Homeಮುಖಪುಟಸಿದ್ದರಾಮಯ್ಯ ಬಜೆಟ್: ವಿಪಕ್ಷಗಳ ಪ್ರತಿಕ್ರಿಯೆ ಹೀಗಿದೆ...

ಸಿದ್ದರಾಮಯ್ಯ ಬಜೆಟ್: ವಿಪಕ್ಷಗಳ ಪ್ರತಿಕ್ರಿಯೆ ಹೀಗಿದೆ…

- Advertisement -
- Advertisement -

ಇಂದು ಸಿದ್ದರಾಮಯ್ಯನವರು ಮಂಡಿಸಿದ ರಾಜ್ಯ ಬಜೆಟ್ ಕುರಿತು ಪ್ರತಿಪಕ್ಷಿಗಳು ಟೀಕಾಪ್ರಹಾರ ನಡೆಸಿವೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಹೆಚ್.ಡಿ ಕುಮಾರಸ್ವಾಮಿ ಮತ್ತು ಆಮ್ ಆದ್ಮಿ ಪಕ್ಷ ಇದೊಂದು ನಿರಾಶಾದಾಯಕ ಬಜೆಟ್ ಎಂದು ಕರೆದಿವೆ.

ಕೇಂದ್ರ ಸರ್ಕಾರವನ್ನು ದ್ವೇಷಿಸುವ ರಾಜಕೀಯ ಪ್ರೇರಿತ ಬಜೆಟ್: ಬಸವರಾಜ ಬೊಮ್ಮಾಯಿ

ಬಜೆಟ್ ನಲ್ಲಿ ಭವಿಷ್ಯದ ಯೋಜನೆಗಳ ಕುರಿತು ಹೇಳುವ ಬದಲು, ಹಿಂದಿನ ಸರ್ಕಾರ ಹಾಗೂ ಕೇಂದ್ರ ಸರ್ಕಾರವನ್ನು ದ್ವೇಷಿಸುವ ರಾಜಕೀಯ ಪ್ರೇರಿತ, ರಿವರ್ಸ್ ಗೇರ್ ಬಜೆಟ್‌ ಇದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.

ಗ್ಯಾರಂಟಿ ಯೋಜನೆಗಳ ಜಾರಿಯ ಹೆಸರಲ್ಲಿ ಈ‌ ಬಜೆಟ್ ಸಾಮಾನ್ಯರ ಮೇಲೆ ದೊಡ್ಡ ಹೊರೆ ಹೊರೆಸಿದೆ. ನಮ್ಮದು 77 ಸಾವಿರ ಕೋಟಿ ಸಾಲ ಇದ್ದದ್ದು, ಈಗ 88 ಸಾವಿರ ಕೋಟಿಗೆ ಹೆಚ್ಚಿಸಿದ್ದಾರೆ. ಬಜೆಟ್ ಗಾತ್ರ 3.27 ಲಕ್ಷ ಕೋಟಿ ಮಾಡಿದ್ದಾರೆ. ನಾವು ಸರಪ್ಲಸ್ ಬಜೆಟ್ ಮಾಡಿದ್ದೆವು, ಇವರು ಡೆಫಿಸಿಟ್ ಬಜೆಟ್ ಮಾಡಿದ್ದಾರೆ. ಯಾವುದೇ ಭರವಸೆ ನೀಡದೆ, ಜನರಿಗೆ ಸುಳ್ಳು ಭರವಸೆ ನೀಡಿದ್ದಾರೆ. ಶಿಕ್ಷಣ, ಆರೋಗ್ಯ, ಕೃಷಿ, ಪಿಡಬ್ಲುಡಿ, ನೀರಾವರಿ, ಯೋಜನೆಗಳಿಗೆ ಅನುದಾನ ಪ್ರಮಾಣ ಕಡಿಮೆ ಮಾಡಿದ್ದಾರೆ. ಹೆಚ್ಚಿನ ಅನುದಾನ ನೀಡದೆ ಅಭಿವೃದ್ಧಿ ಹೇಗೆ ಆಗುತ್ತದೆ ಎಂದು ಪ್ರಶ್ನಿಸಿದರು.

ರಾಜಕೀಯ ಹೇಳಿಕೆಗಳಿಗೆ ಸೀಮಿತವಾದ ಬಜೆಟ್..: ಹೆಚ್.ಡಿ ಕುಮಾರಸ್ವಾಮಿ

ಕೇಂದ್ರದ ನರೇಂದ್ರ ಮೋದಿ ಅವರ ಸರಕಾರ, ಹಿಂದಿನ ಬಿಜೆಪಿ ಸರಕಾರವನ್ನು ನಿಂದಿಸಲು ಮೀಸಲಾದ ಬಜೆಟ್ ಇದಾಗಿದೆ. ರಾಜಕೀಯ ಹೇಳಿಕೆಗಳಿಗೆ ಸೀಮಿತವಾದ ಹಾಗೂ ಅನೇಕ ಎಟಿಎಮ್ ಗಳನ್ನು ತುಂಬಿಸಿಕೊಳ್ಳಲು ಮಾಡಲಾದ ಬಜೆಟ್ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಬಜೆಟ್ಟಿನಲ್ಲಿ ದುಡಿಯುವ ಜನರ ಕೈಗೆ ಸ್ವಾವಲಂಭಿಯಾಗಲು, ಅವರು ಬದಕಲು ದೀರ್ಘಕಾಲೀನ ಯೋಜನೆ ಏನು? ಈ ಪ್ರಶ್ನೆ ಹಾಕಿಕೊಂಡರೆ ಉತ್ತರ ಶೂನ್ಯ ಎಂದ ಅವರು; ಇವರ ಯಾವ ಗ್ಯಾರಂಟಿಗೂ ನನ್ನ ತಕರಾರಿಲ್ಲ, ಇನ್ನೂ ಎರಡು ಜ್ಯೋತಿ ಕೊಡಿ. ನಮದ್ದೇನು ತಕರಾರಿಲ್ಲ. ವರ್ಷಕ್ಕೆ 50 ರಿಂದ 60 ಸಾವಿರ ವೆಚ್ಚಾಗಲಿದೆ. ಇದೊಂದೇ ಈ ಬಜೆಟ್ ನಲ್ಲಿ ಇರೊದು. ಆದರೆ ಯಾವುದಕ್ಕೂ ಈ ಬಜೆಟ್ ನಲ್ಲಿ ಹಣ ಇಟ್ಟಿಲ್ಲ. ಇದು ಕೇವಲ ಕೇಂದ್ರ ಸರ್ಕಾರ- ಹಿಂದಿನ ಸರ್ಕಾರವನ್ನ ದೂಷಣೆ ಮಾಡುವ ಬಜೆಟ್ ಅಷ್ಟೇ. ಇದರಲ್ಲಿ ಏನೂ ಇಲ್ಲ ಎಂದು ದೂರಿದರು.

ಬಸವರಾಜ ಬೊಮ್ಮಾಯಿ 77 ಸಾವಿರ ಕೋಟಿ ಸಾಲ ಮಾಡಿದ್ರು, ಇವರು 85 ಸಾವಿರ ಕೋಟಿಗೆ ತೆಗೆದುಕೊಂಡು ಹೋಗಿದ್ದಾರೆ. ಹಿಂದಿನ ಬಜೆಟ್ ನ ಯೋಜನೆ ಎಲ್ಲ ಲೆಕ್ಕಾಚಾರ ತೆಗೆದ್ರು 59 ಕೋಟಿ ವ್ಯತ್ಯಾಸ ಆಗಿರಬಹುದು ಅಷ್ಟೇ. ಆರೋಗ್ಯ, ಶಿಕ್ಷಣ ಕ್ಷೇತ್ರ ಪ್ರಮುಖವಾದುವು, ಅದಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕಿದೆ. ಅದನ್ನು ಜನರಿಗೆ ತಲುಪಲು ನಾವು ಎಡವುತ್ತಿದ್ದೇವೆ. ಮೂಲಭೂತವಾಗಿ ಜನರಿಗೆ ಏನು ಬೇಕು ಎನ್ನುವ ಬಗ್ಗೆ ಬಜೆಟ್ ಪೂರ್ಣವಾಗಿ ಎಡವಿದೆ ಎಂದು ಅವರು ತರಾಟೆಗೆ ತೆಗೆದುಕೊಂಡರು.

ಶೇ.109ರಷ್ಟು ಆದಾಯ ಕೊರತೆ ಹೆಚ್ಚಳವಾಗಿದೆ: ಪೃಥ್ವಿ ರೆಡ್ಡಿ

ಹಣಕಾಸು ಸಚಿವರೂ ಆಗಿರುವ ಸಿಎಂ ಸಿದ್ದರಾಮಯ್ಯ ಅವರು ಹೆಚ್ಚುವರಿ ಬಜೆಟ್‌ ಭರವಸೆ ನೀಡಿದ್ದಾರೆ. ವಾಸ್ತವದಲ್ಲಿ ಇಂದು ಮಂಡಿಸಿರುವ ಬಜೆಟ್‌ನಲ್ಲಿ ಶೇ.109ರಷ್ಟು ಆದಾಯ ಕೊರತೆ ಹೆಚ್ಚಳವಾಗಿದ್ದು, ಅದು ದುಪ್ಪಟ್ಟಾಗಿದೆ. ಕಾಂಗ್ರೆಸ್ ಪಕ್ಷ ಕರ್ನಾಟಕದ ಜನತೆಗೆ ನೀಡಿದ ಭರವಸೆಗಳು ಕೇವಲ ಮತಕ್ಕಾಗಿಯೇ ಹೊರತು ಮತದಾರರಿಗಾಗಿ ಅಲ್ಲ.

ಕರ್ನಾಟಕದ ಜನರು “ಖಾತರಿ”ಗಳಿಂದ ವಂಚಿಸಿದ್ದಾರೆ, ವಾಸ್ತವದಲ್ಲಿ ಕಾಂಗ್ರೆಸ್ ಸರ್ಕಾರವು ಒಂದು ಕೈಯಲ್ಲಿ ಕೊಟ್ಟು ಎರಡು ಕೈಯಿಂದ ತೆಗೆದುಕೊಳ್ಳುತ್ತಿದೆ ಎಂಬುದನ್ನು ಬಜೆಟ್ ಬಹಿರಂಗಪಡಿಸುತ್ತದೆ. ಕೃಷಿ ಮತ್ತು ತೋಟಗಾರಿಕೆ ಶೇ.25ರಷ್ಟು ಕಡಿಮೆಯಾಗಿದೆ. ಸಮಾಜ ಕಲ್ಯಾಣ 42% ರಷ್ಟು ಕಡಿಮೆಯಾಗಿದೆ. ಸಹಕಾರ 16% ಕಡಿಮೆಯಾಗಿದೆ. ಅರಣ್ಯ, ಪರಿಸರ ಮತ್ತು ಪರಿಸರವನ್ನು 67% ರಷ್ಟು ಕಡಿತಗೊಳಿಸಲಾಗಿದೆ. ಹಾಲು ಶೇ.2ರಷ್ಟು ಕಡಿತವಾಗಿದೆ. ಸಾರ್ವಜನಿಕ ಸಾಲವನ್ನು ಸುಮಾರು 19000 ಕೋಟಿ ಅಥವಾ 28% ರಷ್ಟು ಹೆಚ್ಚಿಸುವ ಮೂಲಕ, ಅದೂ ಮುಖ್ಯವಾಗಿ ಮುಕ್ತ ಮಾರುಕಟ್ಟೆಯಿಂದ .ಸಾಲ ಮತ್ತು ಬಡ್ಡಿಯ ಮರುಪಾವತಿಯು ಪ್ರಾಮಾಣಿಕ ತೆರಿಗೆದಾರರ ಮೇಲೆ ಮತ್ತಷ್ಟು ಹೊರೆಯನ್ನು ಉಂಟುಮಾಡುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ; 2023-24ರ ಆಯವ್ಯಯ ಸರ್ಕಾರಿ ಶಾಲೆಗಳನ್ನು ಬಲಪಡಿಸಲು ಪೂರಕವಾಗಿದೆ: ನಿರಂಜನಾರಾಧ್ಯ.ವಿ.ಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....