Homeಕರ್ನಾಟಕಇದು ಸರ್ಕಾರದ ಯೋಜಿತ ಕೊಲೆ, ನ್ಯಾಯಾಂಗ ತನಿಖೆಯಾಗಲಿ: ಇಂದು ಮಂಗಳೂರಿಗೆ ಸಿದ್ದರಾಮಯ್ಯ

ಇದು ಸರ್ಕಾರದ ಯೋಜಿತ ಕೊಲೆ, ನ್ಯಾಯಾಂಗ ತನಿಖೆಯಾಗಲಿ: ಇಂದು ಮಂಗಳೂರಿಗೆ ಸಿದ್ದರಾಮಯ್ಯ

ದೇಶದ ಜನ ಜಾತಿ ಮತ ಲಿಂಗಬೇಧ ತೊರೆದು ಹೋರಾಡುತ್ತಿದ್ದಾರೆ. ರಾಮಚಂದ್ರ ಗುಹಾ ಮುಸಲ್ಮಾನರೆ ಎಂದು ಸಿದ್ದು ಪ್ರಶ್ನಿಸಿದ್ದಾರೆ

- Advertisement -
- Advertisement -

144 ಸೆಕ್ಷನ್‌ ಉಲ್ಲಂಘಿಸಿ ಎಂದು ಯಾವುದೇ ರಾಜಕೀಯ ಪಕ್ಷಗಳು ಕರೆ ಕೊಟ್ಟಿರಲಿಲ್ಲ. ಜನ ಪಕ್ಷಾತೀತವಾಗಿ ಕರಾಳ ಕಾಯ್ದೆಯ ವಿರುದ್ಧ ಹೋರಾಡುತ್ತಿದ್ದರು. ಅವರು ಮೇಲೆ ಗುಂಡು ಹೊಡೆಯುವುದು ಎಂದರೇನು? ಇದು ಹಿಟ್ಲರ್‌ ಮುಸ್ಸಲೋನಿ ರಾಜ್ಯವೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ನಾನು ಈಗ 2 ಗಂಟೆಗೆ ಮಂಗಳೂರಿಗೆ ಹೋಗುತ್ತಿದ್ದೇನೆ. ಜನರಿಗೆ ಸಾಂತ್ವನ ಹೇಳಲು ಜನರ ಪ್ರತಿನಿಧಿಯಾಗಿ ಹೋಗುತ್ತಿದ್ದೇನೆ. ಅಲ್ಲಿ ಅಮಾನುಷವಾಗಿ ಕೊಂದಿದ್ದಾರೆ ಇಬ್ಬರನ್ನು.. ಅವರ ಕುಟುಂಬಕ್ಕೆ ಪರಿಹಾರ ಕೊಡಬೇಕು. ಆ ಜೀವಗಳಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಅಸಮಾಧಾನ ವ್ಯಕ್ತಿಪಡಿಸಿದ್ದಾರೆ.

ಏನ್ರಿ ಗುಂಡು ಹೊಡೆದರೂ ಯಾರೂ ಸತ್ತಿಲ್ಲ ಎಂದು ಒಬ್ಬ ಪೊಲೀಸ್‌ ಹೇಳುವ ವಿಡಿಯೋ ಟಿವಿಯಲ್ಲಿ ನೋಡಿದೆ. ಸರ್ಕಾರದಿಂದ ಸೂಚನೆಯಿಲ್ಲದೇ ಗುಂಡುಹೊಡೆದರೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ದೇಶಾದ್ಯಂತ ಹಿಂಸೆಯ ಹಿಂದೆ ಇರುವವರು ನರೇಂದ್ರ ಮೋದಿ ಮತ್ತು ಅಮಿತ್‌ ಶಾ. ಅವರು ಕರ್ನಾಟಕದಲ್ಲಿ ಯಡಿಯೂರಪ್ಪನವರ ಸರ್ಕಾರದ ಮೂಲಕ ಹಿಂಸೆ ಉಂಟುಮಾಡುತ್ತಿದ್ದಾರೆ. ನಾನು ಪೊಲೀಸರ ಅಮಾನವೀಯ ವರ್ತನೆಯನ್ನು, ಸರ್ಕಾರದ ಧೋರಣೆಯನ್ನು ಖಂಡಿಸುತ್ತೇನೆ. ಮೂಲಭೂತ ಹಕ್ಕುಗಳನ್ನು ದಮನ ಮಾಡುತ್ತಿರುವ ಈ ಸರ್ಕಾರ ವಿರುದ್ಧ ಹೋರಾಡುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ನಮ್ಮ ರಾಜ್ಯದ ಜನತೆ ಶಾಂತಿಪ್ರಿಯರು. ಈ ನೆಲದ ಕಾನೂನಿಗೆ ಗೌರವಕೊಡುವವರು. ನಮ್ಮ ಆಡಳಿತದಲ್ಲಿ ಒಂದು ಸಣ್ಣ ಲಾಠಿಚಾರ್ಜ್‌ ಬಿಟ್ಟರೆ ಉಳಿದಂತೆ ಯಾವುದೇ ಹೋರಾಟಗಳನ್ನು ದಮನ ಮಾಡಿಲ್ಲ. ಐದು ವರ್ಷಗಳಲ್ಲಿ ನಮಗೆ ಬಂದೂಕುಗಳು ನೆನಪಿಗೆ ಬರಲೇ ಇಲ್ಲ. ಬಡವರಿಗೆ ಅಕ್ಕಿ, ಮಕ್ಕಳಿಗೆ ಹಾಲು, ಮೊಟ್ಟೆ ಕೊಡಬೇಕು, ರೈತರ ಸಾಲ ಮನ್ನಾ ಮಾಡೋದು, ಇದೇ ನಮ್ಮ ಉದ್ದೇಶವಾಗಿತ್ತು. ಕಬ್ಬು ಬೆಳೆಗಾರರು ದೊಡ್ಡ ಹೋರಾಟ ನಡೆಸಿದ್ದರು. ನಾವು ಅದಕ್ಕೆ ಅವಕಾಶ ನೀಡಿದ್ದಲ್ಲದೇ ಶಾಂತಿಯುತ ಮಾತುಕತೆ ಮೂಲಕ ಅದನ್ನು ಬಗೆಹರಿಸಿದ್ದೆವು. ಆದರೆ ಈ ಸರ್ಕಾರ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ.

ರಾಮಚಂದ್ರಗುಹಾ ಒಬ್ಬ ದೊಡ್ಡ ಇತಿಹಾಸಕಾರ. ಅವರು ನಿನ್ನೆ ಟೌನ್‌ಹಾಲ್‌ ಮುಂದೆ ಗಲಾಟೆ ಮಾಡುತ್ತಿರಲಿಲ್ಲ. ಶಾಂತ ರೀತಿಯಲ್ಲಿ ಪ್ರತಿಭಟಿಸುತ್ತಿದ್ದರು. ಅವರು ಅಭಿಪ್ರಾಯ ಹೇಳಲು ಬಿಡದ ಪೊಲೀಸರನ್ನು ಪಾಪ ಅವರನ್ನು ಎಳೆದಾಡಿ ಬಂಧಿಸಿದ್ದಾರೆ. ಇದು ರಾಜ್ಯಕ್ಕೆ ನಾಚಿಕೆಯಲ್ಲವೇ ಎಂದಿದ್ದಾರೆ.

ಈ ಕಾಯ್ದೆಯಲ್ಲಿ ಮೂರು ದೇಶಗಳಿಂದ ಬಂದಿರುವ ಮುಸ್ಲಿಮೇತರರಿಗೆ ಪೌರತ್ವ ಕೊಡುತ್ತೀವಿ ಎಂದು ಏಕೆ ಬರೆದಿದ್ದೀರಿ? ಇದು ತಾರತಮ್ಯ ಅಲ್ಲವೇ? ಇದಕ್ಕೆ ಒಂದು ಧರ್ಮವನ್ನು ಟಾರ್ಗೆಟ್‌ ಮಾಡುತ್ತಿಲ್ಲವೇ? ಅದಕ್ಕೆ ಜನ ಪ್ರತಿಭಟನೆ ನಡೆಸುತ್ತಿದ್ದಾರೆ. ದೇಶದ ಜನ ಜಾತಿ ಮತ ಲಿಂಗಬೇಧ ತೊರೆದು ಹೋರಾಡುತ್ತಿದ್ದಾರೆ. ರಾಮಚಂದ್ರ ಗುಹಾ ಮುಸಲ್ಮಾನರೆ ಎಂದು ಸಿದ್ದು ಪ್ರಶ್ನಿಸಿದ್ದಾರೆ.

ದೇಶದ ಆರ್ಥಿಕ ಪರಿಸ್ಥಿತಿ ಕುಸಿದುಹೋಗಿದೆ. ಜಿಡಿಪಿ ನಾಲ್ಕು ಕ್ಕಿಂತ ಕಡಿಮೆ. ನಿರುದ್ಯೋಗ ೪೫ ವರ್ಷ ಬೆಲೆಏರಿಕೆ ಗಗನ, ಫ್ಯಾಕ್ಟರಿ ಮುಚ್ಚಿಹೋಗುತ್ತಿದೆ. ಜನ ಬೀದಿಗೆ ಬೀಳುತ್ತಿದ್ದಾರೆ. ಇದನ್ನು ಮರೆಮಾಚಲು ಸರ್ಕಾರ ಈ ಕಾಯ್ದೆ ಜಾರಿಗೆ ತರುತ್ತಿದೆ.

ಜನರ ನೈಜ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು ಅಲ್ವಾ.. ಅಮಿತ್‌ ಶಾ ಈ ಕಾಯದೆ ಕಾಂಟ್ರವರ್ಸಿ ಅಲ್ಲಾ ಎಂದು ಹೇಳಿದ್ದಾರೆ. ಹಾಗಾದರೆ ನಾವು ಈ ದೇಶದ ಜನ ಎಂದು ಖಚಿತಪಡಿಸಲು ಜನ ಏಕೆ ರಿಸ್ಕ್‌ ತೆಗೆದುಕೊಳ್ಳಬೇಕು ಇದು ಬ್ರಿಟಿಷ್‌ ಕಾಲ, ಜಲಿಯನ್‌ ವಾಲಾಬಾಗ್, ಹಿಟ್ಲರ್ ಮುಸಲೋನಿಯವರ ಆಡಳಿತವನ್ನು ನೆನಪಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಿಜೆಪಿ ಸರ್ಕಾರಕ್ಕೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲ. ಸಂವಿಧಾನದ ಗೌರವ ಇಲ್ಲ. ಅದಕ್ಕಾಗಿ ಇಂಟರ್‌ನೆಟ್‌, ಸಾಮಾಜಿಕ ಮಾಧ್ಯಮಗಳನ್ನು ಬಂದ್‌ ಮಾಡಿದ್ದಾರೆ. ಸುಪ್ರೀಂ ಕೋರ್ಟ್‌‌ನಲ್ಲಿ ಪ್ರಕರಣವಿದೆ. ದೇಶಾದ್ಯಂತ ಹೋರಾಟ ನಡೆಯುತ್ತಿದೆ. ಈಗಿದ್ದಾಗ ಈ ಕಾಯ್ದೆಯನ್ನು ಹೇಗೆ ಜಾರಿಗೊಳಿಸಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಿದ್ದರಾಮಯ್ಯನವರ ಹೇಳಿಕೆ ಸ್ವಾಗತಾರ್ಹ.
    ನ್ಯಾಯ ಕೇಳುವವರನ್ನು ಕೊಲ್ಲುವ ಹಕ್ಕು ಸರ್ಕಾರಕ್ಕೆ ಇಲ್ಲ.

LEAVE A REPLY

Please enter your comment!
Please enter your name here

- Advertisment -

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...

ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿ ಹರೀಶ್ ರಾಣಾ ದೆಹಲಿ ಏಮ್ಸ್‌ನಲ್ಲಿ ನಿಧನ

ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿ, ಅಂತಿಮವಾಗಿ 2026ರ ಮಾರ್ಚ್ 11ರಂದು ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ಅನುಮತಿ ಪಡೆದ 32 ವರ್ಷದ ಯುವಕ ಹರೀಶ್ ರಾಣಾ, ಮಂಗಳವಾರ (ಮಾ.24)...

ಪಶ್ಚಿಮ ಏಷ್ಯಾ ಸಂಘರ್ಷ: ಪಾಕಿಸ್ತಾನ ಮಧ್ಯವರ್ತಿಯಾದರೆ ಅದು ಭಾರತದ ರಾಜತಾಂತ್ರಿಕ ಹಿನ್ನೆಡೆಯಾಗಬಹುದು; ಕಾಂಗ್ರೆಸ್ 

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂವಹನದಲ್ಲಿ ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ವರದಿಗಳು ದೃಢಪಟ್ಟರೆ ಭಾರತಕ್ಕೆ ರಾಜತಾಂತ್ರಿಕ ಹಿನ್ನಡೆಯಾಗಬಹುದು ಎಂದು ಕಾಂಗ್ರೆಸ್ ಪಕ್ಷ ಮಂಗಳವಾರ ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ,...

ಭಯೋತ್ಪಾದಕ ಚಟುವಟಿಕೆಗಳ ಆರೋಪ; ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ

ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳ ಆರೋಪದ ಮೇಲೆ ದೆಹಲಿಯ ವಿಶೇಷ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಆಕೆಯ ಸಹಚರರಾದ ಸೋಫಿ...

ಬಿಜೆಪಿ ಸೀಲ್ ಇರುವ ಚು.ಆಯೋಗದ ಪತ್ರದ ಕುರಿತ ಪೋಸ್ಟ್‌ಗಳನ್ನು ತೆಗೆದು ಹಾಕಲು ಕೇರಳ ಪೊಲೀಸರಿಂದ ಸೂಚನೆ

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಕೇರಳ ರಾಜ್ಯ ಘಟಕದ ಸೀಲ್ ಇದ್ದ ಬಗ್ಗೆ ಸೋಮವಾರದಿಂದ (ಮಾ.23) ಭಾರೀ ಚರ್ಚೆಯಾಗುತ್ತಿದೆ. ಸಿಪಿಐ(ಎಂ), ಕಾಂಗ್ರೆಸ್, ಟಿಎಂಸಿ ಸೇರಿದಂತೆ ಪ್ರತಿಪಕ್ಷಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ಚುನಾವಣಾ...

ಪಂಜಾಬ್: ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳಕ್ಕೆ ಅಧಿಕಾರಿ ಆತ್ಮಹತ್ಯೆ; ಅಮೃತಸರದಲ್ಲಿ ಶವಪರೀಕ್ಷೆಗೆ ಕುಟುಂಬ ಒಪ್ಪಿಗೆ

ಪಂಜಾಬ್‌ನ ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ಗೋದಾಮು ನಿಗಮದ ಅಧಿಕಾರಿ ಗಗನ್‌ದೀಪ್ ಸಿಂಗ್ ರಾಂಧವ ಅವರ ಮರಣೋತ್ತರ ಪರೀಕ್ಷೆಯನ್ನು ಮಂಗಳವಾರ ಅಮೃತಸರದಲ್ಲಿ ನಡೆಸಲಾಗುವುದು...

ಮುಸ್ಲಿಂ ಮಹಿಳೆಯರು ‘ನಮಾಜ್’ ಮಾಡುತ್ತಿದ್ದ ಕೊಠಡಿಯಲ್ಲಿ ಮಂತ್ರ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ

ತೆಲಂಗಾಣದ ಭಾರತೀಯ ಜನತಾ ಪಕ್ಷದ (ಬಿಜೆಪಿ)ದ ವಿವಾದಾತ್ಮಕ ನಾಯಕಿ ಮಾಧವಿ ಲತಾ ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿಯಾಗಿದ್ದಾರೆ. ನಮಾಜ್‌ ಮಾಡುತ್ತಿದ್ದವರ ಹಿಂದೆ ಮಂತ್ರ ಪಠಿಸುತ್ತಿರುವ ಅವರ ವೀಡಿಯೊವೊಂದು ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್...

ತೂತುಕುಡಿ ಸಾತನ್‌ಕುಳಂ ತಂದೆ ಮಗನ ಕಸ್ಟಡಿ ಸಾವು ಪ್ರಕರಣ : ಒಂಬತ್ತು ಪೊಲೀಸರು ದೋಷಿಗಳು ಎಂದ ಕೋರ್ಟ್

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

4 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ; ಗುರುಗ್ರಾಮ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಹರಿಯಾಣದ ಗುರುಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ನಿರ್ವಹಿಸಿದ ಬಗ್ಗೆ ಹರಿಯಾಣ ಪೊಲೀಸರು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಮಗುವಿನೊಂದಿಗೆ...

ದಾವಣಗೆರೆ: ನಿಮ್ಮ ದೇಶಭಕ್ತಿ ಪ್ರಶ್ನಿಸುವ ಅಯೋಗ್ಯರಿಗೆ ಮತ ಹಾಕಬೇಡಿ; ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ

ದಾವಣಗೆರೆ: ಮುಸ್ಲಿಮರ ದೇಶಭಕ್ತಿಯನ್ನು ಪ್ರಶ್ನಿಸಿದ, ಅವರ ಕುಟುಂಬಗಳ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿದ್ದು ಬಿಜೆಪಿ. ಇವತ್ತು ಯಾವುದೋ ಅಸಮಾಧಾನಕ್ಕೆ ಬಿಜೆಪಿಗೆ ಮತ ಹಾಕದರೆ ನಿಮ್ಮ ಅಸ್ತಿತ್ವಕ್ಕೆ ಕುತ್ತು ಬರುತ್ತದೆ. ಇಂತಹ ಅಯೋಗ್ಯರಿಗೆ ಮತ...