Homeಕರ್ನಾಟಕಮೋದಿಯವರ ಲಸಿಕೋತ್ಸವ ಜಾಹೀರಾತಿಗಷ್ಟೇ ಸೀಮಿತವಾಯಿತೇ?- ಸಿದ್ದರಾಮಯ್ಯ

ಮೋದಿಯವರ ಲಸಿಕೋತ್ಸವ ಜಾಹೀರಾತಿಗಷ್ಟೇ ಸೀಮಿತವಾಯಿತೇ?- ಸಿದ್ದರಾಮಯ್ಯ

’ರಾಜ್ಯದ ಲಸಿಕಾ ಕೇಂದ್ರಕ್ಕೆ ಬರುತ್ತಿರುವ ನೂರು ಮಂದಿಯಲ್ಲಿ 20 ಮಂದಿಗೆ ಮಾತ್ರ ಲಸಿಕೆ ನೀಡಲಾಗುತ್ತಿದೆ’

- Advertisement -
- Advertisement -

ಕೊರೊನಾ ಲಸಿಕೆ ಕೊರತೆ ಬಗ್ಗೆ ಒಕ್ಕೂಟ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿಯವರ ಲಸಿಕೋತ್ಸವ ಜಾಹೀರಾತಿಗಷ್ಟೇ ಸೀಮಿತವಾಯಿತೇ..? ಎಂದು ಕಟುವಾಗಿ ಪ್ರಶ್ನಿಸಿದ್ದಾರೆ.

’ಲಸಿಕೆ ಕೊರತೆಯಿಂದಾಗಿ ರಾಜ್ಯದ ಶೇಕಡಾ 50 ರಷ್ಟು ಲಸಿಕೆ ಕೇಂದ್ರಗಳು ಸ್ಥಗಿತಗೊಂಡಿವೆ. ಕಳೆದ 14 ದಿನಗಳಲ್ಲಿ ಸರಾಸರಿ 2.56 ಲಕ್ಷ ಲಸಿಕೆಗಳನ್ನು ಮಾತ್ರ ನೀಡಲಾಗುತ್ತಿದೆ ಎಂಬ ವರದಿ ಕಳವಳಕಾರಿಯಾದುದು. ಪ್ರಧಾನಿ ನರೇಂದ್ರ ಮೋದಿಯವರ ಲಸಿಕೋತ್ಸವ ಜಾಹೀರಾತಿಗಷ್ಟೇ ಸೀಮಿತವಾಯಿತೇ..? ಎಂದು ಕಿಡಿಕಾರಿದ್ದಾರೆ.

’ರಾಜ್ಯದ ಲಸಿಕಾ ಕೇಂದ್ರಕ್ಕೆ ಬರುತ್ತಿರುವ ನೂರು ಮಂದಿಯಲ್ಲಿ 20 ಮಂದಿಗೆ ಮಾತ್ರ ಲಸಿಕೆ ನೀಡಲಾಗುತ್ತಿದೆ. ಬೇಡಿಕೆಯ ಶೇಕಡಾ 20ರಷ್ಟು ಲಸಿಕೆಗಳೂ ಪೂರೈಕೆಯಾಗುತ್ತಿಲ್ಲ ಎಂದು ಆರೋಗ್ಯ ಇಲಾಖೆಯ ವೈದ್ಯರು ಹೇಳುತ್ತಿದ್ದಾರೆ. ಇದರ ವಿರುದ್ಧ ಸೊಲ್ಲೆತ್ತಲಾಗದ ಅಸಮರ್ಥ ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರು ಅಸಹಾಯಕರಂತೆ ದೆಹಲಿ ಕಡೆ ಕೈತೋರಿಸುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

‘ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ಪೂರೈಸುವಂತೆ ಹತ್ತಕ್ಕಿಂತ ಹೆಚ್ಚು ಪತ್ರಗಳನ್ನು ರಾಜ್ಯ ಸರ್ಕಾರ ಬರೆದಿದ್ದರೂ ಕೇಂದ್ರ ಸರ್ಕಾರದಿಂದ ಯಾವುದೇ ಸ್ಪಂದನೆ ಇಲ್ಲ. ಲಸಿಕೆ ನೀಡಿಕೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಹೇಳುತ್ತಾ ಬಂದಿರುವ ಕೇಂದ್ರ ಸರ್ಕಾರ ತನ್ನ ವೈಫಲ್ಯತೆಯನ್ನು ಒಪ್ಪಲಿದೆಯೇ..?’ ಎಂದು ಸರಣಿ ಟ್ವೀಟ್‌ಗಳಲ್ಲಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ‘ಬ್ಯಾಂಕಿಂಗ್‌ ಪರೀಕ್ಷೆ: ಕನ್ನಡಿಗರಿಗೆ ದ್ರೋಹ ಬಗೆದ ಮೋದಿ ಸರ್ಕಾರ’ – ಸಿದ್ದರಾಮಯ್ಯ

 

’ರಾಜ್ಯದಲ್ಲಿರುವ 8500 ಲಸಿಕಾ ಕೇಂದ್ರಗಳಲ್ಲಿ ಬಹುಪಾಲು ಕೇಂದ್ರಗಳು ಗ್ರಾಮೀಣ ಪ್ರದೇಶದಲ್ಲಿವೆ. ಅಲ್ಲಿ ಲಭ್ಯ ಇರುವ ಲಸಿಕೆಗಳನ್ನು ಕೂಡಾ ರಾಜಕಾರಣಿಗಳು ಮತ್ತು ಪ್ರಭಾವಿಗಳ ಶಿಫಾರಸಿನ ಮೇರೆಗೆ ನೀಡಲಾಗುತ್ತಿರುವ ದೂರುಗಳಿವೆ. ಗ್ರಾಮೀಣ ಪ್ರದೇಶಗಳ ಆಸ್ಪತ್ರೆಗಳ ಮುಂಭಾಗದಲ್ಲಿ ಲಸಿಕಾ ಆಕಾಂಕ್ಷಿಗಳು ಬೆಳಿಗ್ಗೆಯಿಂದ ಸಾಲಲ್ಲಿ ನಿಂತು ಬರಿಗೈಯಲ್ಲಿ ಹಿಂದಿರುಗುತ್ತಿದ್ದಾರೆ’ ಎಂದು ಆಕ್ರೋಶ ಹೊರಹಾಕಿದ್ದಾರೆ.

’ಈಗಿನ ಅಂದಾಜಿನಂತೆ ರಾಜ್ಯದಲ್ಲಿ 4.97 ಕೋಟಿ ಜನರಿಗೆ ಲಸಿಕೆ ನೀಡಬೇಕಿದ್ದು, ಎರಡು ಡೋಸ್‌ಗಳಂತೆ ಒಟ್ಟು 9.94 ಕೋಟಿ ಲಸಿಕೆಗಳು ಬೇಕಾಗಿದೆ. ಆದರೆ ಕೇಂದ್ರ ಸರ್ಕಾರ ಇಲ್ಲಿಯ ವರೆಗೆ ಪೂರೈಸಿರುವುದು 2.6 ಕೋಟಿ ಲಸಿಕೆ ಮಾತ್ರ ಎಂದು ಆರೋಗ್ಯ ಇಲಾಖೆ ಹೇಳುತ್ತಿರುವುದು ಪರಿಸ್ಥಿತಿಯ ಗಂಭೀರತೆಗೆ ಸಾಕ್ಷಿ’ ಎಂದಿದ್ದಾರೆ.

’ಒಂದೆಡೆ ಯುವಜನರನ್ನು ಗುರಿಯಾಗಿಟ್ಟುಕೊಂಡಿದೆಯೆನ್ನಲಾದ ಕೊರೊನಾ ಮೂರನೇ ಅಲೆಯ ಭೀತಿ, ಇನ್ನೊಂದೆಡೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮತ್ತು ಕಾಲೇಜುಗಳನ್ನು ತೆರೆಯಲು ಸರ್ಕಾರದ ಪ್ರಯತ್ನ. ಈ ಪರಿಸ್ಥಿತಿಯಲ್ಲಿ ಇನ್ನಷ್ಟು ಎಚ್ಚರಿಕೆಯಿಂದ ಪೂರ್ವ ಸಿದ್ಧತೆ ನಡೆಸಬೇಕಾಗಿದ್ದ ರಾಜ್ಯ ಸರ್ಕಾರ ಕೈಕಟ್ಟಿ ಕೂತಿದೆ’ ಎಂದು ಆರೋಪಿಸಿದ್ದಾರೆ.

’ಜುಲೈ ಅಂತ್ಯದೊಳಗೆ ದೇಶಾದ್ಯಂತ 51.6 ಕೋಟಿ ಕೊರೊನಾ ಲಸಿಕೆಗಳನ್ನು ನೀಡುವುದಾಗಿ ಕೇಂದ್ರ ಸರ್ಕಾರ ಆಶ್ವಾಸನೆ ನೀಡಿತ್ತು. ಈ ಗುರಿ ಸಾಧನೆಗಾಗಿ ಪ್ರತಿದಿನ 70 ಲಕ್ಷ ಲಸಿಕೆ ನೀಡಬೇಕಾಗಿದ್ದರೂ ಈಗ 40 ಲಕ್ಷ ಲಸಿಕೆ ಮಾತ್ರ ನೀಡಲಾಗುತ್ತಿದೆ. ಇಲ್ಲಿಯ ವರೆಗೆ 38.5 ಕೋಟಿ ಲಸಿಕೆಗಳನ್ನಷ್ಟೇ ನೀಡಲಾಗಿದೆ. ದಿನದಿಂದ ದಿನಕ್ಕೆ ಲಸಿಕೆ ನೀಡಿಕೆಯ ಸಂಖ್ಯೆ ಕಡಿಮೆಯಾಗುತ್ತಿದೆ. ಹೀಗಾದರೆ ಮುಂದೇನು..?’ ಎಂದಿದ್ದಾರೆ.

’ರಾಜ್ಯಗಳು ಲಸಿಕೆ ಹಾಕುವುದರಲ್ಲಿ ವಿಫಲವಾಗಿದೆ ಎಂದು ಆರೋಪಿಸಿ, ಈ ಹೊಣೆಯನ್ನು ತನ್ನ ತಲೆ ಮೇಲೆ ಹೊತ್ತುಕೊಂಡ ಪ್ರಧಾನಿಯವರ ಆಶ್ವಾಸನೆ, ಅವರ ಎಂದಿನ ಸುಳ್ಳಿನ ಸರಮಾಲೆಗೆ ಇನ್ನೊಂದು ಹೊಸ ಸುಳ್ಳಿನ ಸೇರ್ಪಡೆ ಅಷ್ಟೆ’ ಎಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಿದ್ದಾರೆ.


ಇದನ್ನೂ ಓದಿ: ಸಂಪುಟ ಪುನರ್‌‌ರಚನೆಗೆ ಕಾರ್ಯನಿರ್ವಹಣೆಯೆ ಮಾನದಂಡವಾದರೆ ಮೋದಿಯನ್ನೇ ಮೊದಲು ತೆಗೆಯಬೇಕು: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...