆನಪಿಗೆ ಬರಲೇ ಇಲ್ಲ. ಬಡವರಿಗೆ ಅಕ್ಕಿ, ಮಕ್ಕಳಿಗೆ ಹಾಲು, ಮೊಟ್ಟೆ ಕೊಡಬೇಕು, ರೈತರ ಸಾಲ ಮನ್ನಾ ಮಾಡೋದು, ಇದೇ ನಮ್ಮ ಉದ್ದೇಶವಾಗಿತ್ತು. ಕಬ್ಬು ಬೆಳೆಗಾರರು ದೊಡ್ಡ ಹೋರಾಟ ನಡೆಸಿದ್ದರು. ನಾವು ಅದಕ್ಕೆ ಅವಕಾಶ ನೀಡಿದ್ದಲ್ಲದೇ ಶಾಂತಿಯುತ ಮಾತುಕತೆ ಮೂಲಕ ಅದನ್ನು ಬಗೆಹರಿಸಿದ್ದೆವು. ಆದರೆ ಈ ಸರ್ಕಾರ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ.

ರಾಮಚಂದ್ರಗುಹಾ ಒಬ್ಬ ದೊಡ್ಡ ಇತಿಹಾಸಕಾರ. ಅವರು ನಿನ್ನೆ ಟೌನ್‌ಹಾಲ್‌ ಮುಂದೆ ಗಲಾಟೆ ಮಾಡುತ್ತಿರಲಿಲ್ಲ. ಶಾಂತ ರೀತಿಯಲ್ಲಿ ಪ್ರತಿಭಟಿಸುತ್ತಿದ್ದರು. ಅವರು ಅಭಿಪ್ರಾಯ ಹೇಳಲು ಬಿಡದ ಪೊಲೀಸರನ್ನು ಪಾಪ ಅವರನ್ನು ಎಳೆದಾಡಿ ಬಂಧಿಸಿದ್ದಾರೆ. ಇದು ರಾಜ್ಯಕ್ಕೆ ನಾಚಿಕೆಯಲ್ಲವೇ ಎಂದಿದ್ದಾರೆ.

ಈ ಕಾಯ್ದೆಯಲ್ಲಿ ಮೂರು ದೇಶಗಳಿಂದ ಬಂದಿರುವ ಮುಸ್ಲಿಮೇತರರಿಗೆ ಪೌರತ್ವ ಕೊಡುತ್ತೀವಿ ಎಂದು ಏಕೆ ಬರೆದಿದ್ದೀರಿ? ಇದು ತಾರತಮ್ಯ ಅಲ್ಲವೇ? ಇದಕ್ಕೆ ಒಂದು ಧರ್ಮವನ್ನು ಟಾರ್ಗೆಟ್‌ ಮಾಡುತ್ತಿಲ್ಲವೇ? ಅದಕ್ಕೆ ಜನ ಪ್ರತಿಭಟನೆ ನಡೆಸುತ್ತಿದ್ದಾರೆ. ದೇಶದ ಜನ ಜಾತಿ ಮತ ಲಿಂಗಬೇಧ ತೊರೆದು ಹೋರಾಡುತ್ತಿದ್ದಾರೆ. ರಾಮಚಂದ್ರ ಗುಹಾ ಮುಸಲ್ಮಾನರೆ ಎಂದು ಸಿದ್ದು ಪ್ರಶ್ನಿಸಿದ್ದಾರೆ.

ದೇಶದ ಆರ್ಥಿಕ ಪರಿಸ್ಥಿತಿ ಕುಸಿದುಹೋಗಿದೆ. ಜಿಡಿಪಿ ನಾಲ್ಕು ಕ್ಕಿಂತ ಕಡಿಮೆ. ನಿರುದ್ಯೋಗ ೪೫ ವರ್ಷ ಬೆಲೆಏರಿಕೆ ಗಗನ, ಫ್ಯಾಕ್ಟರಿ ಮುಚ್ಚಿಹೋಗುತ್ತಿದೆ. ಜನ ಬೀದಿಗೆ ಬೀಳುತ್ತಿದ್ದಾರೆ. ಇದನ್ನು ಮರೆಮಾಚಲು ಸರ್ಕಾರ ಈ ಕಾಯ್ದೆ ಜಾರಿಗೆ ತರುತ್ತಿದೆ.

ಜನರ ನೈಜ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು ಅಲ್ವಾ.. ಅಮಿತ್‌ ಶಾ ಈ ಕಾಯದೆ ಕಾಂಟ್ರವರ್ಸಿ ಅಲ್ಲಾ ಎಂದು ಹೇಳಿದ್ದಾರೆ. ಹಾಗಾದರೆ ನಾವು ಈ ದೇಶದ ಜನ ಎಂದು ಖಚಿತಪಡಿಸಲು ಜನ ಏಕೆ ರಿಸ್ಕ್‌ ತೆಗೆದುಕೊಳ್ಳಬೇಕು ಇದು ಬ್ರಿಟಿಷ್‌ ಕಾಲ, ಜಲಿಯನ್‌ ವಾಲಾಬಾಗ್, ಹಿಟ್ಲರ್ ಮುಸಲೋನಿಯವರ ಆಡಳಿತವನ್ನು ನೆನಪಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಿಜೆಪಿ ಸರ್ಕಾರಕ್ಕೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲ. ಸಂವಿಧಾನದ ಗೌರವ ಇಲ್ಲ. ಅದಕ್ಕಾಗಿ ಇಂಟರ್‌ನೆಟ್‌, ಸಾಮಾಜಿಕ ಮಾಧ್ಯಮಗಳನ್ನು ಬಂದ್‌ ಮಾಡಿದ್ದಾರೆ. ಸುಪ್ರೀಂ ಕೋರ್ಟ್‌‌ನಲ್ಲಿ ಪ್ರಕರಣವಿದೆ. ದೇಶಾದ್ಯಂತ ಹೋರಾಟ ನಡೆಯುತ್ತಿದೆ. ಈಗಿದ್ದಾಗ ಈ ಕಾಯ್ದೆಯನ್ನು ಹೇಗೆ ಜಾರಿಗೊಳಿಸಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಿದ್ದರಾಮಯ್ಯನವರ ಹೇಳಿಕೆ ಸ್ವಾಗತಾರ್ಹ.
    ನ್ಯಾಯ ಕೇಳುವವರನ್ನು ಕೊಲ್ಲುವ ಹಕ್ಕು ಸರ್ಕಾರಕ್ಕೆ ಇಲ್ಲ.

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...