Homeಕರ್ನಾಟಕಇದು ಸರ್ಕಾರದ ಯೋಜಿತ ಕೊಲೆ, ನ್ಯಾಯಾಂಗ ತನಿಖೆಯಾಗಲಿ: ಇಂದು ಮಂಗಳೂರಿಗೆ ಸಿದ್ದರಾಮಯ್ಯ

ಇದು ಸರ್ಕಾರದ ಯೋಜಿತ ಕೊಲೆ, ನ್ಯಾಯಾಂಗ ತನಿಖೆಯಾಗಲಿ: ಇಂದು ಮಂಗಳೂರಿಗೆ ಸಿದ್ದರಾಮಯ್ಯ

ದೇಶದ ಜನ ಜಾತಿ ಮತ ಲಿಂಗಬೇಧ ತೊರೆದು ಹೋರಾಡುತ್ತಿದ್ದಾರೆ. ರಾಮಚಂದ್ರ ಗುಹಾ ಮುಸಲ್ಮಾನರೆ ಎಂದು ಸಿದ್ದು ಪ್ರಶ್ನಿಸಿದ್ದಾರೆ

- Advertisement -
- Advertisement -

144 ಸೆಕ್ಷನ್‌ ಉಲ್ಲಂಘಿಸಿ ಎಂದು ಯಾವುದೇ ರಾಜಕೀಯ ಪಕ್ಷಗಳು ಕರೆ ಕೊಟ್ಟಿರಲಿಲ್ಲ. ಜನ ಪಕ್ಷಾತೀತವಾಗಿ ಕರಾಳ ಕಾಯ್ದೆಯ ವಿರುದ್ಧ ಹೋರಾಡುತ್ತಿದ್ದರು. ಅವರು ಮೇಲೆ ಗುಂಡು ಹೊಡೆಯುವುದು ಎಂದರೇನು? ಇದು ಹಿಟ್ಲರ್‌ ಮುಸ್ಸಲೋನಿ ರಾಜ್ಯವೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ನಾನು ಈಗ 2 ಗಂಟೆಗೆ ಮಂಗಳೂರಿಗೆ ಹೋಗುತ್ತಿದ್ದೇನೆ. ಜನರಿಗೆ ಸಾಂತ್ವನ ಹೇಳಲು ಜನರ ಪ್ರತಿನಿಧಿಯಾಗಿ ಹೋಗುತ್ತಿದ್ದೇನೆ. ಅಲ್ಲಿ ಅಮಾನುಷವಾಗಿ ಕೊಂದಿದ್ದಾರೆ ಇಬ್ಬರನ್ನು.. ಅವರ ಕುಟುಂಬಕ್ಕೆ ಪರಿಹಾರ ಕೊಡಬೇಕು. ಆ ಜೀವಗಳಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಅಸಮಾಧಾನ ವ್ಯಕ್ತಿಪಡಿಸಿದ್ದಾರೆ.

ಏನ್ರಿ ಗುಂಡು ಹೊಡೆದರೂ ಯಾರೂ ಸತ್ತಿಲ್ಲ ಎಂದು ಒಬ್ಬ ಪೊಲೀಸ್‌ ಹೇಳುವ ವಿಡಿಯೋ ಟಿವಿಯಲ್ಲಿ ನೋಡಿದೆ. ಸರ್ಕಾರದಿಂದ ಸೂಚನೆಯಿಲ್ಲದೇ ಗುಂಡುಹೊಡೆದರೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ದೇಶಾದ್ಯಂತ ಹಿಂಸೆಯ ಹಿಂದೆ ಇರುವವರು ನರೇಂದ್ರ ಮೋದಿ ಮತ್ತು ಅಮಿತ್‌ ಶಾ. ಅವರು ಕರ್ನಾಟಕದಲ್ಲಿ ಯಡಿಯೂರಪ್ಪನವರ ಸರ್ಕಾರದ ಮೂಲಕ ಹಿಂಸೆ ಉಂಟುಮಾಡುತ್ತಿದ್ದಾರೆ. ನಾನು ಪೊಲೀಸರ ಅಮಾನವೀಯ ವರ್ತನೆಯನ್ನು, ಸರ್ಕಾರದ ಧೋರಣೆಯನ್ನು ಖಂಡಿಸುತ್ತೇನೆ. ಮೂಲಭೂತ ಹಕ್ಕುಗಳನ್ನು ದಮನ ಮಾಡುತ್ತಿರುವ ಈ ಸರ್ಕಾರ ವಿರುದ್ಧ ಹೋರಾಡುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ನಮ್ಮ ರಾಜ್ಯದ ಜನತೆ ಶಾಂತಿಪ್ರಿಯರು. ಈ ನೆಲದ ಕಾನೂನಿಗೆ ಗೌರವಕೊಡುವವರು. ನಮ್ಮ ಆಡಳಿತದಲ್ಲಿ ಒಂದು ಸಣ್ಣ ಲಾಠಿಚಾರ್ಜ್‌ ಬಿಟ್ಟರೆ ಉಳಿದಂತೆ ಯಾವುದೇ ಹೋರಾಟಗಳನ್ನು ದಮನ ಮಾಡಿಲ್ಲ. ಐದು ವರ್ಷಗಳಲ್ಲಿ ನಮಗೆ ಬಂದೂಕುಗಳು ನೆನಪಿಗೆ ಬರಲೇ ಇಲ್ಲ. ಬಡವರಿಗೆ ಅಕ್ಕಿ, ಮಕ್ಕಳಿಗೆ ಹಾಲು, ಮೊಟ್ಟೆ ಕೊಡಬೇಕು, ರೈತರ ಸಾಲ ಮನ್ನಾ ಮಾಡೋದು, ಇದೇ ನಮ್ಮ ಉದ್ದೇಶವಾಗಿತ್ತು. ಕಬ್ಬು ಬೆಳೆಗಾರರು ದೊಡ್ಡ ಹೋರಾಟ ನಡೆಸಿದ್ದರು. ನಾವು ಅದಕ್ಕೆ ಅವಕಾಶ ನೀಡಿದ್ದಲ್ಲದೇ ಶಾಂತಿಯುತ ಮಾತುಕತೆ ಮೂಲಕ ಅದನ್ನು ಬಗೆಹರಿಸಿದ್ದೆವು. ಆದರೆ ಈ ಸರ್ಕಾರ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ.

ರಾಮಚಂದ್ರಗುಹಾ ಒಬ್ಬ ದೊಡ್ಡ ಇತಿಹಾಸಕಾರ. ಅವರು ನಿನ್ನೆ ಟೌನ್‌ಹಾಲ್‌ ಮುಂದೆ ಗಲಾಟೆ ಮಾಡುತ್ತಿರಲಿಲ್ಲ. ಶಾಂತ ರೀತಿಯಲ್ಲಿ ಪ್ರತಿಭಟಿಸುತ್ತಿದ್ದರು. ಅವರು ಅಭಿಪ್ರಾಯ ಹೇಳಲು ಬಿಡದ ಪೊಲೀಸರನ್ನು ಪಾಪ ಅವರನ್ನು ಎಳೆದಾಡಿ ಬಂಧಿಸಿದ್ದಾರೆ. ಇದು ರಾಜ್ಯಕ್ಕೆ ನಾಚಿಕೆಯಲ್ಲವೇ ಎಂದಿದ್ದಾರೆ.

ಈ ಕಾಯ್ದೆಯಲ್ಲಿ ಮೂರು ದೇಶಗಳಿಂದ ಬಂದಿರುವ ಮುಸ್ಲಿಮೇತರರಿಗೆ ಪೌರತ್ವ ಕೊಡುತ್ತೀವಿ ಎಂದು ಏಕೆ ಬರೆದಿದ್ದೀರಿ? ಇದು ತಾರತಮ್ಯ ಅಲ್ಲವೇ? ಇದಕ್ಕೆ ಒಂದು ಧರ್ಮವನ್ನು ಟಾರ್ಗೆಟ್‌ ಮಾಡುತ್ತಿಲ್ಲವೇ? ಅದಕ್ಕೆ ಜನ ಪ್ರತಿಭಟನೆ ನಡೆಸುತ್ತಿದ್ದಾರೆ. ದೇಶದ ಜನ ಜಾತಿ ಮತ ಲಿಂಗಬೇಧ ತೊರೆದು ಹೋರಾಡುತ್ತಿದ್ದಾರೆ. ರಾಮಚಂದ್ರ ಗುಹಾ ಮುಸಲ್ಮಾನರೆ ಎಂದು ಸಿದ್ದು ಪ್ರಶ್ನಿಸಿದ್ದಾರೆ.

ದೇಶದ ಆರ್ಥಿಕ ಪರಿಸ್ಥಿತಿ ಕುಸಿದುಹೋಗಿದೆ. ಜಿಡಿಪಿ ನಾಲ್ಕು ಕ್ಕಿಂತ ಕಡಿಮೆ. ನಿರುದ್ಯೋಗ ೪೫ ವರ್ಷ ಬೆಲೆಏರಿಕೆ ಗಗನ, ಫ್ಯಾಕ್ಟರಿ ಮುಚ್ಚಿಹೋಗುತ್ತಿದೆ. ಜನ ಬೀದಿಗೆ ಬೀಳುತ್ತಿದ್ದಾರೆ. ಇದನ್ನು ಮರೆಮಾಚಲು ಸರ್ಕಾರ ಈ ಕಾಯ್ದೆ ಜಾರಿಗೆ ತರುತ್ತಿದೆ.

ಜನರ ನೈಜ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು ಅಲ್ವಾ.. ಅಮಿತ್‌ ಶಾ ಈ ಕಾಯದೆ ಕಾಂಟ್ರವರ್ಸಿ ಅಲ್ಲಾ ಎಂದು ಹೇಳಿದ್ದಾರೆ. ಹಾಗಾದರೆ ನಾವು ಈ ದೇಶದ ಜನ ಎಂದು ಖಚಿತಪಡಿಸಲು ಜನ ಏಕೆ ರಿಸ್ಕ್‌ ತೆಗೆದುಕೊಳ್ಳಬೇಕು ಇದು ಬ್ರಿಟಿಷ್‌ ಕಾಲ, ಜಲಿಯನ್‌ ವಾಲಾಬಾಗ್, ಹಿಟ್ಲರ್ ಮುಸಲೋನಿಯವರ ಆಡಳಿತವನ್ನು ನೆನಪಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಿಜೆಪಿ ಸರ್ಕಾರಕ್ಕೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲ. ಸಂವಿಧಾನದ ಗೌರವ ಇಲ್ಲ. ಅದಕ್ಕಾಗಿ ಇಂಟರ್‌ನೆಟ್‌, ಸಾಮಾಜಿಕ ಮಾಧ್ಯಮಗಳನ್ನು ಬಂದ್‌ ಮಾಡಿದ್ದಾರೆ. ಸುಪ್ರೀಂ ಕೋರ್ಟ್‌‌ನಲ್ಲಿ ಪ್ರಕರಣವಿದೆ. ದೇಶಾದ್ಯಂತ ಹೋರಾಟ ನಡೆಯುತ್ತಿದೆ. ಈಗಿದ್ದಾಗ ಈ ಕಾಯ್ದೆಯನ್ನು ಹೇಗೆ ಜಾರಿಗೊಳಿಸಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಿದ್ದರಾಮಯ್ಯನವರ ಹೇಳಿಕೆ ಸ್ವಾಗತಾರ್ಹ.
    ನ್ಯಾಯ ಕೇಳುವವರನ್ನು ಕೊಲ್ಲುವ ಹಕ್ಕು ಸರ್ಕಾರಕ್ಕೆ ಇಲ್ಲ.

LEAVE A REPLY

Please enter your comment!
Please enter your name here

- Advertisment -

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...

ಸಾಲ-ವಂಚನೆ-ಹಣ ವರ್ಗಾವಣೆ ಪ್ರಕರಣ: ಅಂಬಾನಿ ಗ್ರೂಪ್ ಮಾಜಿ ಕಾರ್ಯನಿರ್ವಾಹಕ ಅಮಿತಾಬ್ ಜುಂಜುನ್‌ವಾಲಾ ಅವರನ್ನು ಬಂಧಿಸಿದ ಇಡಿ

ನವದೆಹಲಿ: ಬ್ಯಾಂಕ್ ಸಾಲ ವಂಚನೆ-ಸಂಬಂಧಿತ ಹಣ ವರ್ಗಾವಣೆ ಪ್ರಕರಣದಲ್ಲಿ ಅನಿಲ್ ಧೀರೂಭಾಯಿ ಅಂಬಾನಿ ಗ್ರೂಪ್ (ADAG) ನ ಮಾಜಿ ಹಿರಿಯ ಕಾರ್ಯನಿರ್ವಾಹಕ ಅಮಿತಾಭ್ ಜುನ್ಜುನ್ವಾಲಾ ಅವರನ್ನು ಜಾರಿ ನಿರ್ದೇಶನಾಲಯ (ED) ಬುಧವಾರ ಬಂಧಿಸಿದೆ...

ಲೈಂಗಿಕ ದೌರ್ಜನ್ಯ ವಿವಾದದ ಬಳಿಕ ಕಾರ್ಯಾಚರಣೆ ಸ್ಥಗಿತಗೊಳಿಸಿದ ನಾಸಿಕ್ ಟಿಸಿಎಸ್; ಮನೆಯಿಂದಲೇ ಕೆಲಸ ಮಾಡುತ್ತಿರುವ ಸಿಬ್ಬಂದಿ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ನ ವ್ಯವಹಾರ ಪ್ರಕ್ರಿಯೆಯ ಹೊರಗುತ್ತಿಗೆ (ಬಿಪಿಒ) ಕೇಂದ್ರದಲ್ಲಿ ಲೈಂಗಿಕ ದೌರ್ಜನ್ಯ ಮತ್ತು ಬಲವಂತದ ಮತಾಂತರ ಪ್ರಕರಣಗಳ ವಿವಾದದ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಉದ್ಯೋಗಿಗಳಿಗೆ...