Homeಕರ್ನಾಟಕಇದು ಸರ್ಕಾರದ ಯೋಜಿತ ಕೊಲೆ, ನ್ಯಾಯಾಂಗ ತನಿಖೆಯಾಗಲಿ: ಇಂದು ಮಂಗಳೂರಿಗೆ ಸಿದ್ದರಾಮಯ್ಯ

ಇದು ಸರ್ಕಾರದ ಯೋಜಿತ ಕೊಲೆ, ನ್ಯಾಯಾಂಗ ತನಿಖೆಯಾಗಲಿ: ಇಂದು ಮಂಗಳೂರಿಗೆ ಸಿದ್ದರಾಮಯ್ಯ

ದೇಶದ ಜನ ಜಾತಿ ಮತ ಲಿಂಗಬೇಧ ತೊರೆದು ಹೋರಾಡುತ್ತಿದ್ದಾರೆ. ರಾಮಚಂದ್ರ ಗುಹಾ ಮುಸಲ್ಮಾನರೆ ಎಂದು ಸಿದ್ದು ಪ್ರಶ್ನಿಸಿದ್ದಾರೆ

- Advertisement -
- Advertisement -

144 ಸೆಕ್ಷನ್‌ ಉಲ್ಲಂಘಿಸಿ ಎಂದು ಯಾವುದೇ ರಾಜಕೀಯ ಪಕ್ಷಗಳು ಕರೆ ಕೊಟ್ಟಿರಲಿಲ್ಲ. ಜನ ಪಕ್ಷಾತೀತವಾಗಿ ಕರಾಳ ಕಾಯ್ದೆಯ ವಿರುದ್ಧ ಹೋರಾಡುತ್ತಿದ್ದರು. ಅವರು ಮೇಲೆ ಗುಂಡು ಹೊಡೆಯುವುದು ಎಂದರೇನು? ಇದು ಹಿಟ್ಲರ್‌ ಮುಸ್ಸಲೋನಿ ರಾಜ್ಯವೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ನಾನು ಈಗ 2 ಗಂಟೆಗೆ ಮಂಗಳೂರಿಗೆ ಹೋಗುತ್ತಿದ್ದೇನೆ. ಜನರಿಗೆ ಸಾಂತ್ವನ ಹೇಳಲು ಜನರ ಪ್ರತಿನಿಧಿಯಾಗಿ ಹೋಗುತ್ತಿದ್ದೇನೆ. ಅಲ್ಲಿ ಅಮಾನುಷವಾಗಿ ಕೊಂದಿದ್ದಾರೆ ಇಬ್ಬರನ್ನು.. ಅವರ ಕುಟುಂಬಕ್ಕೆ ಪರಿಹಾರ ಕೊಡಬೇಕು. ಆ ಜೀವಗಳಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಅಸಮಾಧಾನ ವ್ಯಕ್ತಿಪಡಿಸಿದ್ದಾರೆ.

ಏನ್ರಿ ಗುಂಡು ಹೊಡೆದರೂ ಯಾರೂ ಸತ್ತಿಲ್ಲ ಎಂದು ಒಬ್ಬ ಪೊಲೀಸ್‌ ಹೇಳುವ ವಿಡಿಯೋ ಟಿವಿಯಲ್ಲಿ ನೋಡಿದೆ. ಸರ್ಕಾರದಿಂದ ಸೂಚನೆಯಿಲ್ಲದೇ ಗುಂಡುಹೊಡೆದರೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ದೇಶಾದ್ಯಂತ ಹಿಂಸೆಯ ಹಿಂದೆ ಇರುವವರು ನರೇಂದ್ರ ಮೋದಿ ಮತ್ತು ಅಮಿತ್‌ ಶಾ. ಅವರು ಕರ್ನಾಟಕದಲ್ಲಿ ಯಡಿಯೂರಪ್ಪನವರ ಸರ್ಕಾರದ ಮೂಲಕ ಹಿಂಸೆ ಉಂಟುಮಾಡುತ್ತಿದ್ದಾರೆ. ನಾನು ಪೊಲೀಸರ ಅಮಾನವೀಯ ವರ್ತನೆಯನ್ನು, ಸರ್ಕಾರದ ಧೋರಣೆಯನ್ನು ಖಂಡಿಸುತ್ತೇನೆ. ಮೂಲಭೂತ ಹಕ್ಕುಗಳನ್ನು ದಮನ ಮಾಡುತ್ತಿರುವ ಈ ಸರ್ಕಾರ ವಿರುದ್ಧ ಹೋರಾಡುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ನಮ್ಮ ರಾಜ್ಯದ ಜನತೆ ಶಾಂತಿಪ್ರಿಯರು. ಈ ನೆಲದ ಕಾನೂನಿಗೆ ಗೌರವಕೊಡುವವರು. ನಮ್ಮ ಆಡಳಿತದಲ್ಲಿ ಒಂದು ಸಣ್ಣ ಲಾಠಿಚಾರ್ಜ್‌ ಬಿಟ್ಟರೆ ಉಳಿದಂತೆ ಯಾವುದೇ ಹೋರಾಟಗಳನ್ನು ದಮನ ಮಾಡಿಲ್ಲ. ಐದು ವರ್ಷಗಳಲ್ಲಿ ನಮಗೆ ಬಂದೂಕುಗಳು ನೆನಪಿಗೆ ಬರಲೇ ಇಲ್ಲ. ಬಡವರಿಗೆ ಅಕ್ಕಿ, ಮಕ್ಕಳಿಗೆ ಹಾಲು, ಮೊಟ್ಟೆ ಕೊಡಬೇಕು, ರೈತರ ಸಾಲ ಮನ್ನಾ ಮಾಡೋದು, ಇದೇ ನಮ್ಮ ಉದ್ದೇಶವಾಗಿತ್ತು. ಕಬ್ಬು ಬೆಳೆಗಾರರು ದೊಡ್ಡ ಹೋರಾಟ ನಡೆಸಿದ್ದರು. ನಾವು ಅದಕ್ಕೆ ಅವಕಾಶ ನೀಡಿದ್ದಲ್ಲದೇ ಶಾಂತಿಯುತ ಮಾತುಕತೆ ಮೂಲಕ ಅದನ್ನು ಬಗೆಹರಿಸಿದ್ದೆವು. ಆದರೆ ಈ ಸರ್ಕಾರ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ.

ರಾಮಚಂದ್ರಗುಹಾ ಒಬ್ಬ ದೊಡ್ಡ ಇತಿಹಾಸಕಾರ. ಅವರು ನಿನ್ನೆ ಟೌನ್‌ಹಾಲ್‌ ಮುಂದೆ ಗಲಾಟೆ ಮಾಡುತ್ತಿರಲಿಲ್ಲ. ಶಾಂತ ರೀತಿಯಲ್ಲಿ ಪ್ರತಿಭಟಿಸುತ್ತಿದ್ದರು. ಅವರು ಅಭಿಪ್ರಾಯ ಹೇಳಲು ಬಿಡದ ಪೊಲೀಸರನ್ನು ಪಾಪ ಅವರನ್ನು ಎಳೆದಾಡಿ ಬಂಧಿಸಿದ್ದಾರೆ. ಇದು ರಾಜ್ಯಕ್ಕೆ ನಾಚಿಕೆಯಲ್ಲವೇ ಎಂದಿದ್ದಾರೆ.

ಈ ಕಾಯ್ದೆಯಲ್ಲಿ ಮೂರು ದೇಶಗಳಿಂದ ಬಂದಿರುವ ಮುಸ್ಲಿಮೇತರರಿಗೆ ಪೌರತ್ವ ಕೊಡುತ್ತೀವಿ ಎಂದು ಏಕೆ ಬರೆದಿದ್ದೀರಿ? ಇದು ತಾರತಮ್ಯ ಅಲ್ಲವೇ? ಇದಕ್ಕೆ ಒಂದು ಧರ್ಮವನ್ನು ಟಾರ್ಗೆಟ್‌ ಮಾಡುತ್ತಿಲ್ಲವೇ? ಅದಕ್ಕೆ ಜನ ಪ್ರತಿಭಟನೆ ನಡೆಸುತ್ತಿದ್ದಾರೆ. ದೇಶದ ಜನ ಜಾತಿ ಮತ ಲಿಂಗಬೇಧ ತೊರೆದು ಹೋರಾಡುತ್ತಿದ್ದಾರೆ. ರಾಮಚಂದ್ರ ಗುಹಾ ಮುಸಲ್ಮಾನರೆ ಎಂದು ಸಿದ್ದು ಪ್ರಶ್ನಿಸಿದ್ದಾರೆ.

ದೇಶದ ಆರ್ಥಿಕ ಪರಿಸ್ಥಿತಿ ಕುಸಿದುಹೋಗಿದೆ. ಜಿಡಿಪಿ ನಾಲ್ಕು ಕ್ಕಿಂತ ಕಡಿಮೆ. ನಿರುದ್ಯೋಗ ೪೫ ವರ್ಷ ಬೆಲೆಏರಿಕೆ ಗಗನ, ಫ್ಯಾಕ್ಟರಿ ಮುಚ್ಚಿಹೋಗುತ್ತಿದೆ. ಜನ ಬೀದಿಗೆ ಬೀಳುತ್ತಿದ್ದಾರೆ. ಇದನ್ನು ಮರೆಮಾಚಲು ಸರ್ಕಾರ ಈ ಕಾಯ್ದೆ ಜಾರಿಗೆ ತರುತ್ತಿದೆ.

ಜನರ ನೈಜ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು ಅಲ್ವಾ.. ಅಮಿತ್‌ ಶಾ ಈ ಕಾಯದೆ ಕಾಂಟ್ರವರ್ಸಿ ಅಲ್ಲಾ ಎಂದು ಹೇಳಿದ್ದಾರೆ. ಹಾಗಾದರೆ ನಾವು ಈ ದೇಶದ ಜನ ಎಂದು ಖಚಿತಪಡಿಸಲು ಜನ ಏಕೆ ರಿಸ್ಕ್‌ ತೆಗೆದುಕೊಳ್ಳಬೇಕು ಇದು ಬ್ರಿಟಿಷ್‌ ಕಾಲ, ಜಲಿಯನ್‌ ವಾಲಾಬಾಗ್, ಹಿಟ್ಲರ್ ಮುಸಲೋನಿಯವರ ಆಡಳಿತವನ್ನು ನೆನಪಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಿಜೆಪಿ ಸರ್ಕಾರಕ್ಕೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲ. ಸಂವಿಧಾನದ ಗೌರವ ಇಲ್ಲ. ಅದಕ್ಕಾಗಿ ಇಂಟರ್‌ನೆಟ್‌, ಸಾಮಾಜಿಕ ಮಾಧ್ಯಮಗಳನ್ನು ಬಂದ್‌ ಮಾಡಿದ್ದಾರೆ. ಸುಪ್ರೀಂ ಕೋರ್ಟ್‌‌ನಲ್ಲಿ ಪ್ರಕರಣವಿದೆ. ದೇಶಾದ್ಯಂತ ಹೋರಾಟ ನಡೆಯುತ್ತಿದೆ. ಈಗಿದ್ದಾಗ ಈ ಕಾಯ್ದೆಯನ್ನು ಹೇಗೆ ಜಾರಿಗೊಳಿಸಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಿದ್ದರಾಮಯ್ಯನವರ ಹೇಳಿಕೆ ಸ್ವಾಗತಾರ್ಹ.
    ನ್ಯಾಯ ಕೇಳುವವರನ್ನು ಕೊಲ್ಲುವ ಹಕ್ಕು ಸರ್ಕಾರಕ್ಕೆ ಇಲ್ಲ.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...