Homeಮುಖಪುಟಹೆಚ್ಚಿನ ಕಂಡಿಷನ್‌ಗಳಿಲ್ಲದೆ ಐದು ಗ್ಯಾರಂಟಿಗಳನ್ನು ಘೋಷಿಸಿದ ಸಿದ್ದರಾಮಯ್ಯ

ಹೆಚ್ಚಿನ ಕಂಡಿಷನ್‌ಗಳಿಲ್ಲದೆ ಐದು ಗ್ಯಾರಂಟಿಗಳನ್ನು ಘೋಷಿಸಿದ ಸಿದ್ದರಾಮಯ್ಯ

ಜುಲೈ 1 ರಿಂದ ಪ್ರತಿಯೊಂದು ಕುಟುಂಬಕ್ಕೆ 200 ಯೂನಿಟ್‌ವರೆಗೂ ಉಚಿತ ವಿದ್ಯುತ್, ಆಗಸ್ಟ್ 15 ರಂದು ಮನೆಯೊಡತಿಯ ಖಾತೆಗೆ 2,000 ರೂ ಜಮಾ, ಜುಲೈ ಒಂದರಿಂದ ಬಿಪಿಎಲ್ ಕಾರ್ಡುದಾರರಿಗೆ ತಲಾ 10 ಕೆಜಿ ಅಕ್ಕಿ, ಜೂನ್ 11 ರಂದು ರಾಜ್ಯಾದ್ಯಂತ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

- Advertisement -
- Advertisement -

ಜುಲೈ 1 ರಿಂದ ಪ್ರತಿಯೊಂದು ಕುಟುಂಬಕ್ಕೆ 200 ಯೂನಿಟ್‌ವರೆಗೂ ಉಚಿತ ವಿದ್ಯುತ್ ನೀಡಲಾಗುವುದು. ಆಗಸ್ಟ್ 15 ರಂದು ಮನೆಯೊಡತಿಯ ಖಾತೆಗೆ 2,000 ರೂ ಜಮಾ ಮಾಡಲಾಗುವುದು. ಜುಲೈ ಒಂದರಿಂದ ಬಿಪಿಎಲ್ ಕಾರ್ಡುದಾರರಿಗೆ ಮತ್ತು ಅಂತ್ಯೋದಯ ಕಾರ್ಡು ಹೊಂದಿರುವವರಿಗೆ ತಲಾ 10 ಕೆಜಿ ಅಕ್ಕಿ ಕೊಡಲಾಗುವುದು. ಜೂನ್ 11 ರಂದು ರಾಜ್ಯಾದ್ಯಂತ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಮೊದಲ ಗ್ಯಾರಂಟಿ – ಗೃಹ ಜ್ಯೋತಿ

200 ಯೂನಿಟ್‌ವರೆಗೆ ಉಚಿತ ವಿದ್ಯುತ್ ಎಲ್ಲರಿಗೂ ಕೊಡುತ್ತೇವೆ. ಇದನ್ನು ಜಾರಿ ಮಾಡಲು ತೀರ್ಮಾನಿಸಿದ್ದೇವೆ. 199 ಯೂನಿಟ್‌ವರೆಗೂ ಫ್ರಿ ವಿದ್ಯುತ್ ಕೊಡುತ್ತೇವೆ. 12 ತಿಂಗಳ ಸರಾಸರಿ ನೋಡುತ್ತೇವೆ. ಅದರ ಮೇಲೆ 10% ಉಚಿತವಾಗಿ ಕೊಡುತ್ತೇವೆ. ಈ ವರ್ಷದ ಜುಲೈ 1 ರಿಂದ ಫ್ರೀ ಜಾರಿಯಾಗುತ್ತದೆ ಎಂದರು. ಆದರೆ ಇದುವರೆಗೂ ಉಳಿಸಿಕೊಂಡಿರುವ ಬಾಕಿಯನ್ನು ಜನರೇ ಕಟ್ಟಬೇಕು ಎಂದರು.

ಎರಡನೇ ಗ್ಯಾರಂಟಿ – ಗೃಹ ಲಕ್ಷ್ಮೀ

ಗೃಹ ಲಕ್ಷ್ಮೀ ಯೋಜನೆ ಜಾರಿಗೊಳಿಸುತ್ತೇವೆ. ಅದಕ್ಕಾಗಿ ಅರ್ಜಿ ಆಧಾರ್ ಕಾರ್ಡ್, ಬ್ಯಾಂಕ್ ಡಿಟೈಲ್ಸ್ ಕೊಡಬೇಕು. ಮನೆ ಯಜಮಾನಿಗೆ ಎಂದು ಹೇಳಿದ್ದೇವೆ. ಅವರ ಖಾತೆಗೆ ತಿಂಗಳಿಗೆ 2,000 ರೂ ಜಮಾ ಮಾಡುತ್ತೇವೆ. ಜೂನ್ 15 ರಿಂದ ಜುಲೈ 15ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಜುಲೈ 15 ರಿಂದ ಆಗಸ್ಟ್ 15 ರೊಳಗೆ ಪ್ರಕ್ರಿಯೆ ಮಾಡಿ ಆಗಸ್ಟ್ 15ನೇ ತಾರೀಖು ಎಲ್ಲ ಮನೆಯೊಡತಿಯರ ಖಾತೆಗೆ ಹಣ ಜಮಾ ಮಾಡುತ್ತೇವೆ. ಬಿಪಿಎಲ್ ಮತ್ತು ಎಪಿಎಲ್ ಇಬ್ಬರೂ ಅರ್ಜಿ ಹಾಕಬಹುದು. ಎಲ್ಲರಿಗೂ ಕೊಡುತ್ತೇವೆ ಎಂದರು. ಅರ್ಜಿ ಸಲ್ಲಿಸುವಾಗ ಮನೆಯಲ್ಲಿ ಯಾರು ಯಜಮಾನಿ ಎಂದು ಸ್ಪಷ್ಟಪಡಿಸಬೇಕು ಎಂದರು.

ಇದುವರೆಗೂ ವಿಶೇಷ ಚೇತನರು, ಹಿರಿಯ ವಯಸ್ಸಿನವರು, ವಿಧವಾ ವೇತನ ಪಡೆಯುತ್ತಿರುವವರು ಸಹ ಈ ಗೃಹ ಲಕ್ಷ್ಮೀ ಯೋಜನೆಗೆ ಅರ್ಹರಾಗಿದ್ದಾರೆ. ಆ ಪಿಂಚಣಿ ಜೊತೆಗೆ ಈ 2,000 ರೂ ಸಹ ಕೊಡುತ್ತೇವೆ ಎಂದು ಸಿದ್ದರಾಮಯ್ಯ ತಿಳಿಸಿದರು.

10 ಕೆಜಿ ಅಕ್ಕಿ ಉಚಿತ

ಜುಲೈ 1ನೇ ತಾರೀಖಿನಿಂದ ಎಲ್ಲಾ ಬಿಪಿಎಲ್ ಕಾರ್ಡುದಾರರಿಗೆ ಮತ್ತು ಅಂತ್ಯೋದಯ ಕಾರ್ಡು ಹೊಂದಿರುವವರಿಗೆ ತಲಾ 10 ಕೆಜಿ ಅಕ್ಕಿ ಕೊಡಲಾಗುವುದು. ಅಂತ್ಯೋದಯ ಕಾರ್ಡು ಹೊಂದಿರುವವರಿಗೆ ಸದ್ಯ 35 ಕೆಜಿ ಅಕ್ಕಿ ಕೊಡಲಾಗುತ್ತಿದೆ. ಮುಂದೆ ಅವರಿಗೂ ತಲಾ 10 ಕೆಜಿ ಕೊಡಲಾಗುವುದು. ಸದ್ಯಕ್ಕೆ ಸ್ಟಾಕ್ ಇಲ್ಲ. ಒಂದು ತಿಂಗಳಲ್ಲಿ ಹೇಗಾದರೂ ಮಾಡಿ ಕೊಂಡುಕೊಂಡು ಜುಲೈ 1 ರಿಂದ ತಲಾ 10 ಕೆಜಿ ಅಕ್ಕಿ ಕೊಡುತ್ತೇವೆ.

4 ನೇ ಗ್ಯಾರಂಟಿ – ಶಕ್ತಿ

ಸಮಾಜದಲ್ಲಿ 50% ಮಹಿಳೆಯರು ಇದ್ದಾರೆ. ಎಲ್ಲಾ ಮಹಿಳೆಯರಿಗೆ ಅವರ ಆರ್ಥಿಕ ಸ್ಥಾನಮಾನ ಹೊರತು ಪಡಿಸಿ ಎಲ್ಲರಿಗೂ ಉಚಿತ ಬಸ್ ಪ್ರಯಾಣ ಘೋಷಿಸುತ್ತಿದ್ದೇವೆ. ಜೂನ್ 11 ರಂದು ಈ ಯೋಜನೆಗೆ ಬೆಂಗಳೂರಿನಲ್ಲಿ ಚಾಲನೆ ನೀಡುತ್ತೇವೆ ಎಂದು ಸಿದ್ದರಾಮಯ್ಯ ಘೋಷಿಸಿದರು.

ನಮ್ಮ ರಾಜ್ಯದೊಳಗೆ, ಕರ್ನಾಟಕದವರಿಗೆ ಮಾತ್ರ ಉಚಿತ ಪ್ರಯಾಣ ಇರುತ್ತದೆ. ಎ.ಸಿ ಬಸ್ ಮತ್ತು ಸ್ಲೀಪರ್ ಬಸ್, ಲಕ್ಸುರಿ ಬಸ್ ಹೊರತುಪಡಿಸಿ ಉಳಿದ ಎಲ್ಲಾ ಬಸ್‌ಗಳಲ್ಲಿ ಉಚಿತ ಪ್ರಯಾಣವಿರುತ್ತದೆ. ಅಂದರೆ ಶೇ.90 ರಷ್ಟು ಬಸ್‌ಗಳಲ್ಲಿ ರಾಜ್ಯದ ಎಲ್ಲೆಡೆ ಉಚಿತ ಪ್ರಯಾಣ ಇರುತ್ತದೆ. ಇನ್ನು ಪುರುಷರಿಗೆ 50% ಆಸನ ಮೀಸಲು ಮಾಡಲಾಗುತ್ತದೆ.

5ನೇ ಗ್ಯಾರಂಟಿ ಯುವನಿಧಿ – ಯುವಜನರಿಗೆ 3000 ನಿರುದ್ಯೋಗ ಭತ್ಯೆ

2022-23 ರಲ್ಲಿ ವ್ಯಾಸಂಗ ಮಾಡಿ ಪದವಿ ಪಡೆದವರಿಗೆ 24 ತಿಂಗಳುಗಳವರೆಗೆ ಪ್ರತಿ ತಿಂಗಳಿಗೆ 3000 ರೂ ನೀಡಲಾಗುವುದು. ಅರ್ಹರು ಅರ್ಜಿ ಸಲ್ಲಿಸಬೇಕು. ಎಲ್ಲಾ ಜಾತಿ ವರ್ಗದವರೂ, ಟ್ರಾನ್ಸ್‌ಜೆಂಡರ್‌ ಸಮುದಾಯದವರು ಸಹ ಇದಕ್ಕೆ ಅರ್ಹರು ಎಂದರು.

ಇದೇ ಸಂದರ್ಭದಲ್ಲಿ ಪ್ರತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಮೋದಿಯವರು ಪ್ರತಿಯೊಬ್ಬರಿಗೂ 15 ಲಕ್ಷ ರೂ ಕೊಡುತ್ತೇವೆ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ, ರೈತರ ಆದಾಯ ಡಬಲ್ ಮಾಡುತ್ತೇವೆ, ಅಚ್ಛೇದಿನ್ ತರುತ್ತೇವೆ ಎಂದು ಭರವಸೆ ಕೊಟ್ಟಿದ್ದರು. ಅವುಗಳನ್ನು ಜಾರಿಗೆ ತಂದರೆ? ನಾವು ಹಿಂದೆಯೂ ನುಡಿದಂತೆ ನಡೆದಿದ್ದೇವೆ, ಮುಂದಿಯೂ ನುಡಿದಂತೆ ನಡೆಯುತ್ತೇವೆ ಎಂದರು.

ಇದನ್ನೂ ಓದಿ; ಶಾಲಾ ಕಾಲೇಜುಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆ ಓದು: ಡಾ.ಹೆಚ್.ಸಿ ಮಹದೇವಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...