Homeಮುಖಪುಟಸಿದ್ದರಾಮಯ್ಯ ಬಜೆಟ್: ವಿಪಕ್ಷಗಳ ಪ್ರತಿಕ್ರಿಯೆ ಹೀಗಿದೆ...

ಸಿದ್ದರಾಮಯ್ಯ ಬಜೆಟ್: ವಿಪಕ್ಷಗಳ ಪ್ರತಿಕ್ರಿಯೆ ಹೀಗಿದೆ…

- Advertisement -
- Advertisement -

ಇಂದು ಸಿದ್ದರಾಮಯ್ಯನವರು ಮಂಡಿಸಿದ ರಾಜ್ಯ ಬಜೆಟ್ ಕುರಿತು ಪ್ರತಿಪಕ್ಷಿಗಳು ಟೀಕಾಪ್ರಹಾರ ನಡೆಸಿವೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಹೆಚ್.ಡಿ ಕುಮಾರಸ್ವಾಮಿ ಮತ್ತು ಆಮ್ ಆದ್ಮಿ ಪಕ್ಷ ಇದೊಂದು ನಿರಾಶಾದಾಯಕ ಬಜೆಟ್ ಎಂದು ಕರೆದಿವೆ.

ಕೇಂದ್ರ ಸರ್ಕಾರವನ್ನು ದ್ವೇಷಿಸುವ ರಾಜಕೀಯ ಪ್ರೇರಿತ ಬಜೆಟ್: ಬಸವರಾಜ ಬೊಮ್ಮಾಯಿ

ಬಜೆಟ್ ನಲ್ಲಿ ಭವಿಷ್ಯದ ಯೋಜನೆಗಳ ಕುರಿತು ಹೇಳುವ ಬದಲು, ಹಿಂದಿನ ಸರ್ಕಾರ ಹಾಗೂ ಕೇಂದ್ರ ಸರ್ಕಾರವನ್ನು ದ್ವೇಷಿಸುವ ರಾಜಕೀಯ ಪ್ರೇರಿತ, ರಿವರ್ಸ್ ಗೇರ್ ಬಜೆಟ್‌ ಇದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.

ಗ್ಯಾರಂಟಿ ಯೋಜನೆಗಳ ಜಾರಿಯ ಹೆಸರಲ್ಲಿ ಈ‌ ಬಜೆಟ್ ಸಾಮಾನ್ಯರ ಮೇಲೆ ದೊಡ್ಡ ಹೊರೆ ಹೊರೆಸಿದೆ. ನಮ್ಮದು 77 ಸಾವಿರ ಕೋಟಿ ಸಾಲ ಇದ್ದದ್ದು, ಈಗ 88 ಸಾವಿರ ಕೋಟಿಗೆ ಹೆಚ್ಚಿಸಿದ್ದಾರೆ. ಬಜೆಟ್ ಗಾತ್ರ 3.27 ಲಕ್ಷ ಕೋಟಿ ಮಾಡಿದ್ದಾರೆ. ನಾವು ಸರಪ್ಲಸ್ ಬಜೆಟ್ ಮಾಡಿದ್ದೆವು, ಇವರು ಡೆಫಿಸಿಟ್ ಬಜೆಟ್ ಮಾಡಿದ್ದಾರೆ. ಯಾವುದೇ ಭರವಸೆ ನೀಡದೆ, ಜನರಿಗೆ ಸುಳ್ಳು ಭರವಸೆ ನೀಡಿದ್ದಾರೆ. ಶಿಕ್ಷಣ, ಆರೋಗ್ಯ, ಕೃಷಿ, ಪಿಡಬ್ಲುಡಿ, ನೀರಾವರಿ, ಯೋಜನೆಗಳಿಗೆ ಅನುದಾನ ಪ್ರಮಾಣ ಕಡಿಮೆ ಮಾಡಿದ್ದಾರೆ. ಹೆಚ್ಚಿನ ಅನುದಾನ ನೀಡದೆ ಅಭಿವೃದ್ಧಿ ಹೇಗೆ ಆಗುತ್ತದೆ ಎಂದು ಪ್ರಶ್ನಿಸಿದರು.

ರಾಜಕೀಯ ಹೇಳಿಕೆಗಳಿಗೆ ಸೀಮಿತವಾದ ಬಜೆಟ್..: ಹೆಚ್.ಡಿ ಕುಮಾರಸ್ವಾಮಿ

ಕೇಂದ್ರದ ನರೇಂದ್ರ ಮೋದಿ ಅವರ ಸರಕಾರ, ಹಿಂದಿನ ಬಿಜೆಪಿ ಸರಕಾರವನ್ನು ನಿಂದಿಸಲು ಮೀಸಲಾದ ಬಜೆಟ್ ಇದಾಗಿದೆ. ರಾಜಕೀಯ ಹೇಳಿಕೆಗಳಿಗೆ ಸೀಮಿತವಾದ ಹಾಗೂ ಅನೇಕ ಎಟಿಎಮ್ ಗಳನ್ನು ತುಂಬಿಸಿಕೊಳ್ಳಲು ಮಾಡಲಾದ ಬಜೆಟ್ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಬಜೆಟ್ಟಿನಲ್ಲಿ ದುಡಿಯುವ ಜನರ ಕೈಗೆ ಸ್ವಾವಲಂಭಿಯಾಗಲು, ಅವರು ಬದಕಲು ದೀರ್ಘಕಾಲೀನ ಯೋಜನೆ ಏನು? ಈ ಪ್ರಶ್ನೆ ಹಾಕಿಕೊಂಡರೆ ಉತ್ತರ ಶೂನ್ಯ ಎಂದ ಅವರು; ಇವರ ಯಾವ ಗ್ಯಾರಂಟಿಗೂ ನನ್ನ ತಕರಾರಿಲ್ಲ, ಇನ್ನೂ ಎರಡು ಜ್ಯೋತಿ ಕೊಡಿ. ನಮದ್ದೇನು ತಕರಾರಿಲ್ಲ. ವರ್ಷಕ್ಕೆ 50 ರಿಂದ 60 ಸಾವಿರ ವೆಚ್ಚಾಗಲಿದೆ. ಇದೊಂದೇ ಈ ಬಜೆಟ್ ನಲ್ಲಿ ಇರೊದು. ಆದರೆ ಯಾವುದಕ್ಕೂ ಈ ಬಜೆಟ್ ನಲ್ಲಿ ಹಣ ಇಟ್ಟಿಲ್ಲ. ಇದು ಕೇವಲ ಕೇಂದ್ರ ಸರ್ಕಾರ- ಹಿಂದಿನ ಸರ್ಕಾರವನ್ನ ದೂಷಣೆ ಮಾಡುವ ಬಜೆಟ್ ಅಷ್ಟೇ. ಇದರಲ್ಲಿ ಏನೂ ಇಲ್ಲ ಎಂದು ದೂರಿದರು.

ಬಸವರಾಜ ಬೊಮ್ಮಾಯಿ 77 ಸಾವಿರ ಕೋಟಿ ಸಾಲ ಮಾಡಿದ್ರು, ಇವರು 85 ಸಾವಿರ ಕೋಟಿಗೆ ತೆಗೆದುಕೊಂಡು ಹೋಗಿದ್ದಾರೆ. ಹಿಂದಿನ ಬಜೆಟ್ ನ ಯೋಜನೆ ಎಲ್ಲ ಲೆಕ್ಕಾಚಾರ ತೆಗೆದ್ರು 59 ಕೋಟಿ ವ್ಯತ್ಯಾಸ ಆಗಿರಬಹುದು ಅಷ್ಟೇ. ಆರೋಗ್ಯ, ಶಿಕ್ಷಣ ಕ್ಷೇತ್ರ ಪ್ರಮುಖವಾದುವು, ಅದಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕಿದೆ. ಅದನ್ನು ಜನರಿಗೆ ತಲುಪಲು ನಾವು ಎಡವುತ್ತಿದ್ದೇವೆ. ಮೂಲಭೂತವಾಗಿ ಜನರಿಗೆ ಏನು ಬೇಕು ಎನ್ನುವ ಬಗ್ಗೆ ಬಜೆಟ್ ಪೂರ್ಣವಾಗಿ ಎಡವಿದೆ ಎಂದು ಅವರು ತರಾಟೆಗೆ ತೆಗೆದುಕೊಂಡರು.

ಶೇ.109ರಷ್ಟು ಆದಾಯ ಕೊರತೆ ಹೆಚ್ಚಳವಾಗಿದೆ: ಪೃಥ್ವಿ ರೆಡ್ಡಿ

ಹಣಕಾಸು ಸಚಿವರೂ ಆಗಿರುವ ಸಿಎಂ ಸಿದ್ದರಾಮಯ್ಯ ಅವರು ಹೆಚ್ಚುವರಿ ಬಜೆಟ್‌ ಭರವಸೆ ನೀಡಿದ್ದಾರೆ. ವಾಸ್ತವದಲ್ಲಿ ಇಂದು ಮಂಡಿಸಿರುವ ಬಜೆಟ್‌ನಲ್ಲಿ ಶೇ.109ರಷ್ಟು ಆದಾಯ ಕೊರತೆ ಹೆಚ್ಚಳವಾಗಿದ್ದು, ಅದು ದುಪ್ಪಟ್ಟಾಗಿದೆ. ಕಾಂಗ್ರೆಸ್ ಪಕ್ಷ ಕರ್ನಾಟಕದ ಜನತೆಗೆ ನೀಡಿದ ಭರವಸೆಗಳು ಕೇವಲ ಮತಕ್ಕಾಗಿಯೇ ಹೊರತು ಮತದಾರರಿಗಾಗಿ ಅಲ್ಲ.

ಕರ್ನಾಟಕದ ಜನರು “ಖಾತರಿ”ಗಳಿಂದ ವಂಚಿಸಿದ್ದಾರೆ, ವಾಸ್ತವದಲ್ಲಿ ಕಾಂಗ್ರೆಸ್ ಸರ್ಕಾರವು ಒಂದು ಕೈಯಲ್ಲಿ ಕೊಟ್ಟು ಎರಡು ಕೈಯಿಂದ ತೆಗೆದುಕೊಳ್ಳುತ್ತಿದೆ ಎಂಬುದನ್ನು ಬಜೆಟ್ ಬಹಿರಂಗಪಡಿಸುತ್ತದೆ. ಕೃಷಿ ಮತ್ತು ತೋಟಗಾರಿಕೆ ಶೇ.25ರಷ್ಟು ಕಡಿಮೆಯಾಗಿದೆ. ಸಮಾಜ ಕಲ್ಯಾಣ 42% ರಷ್ಟು ಕಡಿಮೆಯಾಗಿದೆ. ಸಹಕಾರ 16% ಕಡಿಮೆಯಾಗಿದೆ. ಅರಣ್ಯ, ಪರಿಸರ ಮತ್ತು ಪರಿಸರವನ್ನು 67% ರಷ್ಟು ಕಡಿತಗೊಳಿಸಲಾಗಿದೆ. ಹಾಲು ಶೇ.2ರಷ್ಟು ಕಡಿತವಾಗಿದೆ. ಸಾರ್ವಜನಿಕ ಸಾಲವನ್ನು ಸುಮಾರು 19000 ಕೋಟಿ ಅಥವಾ 28% ರಷ್ಟು ಹೆಚ್ಚಿಸುವ ಮೂಲಕ, ಅದೂ ಮುಖ್ಯವಾಗಿ ಮುಕ್ತ ಮಾರುಕಟ್ಟೆಯಿಂದ .ಸಾಲ ಮತ್ತು ಬಡ್ಡಿಯ ಮರುಪಾವತಿಯು ಪ್ರಾಮಾಣಿಕ ತೆರಿಗೆದಾರರ ಮೇಲೆ ಮತ್ತಷ್ಟು ಹೊರೆಯನ್ನು ಉಂಟುಮಾಡುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ; 2023-24ರ ಆಯವ್ಯಯ ಸರ್ಕಾರಿ ಶಾಲೆಗಳನ್ನು ಬಲಪಡಿಸಲು ಪೂರಕವಾಗಿದೆ: ನಿರಂಜನಾರಾಧ್ಯ.ವಿ.ಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...