Homeಮುಖಪುಟಸಿದ್ದರಾಮಯ್ಯ ಬಜೆಟ್: ವಿಪಕ್ಷಗಳ ಪ್ರತಿಕ್ರಿಯೆ ಹೀಗಿದೆ...

ಸಿದ್ದರಾಮಯ್ಯ ಬಜೆಟ್: ವಿಪಕ್ಷಗಳ ಪ್ರತಿಕ್ರಿಯೆ ಹೀಗಿದೆ…

- Advertisement -
- Advertisement -

ಇಂದು ಸಿದ್ದರಾಮಯ್ಯನವರು ಮಂಡಿಸಿದ ರಾಜ್ಯ ಬಜೆಟ್ ಕುರಿತು ಪ್ರತಿಪಕ್ಷಿಗಳು ಟೀಕಾಪ್ರಹಾರ ನಡೆಸಿವೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಹೆಚ್.ಡಿ ಕುಮಾರಸ್ವಾಮಿ ಮತ್ತು ಆಮ್ ಆದ್ಮಿ ಪಕ್ಷ ಇದೊಂದು ನಿರಾಶಾದಾಯಕ ಬಜೆಟ್ ಎಂದು ಕರೆದಿವೆ.

ಕೇಂದ್ರ ಸರ್ಕಾರವನ್ನು ದ್ವೇಷಿಸುವ ರಾಜಕೀಯ ಪ್ರೇರಿತ ಬಜೆಟ್: ಬಸವರಾಜ ಬೊಮ್ಮಾಯಿ

ಬಜೆಟ್ ನಲ್ಲಿ ಭವಿಷ್ಯದ ಯೋಜನೆಗಳ ಕುರಿತು ಹೇಳುವ ಬದಲು, ಹಿಂದಿನ ಸರ್ಕಾರ ಹಾಗೂ ಕೇಂದ್ರ ಸರ್ಕಾರವನ್ನು ದ್ವೇಷಿಸುವ ರಾಜಕೀಯ ಪ್ರೇರಿತ, ರಿವರ್ಸ್ ಗೇರ್ ಬಜೆಟ್‌ ಇದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.

ಗ್ಯಾರಂಟಿ ಯೋಜನೆಗಳ ಜಾರಿಯ ಹೆಸರಲ್ಲಿ ಈ‌ ಬಜೆಟ್ ಸಾಮಾನ್ಯರ ಮೇಲೆ ದೊಡ್ಡ ಹೊರೆ ಹೊರೆಸಿದೆ. ನಮ್ಮದು 77 ಸಾವಿರ ಕೋಟಿ ಸಾಲ ಇದ್ದದ್ದು, ಈಗ 88 ಸಾವಿರ ಕೋಟಿಗೆ ಹೆಚ್ಚಿಸಿದ್ದಾರೆ. ಬಜೆಟ್ ಗಾತ್ರ 3.27 ಲಕ್ಷ ಕೋಟಿ ಮಾಡಿದ್ದಾರೆ. ನಾವು ಸರಪ್ಲಸ್ ಬಜೆಟ್ ಮಾಡಿದ್ದೆವು, ಇವರು ಡೆಫಿಸಿಟ್ ಬಜೆಟ್ ಮಾಡಿದ್ದಾರೆ. ಯಾವುದೇ ಭರವಸೆ ನೀಡದೆ, ಜನರಿಗೆ ಸುಳ್ಳು ಭರವಸೆ ನೀಡಿದ್ದಾರೆ. ಶಿಕ್ಷಣ, ಆರೋಗ್ಯ, ಕೃಷಿ, ಪಿಡಬ್ಲುಡಿ, ನೀರಾವರಿ, ಯೋಜನೆಗಳಿಗೆ ಅನುದಾನ ಪ್ರಮಾಣ ಕಡಿಮೆ ಮಾಡಿದ್ದಾರೆ. ಹೆಚ್ಚಿನ ಅನುದಾನ ನೀಡದೆ ಅಭಿವೃದ್ಧಿ ಹೇಗೆ ಆಗುತ್ತದೆ ಎಂದು ಪ್ರಶ್ನಿಸಿದರು.

ರಾಜಕೀಯ ಹೇಳಿಕೆಗಳಿಗೆ ಸೀಮಿತವಾದ ಬಜೆಟ್..: ಹೆಚ್.ಡಿ ಕುಮಾರಸ್ವಾಮಿ

ಕೇಂದ್ರದ ನರೇಂದ್ರ ಮೋದಿ ಅವರ ಸರಕಾರ, ಹಿಂದಿನ ಬಿಜೆಪಿ ಸರಕಾರವನ್ನು ನಿಂದಿಸಲು ಮೀಸಲಾದ ಬಜೆಟ್ ಇದಾಗಿದೆ. ರಾಜಕೀಯ ಹೇಳಿಕೆಗಳಿಗೆ ಸೀಮಿತವಾದ ಹಾಗೂ ಅನೇಕ ಎಟಿಎಮ್ ಗಳನ್ನು ತುಂಬಿಸಿಕೊಳ್ಳಲು ಮಾಡಲಾದ ಬಜೆಟ್ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಬಜೆಟ್ಟಿನಲ್ಲಿ ದುಡಿಯುವ ಜನರ ಕೈಗೆ ಸ್ವಾವಲಂಭಿಯಾಗಲು, ಅವರು ಬದಕಲು ದೀರ್ಘಕಾಲೀನ ಯೋಜನೆ ಏನು? ಈ ಪ್ರಶ್ನೆ ಹಾಕಿಕೊಂಡರೆ ಉತ್ತರ ಶೂನ್ಯ ಎಂದ ಅವರು; ಇವರ ಯಾವ ಗ್ಯಾರಂಟಿಗೂ ನನ್ನ ತಕರಾರಿಲ್ಲ, ಇನ್ನೂ ಎರಡು ಜ್ಯೋತಿ ಕೊಡಿ. ನಮದ್ದೇನು ತಕರಾರಿಲ್ಲ. ವರ್ಷಕ್ಕೆ 50 ರಿಂದ 60 ಸಾವಿರ ವೆಚ್ಚಾಗಲಿದೆ. ಇದೊಂದೇ ಈ ಬಜೆಟ್ ನಲ್ಲಿ ಇರೊದು. ಆದರೆ ಯಾವುದಕ್ಕೂ ಈ ಬಜೆಟ್ ನಲ್ಲಿ ಹಣ ಇಟ್ಟಿಲ್ಲ. ಇದು ಕೇವಲ ಕೇಂದ್ರ ಸರ್ಕಾರ- ಹಿಂದಿನ ಸರ್ಕಾರವನ್ನ ದೂಷಣೆ ಮಾಡುವ ಬಜೆಟ್ ಅಷ್ಟೇ. ಇದರಲ್ಲಿ ಏನೂ ಇಲ್ಲ ಎಂದು ದೂರಿದರು.

ಬಸವರಾಜ ಬೊಮ್ಮಾಯಿ 77 ಸಾವಿರ ಕೋಟಿ ಸಾಲ ಮಾಡಿದ್ರು, ಇವರು 85 ಸಾವಿರ ಕೋಟಿಗೆ ತೆಗೆದುಕೊಂಡು ಹೋಗಿದ್ದಾರೆ. ಹಿಂದಿನ ಬಜೆಟ್ ನ ಯೋಜನೆ ಎಲ್ಲ ಲೆಕ್ಕಾಚಾರ ತೆಗೆದ್ರು 59 ಕೋಟಿ ವ್ಯತ್ಯಾಸ ಆಗಿರಬಹುದು ಅಷ್ಟೇ. ಆರೋಗ್ಯ, ಶಿಕ್ಷಣ ಕ್ಷೇತ್ರ ಪ್ರಮುಖವಾದುವು, ಅದಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕಿದೆ. ಅದನ್ನು ಜನರಿಗೆ ತಲುಪಲು ನಾವು ಎಡವುತ್ತಿದ್ದೇವೆ. ಮೂಲಭೂತವಾಗಿ ಜನರಿಗೆ ಏನು ಬೇಕು ಎನ್ನುವ ಬಗ್ಗೆ ಬಜೆಟ್ ಪೂರ್ಣವಾಗಿ ಎಡವಿದೆ ಎಂದು ಅವರು ತರಾಟೆಗೆ ತೆಗೆದುಕೊಂಡರು.

ಶೇ.109ರಷ್ಟು ಆದಾಯ ಕೊರತೆ ಹೆಚ್ಚಳವಾಗಿದೆ: ಪೃಥ್ವಿ ರೆಡ್ಡಿ

ಹಣಕಾಸು ಸಚಿವರೂ ಆಗಿರುವ ಸಿಎಂ ಸಿದ್ದರಾಮಯ್ಯ ಅವರು ಹೆಚ್ಚುವರಿ ಬಜೆಟ್‌ ಭರವಸೆ ನೀಡಿದ್ದಾರೆ. ವಾಸ್ತವದಲ್ಲಿ ಇಂದು ಮಂಡಿಸಿರುವ ಬಜೆಟ್‌ನಲ್ಲಿ ಶೇ.109ರಷ್ಟು ಆದಾಯ ಕೊರತೆ ಹೆಚ್ಚಳವಾಗಿದ್ದು, ಅದು ದುಪ್ಪಟ್ಟಾಗಿದೆ. ಕಾಂಗ್ರೆಸ್ ಪಕ್ಷ ಕರ್ನಾಟಕದ ಜನತೆಗೆ ನೀಡಿದ ಭರವಸೆಗಳು ಕೇವಲ ಮತಕ್ಕಾಗಿಯೇ ಹೊರತು ಮತದಾರರಿಗಾಗಿ ಅಲ್ಲ.

ಕರ್ನಾಟಕದ ಜನರು “ಖಾತರಿ”ಗಳಿಂದ ವಂಚಿಸಿದ್ದಾರೆ, ವಾಸ್ತವದಲ್ಲಿ ಕಾಂಗ್ರೆಸ್ ಸರ್ಕಾರವು ಒಂದು ಕೈಯಲ್ಲಿ ಕೊಟ್ಟು ಎರಡು ಕೈಯಿಂದ ತೆಗೆದುಕೊಳ್ಳುತ್ತಿದೆ ಎಂಬುದನ್ನು ಬಜೆಟ್ ಬಹಿರಂಗಪಡಿಸುತ್ತದೆ. ಕೃಷಿ ಮತ್ತು ತೋಟಗಾರಿಕೆ ಶೇ.25ರಷ್ಟು ಕಡಿಮೆಯಾಗಿದೆ. ಸಮಾಜ ಕಲ್ಯಾಣ 42% ರಷ್ಟು ಕಡಿಮೆಯಾಗಿದೆ. ಸಹಕಾರ 16% ಕಡಿಮೆಯಾಗಿದೆ. ಅರಣ್ಯ, ಪರಿಸರ ಮತ್ತು ಪರಿಸರವನ್ನು 67% ರಷ್ಟು ಕಡಿತಗೊಳಿಸಲಾಗಿದೆ. ಹಾಲು ಶೇ.2ರಷ್ಟು ಕಡಿತವಾಗಿದೆ. ಸಾರ್ವಜನಿಕ ಸಾಲವನ್ನು ಸುಮಾರು 19000 ಕೋಟಿ ಅಥವಾ 28% ರಷ್ಟು ಹೆಚ್ಚಿಸುವ ಮೂಲಕ, ಅದೂ ಮುಖ್ಯವಾಗಿ ಮುಕ್ತ ಮಾರುಕಟ್ಟೆಯಿಂದ .ಸಾಲ ಮತ್ತು ಬಡ್ಡಿಯ ಮರುಪಾವತಿಯು ಪ್ರಾಮಾಣಿಕ ತೆರಿಗೆದಾರರ ಮೇಲೆ ಮತ್ತಷ್ಟು ಹೊರೆಯನ್ನು ಉಂಟುಮಾಡುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ; 2023-24ರ ಆಯವ್ಯಯ ಸರ್ಕಾರಿ ಶಾಲೆಗಳನ್ನು ಬಲಪಡಿಸಲು ಪೂರಕವಾಗಿದೆ: ನಿರಂಜನಾರಾಧ್ಯ.ವಿ.ಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...