Homeಕರ್ನಾಟಕಇದು ಸರ್ಕಾರದ ಯೋಜಿತ ಕೊಲೆ, ನ್ಯಾಯಾಂಗ ತನಿಖೆಯಾಗಲಿ: ಇಂದು ಮಂಗಳೂರಿಗೆ ಸಿದ್ದರಾಮಯ್ಯ

ಇದು ಸರ್ಕಾರದ ಯೋಜಿತ ಕೊಲೆ, ನ್ಯಾಯಾಂಗ ತನಿಖೆಯಾಗಲಿ: ಇಂದು ಮಂಗಳೂರಿಗೆ ಸಿದ್ದರಾಮಯ್ಯ

ದೇಶದ ಜನ ಜಾತಿ ಮತ ಲಿಂಗಬೇಧ ತೊರೆದು ಹೋರಾಡುತ್ತಿದ್ದಾರೆ. ರಾಮಚಂದ್ರ ಗುಹಾ ಮುಸಲ್ಮಾನರೆ ಎಂದು ಸಿದ್ದು ಪ್ರಶ್ನಿಸಿದ್ದಾರೆ

- Advertisement -
- Advertisement -

144 ಸೆಕ್ಷನ್‌ ಉಲ್ಲಂಘಿಸಿ ಎಂದು ಯಾವುದೇ ರಾಜಕೀಯ ಪಕ್ಷಗಳು ಕರೆ ಕೊಟ್ಟಿರಲಿಲ್ಲ. ಜನ ಪಕ್ಷಾತೀತವಾಗಿ ಕರಾಳ ಕಾಯ್ದೆಯ ವಿರುದ್ಧ ಹೋರಾಡುತ್ತಿದ್ದರು. ಅವರು ಮೇಲೆ ಗುಂಡು ಹೊಡೆಯುವುದು ಎಂದರೇನು? ಇದು ಹಿಟ್ಲರ್‌ ಮುಸ್ಸಲೋನಿ ರಾಜ್ಯವೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ನಾನು ಈಗ 2 ಗಂಟೆಗೆ ಮಂಗಳೂರಿಗೆ ಹೋಗುತ್ತಿದ್ದೇನೆ. ಜನರಿಗೆ ಸಾಂತ್ವನ ಹೇಳಲು ಜನರ ಪ್ರತಿನಿಧಿಯಾಗಿ ಹೋಗುತ್ತಿದ್ದೇನೆ. ಅಲ್ಲಿ ಅಮಾನುಷವಾಗಿ ಕೊಂದಿದ್ದಾರೆ ಇಬ್ಬರನ್ನು.. ಅವರ ಕುಟುಂಬಕ್ಕೆ ಪರಿಹಾರ ಕೊಡಬೇಕು. ಆ ಜೀವಗಳಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಅಸಮಾಧಾನ ವ್ಯಕ್ತಿಪಡಿಸಿದ್ದಾರೆ.

ಏನ್ರಿ ಗುಂಡು ಹೊಡೆದರೂ ಯಾರೂ ಸತ್ತಿಲ್ಲ ಎಂದು ಒಬ್ಬ ಪೊಲೀಸ್‌ ಹೇಳುವ ವಿಡಿಯೋ ಟಿವಿಯಲ್ಲಿ ನೋಡಿದೆ. ಸರ್ಕಾರದಿಂದ ಸೂಚನೆಯಿಲ್ಲದೇ ಗುಂಡುಹೊಡೆದರೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ದೇಶಾದ್ಯಂತ ಹಿಂಸೆಯ ಹಿಂದೆ ಇರುವವರು ನರೇಂದ್ರ ಮೋದಿ ಮತ್ತು ಅಮಿತ್‌ ಶಾ. ಅವರು ಕರ್ನಾಟಕದಲ್ಲಿ ಯಡಿಯೂರಪ್ಪನವರ ಸರ್ಕಾರದ ಮೂಲಕ ಹಿಂಸೆ ಉಂಟುಮಾಡುತ್ತಿದ್ದಾರೆ. ನಾನು ಪೊಲೀಸರ ಅಮಾನವೀಯ ವರ್ತನೆಯನ್ನು, ಸರ್ಕಾರದ ಧೋರಣೆಯನ್ನು ಖಂಡಿಸುತ್ತೇನೆ. ಮೂಲಭೂತ ಹಕ್ಕುಗಳನ್ನು ದಮನ ಮಾಡುತ್ತಿರುವ ಈ ಸರ್ಕಾರ ವಿರುದ್ಧ ಹೋರಾಡುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ನಮ್ಮ ರಾಜ್ಯದ ಜನತೆ ಶಾಂತಿಪ್ರಿಯರು. ಈ ನೆಲದ ಕಾನೂನಿಗೆ ಗೌರವಕೊಡುವವರು. ನಮ್ಮ ಆಡಳಿತದಲ್ಲಿ ಒಂದು ಸಣ್ಣ ಲಾಠಿಚಾರ್ಜ್‌ ಬಿಟ್ಟರೆ ಉಳಿದಂತೆ ಯಾವುದೇ ಹೋರಾಟಗಳನ್ನು ದಮನ ಮಾಡಿಲ್ಲ. ಐದು ವರ್ಷಗಳಲ್ಲಿ ನಮಗೆ ಬಂದೂಕುಗಳು ನೆನಪಿಗೆ ಬರಲೇ ಇಲ್ಲ. ಬಡವರಿಗೆ ಅಕ್ಕಿ, ಮಕ್ಕಳಿಗೆ ಹಾಲು, ಮೊಟ್ಟೆ ಕೊಡಬೇಕು, ರೈತರ ಸಾಲ ಮನ್ನಾ ಮಾಡೋದು, ಇದೇ ನಮ್ಮ ಉದ್ದೇಶವಾಗಿತ್ತು. ಕಬ್ಬು ಬೆಳೆಗಾರರು ದೊಡ್ಡ ಹೋರಾಟ ನಡೆಸಿದ್ದರು. ನಾವು ಅದಕ್ಕೆ ಅವಕಾಶ ನೀಡಿದ್ದಲ್ಲದೇ ಶಾಂತಿಯುತ ಮಾತುಕತೆ ಮೂಲಕ ಅದನ್ನು ಬಗೆಹರಿಸಿದ್ದೆವು. ಆದರೆ ಈ ಸರ್ಕಾರ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ.

ರಾಮಚಂದ್ರಗುಹಾ ಒಬ್ಬ ದೊಡ್ಡ ಇತಿಹಾಸಕಾರ. ಅವರು ನಿನ್ನೆ ಟೌನ್‌ಹಾಲ್‌ ಮುಂದೆ ಗಲಾಟೆ ಮಾಡುತ್ತಿರಲಿಲ್ಲ. ಶಾಂತ ರೀತಿಯಲ್ಲಿ ಪ್ರತಿಭಟಿಸುತ್ತಿದ್ದರು. ಅವರು ಅಭಿಪ್ರಾಯ ಹೇಳಲು ಬಿಡದ ಪೊಲೀಸರನ್ನು ಪಾಪ ಅವರನ್ನು ಎಳೆದಾಡಿ ಬಂಧಿಸಿದ್ದಾರೆ. ಇದು ರಾಜ್ಯಕ್ಕೆ ನಾಚಿಕೆಯಲ್ಲವೇ ಎಂದಿದ್ದಾರೆ.

ಈ ಕಾಯ್ದೆಯಲ್ಲಿ ಮೂರು ದೇಶಗಳಿಂದ ಬಂದಿರುವ ಮುಸ್ಲಿಮೇತರರಿಗೆ ಪೌರತ್ವ ಕೊಡುತ್ತೀವಿ ಎಂದು ಏಕೆ ಬರೆದಿದ್ದೀರಿ? ಇದು ತಾರತಮ್ಯ ಅಲ್ಲವೇ? ಇದಕ್ಕೆ ಒಂದು ಧರ್ಮವನ್ನು ಟಾರ್ಗೆಟ್‌ ಮಾಡುತ್ತಿಲ್ಲವೇ? ಅದಕ್ಕೆ ಜನ ಪ್ರತಿಭಟನೆ ನಡೆಸುತ್ತಿದ್ದಾರೆ. ದೇಶದ ಜನ ಜಾತಿ ಮತ ಲಿಂಗಬೇಧ ತೊರೆದು ಹೋರಾಡುತ್ತಿದ್ದಾರೆ. ರಾಮಚಂದ್ರ ಗುಹಾ ಮುಸಲ್ಮಾನರೆ ಎಂದು ಸಿದ್ದು ಪ್ರಶ್ನಿಸಿದ್ದಾರೆ.

ದೇಶದ ಆರ್ಥಿಕ ಪರಿಸ್ಥಿತಿ ಕುಸಿದುಹೋಗಿದೆ. ಜಿಡಿಪಿ ನಾಲ್ಕು ಕ್ಕಿಂತ ಕಡಿಮೆ. ನಿರುದ್ಯೋಗ ೪೫ ವರ್ಷ ಬೆಲೆಏರಿಕೆ ಗಗನ, ಫ್ಯಾಕ್ಟರಿ ಮುಚ್ಚಿಹೋಗುತ್ತಿದೆ. ಜನ ಬೀದಿಗೆ ಬೀಳುತ್ತಿದ್ದಾರೆ. ಇದನ್ನು ಮರೆಮಾಚಲು ಸರ್ಕಾರ ಈ ಕಾಯ್ದೆ ಜಾರಿಗೆ ತರುತ್ತಿದೆ.

ಜನರ ನೈಜ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು ಅಲ್ವಾ.. ಅಮಿತ್‌ ಶಾ ಈ ಕಾಯದೆ ಕಾಂಟ್ರವರ್ಸಿ ಅಲ್ಲಾ ಎಂದು ಹೇಳಿದ್ದಾರೆ. ಹಾಗಾದರೆ ನಾವು ಈ ದೇಶದ ಜನ ಎಂದು ಖಚಿತಪಡಿಸಲು ಜನ ಏಕೆ ರಿಸ್ಕ್‌ ತೆಗೆದುಕೊಳ್ಳಬೇಕು ಇದು ಬ್ರಿಟಿಷ್‌ ಕಾಲ, ಜಲಿಯನ್‌ ವಾಲಾಬಾಗ್, ಹಿಟ್ಲರ್ ಮುಸಲೋನಿಯವರ ಆಡಳಿತವನ್ನು ನೆನಪಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಿಜೆಪಿ ಸರ್ಕಾರಕ್ಕೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲ. ಸಂವಿಧಾನದ ಗೌರವ ಇಲ್ಲ. ಅದಕ್ಕಾಗಿ ಇಂಟರ್‌ನೆಟ್‌, ಸಾಮಾಜಿಕ ಮಾಧ್ಯಮಗಳನ್ನು ಬಂದ್‌ ಮಾಡಿದ್ದಾರೆ. ಸುಪ್ರೀಂ ಕೋರ್ಟ್‌‌ನಲ್ಲಿ ಪ್ರಕರಣವಿದೆ. ದೇಶಾದ್ಯಂತ ಹೋರಾಟ ನಡೆಯುತ್ತಿದೆ. ಈಗಿದ್ದಾಗ ಈ ಕಾಯ್ದೆಯನ್ನು ಹೇಗೆ ಜಾರಿಗೊಳಿಸಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಿದ್ದರಾಮಯ್ಯನವರ ಹೇಳಿಕೆ ಸ್ವಾಗತಾರ್ಹ.
    ನ್ಯಾಯ ಕೇಳುವವರನ್ನು ಕೊಲ್ಲುವ ಹಕ್ಕು ಸರ್ಕಾರಕ್ಕೆ ಇಲ್ಲ.

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...