Homeಕರ್ನಾಟಕಸಿದ್ದರಾಮಯ್ಯರ ಬಜೆಟ್‌ನಲ್ಲಿ ಮಹಿಳೆ ಕಾಣೆ! - ಹೋರಾಟಗಾರ್ತಿ ದೇವಿ

ಸಿದ್ದರಾಮಯ್ಯರ ಬಜೆಟ್‌ನಲ್ಲಿ ಮಹಿಳೆ ಕಾಣೆ! – ಹೋರಾಟಗಾರ್ತಿ ದೇವಿ

- Advertisement -
- Advertisement -

ಶಕ್ತಿ, ಗೃಹಲಕ್ಷ್ಮಿ ಯೋಜನೆಗಳನ್ನು ಬಿಟ್ಟು ರಾಜ್ಯದ ಈ ವರ್ಷದ ಬಜೆಟ್‌ನಲ್ಲಿ ಮಹಿಳೆಯರಿಗೆಂದು ಯಾವುದೆ ಪಾಲನ್ನು ಸಿಎಂ ಸಿದ್ದರಾಮಯ್ಯ ಅವರು ನೀಡಿಲ್ಲ ಎಂದು ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ದೇವಿ ಬುಧವಾರ ಹೇಳಿದರು. ಅವರು ‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿರುವ ಎರಡು ದಿನಗಳ ‘ಜನಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ‘ಮಹಿಳಾ ಚಳವಳಿ ಆಗ್ರಹಗಳು’ ಎಂಬ ವಿಷಯದ ಬಗ್ಗೆ ಮಾತನಾಡುತ್ತಿದ್ದರು. ಸಿದ್ದರಾಮಯ್ಯರ

“ಭೂಮಿ ಮಹಿಳೆಯರ ಹೆಸರಿನಲ್ಲಿ ಇಲ್ಲ ಎಂಬ ಕಾರಣಕ್ಕಾಗಿ ಮಹಿಳೆಯರನ್ನು ಅವಗಣನೆ ಮಾಡಲಾಗಿದೆ. ಸುಮಾರು 100 ಕ್ಕೆ 80% ಮಹಿಳೆಯರು ಸಾಲದ ಸುಳಿಯಲ್ಲಿ ಇದ್ದಾರೆ. ಮಹಿಳೆಯರು ಆಹಾರ, ಕೃಷಿ, ಆರೋಗ್ಯಕ್ಕೋಸ್ಕರ ಈ ಸಾಲ ಮಾಡಿದ್ದಾರೆ. ಮೈಕ್ರೋ ಫೈನಾನ್ಸ್‌ಗಳ ಆಟಾಟೋಪಕ್ಕೆ ತಡೆ ನೀಡಿದ ಸರ್ಕಾರ, ಮಹಿಳೆಯರಿಗೆ ಯಾವುದೆ ಅನುದಾನ ನೀಡದೆ ಇದ್ದರೆ ಯಾವ ಲಾಭವಾಗಲಿದೆ? ಕೇವಲ ಗ್ಯಾರೆಂಟಿ ಯೋಜನೆಯನ್ನು ತೋರಿಸಿದರೆ ಸಾಕೆ?” ಎಂದು ಅವರು ಕೇಳಿದರು. ಸಿದ್ದರಾಮಯ್ಯರ

“ಸ್ತ್ರೀ ಶಕ್ತಿ ಸಂಘಗಳನ್ನು ಬಲಪಡಿಸಿ ಒಂದು ಗುಂಪಿಗೆ ಕನಿಷ್ಠ 10 ಲಕ್ಷ ಸಾಲವನ್ನು ನೀಡಿಬೇಕಿತ್ತು. ಅವರಿಗೆ ಸಾಲ ನೀಡಿ ಆಯಾ ಪ್ರದೇಶದಲ್ಲಿ ಸ್ವ-ಉದ್ಯೋಗ ಮಾಡುವ ತರಬೇತಿ ಕೊಟ್ಟು ಸ್ಥಳೀಯ ಮಟ್ಟದಲ್ಲಿ ಉದ್ಯೋಗ ಒದಗಿಸಿಕೊಡಬೇಕಿತ್ತು. ಆದರೆ ಸರ್ಕಾರ ಇದನ್ನು ಮಾಡಿಲ್ಲ. ಈ ಹಿಂದೆ ನಿರ್ಭಯ ಫಂಡ್ ಎಂದು ಅತ್ಯಚಾರ ಮತ್ತು ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೋಸ್ಕರವೇ ಅನುದಾನವನ್ನು ಸರ್ಕಾರ ನೀಡುತ್ತಿತ್ತು. ಆದರೆ ಈಗ ಅದನ್ನು ನಿಲ್ಲಿಸಿದೆ.” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

“ವಿಧವೆ, ಪರಿತ್ಯಕ್ತ ಮತ್ತು ಮದುವೆ ಆಗದ ಮಳೆಯರಿಗೆ ಕೇವಲ 800 ರೂ.ಗಳನ್ನು ಮಾತ್ರ ಸರಕಾರ ನೀಡುತ್ತಿದೆ. ಈ ಹಣದಲ್ಲಿ ಅವರು ಬದುಕು ಕಟ್ಟಿಕೊಳ್ಳಲು ಹೇಗೆ ಸಾಧ್ಯ? ಈ ಬಗ್ಗೆ ಬಜೆಟ್‌ನಲ್ಲಿ ಯಾವುದೆ ಚರ್ಚೆ ಮಾಡಿಲ್ಲ. ಈ ಬಗ್ಗೆ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ತಿಳಿಸಿದ್ದರೂ ಅವುಗಳ ಬಗ್ಗೆ ಅವರು ಬಜೆಟ್‌ನಲ್ಲಿ ಉಲ್ಲೇಖಿಸಿಲ್ಲ. ಸಾವಿರಾರು ಎಕರೆ ಭೂಮಿಯನ್ನು ಕಾರ್ಪೋರೇಟ್‌ಗಳಿಗೆ ನೀಡುವ ಸರ್ಕಾರ ಬಡವರು ನಿವೇಶನಕ್ಕಾಗಿ ಭೂಮಿ ಕೇಳಿದಾಗ ಭೂಮಿ ಇಲ್ಲ ಎಂದು ಹೇಳುತ್ತದೆ” ಎಂದು ಅವರು ಹೇಳಿದರು.

ಗರ್ಭಕೋಶದ ಕಾನ್ಸರ್‌, ಸ್ತನ ಕ್ಯಾನ್ಸರ್ ಸೇರಿದಂತೆ ಹಲವು ರೋಗಗಳಿಗೆ ಮಹಿಳೆಯರು ಒಳಗಾಗುತ್ತಿದ್ದಾರೆ. ಅವರಿಗೆ ಯಾವುದೆ ಅನುದಾನವನ್ನು ಸರ್ಕಾರ ಬಜೆಟ್‌ನಲ್ಲಿ ನೀಡಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

“ಬಾಲ್ಯವಿವಾಹ, ಭ್ರೂಣ ಹತ್ಯೆ, ಮರ್ಯಾದಗೇಡು ಹತ್ಯೆ ನಡೆಯುತ್ತಿವೆ. ಹೆಣ್ಣು ಭ್ರೂಣ ಹತ್ಯೆಯಂತೂ ರಾಜ್ಯದಾದ್ಯಂತ ನಡೆಯುತ್ತಿವೆ. ಬಾಲ್ಯ ವಿವಾಹದಲ್ಲಿ ರಾಜಸ್ಥಾನದ ನಂತರ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಇವುಗಳನ್ನು ಉದ್ದೇಶಿಸಿ ಬಜೆಟ್ ಮಂಡಿಸದ ಸರ್ಕಾರ, ಕೇವಲ ಶಕ್ತಿ ಮತ್ತು ಗೃಹ ಲಕ್ಷ್ಮಿ ಯೋಜನೆಯನ್ನು ಮಾತ್ರ ತೋರಿಸುತ್ತಿವೆ. ರಾಜ್ಯದಲ್ಲಿ ಐದು ಸಾವಿರಕ್ಕೂ ಹೆಚ್ಚು ಮಹಿಳೆಯ ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿಯಲ್ಲಿದ್ದಾರೆ. ಇಂತಹ ಸಂದರ್ಭದಲ್ಲೆ ಮಹಿಳೆಯರು ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ಕಾಣೆಯಾಗಿದ್ದಾರೆ” ಎಂದು ಅವರು ಹೇಳಿದರು.

ಕೇಂದ್ರದ ಹಣಕಾಸಿನ ಮಂತ್ರಿಯ ತಲೆಯಲ್ಲಿ ಸಗಣಿ, ಗಂಜಲ ಅಷ್ಟೆ ಇದೆ: ಹೋರಾಟಗಾರ್ತಿ ಗೌರಿ ಆಕ್ರೋಶ

ಮಹಿಳಾ ಮುನ್ನಡೆ ರಾಜ್ಯ ಸಮನ್ವಯಕಾರರಾದ ಗೌರಿ ಮಾತನಾಡಿ, “ತೊಗರಿಬೇಳೆಗೆ 18% ಜಿಎಸ್‌ಟಿ ಹಾಕುವ ಸರ್ಕಾರ ವಜ್ರಗಳಿಗೆ 1% ಜಿಎಸ್‌ಟಿ ಹಾಕುತ್ತಿದೆ. ಕೇಂದ್ರದ ಹಣಕಾಸಿನ ಮಂತ್ರಿಯ ತಲೆಯಲ್ಲಿ ಸಗಣಿ, ಗಂಜಲ ಅಷ್ಟೆ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. “ದಲಿತ, ಮಹಿಳೆ, ಟ್ರಾನ್ಸ್‌ಜೆಂಡರ್‌ಗಳ ಪರಿಸ್ಥಿತಿ ಕೆಟ್ಟದಾಗಿದೆ. ಬಜೆಟ್ ಪೂರ್ವ ಸಭೆಯಲ್ಲಿ ಮಹಿಳೆಯರನ್ನು ಕೆರೆದು ಅವರ ಆಗ್ರಹವನ್ನು ಕೇಳುತ್ತಿಲ್ಲ. ಶಕ್ತಿ ಮತ್ತು ಗೃಹಲಕ್ಷ್ಮಿ ಯೋಜನೆಯನ್ನು ಮುಂದಿಟ್ಟು ಮಹಿಳೆಯರು ಸರ್ವತೋಮುಖ ಅಭಿವೃದ್ಧಿ ಆಗಿದ್ದಾರೆ ಎಂದು ಬಿಂಬಿಸುತ್ತಿದ್ದಾರೆ” ಎಂದು ಅವರು ಹೇಳಿದರು.

“ಸಾಂಸ್ಕೃತಿಕ ವಿಚಾರಗಳು ಮಹಿಳೆಯರನ್ನು ಅಲುಗಾಡಿಸುತ್ತಿವೆ. ಟಿವಿ ಸೀರಿಯಲ್‌ಗಳು ನಮ್ಮ ಸಮಾಜವನ್ನು ಹಾಳು ಮಾಡುತ್ತಿದ್ದು, ಅತ್ಯಾಚಾರ ಮತ್ತು ಮಹಿಳಾ ದೌರ್ಜನ್ಯವನ್ನು ಪ್ರೋತ್ಸಾಹಿಸುತ್ತಿವೆ. ಬಲಾಢ್ಯರು ಮಹಿಳಾ ದೌರ್ಜನ್ಯ ಎಸಗಿದರೆ ಅದರಿಂದ ತಪ್ಪಿಸಿಕೊಳ್ಳಬಹುದು ಎಂದು ಸೌಜನ್ಯ ಪ್ರಕರಣ ಸಾಬೀತು ಮಾಡಿದೆ. ಇಂತಹ ದೊಡ್ಡವರನ್ನು ಯಾಕೆ ಸರ್ಕಾರ ಬಂಧಿಸಿಲ್ಲ ಎಂಬುವುದಕ್ಕೆ ಉತ್ತರ ಸಿಗಬೇಕಿದೆ” ಎಂದರು.

“ದೇವದಾಸಿಯರ ಮಕ್ಕಳು ತಮ್ಮ ತಂದೆಯ ಹೆಸರಿನ ಕಾಲಂನಲ್ಲಿ ಹೆಸರು ಹಾಕುವುದಿಲ್ಲ ಎಂಬ ಚಿಕ್ಕ ವಿಷಯಕ್ಕೂ ಈಗಲೂ ಹೋರಾಟ ಮಾಡುತ್ತಿದ್ದಾರೆ. ಬಜೆಟ್‌ನಲ್ಲಿ ನೀಡುವ ಗ್ಯಾರೆಂಟಿ ಯೋಜನೆಗಳಲ್ಲಿ ಮಹಿಳೆಯರಿಗೆ ನೀಡುವ ಕಾರ್ಯಕ್ರಮಗಳ ಬಗ್ಗೆ ಕೂಡಾ ಸರ್ಕಾರ ಸಮರ್ಥನೆ ಮಾಡುತ್ತಿಲ್ಲ. ಜನಸಂಖ್ಯೆಯ ಅರ್ಧದಷ್ಟಿರುವ ಹೆಣ್ಣು ಮಕ್ಕಳು ಇನ್ನೂ ಅತ್ಯಾಚಾರಕ್ಕೆ, ದೌರ್ಜನ್ಯಕ್ಕೆ ಒಳಗಾಗುತ್ತಿದ್ದರೆ ನಾಗರೀಕ ಸಮಾಜ ಸಮಾಧಾನದಿಂದ ನಿದ್ದೆ ಮಾಡಲು ಸಾಧ್ಯವಿಲ್ಲ” ಎಂದು ಗೌರಿ ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮೀಸಲಾತಿ ವಿಚಾರದಲ್ಲಿ ದಲಿತರನ್ನು ಗತಿಗೆಟ್ಟವರು ಎಂದು ಅವಮಾನಿಸಲಾಗುತ್ತಿದೆ: ಹೋರಾಟಗಾರ ಮಾವಳ್ಳಿ ಶಂಕರ್

ಮೀಸಲಾತಿ ವಿಚಾರದಲ್ಲಿ ದಲಿತರನ್ನು ಗತಿಗೆಟ್ಟವರು ಎಂದು ಅವಮಾನಿಸಲಾಗುತ್ತಿದೆ: ಹೋರಾಟಗಾರ ಮಾವಳ್ಳಿ ಶಂಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್: ತರಗತಿಯೊಳಗೆ ವಿದ್ಯಾರ್ಥಿನಿಯನ್ನು ಕೊಂದು, ತಾನು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಕಾನೂನು ವಿದ್ಯಾರ್ಥಿ

ಚಂಡೀಗಢ: ಪಂಜಾಬ್‌ನ ತರ್ನ್ ತರಣ್ ಜಿಲ್ಲೆಯಲ್ಲಿ ಕಾನೂನು ವಿದ್ಯಾರ್ಥಿಯೊಬ್ಬ ಶಾಲಾ ಕೋಣೆಯೊಳಗೆ ವಿದ್ಯಾರ್ಥಿನಿಯ ತಲೆಗೆ ಗುಂಡು ಹಾರಿಸಿ ಕೊಂದ ಘಟನೆ ಸೋಮವಾರ ನಡೆದಿದೆ. ಸಹಪಾಠಿಗಳು ಭಯಭೀತರಾಗಿ ನೋಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಿದ್ಯಾರ್ಥಿನಿಯನ್ನು...

ಅಸ್ಸಾಂ ಸಿಎಂ ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ : ಗೌರವ್ ಗೊಗೊಯ್

ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಮುಸ್ಲಿಮರ ವಿರುದ್ದ ದ್ವೇಷ ಹರಡುತ್ತಿದ್ದಾರೆ, ಅವರ ಜನಾಂಗೀಯ ಹತ್ಯೆಗೆ ಪ್ರಚೋದಿಸುತ್ತಿದ್ದಾರೆ ಎಂದು ಅಸ್ಸಾಂ ರಾಜ್ಯ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಹಾಗೂ ಸಂಸದ ಗೌರವ್ ಗೊಗೊಯ್ ಹೇಳಿದ್ದಾರೆ. ಅಸ್ಸಾಂ...

‘ಎಂಡಿಎಂಎ ಡ್ರಗ್ಸ್ ಕೇಂದ್ರವಾಗಿ ಮಾರ್ಪಟ್ಟ ಮಧ್ಯಪ್ರದೇಶ-ರಾಜಸ್ಥಾನ ಗಡಿ’: 13ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದ ಪೊಲೀಸರು. 

ಭೋಪಾಲ್: ದೇಶದ ಅಫೀಮು ಕೃಷಿ ಮತ್ತು ಕಳ್ಳಸಾಗಣೆ ಮಾರ್ಗವಾಗಿ ದೀರ್ಘಕಾಲದಿಂದ ಕುಖ್ಯಾತಿ ಗಳಿಸಿರುವ ಪಶ್ಚಿಮ ಮಧ್ಯಪ್ರದೇಶ ಮತ್ತು ಪಕ್ಕದ ಆಗ್ನೇಯ ರಾಜಸ್ಥಾನದ ಜಿಲ್ಲೆಗಳು ಈಗ MDMA ಸಂಶ್ಲೇಷಿತ ಡ್ರಗ್ಸ್ ಅಕ್ರಮ ಉತ್ಪಾದನೆ ಮತ್ತು...

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾದ ವಿರೋಧ ಪಕ್ಷಗಳು: ವರದಿ

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ವಿಪಕ್ಷ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ 'ಅನಿರೀಕ್ಷಿತ ಕೃತ್ಯ' ಎಸಗಲು ಸಂಚು...

ಮೆಟಾ-ವಾಟ್ಸಾಪ್ ಗೌಪ್ಯತೆ ನೀತಿ ಪ್ರಕರಣ: ಸುಪ್ರೀಂ ಕೋರ್ಟ್ ವಿಚಾರಣೆ ಫೆಬ್ರವರಿ 23ಕ್ಕೆ ಮುಂದೂಡಿಕೆ 

ನವದೆಹಲಿ: ಗೌಪ್ಯತೆ ನೀತಿಯ ಮೇಲೆ 213.14 ಕೋಟಿ ರೂ. ದಂಡ ವಿಧಿಸಿದ ಭಾರತೀಯ ಸ್ಪರ್ಧಾ ಆಯೋಗದ (ಸಿಸಿಐ) ಆದೇಶದ ವಿರುದ್ಧ ಮೆಟಾ ಪ್ಲಾಟ್‌ಫಾರ್ಮ್ಸ್ ಇಂಕ್ ಮತ್ತು ವಾಟ್ಸಾಪ್ ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್...

ಪ್ರಬಲಜಾತಿ ಯುವತಿಯೊಂದಿಗೆ ಗ್ರಾಮ ತೊರೆದ ದಲಿತ ಯುವಕ; ಕುಟುಂಬದ ಮೇಲೆ ದಾಳಿ ಮಾಡಿದ ಹದಿಮೂರು ಜನರ ಬಂಧನ

ಸೂರತ್ ಗ್ರಾಮದಲ್ಲಿ ಪರಿಶಿಷ್ಟ ಜಾತಿಯ ಮಹಿಳೆ ಮತ್ತು ಆಕೆಯ ಇಬ್ಬರು ವಯಸ್ಕ ಮಕ್ಕಳ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುಜರಾತ್ ಪೊಲೀಸರು ಶನಿವಾರ ಒಂದೇ ಕುಟುಂಬದ 13 ಸದಸ್ಯರನ್ನು ಬಂಧಿಸಿದ್ದಾರೆ. ಆಕೆಯ...

‘ದೆಹಲಿ ಖಾಲಿಸ್ತಾನವಾಗಲಿದೆ’: 10 ಶಾಲೆಗಳು, ಸಂಸತ್ತಿಗೆ ಬಾಂಬ್ ಬೆದರಿಕೆ ಇಮೇಲ್ ಬಂದ ನಂತರ ವಿದ್ಯಾರ್ಥಿಗಳ ಸ್ಥಳಾಂತರ

ಸೋಮವಾರ ರಾಷ್ಟ್ರ ರಾಜಧಾನಿ ಮತ್ತು ಸಂಸತ್ತಿನ ಕನಿಷ್ಠ 10 ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ಭಾರಿ ಭದ್ರತಾ ಪ್ರತಿಕ್ರಿಯೆ ನೀಡಲಾಗಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳು (ಡಿಎಫ್‌ಎಸ್) ತಿಳಿಸಿವೆ. ಡಿಎಫ್‌ಎಸ್ ಪ್ರಕಾರ, ಬೆಳಿಗ್ಗೆ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ರೈತರ ಪಾಲಿಗೆ ಮರಣಶಾಸನ: ಸಿಎಂ ಸಿದ್ದರಾಮಯ್ಯ

ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ಒಪ್ಪಿಕೊಂಡು ಸ್ವಾಗತಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅಮೆರಿಕಕ್ಕೆ ಸಂಪೂರ್ಣ ಶರಣಾಗಿದ್ದಾರೆ. ಮುಂದಿನ ದಿನಗಳಲ್ಲಿ ಈ ಒಪ್ಪಂದ 140 ಕೋಟಿ ಭಾರತೀಯರಿಗೆ, ಅದರಲ್ಲಿಯೂ...

ಉತ್ತರ ಪ್ರದೇಶ| ಜಾತಿ ನಿಂದನೆ-ಹಲ್ಲೆ; ದೃಷ್ಟಿ ಕಳೆದುಕೊಂಡ ದಲಿತ ಯುವಕ

ಕಾಲುವೆ ಬಳಿ ಮಲವಿಸರ್ಜನೆ ಮಾಡುತ್ತಿದ್ದ ದಲಿತ ಯುವಕನ ಜೊತೆಗೆ ನಡೆದ ಜಗಳ ತೀವ್ರಗೊಂಡು, ದಾಳಿಕೋರನೊಬ್ಬ ಮೋಟಾರ್ ಸೈಕಲ್ ಕೀಲಿಯಿಂದ ಚುಚ್ಚಿದ ಪರಿಣಾಮ ಆತ ಒಂದು ಕಣ್ಣಿನ ದೃಷ್ಠಿ ಕಳೆದುಕೊಂಡಿದ್ದಾರೆ. 20 ರ ಹರೆಯದ...

ಮಣಿಪುರದ ಉಖ್ರುಲ್‌ನಲ್ಲಿ ಬುಡಕಟ್ಟು ಸಮುದಾಯಗಳ ನಡುವೆ ಉದ್ವಿಗ್ನತೆ: ಸಶಸ್ತ್ರ ಗುಂಪುಗಳಿಂದ ನಾಗಾ, ಕುಕಿ ಮನೆಗಳಿಗೆ ಬೆಂಕಿ

ಮಣಿಪುರದ ತಂಗ್ಖುಲ್ ನಾಗಾ ಮತ್ತು ಕುಕಿ ಸಮುದಾಯಗಳ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ, ಸೋಮವಾರ ಉಖ್ರುಲ್ ಜಿಲ್ಲೆಯಲ್ಲಿ ಹಲವಾರು ಸಶಸ್ತ್ರ ಉಗ್ರಗಾಮಿಗಳು ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ಮಧ್ಯರಾತ್ರಿಯ ಸುಮಾರಿಗೆ ಲಿಟಾನ್ ಸರೈಖಾಂಗ್ ಗ್ರಾಮದಲ್ಲಿ ಎರಡೂ...