Homeಕರ್ನಾಟಕಓವರ್ ಸ್ಪೀಡ್ ಡೇಂಜರಸ್ ಮಿಸ್ಟರ್ ಸಿ.ಟಿ ರವಿ, ಜೋಪಾನ: ಸಿದ್ದು ಸಲಹೆ

ಓವರ್ ಸ್ಪೀಡ್ ಡೇಂಜರಸ್ ಮಿಸ್ಟರ್ ಸಿ.ಟಿ ರವಿ, ಜೋಪಾನ: ಸಿದ್ದು ಸಲಹೆ

- Advertisement -
- Advertisement -

ಸನ್ಮಾನ್ಯ ಸಿ.ಟಿ ರವಿ ಅವರೇ, ನಾನು ಕಾಲು ಜಾರದ ಹಾಗೆ ಎಚ್ಚರದಿಂದ ನಾಲ್ಕು ದಶಕಗಳ ರಾಜಕಾರಣ ಮಾಡಿಕೊಂಡು ಬಂದಿದ್ದೇನೆ. ನೀವು ಇನ್ನೂ ಯುವಕರು, ಹೆಚ್ಚು ಸ್ಪೀಡಾಗಿ ಹೋಗ್ಬೇಡಿ, ಜೋಪಾನ. ಅಪಘಾತ‌ ಮಾಡಿಬಿಟ್ಟರೆ ಎಲ್ಲ ಸಂದರ್ಭಗಳಲ್ಲಿಯೂ ರಕ್ಷಣೆಗೆ ಹಿತೈಷಿಗಳಿರುವುದಿಲ್ಲ ಎಂದು ಸಿದ್ದರಾಮಯ್ಯನವರು ತಿರುಗೇಟು ನೀಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯನವರ ಕಾಲು ಎಳೆಯುವವರ ಸಂಖ್ಯೆ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಅವರು ತಮ್ಮ ಕಾಲನ್ನು ಭದ್ರವಾಗಿ ಇರಿಸಿಕೊಳ್ಳಲ್ಲಿ ಎಂದು ಸಚಿವ ಸಿ.ಟಿ ರವಿರವರು ಈ ಮುಂಚೆ ಹೇಳಿದ್ದರು.

ಕನ್ನಡ ಮತ್ತು ಸಂಸ್ಕೃತಿ‌‌ ಸಚಿವ ಸಿ.ಟಿ ರವಿ ಅವರು ನಾಡಧ್ವಜ ವಿರೋಧಿಸಿರುವುದು ಸರಿಯಲ್ಲ. ನಾವು ಪ್ರತ್ಯೇಕ ಧ್ವಜ ಕೇಳುತ್ತಿಲ್ಲ.‌‌ ರಾಜ್ಯಗಳು ತಮ್ಮದೇ ಧ್ವಜ ಹೊಂದಲು ಸಂವಿಧಾನ ಇಲ್ಲವೇ ಕಾನೂನಿನಲ್ಲಿ ಯಾವ ಅಡ್ಡಿಯೂ ಇಲ್ಲ.‌ ರಾಜ್ಯ ಬಿಜೆಪಿ ಸರ್ಕಾರದ ನಿಲುವು ಸ್ಪಷ್ಟವಾಗಿ ಕನ್ನಡ ವಿರೋಧಿಯಾದುದ್ದು ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ.

ನಾವು ನಮಗೊಂದು ನಾಡಗೀತೆಯನ್ನು‌ ಒಪ್ಪಿಕೊಂಡಿಲ್ಲವೇ?
ಇದರಿಂದ ರಾಷ್ಟ್ರಗೀತೆಗೆ ಅವಮಾನ ಮಾಡಿದಂತಾಗುವುದೇ? ರಾಷ್ಟ್ರಧ್ವಜದ ಕೆಳಗೆ ಬೇರೆ ಧ್ವಜ ಹಾರಿಸಬೇಕೆಂದು ರಾಷ್ಟ್ರಧ್ವಜ ಸಂಹಿತೆ ಹೇಳಿದೆ. ಅದನ್ನು ಪಾಲಿಸಬೇಕಾಗಿರುವುದು ನಮ್ಮೆಲ್ಲರ‌ ಕರ್ತವ್ಯ. ಬೇರೇನು ಸಮಸ್ಯೆ ಇದೆ?

ಹಿರಿಯರಾದ ಡಾ.ಪಾಟೀಲ ಪುಟ್ಟಪ್ಪ ಮತ್ತಿತರ ಕನ್ನಡ ಹೋರಾಟಗಾರರು ನಾಡಧ್ವಜಕ್ಕಾಗಿ ಮನವಿ‌ ಮಾಡಿದ್ದರು.
ಆ ಬಗ್ಗೆ ಅಧ್ಯಯನ ನಡೆಸಿದ್ದ ತಜ್ಞರ ಸಮಿತಿ ವಿನ್ಯಾಸಗೊಳಿಸಿದ್ದ ನಾಡಧ್ವಜಕ್ಕೆ ಮನ್ನಣೆ ನೀಡಬೇಕೆಂದು ಕೇಂದ್ರ ಸರ್ಕಾರವನ್ನು ಕೋರಿದ್ದೆವು. ಈಗ ರಾಜ್ಯ ಸರ್ಕಾರವೇ ವಿರೋಧಿಸುತ್ತಿರುವುದು ಖಂಡನೀಯ.

ಕನ್ನಡ ಮತ್ತು ಸಂಸ್ಕೃತಿ ಸಚಿವರು ನಾಡಧ್ವಜ ಅಗತ್ಯ ಇಲ್ಲ‌ ಎಂದು ಹೇಳಿ‌ ಕನ್ನಡಿಗರನ್ನು ಕೆರಳಿಸಿರುವುದು ಸರಿ ಅಲ್ಲ. ಮಾಡಬೇಕಾಗಿರುವ ಕೆಲಸ ಬಿಟ್ಟು ಸಚಿವರು ಅನಗತ್ಯವಾಗಿ ವಿವಾದ ಸೃಷ್ಟಿಸಲು ಹೊರಟಂತಿದೆ. ಸಚಿವರು ತಕ್ಷಣ ತಮ್ಮ ಅಭಿಪ್ರಾಯವನ್ನು ಹಿಂದಕ್ಕೆ ಪಡೆದು ನಾಡಧ್ವಜವನ್ನು ಒಪ್ಪಿಕೊಳ್ಳಬೇಕು ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...