Homeಕರ್ನಾಟಕಓವರ್ ಸ್ಪೀಡ್ ಡೇಂಜರಸ್ ಮಿಸ್ಟರ್ ಸಿ.ಟಿ ರವಿ, ಜೋಪಾನ: ಸಿದ್ದು ಸಲಹೆ

ಓವರ್ ಸ್ಪೀಡ್ ಡೇಂಜರಸ್ ಮಿಸ್ಟರ್ ಸಿ.ಟಿ ರವಿ, ಜೋಪಾನ: ಸಿದ್ದು ಸಲಹೆ

- Advertisement -
- Advertisement -

ಸನ್ಮಾನ್ಯ ಸಿ.ಟಿ ರವಿ ಅವರೇ, ನಾನು ಕಾಲು ಜಾರದ ಹಾಗೆ ಎಚ್ಚರದಿಂದ ನಾಲ್ಕು ದಶಕಗಳ ರಾಜಕಾರಣ ಮಾಡಿಕೊಂಡು ಬಂದಿದ್ದೇನೆ. ನೀವು ಇನ್ನೂ ಯುವಕರು, ಹೆಚ್ಚು ಸ್ಪೀಡಾಗಿ ಹೋಗ್ಬೇಡಿ, ಜೋಪಾನ. ಅಪಘಾತ‌ ಮಾಡಿಬಿಟ್ಟರೆ ಎಲ್ಲ ಸಂದರ್ಭಗಳಲ್ಲಿಯೂ ರಕ್ಷಣೆಗೆ ಹಿತೈಷಿಗಳಿರುವುದಿಲ್ಲ ಎಂದು ಸಿದ್ದರಾಮಯ್ಯನವರು ತಿರುಗೇಟು ನೀಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯನವರ ಕಾಲು ಎಳೆಯುವವರ ಸಂಖ್ಯೆ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಅವರು ತಮ್ಮ ಕಾಲನ್ನು ಭದ್ರವಾಗಿ ಇರಿಸಿಕೊಳ್ಳಲ್ಲಿ ಎಂದು ಸಚಿವ ಸಿ.ಟಿ ರವಿರವರು ಈ ಮುಂಚೆ ಹೇಳಿದ್ದರು.

ಕನ್ನಡ ಮತ್ತು ಸಂಸ್ಕೃತಿ‌‌ ಸಚಿವ ಸಿ.ಟಿ ರವಿ ಅವರು ನಾಡಧ್ವಜ ವಿರೋಧಿಸಿರುವುದು ಸರಿಯಲ್ಲ. ನಾವು ಪ್ರತ್ಯೇಕ ಧ್ವಜ ಕೇಳುತ್ತಿಲ್ಲ.‌‌ ರಾಜ್ಯಗಳು ತಮ್ಮದೇ ಧ್ವಜ ಹೊಂದಲು ಸಂವಿಧಾನ ಇಲ್ಲವೇ ಕಾನೂನಿನಲ್ಲಿ ಯಾವ ಅಡ್ಡಿಯೂ ಇಲ್ಲ.‌ ರಾಜ್ಯ ಬಿಜೆಪಿ ಸರ್ಕಾರದ ನಿಲುವು ಸ್ಪಷ್ಟವಾಗಿ ಕನ್ನಡ ವಿರೋಧಿಯಾದುದ್ದು ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ.

ನಾವು ನಮಗೊಂದು ನಾಡಗೀತೆಯನ್ನು‌ ಒಪ್ಪಿಕೊಂಡಿಲ್ಲವೇ?
ಇದರಿಂದ ರಾಷ್ಟ್ರಗೀತೆಗೆ ಅವಮಾನ ಮಾಡಿದಂತಾಗುವುದೇ? ರಾಷ್ಟ್ರಧ್ವಜದ ಕೆಳಗೆ ಬೇರೆ ಧ್ವಜ ಹಾರಿಸಬೇಕೆಂದು ರಾಷ್ಟ್ರಧ್ವಜ ಸಂಹಿತೆ ಹೇಳಿದೆ. ಅದನ್ನು ಪಾಲಿಸಬೇಕಾಗಿರುವುದು ನಮ್ಮೆಲ್ಲರ‌ ಕರ್ತವ್ಯ. ಬೇರೇನು ಸಮಸ್ಯೆ ಇದೆ?

ಹಿರಿಯರಾದ ಡಾ.ಪಾಟೀಲ ಪುಟ್ಟಪ್ಪ ಮತ್ತಿತರ ಕನ್ನಡ ಹೋರಾಟಗಾರರು ನಾಡಧ್ವಜಕ್ಕಾಗಿ ಮನವಿ‌ ಮಾಡಿದ್ದರು.
ಆ ಬಗ್ಗೆ ಅಧ್ಯಯನ ನಡೆಸಿದ್ದ ತಜ್ಞರ ಸಮಿತಿ ವಿನ್ಯಾಸಗೊಳಿಸಿದ್ದ ನಾಡಧ್ವಜಕ್ಕೆ ಮನ್ನಣೆ ನೀಡಬೇಕೆಂದು ಕೇಂದ್ರ ಸರ್ಕಾರವನ್ನು ಕೋರಿದ್ದೆವು. ಈಗ ರಾಜ್ಯ ಸರ್ಕಾರವೇ ವಿರೋಧಿಸುತ್ತಿರುವುದು ಖಂಡನೀಯ.

ಕನ್ನಡ ಮತ್ತು ಸಂಸ್ಕೃತಿ ಸಚಿವರು ನಾಡಧ್ವಜ ಅಗತ್ಯ ಇಲ್ಲ‌ ಎಂದು ಹೇಳಿ‌ ಕನ್ನಡಿಗರನ್ನು ಕೆರಳಿಸಿರುವುದು ಸರಿ ಅಲ್ಲ. ಮಾಡಬೇಕಾಗಿರುವ ಕೆಲಸ ಬಿಟ್ಟು ಸಚಿವರು ಅನಗತ್ಯವಾಗಿ ವಿವಾದ ಸೃಷ್ಟಿಸಲು ಹೊರಟಂತಿದೆ. ಸಚಿವರು ತಕ್ಷಣ ತಮ್ಮ ಅಭಿಪ್ರಾಯವನ್ನು ಹಿಂದಕ್ಕೆ ಪಡೆದು ನಾಡಧ್ವಜವನ್ನು ಒಪ್ಪಿಕೊಳ್ಳಬೇಕು ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...