Homeಕರ್ನಾಟಕಸಿದ್ದರಾಮಯ್ಯರ ಬಜೆಟ್‌ನಲ್ಲಿ ಮಹಿಳೆ ಕಾಣೆ! - ಹೋರಾಟಗಾರ್ತಿ ದೇವಿ

ಸಿದ್ದರಾಮಯ್ಯರ ಬಜೆಟ್‌ನಲ್ಲಿ ಮಹಿಳೆ ಕಾಣೆ! – ಹೋರಾಟಗಾರ್ತಿ ದೇವಿ

- Advertisement -
- Advertisement -

ಶಕ್ತಿ, ಗೃಹಲಕ್ಷ್ಮಿ ಯೋಜನೆಗಳನ್ನು ಬಿಟ್ಟು ರಾಜ್ಯದ ಈ ವರ್ಷದ ಬಜೆಟ್‌ನಲ್ಲಿ ಮಹಿಳೆಯರಿಗೆಂದು ಯಾವುದೆ ಪಾಲನ್ನು ಸಿಎಂ ಸಿದ್ದರಾಮಯ್ಯ ಅವರು ನೀಡಿಲ್ಲ ಎಂದು ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ದೇವಿ ಬುಧವಾರ ಹೇಳಿದರು. ಅವರು ‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿರುವ ಎರಡು ದಿನಗಳ ‘ಜನಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ‘ಮಹಿಳಾ ಚಳವಳಿ ಆಗ್ರಹಗಳು’ ಎಂಬ ವಿಷಯದ ಬಗ್ಗೆ ಮಾತನಾಡುತ್ತಿದ್ದರು. ಸಿದ್ದರಾಮಯ್ಯರ

“ಭೂಮಿ ಮಹಿಳೆಯರ ಹೆಸರಿನಲ್ಲಿ ಇಲ್ಲ ಎಂಬ ಕಾರಣಕ್ಕಾಗಿ ಮಹಿಳೆಯರನ್ನು ಅವಗಣನೆ ಮಾಡಲಾಗಿದೆ. ಸುಮಾರು 100 ಕ್ಕೆ 80% ಮಹಿಳೆಯರು ಸಾಲದ ಸುಳಿಯಲ್ಲಿ ಇದ್ದಾರೆ. ಮಹಿಳೆಯರು ಆಹಾರ, ಕೃಷಿ, ಆರೋಗ್ಯಕ್ಕೋಸ್ಕರ ಈ ಸಾಲ ಮಾಡಿದ್ದಾರೆ. ಮೈಕ್ರೋ ಫೈನಾನ್ಸ್‌ಗಳ ಆಟಾಟೋಪಕ್ಕೆ ತಡೆ ನೀಡಿದ ಸರ್ಕಾರ, ಮಹಿಳೆಯರಿಗೆ ಯಾವುದೆ ಅನುದಾನ ನೀಡದೆ ಇದ್ದರೆ ಯಾವ ಲಾಭವಾಗಲಿದೆ? ಕೇವಲ ಗ್ಯಾರೆಂಟಿ ಯೋಜನೆಯನ್ನು ತೋರಿಸಿದರೆ ಸಾಕೆ?” ಎಂದು ಅವರು ಕೇಳಿದರು. ಸಿದ್ದರಾಮಯ್ಯರ

“ಸ್ತ್ರೀ ಶಕ್ತಿ ಸಂಘಗಳನ್ನು ಬಲಪಡಿಸಿ ಒಂದು ಗುಂಪಿಗೆ ಕನಿಷ್ಠ 10 ಲಕ್ಷ ಸಾಲವನ್ನು ನೀಡಿಬೇಕಿತ್ತು. ಅವರಿಗೆ ಸಾಲ ನೀಡಿ ಆಯಾ ಪ್ರದೇಶದಲ್ಲಿ ಸ್ವ-ಉದ್ಯೋಗ ಮಾಡುವ ತರಬೇತಿ ಕೊಟ್ಟು ಸ್ಥಳೀಯ ಮಟ್ಟದಲ್ಲಿ ಉದ್ಯೋಗ ಒದಗಿಸಿಕೊಡಬೇಕಿತ್ತು. ಆದರೆ ಸರ್ಕಾರ ಇದನ್ನು ಮಾಡಿಲ್ಲ. ಈ ಹಿಂದೆ ನಿರ್ಭಯ ಫಂಡ್ ಎಂದು ಅತ್ಯಚಾರ ಮತ್ತು ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೋಸ್ಕರವೇ ಅನುದಾನವನ್ನು ಸರ್ಕಾರ ನೀಡುತ್ತಿತ್ತು. ಆದರೆ ಈಗ ಅದನ್ನು ನಿಲ್ಲಿಸಿದೆ.” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

“ವಿಧವೆ, ಪರಿತ್ಯಕ್ತ ಮತ್ತು ಮದುವೆ ಆಗದ ಮಳೆಯರಿಗೆ ಕೇವಲ 800 ರೂ.ಗಳನ್ನು ಮಾತ್ರ ಸರಕಾರ ನೀಡುತ್ತಿದೆ. ಈ ಹಣದಲ್ಲಿ ಅವರು ಬದುಕು ಕಟ್ಟಿಕೊಳ್ಳಲು ಹೇಗೆ ಸಾಧ್ಯ? ಈ ಬಗ್ಗೆ ಬಜೆಟ್‌ನಲ್ಲಿ ಯಾವುದೆ ಚರ್ಚೆ ಮಾಡಿಲ್ಲ. ಈ ಬಗ್ಗೆ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ತಿಳಿಸಿದ್ದರೂ ಅವುಗಳ ಬಗ್ಗೆ ಅವರು ಬಜೆಟ್‌ನಲ್ಲಿ ಉಲ್ಲೇಖಿಸಿಲ್ಲ. ಸಾವಿರಾರು ಎಕರೆ ಭೂಮಿಯನ್ನು ಕಾರ್ಪೋರೇಟ್‌ಗಳಿಗೆ ನೀಡುವ ಸರ್ಕಾರ ಬಡವರು ನಿವೇಶನಕ್ಕಾಗಿ ಭೂಮಿ ಕೇಳಿದಾಗ ಭೂಮಿ ಇಲ್ಲ ಎಂದು ಹೇಳುತ್ತದೆ” ಎಂದು ಅವರು ಹೇಳಿದರು.

ಗರ್ಭಕೋಶದ ಕಾನ್ಸರ್‌, ಸ್ತನ ಕ್ಯಾನ್ಸರ್ ಸೇರಿದಂತೆ ಹಲವು ರೋಗಗಳಿಗೆ ಮಹಿಳೆಯರು ಒಳಗಾಗುತ್ತಿದ್ದಾರೆ. ಅವರಿಗೆ ಯಾವುದೆ ಅನುದಾನವನ್ನು ಸರ್ಕಾರ ಬಜೆಟ್‌ನಲ್ಲಿ ನೀಡಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

“ಬಾಲ್ಯವಿವಾಹ, ಭ್ರೂಣ ಹತ್ಯೆ, ಮರ್ಯಾದಗೇಡು ಹತ್ಯೆ ನಡೆಯುತ್ತಿವೆ. ಹೆಣ್ಣು ಭ್ರೂಣ ಹತ್ಯೆಯಂತೂ ರಾಜ್ಯದಾದ್ಯಂತ ನಡೆಯುತ್ತಿವೆ. ಬಾಲ್ಯ ವಿವಾಹದಲ್ಲಿ ರಾಜಸ್ಥಾನದ ನಂತರ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಇವುಗಳನ್ನು ಉದ್ದೇಶಿಸಿ ಬಜೆಟ್ ಮಂಡಿಸದ ಸರ್ಕಾರ, ಕೇವಲ ಶಕ್ತಿ ಮತ್ತು ಗೃಹ ಲಕ್ಷ್ಮಿ ಯೋಜನೆಯನ್ನು ಮಾತ್ರ ತೋರಿಸುತ್ತಿವೆ. ರಾಜ್ಯದಲ್ಲಿ ಐದು ಸಾವಿರಕ್ಕೂ ಹೆಚ್ಚು ಮಹಿಳೆಯ ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿಯಲ್ಲಿದ್ದಾರೆ. ಇಂತಹ ಸಂದರ್ಭದಲ್ಲೆ ಮಹಿಳೆಯರು ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ಕಾಣೆಯಾಗಿದ್ದಾರೆ” ಎಂದು ಅವರು ಹೇಳಿದರು.

ಕೇಂದ್ರದ ಹಣಕಾಸಿನ ಮಂತ್ರಿಯ ತಲೆಯಲ್ಲಿ ಸಗಣಿ, ಗಂಜಲ ಅಷ್ಟೆ ಇದೆ: ಹೋರಾಟಗಾರ್ತಿ ಗೌರಿ ಆಕ್ರೋಶ

ಮಹಿಳಾ ಮುನ್ನಡೆ ರಾಜ್ಯ ಸಮನ್ವಯಕಾರರಾದ ಗೌರಿ ಮಾತನಾಡಿ, “ತೊಗರಿಬೇಳೆಗೆ 18% ಜಿಎಸ್‌ಟಿ ಹಾಕುವ ಸರ್ಕಾರ ವಜ್ರಗಳಿಗೆ 1% ಜಿಎಸ್‌ಟಿ ಹಾಕುತ್ತಿದೆ. ಕೇಂದ್ರದ ಹಣಕಾಸಿನ ಮಂತ್ರಿಯ ತಲೆಯಲ್ಲಿ ಸಗಣಿ, ಗಂಜಲ ಅಷ್ಟೆ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. “ದಲಿತ, ಮಹಿಳೆ, ಟ್ರಾನ್ಸ್‌ಜೆಂಡರ್‌ಗಳ ಪರಿಸ್ಥಿತಿ ಕೆಟ್ಟದಾಗಿದೆ. ಬಜೆಟ್ ಪೂರ್ವ ಸಭೆಯಲ್ಲಿ ಮಹಿಳೆಯರನ್ನು ಕೆರೆದು ಅವರ ಆಗ್ರಹವನ್ನು ಕೇಳುತ್ತಿಲ್ಲ. ಶಕ್ತಿ ಮತ್ತು ಗೃಹಲಕ್ಷ್ಮಿ ಯೋಜನೆಯನ್ನು ಮುಂದಿಟ್ಟು ಮಹಿಳೆಯರು ಸರ್ವತೋಮುಖ ಅಭಿವೃದ್ಧಿ ಆಗಿದ್ದಾರೆ ಎಂದು ಬಿಂಬಿಸುತ್ತಿದ್ದಾರೆ” ಎಂದು ಅವರು ಹೇಳಿದರು.

“ಸಾಂಸ್ಕೃತಿಕ ವಿಚಾರಗಳು ಮಹಿಳೆಯರನ್ನು ಅಲುಗಾಡಿಸುತ್ತಿವೆ. ಟಿವಿ ಸೀರಿಯಲ್‌ಗಳು ನಮ್ಮ ಸಮಾಜವನ್ನು ಹಾಳು ಮಾಡುತ್ತಿದ್ದು, ಅತ್ಯಾಚಾರ ಮತ್ತು ಮಹಿಳಾ ದೌರ್ಜನ್ಯವನ್ನು ಪ್ರೋತ್ಸಾಹಿಸುತ್ತಿವೆ. ಬಲಾಢ್ಯರು ಮಹಿಳಾ ದೌರ್ಜನ್ಯ ಎಸಗಿದರೆ ಅದರಿಂದ ತಪ್ಪಿಸಿಕೊಳ್ಳಬಹುದು ಎಂದು ಸೌಜನ್ಯ ಪ್ರಕರಣ ಸಾಬೀತು ಮಾಡಿದೆ. ಇಂತಹ ದೊಡ್ಡವರನ್ನು ಯಾಕೆ ಸರ್ಕಾರ ಬಂಧಿಸಿಲ್ಲ ಎಂಬುವುದಕ್ಕೆ ಉತ್ತರ ಸಿಗಬೇಕಿದೆ” ಎಂದರು.

“ದೇವದಾಸಿಯರ ಮಕ್ಕಳು ತಮ್ಮ ತಂದೆಯ ಹೆಸರಿನ ಕಾಲಂನಲ್ಲಿ ಹೆಸರು ಹಾಕುವುದಿಲ್ಲ ಎಂಬ ಚಿಕ್ಕ ವಿಷಯಕ್ಕೂ ಈಗಲೂ ಹೋರಾಟ ಮಾಡುತ್ತಿದ್ದಾರೆ. ಬಜೆಟ್‌ನಲ್ಲಿ ನೀಡುವ ಗ್ಯಾರೆಂಟಿ ಯೋಜನೆಗಳಲ್ಲಿ ಮಹಿಳೆಯರಿಗೆ ನೀಡುವ ಕಾರ್ಯಕ್ರಮಗಳ ಬಗ್ಗೆ ಕೂಡಾ ಸರ್ಕಾರ ಸಮರ್ಥನೆ ಮಾಡುತ್ತಿಲ್ಲ. ಜನಸಂಖ್ಯೆಯ ಅರ್ಧದಷ್ಟಿರುವ ಹೆಣ್ಣು ಮಕ್ಕಳು ಇನ್ನೂ ಅತ್ಯಾಚಾರಕ್ಕೆ, ದೌರ್ಜನ್ಯಕ್ಕೆ ಒಳಗಾಗುತ್ತಿದ್ದರೆ ನಾಗರೀಕ ಸಮಾಜ ಸಮಾಧಾನದಿಂದ ನಿದ್ದೆ ಮಾಡಲು ಸಾಧ್ಯವಿಲ್ಲ” ಎಂದು ಗೌರಿ ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮೀಸಲಾತಿ ವಿಚಾರದಲ್ಲಿ ದಲಿತರನ್ನು ಗತಿಗೆಟ್ಟವರು ಎಂದು ಅವಮಾನಿಸಲಾಗುತ್ತಿದೆ: ಹೋರಾಟಗಾರ ಮಾವಳ್ಳಿ ಶಂಕರ್

ಮೀಸಲಾತಿ ವಿಚಾರದಲ್ಲಿ ದಲಿತರನ್ನು ಗತಿಗೆಟ್ಟವರು ಎಂದು ಅವಮಾನಿಸಲಾಗುತ್ತಿದೆ: ಹೋರಾಟಗಾರ ಮಾವಳ್ಳಿ ಶಂಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...