Homeಕರ್ನಾಟಕಮೋದಿಯವರ ಲಸಿಕೋತ್ಸವ ಜಾಹೀರಾತಿಗಷ್ಟೇ ಸೀಮಿತವಾಯಿತೇ?- ಸಿದ್ದರಾಮಯ್ಯ

ಮೋದಿಯವರ ಲಸಿಕೋತ್ಸವ ಜಾಹೀರಾತಿಗಷ್ಟೇ ಸೀಮಿತವಾಯಿತೇ?- ಸಿದ್ದರಾಮಯ್ಯ

’ರಾಜ್ಯದ ಲಸಿಕಾ ಕೇಂದ್ರಕ್ಕೆ ಬರುತ್ತಿರುವ ನೂರು ಮಂದಿಯಲ್ಲಿ 20 ಮಂದಿಗೆ ಮಾತ್ರ ಲಸಿಕೆ ನೀಡಲಾಗುತ್ತಿದೆ’

- Advertisement -
- Advertisement -

ಕೊರೊನಾ ಲಸಿಕೆ ಕೊರತೆ ಬಗ್ಗೆ ಒಕ್ಕೂಟ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿಯವರ ಲಸಿಕೋತ್ಸವ ಜಾಹೀರಾತಿಗಷ್ಟೇ ಸೀಮಿತವಾಯಿತೇ..? ಎಂದು ಕಟುವಾಗಿ ಪ್ರಶ್ನಿಸಿದ್ದಾರೆ.

’ಲಸಿಕೆ ಕೊರತೆಯಿಂದಾಗಿ ರಾಜ್ಯದ ಶೇಕಡಾ 50 ರಷ್ಟು ಲಸಿಕೆ ಕೇಂದ್ರಗಳು ಸ್ಥಗಿತಗೊಂಡಿವೆ. ಕಳೆದ 14 ದಿನಗಳಲ್ಲಿ ಸರಾಸರಿ 2.56 ಲಕ್ಷ ಲಸಿಕೆಗಳನ್ನು ಮಾತ್ರ ನೀಡಲಾಗುತ್ತಿದೆ ಎಂಬ ವರದಿ ಕಳವಳಕಾರಿಯಾದುದು. ಪ್ರಧಾನಿ ನರೇಂದ್ರ ಮೋದಿಯವರ ಲಸಿಕೋತ್ಸವ ಜಾಹೀರಾತಿಗಷ್ಟೇ ಸೀಮಿತವಾಯಿತೇ..? ಎಂದು ಕಿಡಿಕಾರಿದ್ದಾರೆ.

’ರಾಜ್ಯದ ಲಸಿಕಾ ಕೇಂದ್ರಕ್ಕೆ ಬರುತ್ತಿರುವ ನೂರು ಮಂದಿಯಲ್ಲಿ 20 ಮಂದಿಗೆ ಮಾತ್ರ ಲಸಿಕೆ ನೀಡಲಾಗುತ್ತಿದೆ. ಬೇಡಿಕೆಯ ಶೇಕಡಾ 20ರಷ್ಟು ಲಸಿಕೆಗಳೂ ಪೂರೈಕೆಯಾಗುತ್ತಿಲ್ಲ ಎಂದು ಆರೋಗ್ಯ ಇಲಾಖೆಯ ವೈದ್ಯರು ಹೇಳುತ್ತಿದ್ದಾರೆ. ಇದರ ವಿರುದ್ಧ ಸೊಲ್ಲೆತ್ತಲಾಗದ ಅಸಮರ್ಥ ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರು ಅಸಹಾಯಕರಂತೆ ದೆಹಲಿ ಕಡೆ ಕೈತೋರಿಸುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

‘ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ಪೂರೈಸುವಂತೆ ಹತ್ತಕ್ಕಿಂತ ಹೆಚ್ಚು ಪತ್ರಗಳನ್ನು ರಾಜ್ಯ ಸರ್ಕಾರ ಬರೆದಿದ್ದರೂ ಕೇಂದ್ರ ಸರ್ಕಾರದಿಂದ ಯಾವುದೇ ಸ್ಪಂದನೆ ಇಲ್ಲ. ಲಸಿಕೆ ನೀಡಿಕೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಹೇಳುತ್ತಾ ಬಂದಿರುವ ಕೇಂದ್ರ ಸರ್ಕಾರ ತನ್ನ ವೈಫಲ್ಯತೆಯನ್ನು ಒಪ್ಪಲಿದೆಯೇ..?’ ಎಂದು ಸರಣಿ ಟ್ವೀಟ್‌ಗಳಲ್ಲಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ‘ಬ್ಯಾಂಕಿಂಗ್‌ ಪರೀಕ್ಷೆ: ಕನ್ನಡಿಗರಿಗೆ ದ್ರೋಹ ಬಗೆದ ಮೋದಿ ಸರ್ಕಾರ’ – ಸಿದ್ದರಾಮಯ್ಯ

 

’ರಾಜ್ಯದಲ್ಲಿರುವ 8500 ಲಸಿಕಾ ಕೇಂದ್ರಗಳಲ್ಲಿ ಬಹುಪಾಲು ಕೇಂದ್ರಗಳು ಗ್ರಾಮೀಣ ಪ್ರದೇಶದಲ್ಲಿವೆ. ಅಲ್ಲಿ ಲಭ್ಯ ಇರುವ ಲಸಿಕೆಗಳನ್ನು ಕೂಡಾ ರಾಜಕಾರಣಿಗಳು ಮತ್ತು ಪ್ರಭಾವಿಗಳ ಶಿಫಾರಸಿನ ಮೇರೆಗೆ ನೀಡಲಾಗುತ್ತಿರುವ ದೂರುಗಳಿವೆ. ಗ್ರಾಮೀಣ ಪ್ರದೇಶಗಳ ಆಸ್ಪತ್ರೆಗಳ ಮುಂಭಾಗದಲ್ಲಿ ಲಸಿಕಾ ಆಕಾಂಕ್ಷಿಗಳು ಬೆಳಿಗ್ಗೆಯಿಂದ ಸಾಲಲ್ಲಿ ನಿಂತು ಬರಿಗೈಯಲ್ಲಿ ಹಿಂದಿರುಗುತ್ತಿದ್ದಾರೆ’ ಎಂದು ಆಕ್ರೋಶ ಹೊರಹಾಕಿದ್ದಾರೆ.

’ಈಗಿನ ಅಂದಾಜಿನಂತೆ ರಾಜ್ಯದಲ್ಲಿ 4.97 ಕೋಟಿ ಜನರಿಗೆ ಲಸಿಕೆ ನೀಡಬೇಕಿದ್ದು, ಎರಡು ಡೋಸ್‌ಗಳಂತೆ ಒಟ್ಟು 9.94 ಕೋಟಿ ಲಸಿಕೆಗಳು ಬೇಕಾಗಿದೆ. ಆದರೆ ಕೇಂದ್ರ ಸರ್ಕಾರ ಇಲ್ಲಿಯ ವರೆಗೆ ಪೂರೈಸಿರುವುದು 2.6 ಕೋಟಿ ಲಸಿಕೆ ಮಾತ್ರ ಎಂದು ಆರೋಗ್ಯ ಇಲಾಖೆ ಹೇಳುತ್ತಿರುವುದು ಪರಿಸ್ಥಿತಿಯ ಗಂಭೀರತೆಗೆ ಸಾಕ್ಷಿ’ ಎಂದಿದ್ದಾರೆ.

’ಒಂದೆಡೆ ಯುವಜನರನ್ನು ಗುರಿಯಾಗಿಟ್ಟುಕೊಂಡಿದೆಯೆನ್ನಲಾದ ಕೊರೊನಾ ಮೂರನೇ ಅಲೆಯ ಭೀತಿ, ಇನ್ನೊಂದೆಡೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮತ್ತು ಕಾಲೇಜುಗಳನ್ನು ತೆರೆಯಲು ಸರ್ಕಾರದ ಪ್ರಯತ್ನ. ಈ ಪರಿಸ್ಥಿತಿಯಲ್ಲಿ ಇನ್ನಷ್ಟು ಎಚ್ಚರಿಕೆಯಿಂದ ಪೂರ್ವ ಸಿದ್ಧತೆ ನಡೆಸಬೇಕಾಗಿದ್ದ ರಾಜ್ಯ ಸರ್ಕಾರ ಕೈಕಟ್ಟಿ ಕೂತಿದೆ’ ಎಂದು ಆರೋಪಿಸಿದ್ದಾರೆ.

’ಜುಲೈ ಅಂತ್ಯದೊಳಗೆ ದೇಶಾದ್ಯಂತ 51.6 ಕೋಟಿ ಕೊರೊನಾ ಲಸಿಕೆಗಳನ್ನು ನೀಡುವುದಾಗಿ ಕೇಂದ್ರ ಸರ್ಕಾರ ಆಶ್ವಾಸನೆ ನೀಡಿತ್ತು. ಈ ಗುರಿ ಸಾಧನೆಗಾಗಿ ಪ್ರತಿದಿನ 70 ಲಕ್ಷ ಲಸಿಕೆ ನೀಡಬೇಕಾಗಿದ್ದರೂ ಈಗ 40 ಲಕ್ಷ ಲಸಿಕೆ ಮಾತ್ರ ನೀಡಲಾಗುತ್ತಿದೆ. ಇಲ್ಲಿಯ ವರೆಗೆ 38.5 ಕೋಟಿ ಲಸಿಕೆಗಳನ್ನಷ್ಟೇ ನೀಡಲಾಗಿದೆ. ದಿನದಿಂದ ದಿನಕ್ಕೆ ಲಸಿಕೆ ನೀಡಿಕೆಯ ಸಂಖ್ಯೆ ಕಡಿಮೆಯಾಗುತ್ತಿದೆ. ಹೀಗಾದರೆ ಮುಂದೇನು..?’ ಎಂದಿದ್ದಾರೆ.

’ರಾಜ್ಯಗಳು ಲಸಿಕೆ ಹಾಕುವುದರಲ್ಲಿ ವಿಫಲವಾಗಿದೆ ಎಂದು ಆರೋಪಿಸಿ, ಈ ಹೊಣೆಯನ್ನು ತನ್ನ ತಲೆ ಮೇಲೆ ಹೊತ್ತುಕೊಂಡ ಪ್ರಧಾನಿಯವರ ಆಶ್ವಾಸನೆ, ಅವರ ಎಂದಿನ ಸುಳ್ಳಿನ ಸರಮಾಲೆಗೆ ಇನ್ನೊಂದು ಹೊಸ ಸುಳ್ಳಿನ ಸೇರ್ಪಡೆ ಅಷ್ಟೆ’ ಎಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಿದ್ದಾರೆ.


ಇದನ್ನೂ ಓದಿ: ಸಂಪುಟ ಪುನರ್‌‌ರಚನೆಗೆ ಕಾರ್ಯನಿರ್ವಹಣೆಯೆ ಮಾನದಂಡವಾದರೆ ಮೋದಿಯನ್ನೇ ಮೊದಲು ತೆಗೆಯಬೇಕು: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...