Homeಕರ್ನಾಟಕಯಡಿಯೂರಪ್ಪನವರ ರೆಕ್ಕೆ ಪುಕ್ಕವನ್ನು ಬಿಜೆಪಿ ಹೈಕಮಾಂಡ್ ಕತ್ತರಿಸಿ ಬಿಟ್ಟಿದೆ: ಸಿದ್ದರಾಮಯ್ಯ

ಯಡಿಯೂರಪ್ಪನವರ ರೆಕ್ಕೆ ಪುಕ್ಕವನ್ನು ಬಿಜೆಪಿ ಹೈಕಮಾಂಡ್ ಕತ್ತರಿಸಿ ಬಿಟ್ಟಿದೆ: ಸಿದ್ದರಾಮಯ್ಯ

- Advertisement -
- Advertisement -

ಚಂದ್ರಯಾನ-2 ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಇಳಿಯುವ ದಿನ ಬೆಂಗಳೂರಿಗೆ ಆಗಮಿಸಿದ್ದ ನರೇಂದ್ರ ಮೋದಿಯವರನ್ನು ಭೇಟಿಯಾಗಲು ಅವಕಾಶ ನೀಡುವಂತೆ ಕಾಂಗ್ರೆಸ್ ಪಕ್ಷದ ವತಿಯಿಂದ ಪತ್ರ ಬರೆದಿದ್ದೆವು, ಆದರೆ ಭೇಟಿಗೆ ಅವಕಾಶ ನೀಡಲಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪನವರಿಗೂ ಮೋದಿಯವರ ಬಳಿ ಮಾತನಾಡುವ ಧೈರ್ಯವಿಲ್ಲ. ಹೀಗಾದರೆ ರಾಜ್ಯದ ಸಮಸ್ಯೆ ಬಗೆಹರಿಯುವುದು ಹೇಗೆ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಯಡಿಯೂರಪ್ಪನವರ ರೆಕ್ಕೆ ಪುಕ್ಕವನ್ನು ಬಿಜೆಪಿ ಹೈಕಮಾಂಡ್ ಕತ್ತರಿಸಿ ಬಿಟ್ಟಿದೆ. ಪ್ರತಿ ದಿನವೂ ಅವರಿಗೆ ಸ್ವಪಕ್ಷದವರೇ ಕಿರುಕುಳ ನೀಡುತ್ತಿದ್ದಾರೆ. ರಾಜ್ಯದ ಸಮಸ್ಯೆ ಬಗ್ಗೆ ಮಾತನಾಡಲು ಅವರಿಗೆ ಅವಕಾಶವನ್ನು ಸಹ ನೀಡುತ್ತಿಲ್ಲ. ಪಾಪ, ಯಡಿಯೂರಪ್ಪನವರನ್ನು ನೋಡಿದರೆ ನನಗೆ ಅಯ್ಯೋ ಅನಿಸುತ್ತದೆ ಎಂದು ಕನಿಕರ ವ್ಯಕ್ತಪಡಿಸಿದ್ದಾರೆ.

ಪ್ರವಾಹದಿಂದ ಅತಿ ಹೆಚ್ಚು ಹಾನಿಗೀಡಾಗಿರುವುದು ಬೆಳಗಾವಿ ಜಿಲ್ಲೆ, ನಂತರ ಬಾಗಲಕೋಟೆ, ರಾಯಚೂರು, ಗದಗ ಹೀಗೆ ಸಾಕಷ್ಟು ನಷ್ಟಕ್ಕೆ ಈಡಾಗಿವೆ ಪ್ರತಿ ತಿಂಗಳು ಸಂತ್ರಸ್ತರಿಗೆ ಮನೆ ಬಾಡಿಗೆ ರೂಪದಲ್ಲಿ ರೂ.5000 ಕೊಡಲಾಗುತ್ತಿದೆ. ಹಳ್ಳಿಗಳಲ್ಲಿ ಮನೆ ಬಾಡಿಗೆಗೆ ಸಿಗುತ್ತದೆಯೇ? ಮನೆ ಕಳೆದುಕೊಂಡವರು ಮುಂದಿನ ಹತ್ತು ತಿಂಗಳು ಎಲ್ಲಿ ವಾಸಿಸಬೇಕು? ಕಾಂಗ್ರೆಸ್ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಿಗೆ ನೀಡಿದ್ದ ಅನುದಾನವನ್ನು ಯಡಿಯೂರಪ್ಪ ಅವರು ಕಡಿತ ಮಾಡಿದ್ದಾರೆ. ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿರುವ ಕಾಮಗಾರಿಗಳಿಗೆ ನಿಗದಿ ಮಾಡಿದ್ದ ಅನುದಾನವನ್ನೂ ವಾಪಸ್ ಪಡೆದಿದ್ದಾರೆ. ಅಭಿವೃದ್ಧಿ ಕಾಮಗಾರಿಗಳ ವಿಚಾರದಲ್ಲಿ ಇಂತಹ ದ್ವೇಷದ ರಾಜಕೀಯ ಸರಿಯಲ್ಲ ಎಂದಿದ್ದಾರೆ.

ಆನಂದ್ ಸಿಂಗ್ ಅವರಿಗೆ ಅನುಕೂಲವಾಗಲಿ ಎಂದು ಬಳ್ಳಾರಿ ಜಿಲ್ಲೆಯನ್ನು ವಿಭಜಿಸಲು ಹೊರಟಿದ್ದಾರೆ, ಇದು ಸರಿಯಲ್ಲ. ಬಳ್ಳಾರಿಗೆ ಹೋಲಿಸಿದರೆ ಬೆಳಗಾವಿ ತೀರಾ ದೊಡ್ಡದು. ಬೆಳಗಾವಿಯಲ್ಲಿ ಹದಿನೆಂಟು ವಿಧಾನಸಭಾ ಕ್ಷೇತ್ರಗಳಿವೆ. ಅಷ್ಟು ದೊಡ್ಡ ಜಿಲ್ಲೆಯನ್ನೇ ವಿಭಜಿಸದೆ ಇರುವಾಗ ಬರೀ ಹತ್ತು ವಿಧಾನಸಭಾ ಕ್ಷೇತ್ರವಿರುವ ಬಳ್ಳಾರಿಯ ವಿಭಜನೆಯ ಅಗತ್ಯವಿದೆಯೇ ಎಂದು ಸಿದ್ದು ಪ್ರಶ್ನಸಿದ್ದಾರೆ.

ಇಂದು ಪ್ರವಾಹದಿಂದ ಹಾನಿಗೊಳಗಾದ ರಾಯಚೂರು ಗ್ರಾಮೀಣ ವಿಧಾನಸಭೆ ಕ್ಷೇತ್ರದ ಗುರ್ಜಾಪುರ ಗ್ರಾಮಕ್ಕೆ ಭೇಟಿ ನೀಡಿ, ಸಂತ್ರಸ್ತರ ಅಹವಾಲು ಆಲಿಸಿದ ನಂತರ ಅವರು ಮಾತನಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...