Homeಮುಖಪುಟಹೆಚ್ಚಿನ ಕಂಡಿಷನ್‌ಗಳಿಲ್ಲದೆ ಐದು ಗ್ಯಾರಂಟಿಗಳನ್ನು ಘೋಷಿಸಿದ ಸಿದ್ದರಾಮಯ್ಯ

ಹೆಚ್ಚಿನ ಕಂಡಿಷನ್‌ಗಳಿಲ್ಲದೆ ಐದು ಗ್ಯಾರಂಟಿಗಳನ್ನು ಘೋಷಿಸಿದ ಸಿದ್ದರಾಮಯ್ಯ

ಜುಲೈ 1 ರಿಂದ ಪ್ರತಿಯೊಂದು ಕುಟುಂಬಕ್ಕೆ 200 ಯೂನಿಟ್‌ವರೆಗೂ ಉಚಿತ ವಿದ್ಯುತ್, ಆಗಸ್ಟ್ 15 ರಂದು ಮನೆಯೊಡತಿಯ ಖಾತೆಗೆ 2,000 ರೂ ಜಮಾ, ಜುಲೈ ಒಂದರಿಂದ ಬಿಪಿಎಲ್ ಕಾರ್ಡುದಾರರಿಗೆ ತಲಾ 10 ಕೆಜಿ ಅಕ್ಕಿ, ಜೂನ್ 11 ರಂದು ರಾಜ್ಯಾದ್ಯಂತ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

- Advertisement -
- Advertisement -

ಜುಲೈ 1 ರಿಂದ ಪ್ರತಿಯೊಂದು ಕುಟುಂಬಕ್ಕೆ 200 ಯೂನಿಟ್‌ವರೆಗೂ ಉಚಿತ ವಿದ್ಯುತ್ ನೀಡಲಾಗುವುದು. ಆಗಸ್ಟ್ 15 ರಂದು ಮನೆಯೊಡತಿಯ ಖಾತೆಗೆ 2,000 ರೂ ಜಮಾ ಮಾಡಲಾಗುವುದು. ಜುಲೈ ಒಂದರಿಂದ ಬಿಪಿಎಲ್ ಕಾರ್ಡುದಾರರಿಗೆ ಮತ್ತು ಅಂತ್ಯೋದಯ ಕಾರ್ಡು ಹೊಂದಿರುವವರಿಗೆ ತಲಾ 10 ಕೆಜಿ ಅಕ್ಕಿ ಕೊಡಲಾಗುವುದು. ಜೂನ್ 11 ರಂದು ರಾಜ್ಯಾದ್ಯಂತ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಮೊದಲ ಗ್ಯಾರಂಟಿ – ಗೃಹ ಜ್ಯೋತಿ

200 ಯೂನಿಟ್‌ವರೆಗೆ ಉಚಿತ ವಿದ್ಯುತ್ ಎಲ್ಲರಿಗೂ ಕೊಡುತ್ತೇವೆ. ಇದನ್ನು ಜಾರಿ ಮಾಡಲು ತೀರ್ಮಾನಿಸಿದ್ದೇವೆ. 199 ಯೂನಿಟ್‌ವರೆಗೂ ಫ್ರಿ ವಿದ್ಯುತ್ ಕೊಡುತ್ತೇವೆ. 12 ತಿಂಗಳ ಸರಾಸರಿ ನೋಡುತ್ತೇವೆ. ಅದರ ಮೇಲೆ 10% ಉಚಿತವಾಗಿ ಕೊಡುತ್ತೇವೆ. ಈ ವರ್ಷದ ಜುಲೈ 1 ರಿಂದ ಫ್ರೀ ಜಾರಿಯಾಗುತ್ತದೆ ಎಂದರು. ಆದರೆ ಇದುವರೆಗೂ ಉಳಿಸಿಕೊಂಡಿರುವ ಬಾಕಿಯನ್ನು ಜನರೇ ಕಟ್ಟಬೇಕು ಎಂದರು.

ಎರಡನೇ ಗ್ಯಾರಂಟಿ – ಗೃಹ ಲಕ್ಷ್ಮೀ

ಗೃಹ ಲಕ್ಷ್ಮೀ ಯೋಜನೆ ಜಾರಿಗೊಳಿಸುತ್ತೇವೆ. ಅದಕ್ಕಾಗಿ ಅರ್ಜಿ ಆಧಾರ್ ಕಾರ್ಡ್, ಬ್ಯಾಂಕ್ ಡಿಟೈಲ್ಸ್ ಕೊಡಬೇಕು. ಮನೆ ಯಜಮಾನಿಗೆ ಎಂದು ಹೇಳಿದ್ದೇವೆ. ಅವರ ಖಾತೆಗೆ ತಿಂಗಳಿಗೆ 2,000 ರೂ ಜಮಾ ಮಾಡುತ್ತೇವೆ. ಜೂನ್ 15 ರಿಂದ ಜುಲೈ 15ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಜುಲೈ 15 ರಿಂದ ಆಗಸ್ಟ್ 15 ರೊಳಗೆ ಪ್ರಕ್ರಿಯೆ ಮಾಡಿ ಆಗಸ್ಟ್ 15ನೇ ತಾರೀಖು ಎಲ್ಲ ಮನೆಯೊಡತಿಯರ ಖಾತೆಗೆ ಹಣ ಜಮಾ ಮಾಡುತ್ತೇವೆ. ಬಿಪಿಎಲ್ ಮತ್ತು ಎಪಿಎಲ್ ಇಬ್ಬರೂ ಅರ್ಜಿ ಹಾಕಬಹುದು. ಎಲ್ಲರಿಗೂ ಕೊಡುತ್ತೇವೆ ಎಂದರು. ಅರ್ಜಿ ಸಲ್ಲಿಸುವಾಗ ಮನೆಯಲ್ಲಿ ಯಾರು ಯಜಮಾನಿ ಎಂದು ಸ್ಪಷ್ಟಪಡಿಸಬೇಕು ಎಂದರು.

ಇದುವರೆಗೂ ವಿಶೇಷ ಚೇತನರು, ಹಿರಿಯ ವಯಸ್ಸಿನವರು, ವಿಧವಾ ವೇತನ ಪಡೆಯುತ್ತಿರುವವರು ಸಹ ಈ ಗೃಹ ಲಕ್ಷ್ಮೀ ಯೋಜನೆಗೆ ಅರ್ಹರಾಗಿದ್ದಾರೆ. ಆ ಪಿಂಚಣಿ ಜೊತೆಗೆ ಈ 2,000 ರೂ ಸಹ ಕೊಡುತ್ತೇವೆ ಎಂದು ಸಿದ್ದರಾಮಯ್ಯ ತಿಳಿಸಿದರು.

10 ಕೆಜಿ ಅಕ್ಕಿ ಉಚಿತ

ಜುಲೈ 1ನೇ ತಾರೀಖಿನಿಂದ ಎಲ್ಲಾ ಬಿಪಿಎಲ್ ಕಾರ್ಡುದಾರರಿಗೆ ಮತ್ತು ಅಂತ್ಯೋದಯ ಕಾರ್ಡು ಹೊಂದಿರುವವರಿಗೆ ತಲಾ 10 ಕೆಜಿ ಅಕ್ಕಿ ಕೊಡಲಾಗುವುದು. ಅಂತ್ಯೋದಯ ಕಾರ್ಡು ಹೊಂದಿರುವವರಿಗೆ ಸದ್ಯ 35 ಕೆಜಿ ಅಕ್ಕಿ ಕೊಡಲಾಗುತ್ತಿದೆ. ಮುಂದೆ ಅವರಿಗೂ ತಲಾ 10 ಕೆಜಿ ಕೊಡಲಾಗುವುದು. ಸದ್ಯಕ್ಕೆ ಸ್ಟಾಕ್ ಇಲ್ಲ. ಒಂದು ತಿಂಗಳಲ್ಲಿ ಹೇಗಾದರೂ ಮಾಡಿ ಕೊಂಡುಕೊಂಡು ಜುಲೈ 1 ರಿಂದ ತಲಾ 10 ಕೆಜಿ ಅಕ್ಕಿ ಕೊಡುತ್ತೇವೆ.

4 ನೇ ಗ್ಯಾರಂಟಿ – ಶಕ್ತಿ

ಸಮಾಜದಲ್ಲಿ 50% ಮಹಿಳೆಯರು ಇದ್ದಾರೆ. ಎಲ್ಲಾ ಮಹಿಳೆಯರಿಗೆ ಅವರ ಆರ್ಥಿಕ ಸ್ಥಾನಮಾನ ಹೊರತು ಪಡಿಸಿ ಎಲ್ಲರಿಗೂ ಉಚಿತ ಬಸ್ ಪ್ರಯಾಣ ಘೋಷಿಸುತ್ತಿದ್ದೇವೆ. ಜೂನ್ 11 ರಂದು ಈ ಯೋಜನೆಗೆ ಬೆಂಗಳೂರಿನಲ್ಲಿ ಚಾಲನೆ ನೀಡುತ್ತೇವೆ ಎಂದು ಸಿದ್ದರಾಮಯ್ಯ ಘೋಷಿಸಿದರು.

ನಮ್ಮ ರಾಜ್ಯದೊಳಗೆ, ಕರ್ನಾಟಕದವರಿಗೆ ಮಾತ್ರ ಉಚಿತ ಪ್ರಯಾಣ ಇರುತ್ತದೆ. ಎ.ಸಿ ಬಸ್ ಮತ್ತು ಸ್ಲೀಪರ್ ಬಸ್, ಲಕ್ಸುರಿ ಬಸ್ ಹೊರತುಪಡಿಸಿ ಉಳಿದ ಎಲ್ಲಾ ಬಸ್‌ಗಳಲ್ಲಿ ಉಚಿತ ಪ್ರಯಾಣವಿರುತ್ತದೆ. ಅಂದರೆ ಶೇ.90 ರಷ್ಟು ಬಸ್‌ಗಳಲ್ಲಿ ರಾಜ್ಯದ ಎಲ್ಲೆಡೆ ಉಚಿತ ಪ್ರಯಾಣ ಇರುತ್ತದೆ. ಇನ್ನು ಪುರುಷರಿಗೆ 50% ಆಸನ ಮೀಸಲು ಮಾಡಲಾಗುತ್ತದೆ.

5ನೇ ಗ್ಯಾರಂಟಿ ಯುವನಿಧಿ – ಯುವಜನರಿಗೆ 3000 ನಿರುದ್ಯೋಗ ಭತ್ಯೆ

2022-23 ರಲ್ಲಿ ವ್ಯಾಸಂಗ ಮಾಡಿ ಪದವಿ ಪಡೆದವರಿಗೆ 24 ತಿಂಗಳುಗಳವರೆಗೆ ಪ್ರತಿ ತಿಂಗಳಿಗೆ 3000 ರೂ ನೀಡಲಾಗುವುದು. ಅರ್ಹರು ಅರ್ಜಿ ಸಲ್ಲಿಸಬೇಕು. ಎಲ್ಲಾ ಜಾತಿ ವರ್ಗದವರೂ, ಟ್ರಾನ್ಸ್‌ಜೆಂಡರ್‌ ಸಮುದಾಯದವರು ಸಹ ಇದಕ್ಕೆ ಅರ್ಹರು ಎಂದರು.

ಇದೇ ಸಂದರ್ಭದಲ್ಲಿ ಪ್ರತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಮೋದಿಯವರು ಪ್ರತಿಯೊಬ್ಬರಿಗೂ 15 ಲಕ್ಷ ರೂ ಕೊಡುತ್ತೇವೆ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ, ರೈತರ ಆದಾಯ ಡಬಲ್ ಮಾಡುತ್ತೇವೆ, ಅಚ್ಛೇದಿನ್ ತರುತ್ತೇವೆ ಎಂದು ಭರವಸೆ ಕೊಟ್ಟಿದ್ದರು. ಅವುಗಳನ್ನು ಜಾರಿಗೆ ತಂದರೆ? ನಾವು ಹಿಂದೆಯೂ ನುಡಿದಂತೆ ನಡೆದಿದ್ದೇವೆ, ಮುಂದಿಯೂ ನುಡಿದಂತೆ ನಡೆಯುತ್ತೇವೆ ಎಂದರು.

ಇದನ್ನೂ ಓದಿ; ಶಾಲಾ ಕಾಲೇಜುಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆ ಓದು: ಡಾ.ಹೆಚ್.ಸಿ ಮಹದೇವಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...