Homeಮುಖಪುಟಸಿದ್ದರಾಮಯ್ಯ ಬಜೆಟ್: ವಿಪಕ್ಷಗಳ ಪ್ರತಿಕ್ರಿಯೆ ಹೀಗಿದೆ...

ಸಿದ್ದರಾಮಯ್ಯ ಬಜೆಟ್: ವಿಪಕ್ಷಗಳ ಪ್ರತಿಕ್ರಿಯೆ ಹೀಗಿದೆ…

- Advertisement -
- Advertisement -

ಇಂದು ಸಿದ್ದರಾಮಯ್ಯನವರು ಮಂಡಿಸಿದ ರಾಜ್ಯ ಬಜೆಟ್ ಕುರಿತು ಪ್ರತಿಪಕ್ಷಿಗಳು ಟೀಕಾಪ್ರಹಾರ ನಡೆಸಿವೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಹೆಚ್.ಡಿ ಕುಮಾರಸ್ವಾಮಿ ಮತ್ತು ಆಮ್ ಆದ್ಮಿ ಪಕ್ಷ ಇದೊಂದು ನಿರಾಶಾದಾಯಕ ಬಜೆಟ್ ಎಂದು ಕರೆದಿವೆ.

ಕೇಂದ್ರ ಸರ್ಕಾರವನ್ನು ದ್ವೇಷಿಸುವ ರಾಜಕೀಯ ಪ್ರೇರಿತ ಬಜೆಟ್: ಬಸವರಾಜ ಬೊಮ್ಮಾಯಿ

ಬಜೆಟ್ ನಲ್ಲಿ ಭವಿಷ್ಯದ ಯೋಜನೆಗಳ ಕುರಿತು ಹೇಳುವ ಬದಲು, ಹಿಂದಿನ ಸರ್ಕಾರ ಹಾಗೂ ಕೇಂದ್ರ ಸರ್ಕಾರವನ್ನು ದ್ವೇಷಿಸುವ ರಾಜಕೀಯ ಪ್ರೇರಿತ, ರಿವರ್ಸ್ ಗೇರ್ ಬಜೆಟ್‌ ಇದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.

ಗ್ಯಾರಂಟಿ ಯೋಜನೆಗಳ ಜಾರಿಯ ಹೆಸರಲ್ಲಿ ಈ‌ ಬಜೆಟ್ ಸಾಮಾನ್ಯರ ಮೇಲೆ ದೊಡ್ಡ ಹೊರೆ ಹೊರೆಸಿದೆ. ನಮ್ಮದು 77 ಸಾವಿರ ಕೋಟಿ ಸಾಲ ಇದ್ದದ್ದು, ಈಗ 88 ಸಾವಿರ ಕೋಟಿಗೆ ಹೆಚ್ಚಿಸಿದ್ದಾರೆ. ಬಜೆಟ್ ಗಾತ್ರ 3.27 ಲಕ್ಷ ಕೋಟಿ ಮಾಡಿದ್ದಾರೆ. ನಾವು ಸರಪ್ಲಸ್ ಬಜೆಟ್ ಮಾಡಿದ್ದೆವು, ಇವರು ಡೆಫಿಸಿಟ್ ಬಜೆಟ್ ಮಾಡಿದ್ದಾರೆ. ಯಾವುದೇ ಭರವಸೆ ನೀಡದೆ, ಜನರಿಗೆ ಸುಳ್ಳು ಭರವಸೆ ನೀಡಿದ್ದಾರೆ. ಶಿಕ್ಷಣ, ಆರೋಗ್ಯ, ಕೃಷಿ, ಪಿಡಬ್ಲುಡಿ, ನೀರಾವರಿ, ಯೋಜನೆಗಳಿಗೆ ಅನುದಾನ ಪ್ರಮಾಣ ಕಡಿಮೆ ಮಾಡಿದ್ದಾರೆ. ಹೆಚ್ಚಿನ ಅನುದಾನ ನೀಡದೆ ಅಭಿವೃದ್ಧಿ ಹೇಗೆ ಆಗುತ್ತದೆ ಎಂದು ಪ್ರಶ್ನಿಸಿದರು.

ರಾಜಕೀಯ ಹೇಳಿಕೆಗಳಿಗೆ ಸೀಮಿತವಾದ ಬಜೆಟ್..: ಹೆಚ್.ಡಿ ಕುಮಾರಸ್ವಾಮಿ

ಕೇಂದ್ರದ ನರೇಂದ್ರ ಮೋದಿ ಅವರ ಸರಕಾರ, ಹಿಂದಿನ ಬಿಜೆಪಿ ಸರಕಾರವನ್ನು ನಿಂದಿಸಲು ಮೀಸಲಾದ ಬಜೆಟ್ ಇದಾಗಿದೆ. ರಾಜಕೀಯ ಹೇಳಿಕೆಗಳಿಗೆ ಸೀಮಿತವಾದ ಹಾಗೂ ಅನೇಕ ಎಟಿಎಮ್ ಗಳನ್ನು ತುಂಬಿಸಿಕೊಳ್ಳಲು ಮಾಡಲಾದ ಬಜೆಟ್ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಬಜೆಟ್ಟಿನಲ್ಲಿ ದುಡಿಯುವ ಜನರ ಕೈಗೆ ಸ್ವಾವಲಂಭಿಯಾಗಲು, ಅವರು ಬದಕಲು ದೀರ್ಘಕಾಲೀನ ಯೋಜನೆ ಏನು? ಈ ಪ್ರಶ್ನೆ ಹಾಕಿಕೊಂಡರೆ ಉತ್ತರ ಶೂನ್ಯ ಎಂದ ಅವರು; ಇವರ ಯಾವ ಗ್ಯಾರಂಟಿಗೂ ನನ್ನ ತಕರಾರಿಲ್ಲ, ಇನ್ನೂ ಎರಡು ಜ್ಯೋತಿ ಕೊಡಿ. ನಮದ್ದೇನು ತಕರಾರಿಲ್ಲ. ವರ್ಷಕ್ಕೆ 50 ರಿಂದ 60 ಸಾವಿರ ವೆಚ್ಚಾಗಲಿದೆ. ಇದೊಂದೇ ಈ ಬಜೆಟ್ ನಲ್ಲಿ ಇರೊದು. ಆದರೆ ಯಾವುದಕ್ಕೂ ಈ ಬಜೆಟ್ ನಲ್ಲಿ ಹಣ ಇಟ್ಟಿಲ್ಲ. ಇದು ಕೇವಲ ಕೇಂದ್ರ ಸರ್ಕಾರ- ಹಿಂದಿನ ಸರ್ಕಾರವನ್ನ ದೂಷಣೆ ಮಾಡುವ ಬಜೆಟ್ ಅಷ್ಟೇ. ಇದರಲ್ಲಿ ಏನೂ ಇಲ್ಲ ಎಂದು ದೂರಿದರು.

ಬಸವರಾಜ ಬೊಮ್ಮಾಯಿ 77 ಸಾವಿರ ಕೋಟಿ ಸಾಲ ಮಾಡಿದ್ರು, ಇವರು 85 ಸಾವಿರ ಕೋಟಿಗೆ ತೆಗೆದುಕೊಂಡು ಹೋಗಿದ್ದಾರೆ. ಹಿಂದಿನ ಬಜೆಟ್ ನ ಯೋಜನೆ ಎಲ್ಲ ಲೆಕ್ಕಾಚಾರ ತೆಗೆದ್ರು 59 ಕೋಟಿ ವ್ಯತ್ಯಾಸ ಆಗಿರಬಹುದು ಅಷ್ಟೇ. ಆರೋಗ್ಯ, ಶಿಕ್ಷಣ ಕ್ಷೇತ್ರ ಪ್ರಮುಖವಾದುವು, ಅದಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕಿದೆ. ಅದನ್ನು ಜನರಿಗೆ ತಲುಪಲು ನಾವು ಎಡವುತ್ತಿದ್ದೇವೆ. ಮೂಲಭೂತವಾಗಿ ಜನರಿಗೆ ಏನು ಬೇಕು ಎನ್ನುವ ಬಗ್ಗೆ ಬಜೆಟ್ ಪೂರ್ಣವಾಗಿ ಎಡವಿದೆ ಎಂದು ಅವರು ತರಾಟೆಗೆ ತೆಗೆದುಕೊಂಡರು.

ಶೇ.109ರಷ್ಟು ಆದಾಯ ಕೊರತೆ ಹೆಚ್ಚಳವಾಗಿದೆ: ಪೃಥ್ವಿ ರೆಡ್ಡಿ

ಹಣಕಾಸು ಸಚಿವರೂ ಆಗಿರುವ ಸಿಎಂ ಸಿದ್ದರಾಮಯ್ಯ ಅವರು ಹೆಚ್ಚುವರಿ ಬಜೆಟ್‌ ಭರವಸೆ ನೀಡಿದ್ದಾರೆ. ವಾಸ್ತವದಲ್ಲಿ ಇಂದು ಮಂಡಿಸಿರುವ ಬಜೆಟ್‌ನಲ್ಲಿ ಶೇ.109ರಷ್ಟು ಆದಾಯ ಕೊರತೆ ಹೆಚ್ಚಳವಾಗಿದ್ದು, ಅದು ದುಪ್ಪಟ್ಟಾಗಿದೆ. ಕಾಂಗ್ರೆಸ್ ಪಕ್ಷ ಕರ್ನಾಟಕದ ಜನತೆಗೆ ನೀಡಿದ ಭರವಸೆಗಳು ಕೇವಲ ಮತಕ್ಕಾಗಿಯೇ ಹೊರತು ಮತದಾರರಿಗಾಗಿ ಅಲ್ಲ.

ಕರ್ನಾಟಕದ ಜನರು “ಖಾತರಿ”ಗಳಿಂದ ವಂಚಿಸಿದ್ದಾರೆ, ವಾಸ್ತವದಲ್ಲಿ ಕಾಂಗ್ರೆಸ್ ಸರ್ಕಾರವು ಒಂದು ಕೈಯಲ್ಲಿ ಕೊಟ್ಟು ಎರಡು ಕೈಯಿಂದ ತೆಗೆದುಕೊಳ್ಳುತ್ತಿದೆ ಎಂಬುದನ್ನು ಬಜೆಟ್ ಬಹಿರಂಗಪಡಿಸುತ್ತದೆ. ಕೃಷಿ ಮತ್ತು ತೋಟಗಾರಿಕೆ ಶೇ.25ರಷ್ಟು ಕಡಿಮೆಯಾಗಿದೆ. ಸಮಾಜ ಕಲ್ಯಾಣ 42% ರಷ್ಟು ಕಡಿಮೆಯಾಗಿದೆ. ಸಹಕಾರ 16% ಕಡಿಮೆಯಾಗಿದೆ. ಅರಣ್ಯ, ಪರಿಸರ ಮತ್ತು ಪರಿಸರವನ್ನು 67% ರಷ್ಟು ಕಡಿತಗೊಳಿಸಲಾಗಿದೆ. ಹಾಲು ಶೇ.2ರಷ್ಟು ಕಡಿತವಾಗಿದೆ. ಸಾರ್ವಜನಿಕ ಸಾಲವನ್ನು ಸುಮಾರು 19000 ಕೋಟಿ ಅಥವಾ 28% ರಷ್ಟು ಹೆಚ್ಚಿಸುವ ಮೂಲಕ, ಅದೂ ಮುಖ್ಯವಾಗಿ ಮುಕ್ತ ಮಾರುಕಟ್ಟೆಯಿಂದ .ಸಾಲ ಮತ್ತು ಬಡ್ಡಿಯ ಮರುಪಾವತಿಯು ಪ್ರಾಮಾಣಿಕ ತೆರಿಗೆದಾರರ ಮೇಲೆ ಮತ್ತಷ್ಟು ಹೊರೆಯನ್ನು ಉಂಟುಮಾಡುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ; 2023-24ರ ಆಯವ್ಯಯ ಸರ್ಕಾರಿ ಶಾಲೆಗಳನ್ನು ಬಲಪಡಿಸಲು ಪೂರಕವಾಗಿದೆ: ನಿರಂಜನಾರಾಧ್ಯ.ವಿ.ಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...