Homeಕರ್ನಾಟಕಮೋದಿಯವರ ಲಸಿಕೋತ್ಸವ ಜಾಹೀರಾತಿಗಷ್ಟೇ ಸೀಮಿತವಾಯಿತೇ?- ಸಿದ್ದರಾಮಯ್ಯ

ಮೋದಿಯವರ ಲಸಿಕೋತ್ಸವ ಜಾಹೀರಾತಿಗಷ್ಟೇ ಸೀಮಿತವಾಯಿತೇ?- ಸಿದ್ದರಾಮಯ್ಯ

’ರಾಜ್ಯದ ಲಸಿಕಾ ಕೇಂದ್ರಕ್ಕೆ ಬರುತ್ತಿರುವ ನೂರು ಮಂದಿಯಲ್ಲಿ 20 ಮಂದಿಗೆ ಮಾತ್ರ ಲಸಿಕೆ ನೀಡಲಾಗುತ್ತಿದೆ’

- Advertisement -
- Advertisement -

ಕೊರೊನಾ ಲಸಿಕೆ ಕೊರತೆ ಬಗ್ಗೆ ಒಕ್ಕೂಟ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿಯವರ ಲಸಿಕೋತ್ಸವ ಜಾಹೀರಾತಿಗಷ್ಟೇ ಸೀಮಿತವಾಯಿತೇ..? ಎಂದು ಕಟುವಾಗಿ ಪ್ರಶ್ನಿಸಿದ್ದಾರೆ.

’ಲಸಿಕೆ ಕೊರತೆಯಿಂದಾಗಿ ರಾಜ್ಯದ ಶೇಕಡಾ 50 ರಷ್ಟು ಲಸಿಕೆ ಕೇಂದ್ರಗಳು ಸ್ಥಗಿತಗೊಂಡಿವೆ. ಕಳೆದ 14 ದಿನಗಳಲ್ಲಿ ಸರಾಸರಿ 2.56 ಲಕ್ಷ ಲಸಿಕೆಗಳನ್ನು ಮಾತ್ರ ನೀಡಲಾಗುತ್ತಿದೆ ಎಂಬ ವರದಿ ಕಳವಳಕಾರಿಯಾದುದು. ಪ್ರಧಾನಿ ನರೇಂದ್ರ ಮೋದಿಯವರ ಲಸಿಕೋತ್ಸವ ಜಾಹೀರಾತಿಗಷ್ಟೇ ಸೀಮಿತವಾಯಿತೇ..? ಎಂದು ಕಿಡಿಕಾರಿದ್ದಾರೆ.

’ರಾಜ್ಯದ ಲಸಿಕಾ ಕೇಂದ್ರಕ್ಕೆ ಬರುತ್ತಿರುವ ನೂರು ಮಂದಿಯಲ್ಲಿ 20 ಮಂದಿಗೆ ಮಾತ್ರ ಲಸಿಕೆ ನೀಡಲಾಗುತ್ತಿದೆ. ಬೇಡಿಕೆಯ ಶೇಕಡಾ 20ರಷ್ಟು ಲಸಿಕೆಗಳೂ ಪೂರೈಕೆಯಾಗುತ್ತಿಲ್ಲ ಎಂದು ಆರೋಗ್ಯ ಇಲಾಖೆಯ ವೈದ್ಯರು ಹೇಳುತ್ತಿದ್ದಾರೆ. ಇದರ ವಿರುದ್ಧ ಸೊಲ್ಲೆತ್ತಲಾಗದ ಅಸಮರ್ಥ ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರು ಅಸಹಾಯಕರಂತೆ ದೆಹಲಿ ಕಡೆ ಕೈತೋರಿಸುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

‘ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ಪೂರೈಸುವಂತೆ ಹತ್ತಕ್ಕಿಂತ ಹೆಚ್ಚು ಪತ್ರಗಳನ್ನು ರಾಜ್ಯ ಸರ್ಕಾರ ಬರೆದಿದ್ದರೂ ಕೇಂದ್ರ ಸರ್ಕಾರದಿಂದ ಯಾವುದೇ ಸ್ಪಂದನೆ ಇಲ್ಲ. ಲಸಿಕೆ ನೀಡಿಕೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಹೇಳುತ್ತಾ ಬಂದಿರುವ ಕೇಂದ್ರ ಸರ್ಕಾರ ತನ್ನ ವೈಫಲ್ಯತೆಯನ್ನು ಒಪ್ಪಲಿದೆಯೇ..?’ ಎಂದು ಸರಣಿ ಟ್ವೀಟ್‌ಗಳಲ್ಲಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ‘ಬ್ಯಾಂಕಿಂಗ್‌ ಪರೀಕ್ಷೆ: ಕನ್ನಡಿಗರಿಗೆ ದ್ರೋಹ ಬಗೆದ ಮೋದಿ ಸರ್ಕಾರ’ – ಸಿದ್ದರಾಮಯ್ಯ

 

’ರಾಜ್ಯದಲ್ಲಿರುವ 8500 ಲಸಿಕಾ ಕೇಂದ್ರಗಳಲ್ಲಿ ಬಹುಪಾಲು ಕೇಂದ್ರಗಳು ಗ್ರಾಮೀಣ ಪ್ರದೇಶದಲ್ಲಿವೆ. ಅಲ್ಲಿ ಲಭ್ಯ ಇರುವ ಲಸಿಕೆಗಳನ್ನು ಕೂಡಾ ರಾಜಕಾರಣಿಗಳು ಮತ್ತು ಪ್ರಭಾವಿಗಳ ಶಿಫಾರಸಿನ ಮೇರೆಗೆ ನೀಡಲಾಗುತ್ತಿರುವ ದೂರುಗಳಿವೆ. ಗ್ರಾಮೀಣ ಪ್ರದೇಶಗಳ ಆಸ್ಪತ್ರೆಗಳ ಮುಂಭಾಗದಲ್ಲಿ ಲಸಿಕಾ ಆಕಾಂಕ್ಷಿಗಳು ಬೆಳಿಗ್ಗೆಯಿಂದ ಸಾಲಲ್ಲಿ ನಿಂತು ಬರಿಗೈಯಲ್ಲಿ ಹಿಂದಿರುಗುತ್ತಿದ್ದಾರೆ’ ಎಂದು ಆಕ್ರೋಶ ಹೊರಹಾಕಿದ್ದಾರೆ.

’ಈಗಿನ ಅಂದಾಜಿನಂತೆ ರಾಜ್ಯದಲ್ಲಿ 4.97 ಕೋಟಿ ಜನರಿಗೆ ಲಸಿಕೆ ನೀಡಬೇಕಿದ್ದು, ಎರಡು ಡೋಸ್‌ಗಳಂತೆ ಒಟ್ಟು 9.94 ಕೋಟಿ ಲಸಿಕೆಗಳು ಬೇಕಾಗಿದೆ. ಆದರೆ ಕೇಂದ್ರ ಸರ್ಕಾರ ಇಲ್ಲಿಯ ವರೆಗೆ ಪೂರೈಸಿರುವುದು 2.6 ಕೋಟಿ ಲಸಿಕೆ ಮಾತ್ರ ಎಂದು ಆರೋಗ್ಯ ಇಲಾಖೆ ಹೇಳುತ್ತಿರುವುದು ಪರಿಸ್ಥಿತಿಯ ಗಂಭೀರತೆಗೆ ಸಾಕ್ಷಿ’ ಎಂದಿದ್ದಾರೆ.

’ಒಂದೆಡೆ ಯುವಜನರನ್ನು ಗುರಿಯಾಗಿಟ್ಟುಕೊಂಡಿದೆಯೆನ್ನಲಾದ ಕೊರೊನಾ ಮೂರನೇ ಅಲೆಯ ಭೀತಿ, ಇನ್ನೊಂದೆಡೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮತ್ತು ಕಾಲೇಜುಗಳನ್ನು ತೆರೆಯಲು ಸರ್ಕಾರದ ಪ್ರಯತ್ನ. ಈ ಪರಿಸ್ಥಿತಿಯಲ್ಲಿ ಇನ್ನಷ್ಟು ಎಚ್ಚರಿಕೆಯಿಂದ ಪೂರ್ವ ಸಿದ್ಧತೆ ನಡೆಸಬೇಕಾಗಿದ್ದ ರಾಜ್ಯ ಸರ್ಕಾರ ಕೈಕಟ್ಟಿ ಕೂತಿದೆ’ ಎಂದು ಆರೋಪಿಸಿದ್ದಾರೆ.

’ಜುಲೈ ಅಂತ್ಯದೊಳಗೆ ದೇಶಾದ್ಯಂತ 51.6 ಕೋಟಿ ಕೊರೊನಾ ಲಸಿಕೆಗಳನ್ನು ನೀಡುವುದಾಗಿ ಕೇಂದ್ರ ಸರ್ಕಾರ ಆಶ್ವಾಸನೆ ನೀಡಿತ್ತು. ಈ ಗುರಿ ಸಾಧನೆಗಾಗಿ ಪ್ರತಿದಿನ 70 ಲಕ್ಷ ಲಸಿಕೆ ನೀಡಬೇಕಾಗಿದ್ದರೂ ಈಗ 40 ಲಕ್ಷ ಲಸಿಕೆ ಮಾತ್ರ ನೀಡಲಾಗುತ್ತಿದೆ. ಇಲ್ಲಿಯ ವರೆಗೆ 38.5 ಕೋಟಿ ಲಸಿಕೆಗಳನ್ನಷ್ಟೇ ನೀಡಲಾಗಿದೆ. ದಿನದಿಂದ ದಿನಕ್ಕೆ ಲಸಿಕೆ ನೀಡಿಕೆಯ ಸಂಖ್ಯೆ ಕಡಿಮೆಯಾಗುತ್ತಿದೆ. ಹೀಗಾದರೆ ಮುಂದೇನು..?’ ಎಂದಿದ್ದಾರೆ.

’ರಾಜ್ಯಗಳು ಲಸಿಕೆ ಹಾಕುವುದರಲ್ಲಿ ವಿಫಲವಾಗಿದೆ ಎಂದು ಆರೋಪಿಸಿ, ಈ ಹೊಣೆಯನ್ನು ತನ್ನ ತಲೆ ಮೇಲೆ ಹೊತ್ತುಕೊಂಡ ಪ್ರಧಾನಿಯವರ ಆಶ್ವಾಸನೆ, ಅವರ ಎಂದಿನ ಸುಳ್ಳಿನ ಸರಮಾಲೆಗೆ ಇನ್ನೊಂದು ಹೊಸ ಸುಳ್ಳಿನ ಸೇರ್ಪಡೆ ಅಷ್ಟೆ’ ಎಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಿದ್ದಾರೆ.


ಇದನ್ನೂ ಓದಿ: ಸಂಪುಟ ಪುನರ್‌‌ರಚನೆಗೆ ಕಾರ್ಯನಿರ್ವಹಣೆಯೆ ಮಾನದಂಡವಾದರೆ ಮೋದಿಯನ್ನೇ ಮೊದಲು ತೆಗೆಯಬೇಕು: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...