Homeಮುಖಪುಟಹೆಚ್ಚಿನ ಕಂಡಿಷನ್‌ಗಳಿಲ್ಲದೆ ಐದು ಗ್ಯಾರಂಟಿಗಳನ್ನು ಘೋಷಿಸಿದ ಸಿದ್ದರಾಮಯ್ಯ

ಹೆಚ್ಚಿನ ಕಂಡಿಷನ್‌ಗಳಿಲ್ಲದೆ ಐದು ಗ್ಯಾರಂಟಿಗಳನ್ನು ಘೋಷಿಸಿದ ಸಿದ್ದರಾಮಯ್ಯ

ಜುಲೈ 1 ರಿಂದ ಪ್ರತಿಯೊಂದು ಕುಟುಂಬಕ್ಕೆ 200 ಯೂನಿಟ್‌ವರೆಗೂ ಉಚಿತ ವಿದ್ಯುತ್, ಆಗಸ್ಟ್ 15 ರಂದು ಮನೆಯೊಡತಿಯ ಖಾತೆಗೆ 2,000 ರೂ ಜಮಾ, ಜುಲೈ ಒಂದರಿಂದ ಬಿಪಿಎಲ್ ಕಾರ್ಡುದಾರರಿಗೆ ತಲಾ 10 ಕೆಜಿ ಅಕ್ಕಿ, ಜೂನ್ 11 ರಂದು ರಾಜ್ಯಾದ್ಯಂತ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

- Advertisement -
- Advertisement -

ಜುಲೈ 1 ರಿಂದ ಪ್ರತಿಯೊಂದು ಕುಟುಂಬಕ್ಕೆ 200 ಯೂನಿಟ್‌ವರೆಗೂ ಉಚಿತ ವಿದ್ಯುತ್ ನೀಡಲಾಗುವುದು. ಆಗಸ್ಟ್ 15 ರಂದು ಮನೆಯೊಡತಿಯ ಖಾತೆಗೆ 2,000 ರೂ ಜಮಾ ಮಾಡಲಾಗುವುದು. ಜುಲೈ ಒಂದರಿಂದ ಬಿಪಿಎಲ್ ಕಾರ್ಡುದಾರರಿಗೆ ಮತ್ತು ಅಂತ್ಯೋದಯ ಕಾರ್ಡು ಹೊಂದಿರುವವರಿಗೆ ತಲಾ 10 ಕೆಜಿ ಅಕ್ಕಿ ಕೊಡಲಾಗುವುದು. ಜೂನ್ 11 ರಂದು ರಾಜ್ಯಾದ್ಯಂತ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಮೊದಲ ಗ್ಯಾರಂಟಿ – ಗೃಹ ಜ್ಯೋತಿ

200 ಯೂನಿಟ್‌ವರೆಗೆ ಉಚಿತ ವಿದ್ಯುತ್ ಎಲ್ಲರಿಗೂ ಕೊಡುತ್ತೇವೆ. ಇದನ್ನು ಜಾರಿ ಮಾಡಲು ತೀರ್ಮಾನಿಸಿದ್ದೇವೆ. 199 ಯೂನಿಟ್‌ವರೆಗೂ ಫ್ರಿ ವಿದ್ಯುತ್ ಕೊಡುತ್ತೇವೆ. 12 ತಿಂಗಳ ಸರಾಸರಿ ನೋಡುತ್ತೇವೆ. ಅದರ ಮೇಲೆ 10% ಉಚಿತವಾಗಿ ಕೊಡುತ್ತೇವೆ. ಈ ವರ್ಷದ ಜುಲೈ 1 ರಿಂದ ಫ್ರೀ ಜಾರಿಯಾಗುತ್ತದೆ ಎಂದರು. ಆದರೆ ಇದುವರೆಗೂ ಉಳಿಸಿಕೊಂಡಿರುವ ಬಾಕಿಯನ್ನು ಜನರೇ ಕಟ್ಟಬೇಕು ಎಂದರು.

ಎರಡನೇ ಗ್ಯಾರಂಟಿ – ಗೃಹ ಲಕ್ಷ್ಮೀ

ಗೃಹ ಲಕ್ಷ್ಮೀ ಯೋಜನೆ ಜಾರಿಗೊಳಿಸುತ್ತೇವೆ. ಅದಕ್ಕಾಗಿ ಅರ್ಜಿ ಆಧಾರ್ ಕಾರ್ಡ್, ಬ್ಯಾಂಕ್ ಡಿಟೈಲ್ಸ್ ಕೊಡಬೇಕು. ಮನೆ ಯಜಮಾನಿಗೆ ಎಂದು ಹೇಳಿದ್ದೇವೆ. ಅವರ ಖಾತೆಗೆ ತಿಂಗಳಿಗೆ 2,000 ರೂ ಜಮಾ ಮಾಡುತ್ತೇವೆ. ಜೂನ್ 15 ರಿಂದ ಜುಲೈ 15ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಜುಲೈ 15 ರಿಂದ ಆಗಸ್ಟ್ 15 ರೊಳಗೆ ಪ್ರಕ್ರಿಯೆ ಮಾಡಿ ಆಗಸ್ಟ್ 15ನೇ ತಾರೀಖು ಎಲ್ಲ ಮನೆಯೊಡತಿಯರ ಖಾತೆಗೆ ಹಣ ಜಮಾ ಮಾಡುತ್ತೇವೆ. ಬಿಪಿಎಲ್ ಮತ್ತು ಎಪಿಎಲ್ ಇಬ್ಬರೂ ಅರ್ಜಿ ಹಾಕಬಹುದು. ಎಲ್ಲರಿಗೂ ಕೊಡುತ್ತೇವೆ ಎಂದರು. ಅರ್ಜಿ ಸಲ್ಲಿಸುವಾಗ ಮನೆಯಲ್ಲಿ ಯಾರು ಯಜಮಾನಿ ಎಂದು ಸ್ಪಷ್ಟಪಡಿಸಬೇಕು ಎಂದರು.

ಇದುವರೆಗೂ ವಿಶೇಷ ಚೇತನರು, ಹಿರಿಯ ವಯಸ್ಸಿನವರು, ವಿಧವಾ ವೇತನ ಪಡೆಯುತ್ತಿರುವವರು ಸಹ ಈ ಗೃಹ ಲಕ್ಷ್ಮೀ ಯೋಜನೆಗೆ ಅರ್ಹರಾಗಿದ್ದಾರೆ. ಆ ಪಿಂಚಣಿ ಜೊತೆಗೆ ಈ 2,000 ರೂ ಸಹ ಕೊಡುತ್ತೇವೆ ಎಂದು ಸಿದ್ದರಾಮಯ್ಯ ತಿಳಿಸಿದರು.

10 ಕೆಜಿ ಅಕ್ಕಿ ಉಚಿತ

ಜುಲೈ 1ನೇ ತಾರೀಖಿನಿಂದ ಎಲ್ಲಾ ಬಿಪಿಎಲ್ ಕಾರ್ಡುದಾರರಿಗೆ ಮತ್ತು ಅಂತ್ಯೋದಯ ಕಾರ್ಡು ಹೊಂದಿರುವವರಿಗೆ ತಲಾ 10 ಕೆಜಿ ಅಕ್ಕಿ ಕೊಡಲಾಗುವುದು. ಅಂತ್ಯೋದಯ ಕಾರ್ಡು ಹೊಂದಿರುವವರಿಗೆ ಸದ್ಯ 35 ಕೆಜಿ ಅಕ್ಕಿ ಕೊಡಲಾಗುತ್ತಿದೆ. ಮುಂದೆ ಅವರಿಗೂ ತಲಾ 10 ಕೆಜಿ ಕೊಡಲಾಗುವುದು. ಸದ್ಯಕ್ಕೆ ಸ್ಟಾಕ್ ಇಲ್ಲ. ಒಂದು ತಿಂಗಳಲ್ಲಿ ಹೇಗಾದರೂ ಮಾಡಿ ಕೊಂಡುಕೊಂಡು ಜುಲೈ 1 ರಿಂದ ತಲಾ 10 ಕೆಜಿ ಅಕ್ಕಿ ಕೊಡುತ್ತೇವೆ.

4 ನೇ ಗ್ಯಾರಂಟಿ – ಶಕ್ತಿ

ಸಮಾಜದಲ್ಲಿ 50% ಮಹಿಳೆಯರು ಇದ್ದಾರೆ. ಎಲ್ಲಾ ಮಹಿಳೆಯರಿಗೆ ಅವರ ಆರ್ಥಿಕ ಸ್ಥಾನಮಾನ ಹೊರತು ಪಡಿಸಿ ಎಲ್ಲರಿಗೂ ಉಚಿತ ಬಸ್ ಪ್ರಯಾಣ ಘೋಷಿಸುತ್ತಿದ್ದೇವೆ. ಜೂನ್ 11 ರಂದು ಈ ಯೋಜನೆಗೆ ಬೆಂಗಳೂರಿನಲ್ಲಿ ಚಾಲನೆ ನೀಡುತ್ತೇವೆ ಎಂದು ಸಿದ್ದರಾಮಯ್ಯ ಘೋಷಿಸಿದರು.

ನಮ್ಮ ರಾಜ್ಯದೊಳಗೆ, ಕರ್ನಾಟಕದವರಿಗೆ ಮಾತ್ರ ಉಚಿತ ಪ್ರಯಾಣ ಇರುತ್ತದೆ. ಎ.ಸಿ ಬಸ್ ಮತ್ತು ಸ್ಲೀಪರ್ ಬಸ್, ಲಕ್ಸುರಿ ಬಸ್ ಹೊರತುಪಡಿಸಿ ಉಳಿದ ಎಲ್ಲಾ ಬಸ್‌ಗಳಲ್ಲಿ ಉಚಿತ ಪ್ರಯಾಣವಿರುತ್ತದೆ. ಅಂದರೆ ಶೇ.90 ರಷ್ಟು ಬಸ್‌ಗಳಲ್ಲಿ ರಾಜ್ಯದ ಎಲ್ಲೆಡೆ ಉಚಿತ ಪ್ರಯಾಣ ಇರುತ್ತದೆ. ಇನ್ನು ಪುರುಷರಿಗೆ 50% ಆಸನ ಮೀಸಲು ಮಾಡಲಾಗುತ್ತದೆ.

5ನೇ ಗ್ಯಾರಂಟಿ ಯುವನಿಧಿ – ಯುವಜನರಿಗೆ 3000 ನಿರುದ್ಯೋಗ ಭತ್ಯೆ

2022-23 ರಲ್ಲಿ ವ್ಯಾಸಂಗ ಮಾಡಿ ಪದವಿ ಪಡೆದವರಿಗೆ 24 ತಿಂಗಳುಗಳವರೆಗೆ ಪ್ರತಿ ತಿಂಗಳಿಗೆ 3000 ರೂ ನೀಡಲಾಗುವುದು. ಅರ್ಹರು ಅರ್ಜಿ ಸಲ್ಲಿಸಬೇಕು. ಎಲ್ಲಾ ಜಾತಿ ವರ್ಗದವರೂ, ಟ್ರಾನ್ಸ್‌ಜೆಂಡರ್‌ ಸಮುದಾಯದವರು ಸಹ ಇದಕ್ಕೆ ಅರ್ಹರು ಎಂದರು.

ಇದೇ ಸಂದರ್ಭದಲ್ಲಿ ಪ್ರತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಮೋದಿಯವರು ಪ್ರತಿಯೊಬ್ಬರಿಗೂ 15 ಲಕ್ಷ ರೂ ಕೊಡುತ್ತೇವೆ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ, ರೈತರ ಆದಾಯ ಡಬಲ್ ಮಾಡುತ್ತೇವೆ, ಅಚ್ಛೇದಿನ್ ತರುತ್ತೇವೆ ಎಂದು ಭರವಸೆ ಕೊಟ್ಟಿದ್ದರು. ಅವುಗಳನ್ನು ಜಾರಿಗೆ ತಂದರೆ? ನಾವು ಹಿಂದೆಯೂ ನುಡಿದಂತೆ ನಡೆದಿದ್ದೇವೆ, ಮುಂದಿಯೂ ನುಡಿದಂತೆ ನಡೆಯುತ್ತೇವೆ ಎಂದರು.

ಇದನ್ನೂ ಓದಿ; ಶಾಲಾ ಕಾಲೇಜುಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆ ಓದು: ಡಾ.ಹೆಚ್.ಸಿ ಮಹದೇವಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...