Homeಮುಖಪುಟಸಿದ್ದರಾಮಯ್ಯ ಬಜೆಟ್: ವಿಪಕ್ಷಗಳ ಪ್ರತಿಕ್ರಿಯೆ ಹೀಗಿದೆ...

ಸಿದ್ದರಾಮಯ್ಯ ಬಜೆಟ್: ವಿಪಕ್ಷಗಳ ಪ್ರತಿಕ್ರಿಯೆ ಹೀಗಿದೆ…

- Advertisement -
- Advertisement -

ಇಂದು ಸಿದ್ದರಾಮಯ್ಯನವರು ಮಂಡಿಸಿದ ರಾಜ್ಯ ಬಜೆಟ್ ಕುರಿತು ಪ್ರತಿಪಕ್ಷಿಗಳು ಟೀಕಾಪ್ರಹಾರ ನಡೆಸಿವೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಹೆಚ್.ಡಿ ಕುಮಾರಸ್ವಾಮಿ ಮತ್ತು ಆಮ್ ಆದ್ಮಿ ಪಕ್ಷ ಇದೊಂದು ನಿರಾಶಾದಾಯಕ ಬಜೆಟ್ ಎಂದು ಕರೆದಿವೆ.

ಕೇಂದ್ರ ಸರ್ಕಾರವನ್ನು ದ್ವೇಷಿಸುವ ರಾಜಕೀಯ ಪ್ರೇರಿತ ಬಜೆಟ್: ಬಸವರಾಜ ಬೊಮ್ಮಾಯಿ

ಬಜೆಟ್ ನಲ್ಲಿ ಭವಿಷ್ಯದ ಯೋಜನೆಗಳ ಕುರಿತು ಹೇಳುವ ಬದಲು, ಹಿಂದಿನ ಸರ್ಕಾರ ಹಾಗೂ ಕೇಂದ್ರ ಸರ್ಕಾರವನ್ನು ದ್ವೇಷಿಸುವ ರಾಜಕೀಯ ಪ್ರೇರಿತ, ರಿವರ್ಸ್ ಗೇರ್ ಬಜೆಟ್‌ ಇದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.

ಗ್ಯಾರಂಟಿ ಯೋಜನೆಗಳ ಜಾರಿಯ ಹೆಸರಲ್ಲಿ ಈ‌ ಬಜೆಟ್ ಸಾಮಾನ್ಯರ ಮೇಲೆ ದೊಡ್ಡ ಹೊರೆ ಹೊರೆಸಿದೆ. ನಮ್ಮದು 77 ಸಾವಿರ ಕೋಟಿ ಸಾಲ ಇದ್ದದ್ದು, ಈಗ 88 ಸಾವಿರ ಕೋಟಿಗೆ ಹೆಚ್ಚಿಸಿದ್ದಾರೆ. ಬಜೆಟ್ ಗಾತ್ರ 3.27 ಲಕ್ಷ ಕೋಟಿ ಮಾಡಿದ್ದಾರೆ. ನಾವು ಸರಪ್ಲಸ್ ಬಜೆಟ್ ಮಾಡಿದ್ದೆವು, ಇವರು ಡೆಫಿಸಿಟ್ ಬಜೆಟ್ ಮಾಡಿದ್ದಾರೆ. ಯಾವುದೇ ಭರವಸೆ ನೀಡದೆ, ಜನರಿಗೆ ಸುಳ್ಳು ಭರವಸೆ ನೀಡಿದ್ದಾರೆ. ಶಿಕ್ಷಣ, ಆರೋಗ್ಯ, ಕೃಷಿ, ಪಿಡಬ್ಲುಡಿ, ನೀರಾವರಿ, ಯೋಜನೆಗಳಿಗೆ ಅನುದಾನ ಪ್ರಮಾಣ ಕಡಿಮೆ ಮಾಡಿದ್ದಾರೆ. ಹೆಚ್ಚಿನ ಅನುದಾನ ನೀಡದೆ ಅಭಿವೃದ್ಧಿ ಹೇಗೆ ಆಗುತ್ತದೆ ಎಂದು ಪ್ರಶ್ನಿಸಿದರು.

ರಾಜಕೀಯ ಹೇಳಿಕೆಗಳಿಗೆ ಸೀಮಿತವಾದ ಬಜೆಟ್..: ಹೆಚ್.ಡಿ ಕುಮಾರಸ್ವಾಮಿ

ಕೇಂದ್ರದ ನರೇಂದ್ರ ಮೋದಿ ಅವರ ಸರಕಾರ, ಹಿಂದಿನ ಬಿಜೆಪಿ ಸರಕಾರವನ್ನು ನಿಂದಿಸಲು ಮೀಸಲಾದ ಬಜೆಟ್ ಇದಾಗಿದೆ. ರಾಜಕೀಯ ಹೇಳಿಕೆಗಳಿಗೆ ಸೀಮಿತವಾದ ಹಾಗೂ ಅನೇಕ ಎಟಿಎಮ್ ಗಳನ್ನು ತುಂಬಿಸಿಕೊಳ್ಳಲು ಮಾಡಲಾದ ಬಜೆಟ್ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಬಜೆಟ್ಟಿನಲ್ಲಿ ದುಡಿಯುವ ಜನರ ಕೈಗೆ ಸ್ವಾವಲಂಭಿಯಾಗಲು, ಅವರು ಬದಕಲು ದೀರ್ಘಕಾಲೀನ ಯೋಜನೆ ಏನು? ಈ ಪ್ರಶ್ನೆ ಹಾಕಿಕೊಂಡರೆ ಉತ್ತರ ಶೂನ್ಯ ಎಂದ ಅವರು; ಇವರ ಯಾವ ಗ್ಯಾರಂಟಿಗೂ ನನ್ನ ತಕರಾರಿಲ್ಲ, ಇನ್ನೂ ಎರಡು ಜ್ಯೋತಿ ಕೊಡಿ. ನಮದ್ದೇನು ತಕರಾರಿಲ್ಲ. ವರ್ಷಕ್ಕೆ 50 ರಿಂದ 60 ಸಾವಿರ ವೆಚ್ಚಾಗಲಿದೆ. ಇದೊಂದೇ ಈ ಬಜೆಟ್ ನಲ್ಲಿ ಇರೊದು. ಆದರೆ ಯಾವುದಕ್ಕೂ ಈ ಬಜೆಟ್ ನಲ್ಲಿ ಹಣ ಇಟ್ಟಿಲ್ಲ. ಇದು ಕೇವಲ ಕೇಂದ್ರ ಸರ್ಕಾರ- ಹಿಂದಿನ ಸರ್ಕಾರವನ್ನ ದೂಷಣೆ ಮಾಡುವ ಬಜೆಟ್ ಅಷ್ಟೇ. ಇದರಲ್ಲಿ ಏನೂ ಇಲ್ಲ ಎಂದು ದೂರಿದರು.

ಬಸವರಾಜ ಬೊಮ್ಮಾಯಿ 77 ಸಾವಿರ ಕೋಟಿ ಸಾಲ ಮಾಡಿದ್ರು, ಇವರು 85 ಸಾವಿರ ಕೋಟಿಗೆ ತೆಗೆದುಕೊಂಡು ಹೋಗಿದ್ದಾರೆ. ಹಿಂದಿನ ಬಜೆಟ್ ನ ಯೋಜನೆ ಎಲ್ಲ ಲೆಕ್ಕಾಚಾರ ತೆಗೆದ್ರು 59 ಕೋಟಿ ವ್ಯತ್ಯಾಸ ಆಗಿರಬಹುದು ಅಷ್ಟೇ. ಆರೋಗ್ಯ, ಶಿಕ್ಷಣ ಕ್ಷೇತ್ರ ಪ್ರಮುಖವಾದುವು, ಅದಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕಿದೆ. ಅದನ್ನು ಜನರಿಗೆ ತಲುಪಲು ನಾವು ಎಡವುತ್ತಿದ್ದೇವೆ. ಮೂಲಭೂತವಾಗಿ ಜನರಿಗೆ ಏನು ಬೇಕು ಎನ್ನುವ ಬಗ್ಗೆ ಬಜೆಟ್ ಪೂರ್ಣವಾಗಿ ಎಡವಿದೆ ಎಂದು ಅವರು ತರಾಟೆಗೆ ತೆಗೆದುಕೊಂಡರು.

ಶೇ.109ರಷ್ಟು ಆದಾಯ ಕೊರತೆ ಹೆಚ್ಚಳವಾಗಿದೆ: ಪೃಥ್ವಿ ರೆಡ್ಡಿ

ಹಣಕಾಸು ಸಚಿವರೂ ಆಗಿರುವ ಸಿಎಂ ಸಿದ್ದರಾಮಯ್ಯ ಅವರು ಹೆಚ್ಚುವರಿ ಬಜೆಟ್‌ ಭರವಸೆ ನೀಡಿದ್ದಾರೆ. ವಾಸ್ತವದಲ್ಲಿ ಇಂದು ಮಂಡಿಸಿರುವ ಬಜೆಟ್‌ನಲ್ಲಿ ಶೇ.109ರಷ್ಟು ಆದಾಯ ಕೊರತೆ ಹೆಚ್ಚಳವಾಗಿದ್ದು, ಅದು ದುಪ್ಪಟ್ಟಾಗಿದೆ. ಕಾಂಗ್ರೆಸ್ ಪಕ್ಷ ಕರ್ನಾಟಕದ ಜನತೆಗೆ ನೀಡಿದ ಭರವಸೆಗಳು ಕೇವಲ ಮತಕ್ಕಾಗಿಯೇ ಹೊರತು ಮತದಾರರಿಗಾಗಿ ಅಲ್ಲ.

ಕರ್ನಾಟಕದ ಜನರು “ಖಾತರಿ”ಗಳಿಂದ ವಂಚಿಸಿದ್ದಾರೆ, ವಾಸ್ತವದಲ್ಲಿ ಕಾಂಗ್ರೆಸ್ ಸರ್ಕಾರವು ಒಂದು ಕೈಯಲ್ಲಿ ಕೊಟ್ಟು ಎರಡು ಕೈಯಿಂದ ತೆಗೆದುಕೊಳ್ಳುತ್ತಿದೆ ಎಂಬುದನ್ನು ಬಜೆಟ್ ಬಹಿರಂಗಪಡಿಸುತ್ತದೆ. ಕೃಷಿ ಮತ್ತು ತೋಟಗಾರಿಕೆ ಶೇ.25ರಷ್ಟು ಕಡಿಮೆಯಾಗಿದೆ. ಸಮಾಜ ಕಲ್ಯಾಣ 42% ರಷ್ಟು ಕಡಿಮೆಯಾಗಿದೆ. ಸಹಕಾರ 16% ಕಡಿಮೆಯಾಗಿದೆ. ಅರಣ್ಯ, ಪರಿಸರ ಮತ್ತು ಪರಿಸರವನ್ನು 67% ರಷ್ಟು ಕಡಿತಗೊಳಿಸಲಾಗಿದೆ. ಹಾಲು ಶೇ.2ರಷ್ಟು ಕಡಿತವಾಗಿದೆ. ಸಾರ್ವಜನಿಕ ಸಾಲವನ್ನು ಸುಮಾರು 19000 ಕೋಟಿ ಅಥವಾ 28% ರಷ್ಟು ಹೆಚ್ಚಿಸುವ ಮೂಲಕ, ಅದೂ ಮುಖ್ಯವಾಗಿ ಮುಕ್ತ ಮಾರುಕಟ್ಟೆಯಿಂದ .ಸಾಲ ಮತ್ತು ಬಡ್ಡಿಯ ಮರುಪಾವತಿಯು ಪ್ರಾಮಾಣಿಕ ತೆರಿಗೆದಾರರ ಮೇಲೆ ಮತ್ತಷ್ಟು ಹೊರೆಯನ್ನು ಉಂಟುಮಾಡುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ; 2023-24ರ ಆಯವ್ಯಯ ಸರ್ಕಾರಿ ಶಾಲೆಗಳನ್ನು ಬಲಪಡಿಸಲು ಪೂರಕವಾಗಿದೆ: ನಿರಂಜನಾರಾಧ್ಯ.ವಿ.ಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...