Homeಕರ್ನಾಟಕಇದು ಸರ್ಕಾರದ ಯೋಜಿತ ಕೊಲೆ, ನ್ಯಾಯಾಂಗ ತನಿಖೆಯಾಗಲಿ: ಇಂದು ಮಂಗಳೂರಿಗೆ ಸಿದ್ದರಾಮಯ್ಯ

ಇದು ಸರ್ಕಾರದ ಯೋಜಿತ ಕೊಲೆ, ನ್ಯಾಯಾಂಗ ತನಿಖೆಯಾಗಲಿ: ಇಂದು ಮಂಗಳೂರಿಗೆ ಸಿದ್ದರಾಮಯ್ಯ

ದೇಶದ ಜನ ಜಾತಿ ಮತ ಲಿಂಗಬೇಧ ತೊರೆದು ಹೋರಾಡುತ್ತಿದ್ದಾರೆ. ರಾಮಚಂದ್ರ ಗುಹಾ ಮುಸಲ್ಮಾನರೆ ಎಂದು ಸಿದ್ದು ಪ್ರಶ್ನಿಸಿದ್ದಾರೆ

- Advertisement -
- Advertisement -

144 ಸೆಕ್ಷನ್‌ ಉಲ್ಲಂಘಿಸಿ ಎಂದು ಯಾವುದೇ ರಾಜಕೀಯ ಪಕ್ಷಗಳು ಕರೆ ಕೊಟ್ಟಿರಲಿಲ್ಲ. ಜನ ಪಕ್ಷಾತೀತವಾಗಿ ಕರಾಳ ಕಾಯ್ದೆಯ ವಿರುದ್ಧ ಹೋರಾಡುತ್ತಿದ್ದರು. ಅವರು ಮೇಲೆ ಗುಂಡು ಹೊಡೆಯುವುದು ಎಂದರೇನು? ಇದು ಹಿಟ್ಲರ್‌ ಮುಸ್ಸಲೋನಿ ರಾಜ್ಯವೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ನಾನು ಈಗ 2 ಗಂಟೆಗೆ ಮಂಗಳೂರಿಗೆ ಹೋಗುತ್ತಿದ್ದೇನೆ. ಜನರಿಗೆ ಸಾಂತ್ವನ ಹೇಳಲು ಜನರ ಪ್ರತಿನಿಧಿಯಾಗಿ ಹೋಗುತ್ತಿದ್ದೇನೆ. ಅಲ್ಲಿ ಅಮಾನುಷವಾಗಿ ಕೊಂದಿದ್ದಾರೆ ಇಬ್ಬರನ್ನು.. ಅವರ ಕುಟುಂಬಕ್ಕೆ ಪರಿಹಾರ ಕೊಡಬೇಕು. ಆ ಜೀವಗಳಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಅಸಮಾಧಾನ ವ್ಯಕ್ತಿಪಡಿಸಿದ್ದಾರೆ.

ಏನ್ರಿ ಗುಂಡು ಹೊಡೆದರೂ ಯಾರೂ ಸತ್ತಿಲ್ಲ ಎಂದು ಒಬ್ಬ ಪೊಲೀಸ್‌ ಹೇಳುವ ವಿಡಿಯೋ ಟಿವಿಯಲ್ಲಿ ನೋಡಿದೆ. ಸರ್ಕಾರದಿಂದ ಸೂಚನೆಯಿಲ್ಲದೇ ಗುಂಡುಹೊಡೆದರೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ದೇಶಾದ್ಯಂತ ಹಿಂಸೆಯ ಹಿಂದೆ ಇರುವವರು ನರೇಂದ್ರ ಮೋದಿ ಮತ್ತು ಅಮಿತ್‌ ಶಾ. ಅವರು ಕರ್ನಾಟಕದಲ್ಲಿ ಯಡಿಯೂರಪ್ಪನವರ ಸರ್ಕಾರದ ಮೂಲಕ ಹಿಂಸೆ ಉಂಟುಮಾಡುತ್ತಿದ್ದಾರೆ. ನಾನು ಪೊಲೀಸರ ಅಮಾನವೀಯ ವರ್ತನೆಯನ್ನು, ಸರ್ಕಾರದ ಧೋರಣೆಯನ್ನು ಖಂಡಿಸುತ್ತೇನೆ. ಮೂಲಭೂತ ಹಕ್ಕುಗಳನ್ನು ದಮನ ಮಾಡುತ್ತಿರುವ ಈ ಸರ್ಕಾರ ವಿರುದ್ಧ ಹೋರಾಡುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ನಮ್ಮ ರಾಜ್ಯದ ಜನತೆ ಶಾಂತಿಪ್ರಿಯರು. ಈ ನೆಲದ ಕಾನೂನಿಗೆ ಗೌರವಕೊಡುವವರು. ನಮ್ಮ ಆಡಳಿತದಲ್ಲಿ ಒಂದು ಸಣ್ಣ ಲಾಠಿಚಾರ್ಜ್‌ ಬಿಟ್ಟರೆ ಉಳಿದಂತೆ ಯಾವುದೇ ಹೋರಾಟಗಳನ್ನು ದಮನ ಮಾಡಿಲ್ಲ. ಐದು ವರ್ಷಗಳಲ್ಲಿ ನಮಗೆ ಬಂದೂಕುಗಳು ನೆನಪಿಗೆ ಬರಲೇ ಇಲ್ಲ. ಬಡವರಿಗೆ ಅಕ್ಕಿ, ಮಕ್ಕಳಿಗೆ ಹಾಲು, ಮೊಟ್ಟೆ ಕೊಡಬೇಕು, ರೈತರ ಸಾಲ ಮನ್ನಾ ಮಾಡೋದು, ಇದೇ ನಮ್ಮ ಉದ್ದೇಶವಾಗಿತ್ತು. ಕಬ್ಬು ಬೆಳೆಗಾರರು ದೊಡ್ಡ ಹೋರಾಟ ನಡೆಸಿದ್ದರು. ನಾವು ಅದಕ್ಕೆ ಅವಕಾಶ ನೀಡಿದ್ದಲ್ಲದೇ ಶಾಂತಿಯುತ ಮಾತುಕತೆ ಮೂಲಕ ಅದನ್ನು ಬಗೆಹರಿಸಿದ್ದೆವು. ಆದರೆ ಈ ಸರ್ಕಾರ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ.

ರಾಮಚಂದ್ರಗುಹಾ ಒಬ್ಬ ದೊಡ್ಡ ಇತಿಹಾಸಕಾರ. ಅವರು ನಿನ್ನೆ ಟೌನ್‌ಹಾಲ್‌ ಮುಂದೆ ಗಲಾಟೆ ಮಾಡುತ್ತಿರಲಿಲ್ಲ. ಶಾಂತ ರೀತಿಯಲ್ಲಿ ಪ್ರತಿಭಟಿಸುತ್ತಿದ್ದರು. ಅವರು ಅಭಿಪ್ರಾಯ ಹೇಳಲು ಬಿಡದ ಪೊಲೀಸರನ್ನು ಪಾಪ ಅವರನ್ನು ಎಳೆದಾಡಿ ಬಂಧಿಸಿದ್ದಾರೆ. ಇದು ರಾಜ್ಯಕ್ಕೆ ನಾಚಿಕೆಯಲ್ಲವೇ ಎಂದಿದ್ದಾರೆ.

ಈ ಕಾಯ್ದೆಯಲ್ಲಿ ಮೂರು ದೇಶಗಳಿಂದ ಬಂದಿರುವ ಮುಸ್ಲಿಮೇತರರಿಗೆ ಪೌರತ್ವ ಕೊಡುತ್ತೀವಿ ಎಂದು ಏಕೆ ಬರೆದಿದ್ದೀರಿ? ಇದು ತಾರತಮ್ಯ ಅಲ್ಲವೇ? ಇದಕ್ಕೆ ಒಂದು ಧರ್ಮವನ್ನು ಟಾರ್ಗೆಟ್‌ ಮಾಡುತ್ತಿಲ್ಲವೇ? ಅದಕ್ಕೆ ಜನ ಪ್ರತಿಭಟನೆ ನಡೆಸುತ್ತಿದ್ದಾರೆ. ದೇಶದ ಜನ ಜಾತಿ ಮತ ಲಿಂಗಬೇಧ ತೊರೆದು ಹೋರಾಡುತ್ತಿದ್ದಾರೆ. ರಾಮಚಂದ್ರ ಗುಹಾ ಮುಸಲ್ಮಾನರೆ ಎಂದು ಸಿದ್ದು ಪ್ರಶ್ನಿಸಿದ್ದಾರೆ.

ದೇಶದ ಆರ್ಥಿಕ ಪರಿಸ್ಥಿತಿ ಕುಸಿದುಹೋಗಿದೆ. ಜಿಡಿಪಿ ನಾಲ್ಕು ಕ್ಕಿಂತ ಕಡಿಮೆ. ನಿರುದ್ಯೋಗ ೪೫ ವರ್ಷ ಬೆಲೆಏರಿಕೆ ಗಗನ, ಫ್ಯಾಕ್ಟರಿ ಮುಚ್ಚಿಹೋಗುತ್ತಿದೆ. ಜನ ಬೀದಿಗೆ ಬೀಳುತ್ತಿದ್ದಾರೆ. ಇದನ್ನು ಮರೆಮಾಚಲು ಸರ್ಕಾರ ಈ ಕಾಯ್ದೆ ಜಾರಿಗೆ ತರುತ್ತಿದೆ.

ಜನರ ನೈಜ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು ಅಲ್ವಾ.. ಅಮಿತ್‌ ಶಾ ಈ ಕಾಯದೆ ಕಾಂಟ್ರವರ್ಸಿ ಅಲ್ಲಾ ಎಂದು ಹೇಳಿದ್ದಾರೆ. ಹಾಗಾದರೆ ನಾವು ಈ ದೇಶದ ಜನ ಎಂದು ಖಚಿತಪಡಿಸಲು ಜನ ಏಕೆ ರಿಸ್ಕ್‌ ತೆಗೆದುಕೊಳ್ಳಬೇಕು ಇದು ಬ್ರಿಟಿಷ್‌ ಕಾಲ, ಜಲಿಯನ್‌ ವಾಲಾಬಾಗ್, ಹಿಟ್ಲರ್ ಮುಸಲೋನಿಯವರ ಆಡಳಿತವನ್ನು ನೆನಪಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಿಜೆಪಿ ಸರ್ಕಾರಕ್ಕೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲ. ಸಂವಿಧಾನದ ಗೌರವ ಇಲ್ಲ. ಅದಕ್ಕಾಗಿ ಇಂಟರ್‌ನೆಟ್‌, ಸಾಮಾಜಿಕ ಮಾಧ್ಯಮಗಳನ್ನು ಬಂದ್‌ ಮಾಡಿದ್ದಾರೆ. ಸುಪ್ರೀಂ ಕೋರ್ಟ್‌‌ನಲ್ಲಿ ಪ್ರಕರಣವಿದೆ. ದೇಶಾದ್ಯಂತ ಹೋರಾಟ ನಡೆಯುತ್ತಿದೆ. ಈಗಿದ್ದಾಗ ಈ ಕಾಯ್ದೆಯನ್ನು ಹೇಗೆ ಜಾರಿಗೊಳಿಸಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಿದ್ದರಾಮಯ್ಯನವರ ಹೇಳಿಕೆ ಸ್ವಾಗತಾರ್ಹ.
    ನ್ಯಾಯ ಕೇಳುವವರನ್ನು ಕೊಲ್ಲುವ ಹಕ್ಕು ಸರ್ಕಾರಕ್ಕೆ ಇಲ್ಲ.

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...