Homeಕರ್ನಾಟಕಓವರ್ ಸ್ಪೀಡ್ ಡೇಂಜರಸ್ ಮಿಸ್ಟರ್ ಸಿ.ಟಿ ರವಿ, ಜೋಪಾನ: ಸಿದ್ದು ಸಲಹೆ

ಓವರ್ ಸ್ಪೀಡ್ ಡೇಂಜರಸ್ ಮಿಸ್ಟರ್ ಸಿ.ಟಿ ರವಿ, ಜೋಪಾನ: ಸಿದ್ದು ಸಲಹೆ

- Advertisement -
- Advertisement -

ಸನ್ಮಾನ್ಯ ಸಿ.ಟಿ ರವಿ ಅವರೇ, ನಾನು ಕಾಲು ಜಾರದ ಹಾಗೆ ಎಚ್ಚರದಿಂದ ನಾಲ್ಕು ದಶಕಗಳ ರಾಜಕಾರಣ ಮಾಡಿಕೊಂಡು ಬಂದಿದ್ದೇನೆ. ನೀವು ಇನ್ನೂ ಯುವಕರು, ಹೆಚ್ಚು ಸ್ಪೀಡಾಗಿ ಹೋಗ್ಬೇಡಿ, ಜೋಪಾನ. ಅಪಘಾತ‌ ಮಾಡಿಬಿಟ್ಟರೆ ಎಲ್ಲ ಸಂದರ್ಭಗಳಲ್ಲಿಯೂ ರಕ್ಷಣೆಗೆ ಹಿತೈಷಿಗಳಿರುವುದಿಲ್ಲ ಎಂದು ಸಿದ್ದರಾಮಯ್ಯನವರು ತಿರುಗೇಟು ನೀಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯನವರ ಕಾಲು ಎಳೆಯುವವರ ಸಂಖ್ಯೆ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಅವರು ತಮ್ಮ ಕಾಲನ್ನು ಭದ್ರವಾಗಿ ಇರಿಸಿಕೊಳ್ಳಲ್ಲಿ ಎಂದು ಸಚಿವ ಸಿ.ಟಿ ರವಿರವರು ಈ ಮುಂಚೆ ಹೇಳಿದ್ದರು.

ಕನ್ನಡ ಮತ್ತು ಸಂಸ್ಕೃತಿ‌‌ ಸಚಿವ ಸಿ.ಟಿ ರವಿ ಅವರು ನಾಡಧ್ವಜ ವಿರೋಧಿಸಿರುವುದು ಸರಿಯಲ್ಲ. ನಾವು ಪ್ರತ್ಯೇಕ ಧ್ವಜ ಕೇಳುತ್ತಿಲ್ಲ.‌‌ ರಾಜ್ಯಗಳು ತಮ್ಮದೇ ಧ್ವಜ ಹೊಂದಲು ಸಂವಿಧಾನ ಇಲ್ಲವೇ ಕಾನೂನಿನಲ್ಲಿ ಯಾವ ಅಡ್ಡಿಯೂ ಇಲ್ಲ.‌ ರಾಜ್ಯ ಬಿಜೆಪಿ ಸರ್ಕಾರದ ನಿಲುವು ಸ್ಪಷ್ಟವಾಗಿ ಕನ್ನಡ ವಿರೋಧಿಯಾದುದ್ದು ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ.

ನಾವು ನಮಗೊಂದು ನಾಡಗೀತೆಯನ್ನು‌ ಒಪ್ಪಿಕೊಂಡಿಲ್ಲವೇ?
ಇದರಿಂದ ರಾಷ್ಟ್ರಗೀತೆಗೆ ಅವಮಾನ ಮಾಡಿದಂತಾಗುವುದೇ? ರಾಷ್ಟ್ರಧ್ವಜದ ಕೆಳಗೆ ಬೇರೆ ಧ್ವಜ ಹಾರಿಸಬೇಕೆಂದು ರಾಷ್ಟ್ರಧ್ವಜ ಸಂಹಿತೆ ಹೇಳಿದೆ. ಅದನ್ನು ಪಾಲಿಸಬೇಕಾಗಿರುವುದು ನಮ್ಮೆಲ್ಲರ‌ ಕರ್ತವ್ಯ. ಬೇರೇನು ಸಮಸ್ಯೆ ಇದೆ?

ಹಿರಿಯರಾದ ಡಾ.ಪಾಟೀಲ ಪುಟ್ಟಪ್ಪ ಮತ್ತಿತರ ಕನ್ನಡ ಹೋರಾಟಗಾರರು ನಾಡಧ್ವಜಕ್ಕಾಗಿ ಮನವಿ‌ ಮಾಡಿದ್ದರು.
ಆ ಬಗ್ಗೆ ಅಧ್ಯಯನ ನಡೆಸಿದ್ದ ತಜ್ಞರ ಸಮಿತಿ ವಿನ್ಯಾಸಗೊಳಿಸಿದ್ದ ನಾಡಧ್ವಜಕ್ಕೆ ಮನ್ನಣೆ ನೀಡಬೇಕೆಂದು ಕೇಂದ್ರ ಸರ್ಕಾರವನ್ನು ಕೋರಿದ್ದೆವು. ಈಗ ರಾಜ್ಯ ಸರ್ಕಾರವೇ ವಿರೋಧಿಸುತ್ತಿರುವುದು ಖಂಡನೀಯ.

ಕನ್ನಡ ಮತ್ತು ಸಂಸ್ಕೃತಿ ಸಚಿವರು ನಾಡಧ್ವಜ ಅಗತ್ಯ ಇಲ್ಲ‌ ಎಂದು ಹೇಳಿ‌ ಕನ್ನಡಿಗರನ್ನು ಕೆರಳಿಸಿರುವುದು ಸರಿ ಅಲ್ಲ. ಮಾಡಬೇಕಾಗಿರುವ ಕೆಲಸ ಬಿಟ್ಟು ಸಚಿವರು ಅನಗತ್ಯವಾಗಿ ವಿವಾದ ಸೃಷ್ಟಿಸಲು ಹೊರಟಂತಿದೆ. ಸಚಿವರು ತಕ್ಷಣ ತಮ್ಮ ಅಭಿಪ್ರಾಯವನ್ನು ಹಿಂದಕ್ಕೆ ಪಡೆದು ನಾಡಧ್ವಜವನ್ನು ಒಪ್ಪಿಕೊಳ್ಳಬೇಕು ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...